Author: kannadanewsnow09

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ವು ಡಿಸೆಂಬರ್ 21 ರಿಂದ ಡಿಸೆಂಬರ್ 24, 2025ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ – 2025ನ್ನು ಆರಂಭಿಸುತ್ತಿದೆ. ಆರೋಗ್ಯವೇ ಭಾಗ್ಯ; ಆರೋಗ್ಯವಂತ ಮಕ್ಕಳು ರಾಷ್ಟ್ರದ ಆಸ್ತಿಯಾಗಿದೆ. ಪೋಲಿಯೋ ರೋಗವು ಸಾಮಾನ್ಯವಾಗಿ ಐದು ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಪರಿಣಾಮಗೊಳಿಸುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ಆದರೆ ಪಕ್ಕದ ದೇಶಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವುದರಿಂದ, ನಮ್ಮ ಮಕ್ಕಳನ್ನು ಪಲ್ಸ್ ಪೋಲಿಯೋ ಲಸಿಕೆ ಹನಿಗಳ ಮೂಲಕ ರಕ್ಷಿಸುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಾರ್ವಜನಿಕ ಆರೋಗ್ಯ ಇಲಾಖೆಯ ಮೂಲಕ, ಎಲ್ಲಾ ವಾರ್ಡ್‌ಗಳಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ – 2025ನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನವೀನ ಚಿಂತನೆಯ ಭಾಗವಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಮೀಪದ ಪಲ್ಸ್…

Read More

ಬೆಳಗಾವಿ ಸುವರ್ಣ ವಿಧಾನಸೌಧ: ಡಿಸೆಂಬರ್.21ರ ಇಂದು ಪಲ್ಸ್ ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂದು ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಡಿಸೆಂಬರ್ 21ರ ಇಂದು ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ ಸ್ಟೇಷನ್ ಮುಂತಾದ ಕಡೆಗಳಲ್ಲಿ ಆದ್ಯತೆ ಮೆರೆಗೆ ಲಸಿಕೆ ಹಾಕಲಾಗುವುದು ಎಂದರು. ಎಲ್ಲ ಸರಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ನಡೆಸಲಾಗುವುದು. 0-5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಲೇ ಬೇಕು. ಮೊದಲು ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಲೇಬೇಕು. ಪೋಲಿಯೋ ಮುಕ್ತ ದೇಶವಾಗಿರುವ ಭಾರತ ಇದನ್ನು ಮುಂದುವರೆಸಲು ಸಾರ್ವಜನಿಕರ ಸಹಕಾರ ಅಗತ್ಯ. ಡಿಸೆಂಬರ್ 21 ರಂದು ಬೂತ್ಗಳಲ್ಲಿ ನಂತರ 2-3…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ಡಿ.22ರಂದೇ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೆಲ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ, ಎಂಸಿಸಿ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದು, ಅಂತಹವರು ಒಂದು ವೇಳೆ ಅಲ್ಲಿಯೇ ಹೋಗಿ ಪ್ರವೇಶ ಪಡೆಯುವುದಿದ್ದರೆ ಅವರಿಗೆ ಅನುಕೂಲ ಆಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಅಂದು ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಸಿಸಿ ಸೀಟಿಗೇ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಡಿ.23ರಂದು ಸಂಜೆ 4 ಗಂಟೆಯೊಳಗೆ ಕೆಇಎ ಕಚೇರಿಗೆ ಬಂದು ಪಡೆಯಬಹುದು. ಈ ಸುತ್ತಿನಲ್ಲಿ ಭಾಗವಹಿಸಲು ಕಟ್ಟಿರುವ ಶುಲ್ಕದಲ್ಲಿ 25 ಸಾವಿರ ರೂಪಾಯಿ ಕಡಿತ ಮಾಡಿಕೊಂಡು ಉಳಿದ ಹಣವನ್ನು ಒಂದೇ ದಿನದಲ್ಲಿ ಹಿಂದಿರುಗಿಸಲಾಗುತ್ತದೆ ಎಂದು ಅವರು ವಿವರಿಸಿದರು. ಎಂಸಿಸಿ ಸೀಟಿಗೆ ಪ್ರವೇಶ ಪಡೆಯುವ ಕಾರಣದಿಂದ…

Read More

ಬೆಂಗಳೂರು: 2025-26ನೇ ಸಾಲಿಗೆ ಶುಚಿ ಕಾರ್ಯಕ್ರಮದ ಅಡಿಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಗಳನ್ನು ಜಿಲ್ಲಾ ಹಂತದಲ್ಲಿಯೇ ಖರೀದಿಸಲು ಮತ್ತು ವಿತರಣೆ ಮಾಡಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ನೋಂದಾಯಿಸಲಾದ ಎಲ್ಲಾ ಹದಿಹರೆಯದ ಹೆಣ್ಣು ಮಕ್ಕಳಿಗೆ ವಿತರಿಸಲು 2,35,74,084 ಯೂನಿಟ್ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು (ಒಂದು ಯೂನಿಟ್ = 10 ಪ್ಯಾಡ್‌ಗಳು) ಪ್ರತಿ ಯುನಿಟ್‌ಗೆ ಅಂದಾಜು ರೂ.30.47/- ರಂತೆ ಒಟ್ಟು ರೂ.71.83 (ಎಪ್ಪತ್ತೊಂದು ಕೋಟಿ ಎಂಭತ್ತ ಮೂರು ಲಕ್ಷ ರೂಪಾಯಿಗಳು ಮಾತ್ರ) ಕೋಟಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (ಕೆಎಸ್‌ಎಂಎಸ್‌ಸಿಎಲ್‌) ಮೂಲಕ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಪ್ರತಿ ದಿನ ಶಾಲಾ ಶಿಕ್ಷಕರು, ಸಿಬ್ಬಂದಿಗಳು ತಪ್ಪದೇ ಹಾಜರಾತಿಯನ್ನು ನಮೂದಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಜಿಲ್ಲೆಯ ಎಲ್ಲಾ ಶಾಲೆಗಳ ಅಕ್ಷಾಂಶ ಹಾಗೂ ರೇಖಾಂಶಗಳು ನಮೂದಾಗಿರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು (KAAMS) ಅನುಷ್ಠಾನಗೊಳಿಸುವಂತೆ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಿಮ್ಮ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಮೊಬೈಲ್ ಆಧಾರಿತ ಹಾಜರಾತಿ ತಂತ್ರಾಂಶವನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಸದರಿ ತಂತ್ರಾಂಶದಲ್ಲಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿ ಸರ್ಕಾರಿ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಪ್ರತಿದಿನದ ಹಾಜರಾತಿಯನ್ನು ಸದರಿ ತಂತ್ರಾಂಶದಲ್ಲಿಯೇ ಲಾಗಿನ್ ಹಾಗೂ ಲಾಗ್‌ ಔಟ್ ಆಗುವುದರ ಮೂಲಕ ಹಾಜರಾತಿಯನ್ನು ದಿನಾಂಕ…

Read More

ಶಿವಮೊಗ್ಗ: ಇಂದು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಗರದ ಶಿವಮೊಗ್ಗ ರಸ್ತೆಯ ತ್ಯಾಗರ್ತಿ ಕ್ರಾಸ್ ಬಳಿಯಿರುವ ಮರ್ಕಜ್ ಶಾಲೆಯ ಮಕ್ಕಳು ಕವ್ವಾಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರ ಜೊತೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕವ್ವಾಲಿ ಸ್ಪರ್ಧೆಯಲ್ಲಿ ಮರ್ಕಜ್ ಶಾಲೆಯ ತಂಡದಲ್ಲಿ ಮಹಮ್ಮದ್ ಜಿಯಾನ್, ಮುಹಮ್ಮದ್ ಆಬಿದೀನ್, ಆಫೀಯಾ ಶಫೀನಾ, ಸನಾ ಬೇಗ್, ಉಮ್ಮೆ ಅಮ್ಮರಾ, ಹಾಗೂ ಆಶ್ಮಿಯಾ ಸಯೀದಾ ಭಾಗವಹಿಸಿದ್ದರು. ಇದೇ ವಿದ್ಯಾರ್ಥಿಗಳು ಸಾಗರದಲ್ಲಿ ನಡೆದ ತಾಲ್ಲೂಕು ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು. ಈಗ ಜಿಲ್ಲಾಮಟ್ಟದಲ್ಲೂ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಮರ್ಕಜ್ ಶಾಲೆಗೆ ಸಾಗರ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಮತ್ತು ಈ ಯಶಸ್ಸಿಗೆ ಸಹಕರಿಸಿದ ಶಿಕ್ಷಕರಿಗೂ, ಪ್ರೋತ್ಸಾಹಿಸಿದ ಪೋಷಕರಿಗೂ, ಶಾಲಾ ಮುಖ್ಯ ಉಪಾಧ್ಯಾಯರು ಮತ್ತು ಆಡಳಿತ ಮಂಡಳಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವರದಿ; ರಫೀಕ್ ಬ್ಯಾರಿ, ಸಾಗರ

Read More

ಬೆಂಗಳೂರು  ಮನುಷ್ಯನ ಜೀವನದಲ್ಲಿ ಗುರುಗಳ ಪಾತ್ರ ಅಪಾರವಾದದ್ದು,ಪ್ರತಿಯೊಬ್ಬರೂ ಸಹ ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸಬೇಕಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ ಗೋಪಾಲಯ್ಯ ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಹಾಲಕ್ಷ್ಮಿಪುರಂನ ನ್ಯೂ ಕೇಂಬ್ರಿಡ್ಜ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಯಲ್ಲಿ ಆಯೋಜಿಸಿದ್ದ ಕಲಾ ಸಂಸ್ಕೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಂದೆ ತಾಯಿ ಗುರು ಹಿರಿಯರನ್ನು ಗೌರವಿಸಬೇಕು ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಆಗಬೇಕು ಆಗ ಮಾತ್ರ ಉತ್ತಮ ಸಂಸ್ಕಾರವನ್ನು ಕಲಿಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಪಡೆದು ತಮ್ಮ ಗುರಿಯನ್ನು ತಲುಪಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಇದಕ್ಕಿಂತ ಮೊದಲು ಸಂಸ್ಕಾರವನ್ನು ಕಲಿತುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ಕೆ ಗೋಪಾಲಯ್ಯ ಕಿವಿಮಾತು ಹೇಳಿದರು. ನ್ಯೂ ಕೇಂಬ್ರಿಡ್ಜ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆ ಈ ಭಾಗದ ಅತ್ಯುತ್ತಮ ಶಾಲೆಯಾಗಿದೆ. ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಸಂಸ್ಕಾರವನ್ನು ಕಲಿಸುತ್ತಿದೆ ಇದನ್ನ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಉತ್ತಮ ಅಂಕಗಳೊಂದಿಗೆ ಪರೀಕ್ಷೆಯಲ್ಲಿ…

Read More

ಶಿವಮೊಗ್ಗ: ವಾಲಿಬಾಲ್ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂಬರುವ ಜನವರಿ 14, 2026ರಂದು ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ಹೊನಲು ಬೆಳಕಿನ ಮ್ಯಾಟ್ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವಂತ ತಂಡಕ್ಕೆ ಭರ್ಜರಿ ನಗದು ಬಹುಮಾವನ್ನು ನೀಡಲಾಗುತ್ತಿದೆ. ಈ ಕುರಿತಂತೆ ಸೊರಬ ತಾಲ್ಲೂಕಿನ ತಳೇಬೈಲು ಗ್ರಾಮದ ಶ್ರೀ ಬಸವೇಶ್ವರ ಯುವಕರ ಗಳೆಯರ ಬಳಗದ ವಿನಾಯಕ ಮಾಹಿತಿ ನೀಡಿದ್ದು, ದಿನಾಂಕ 14-01-2026ರಂದು ಸಂಕ್ರಾಂತಿ ಪ್ರಯುಕ್ತ ಗ್ರಾಮಾಂತರ ಮಟ್ಟದ ಹೊನಲು ಬೆಳಕು ಮ್ಯಾಟ್ ವಾಲಿಬಾಲ್ ಪಂದ್ಯಾವಳಿಯನ್ನು ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಏರ್ಪಡಿಸಲಾಗಿದೆ ಎಂದಿದ್ದಾರೆ. ದಿನಾಂಕ 14-01-2026ರಂದು ನಡೆಯುವಂತ ಹೊನಲು ಬೆಳಕಿನ ಮ್ಯಾಟ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆದ್ದಂತ ತಂಡಕ್ಕೆ ಎಸ್.ಬಂಗಾರಪ್ಪ ಟ್ರೋಫಿಯೊಂದಿಗೆ ನಗದು ಬಹುಮಾನವನ್ನು ನೀಡಲಾಗುತ್ತದೆ. ಪ್ರಥಮ ಬಹುಮಾನವಾಗಿ 15,000, ದ್ವಿತೀಯ ಬಹುಮಾನವಾಗಿ 10,000, ತೃತೀಯ ಬಹುಮಾನವಾಗಿ 6,000 ಹಾಗೂ ಚತುರ್ಥ ಬಹುಮಾನವಾಗಿ 3,000 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ. ಇದು ಮ್ಯಾಟ್ ಅಂಕಣದ…

Read More

ಶಿವಮೊಗ್ಗ : ಮಾಹಿತಿಹಕ್ಕು ಅಧಿನಿಯಮದಡಿ ಅರ್ಜಿದಾರರು ಮಾಹಿತಿ ಕೋರಿ ತಮ್ಮ ಕಚೇರಿಗಳಿಗೆ ಸಲ್ಲಿಸುವ ಅರ್ಜಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯೋಜಿತ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗವು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರ ಜಾಗೃತಿ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ವಿವಿಧ ಇಲಾಖೆಗಳ ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಕಚೇರಿಯ ಅಧಿಕಾರಿ ಸಿಬ್ಬಂಧಿಗಳ ವಿವರಗಳನ್ನು 4-1ಎ ಮತ್ತು 4-1ಬಿ ನಮೂನೆಗಳನ್ನು ಭರ್ತಿ ಮಾಡಿ ಪ್ರತಿ ವರ್ಷ ಇಲಾಖೆಯ ಜಾಲತಾಣದಲ್ಲಿ ಉನ್ನತೀಕರಿಸಿ ಸಾರ್ವಜನಿಕ ಮಾಹಿತಿಗೆ ಲಭ್ಯವಿರುವಂತೆ ಗಮನಿಸಬೇಕು. ಇದರಿಂದಾಗಿ ಇಲಾಖೆಗೆ ಮಾಹಿತಿ ಕೋರಿ ಬರುವ ಅರ್ಜಿಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿವೆ ಎಂದ ಅವರು ಅರ್ಜಿದಾರರು…

Read More

ಉತ್ತರ ಕನ್ನಡ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ. ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂಬುದಾಗಿ ದೈವವಾಣಿಯನ್ನು ನುಡಿಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದಲ್ಲಿರುವಂತ ಜಗದೀಶ್ವರಿ ದೇವಾಲಯದ ಸನ್ನಿಧಿಯಲ್ಲಿ 5 ಬೇಡಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಇಟ್ಟಿದ್ದಾರೆ. ಅವರು ಇರಿಸಿರುವಂತ ಐದು ಬೇಡಿಕೆಗಳಿಗೂ ಒಳ್ಳೆಯ ಮುನ್ನೂಚನೆಯನ್ನು ಜಗದೀಶ್ವರಿ ಕೊಟ್ಟಿರುವುದಾಗಿ ಹೇಳಲಾಗುತ್ತಿದೆ. ರಾಜಕೀಯ ವಿಚಾರ ಮೂರು ಬಾರಿ, ಕೌಟುಂಬಿಕ ವಿಚಾರ ಒಂದು ಬಾರಿ, ಆಪ್ತ ಕಾರ್ಯದರ್ಶಿ ಕಾರು ಅಪಘಾತದ ಬಗ್ಗೆ ಒಮ್ಮೆ ಡಿಕೆ ಶಿವಕುಮಾರ್ ಕೇಳಿದ್ದಕ್ಕೆ ದೈವವಾಣಿ ನುಡಿಯಲಾಗಿದೆ. ಕೆಲ ಬೇಡಿಕೆಗಳಿಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಜಗದೀಶ್ವರಿ ತಿಳಿಸಲಾಗಿದೆ ಎನ್ನಲಾಗುತ್ತಿದೆ. ಐದು ಬೇಡಿಕೆ ಪೈಕಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆಯೂ ಡಿ.ಕೆ ಶಿವಕುಮಾರ್ ದೈವ ನುಡಿಯನ್ನು ಕೇಳಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಒಂದೂವರೆ ತಿಂಗಳಲ್ಲಿ ಶುಭಸುದ್ದಿ ಬರಲಿದೆ ಎಂಬುದಾಗಿ ದೈವವಾಣಿ ನುಡಿಯಲಾಗಿದೆ. ಸಿಎಂ ಆಗುವುದು ಶತಸಿದ್ಧ, ಕೆಲ ದುಷ್ಟ ಶಕ್ತಿಗಳ ಪ್ರಭಾವದಿಂದ ಅಡ್ಡಿ ಆಗ್ತಿದೆ. ದುಷ್ಟ…

Read More