Author: kannadanewsnow09

ಬೆಂಗಳೂರು : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಈ ಬಾರಿಯ ಆಯವ್ಯಯದಲ್ಲಿ ಕ್ವಾಂಟಮ್‌ ರೋಡ್‌ಮ್ಯಾಪ್‌ನ ಅನುಷ್ಠಾನಕ್ಕೆ 10 ಕೋಟಿ ರೂಪಾಯಿಗಳನ್ನು ಘೋಷಿಸಿರುವುದು, ಕರ್ನಾಟಕ ರಾಜ್ಯವನ್ನು ಕ್ವಾಂಟಮ್‌ ಕ್ಷೇತ್ರದ ಕೇಂದ್ರಬಿಂದುವನ್ನಾಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆಯನ್ನು ನೀಡಿರುವ ಅವರು, ಕ್ವಾಂಟಮ್ ವಲಯದಲ್ಲಿ ಕರ್ನಾಟಕವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ‘ಕ್ವಾಂಟಮ್ ಶೃಂಗಸಭೆ’ಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ 1,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. “ಈ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ, ‘ಕರ್ನಾಟಕ ಕ್ವಾಂಟಮ್ ರೋಡ್‌ಮ್ಯಾಪ್‌’ನ ಮೊದಲ ಹಂತದ ಅನುಷ್ಠಾನಕ್ಕೆ ಸರ್ಕಾರವು 10 ಕೋಟಿ ರೂ. ಅನುದಾನ ಒದಗಿಸಿದೆ,” ಮುಂದಿನ ಐದು ವರ್ಷಗಳಲ್ಲಿ, ಈ ಭವಿಷ್ಯದ ವಲಯವನ್ನು ಮುನ್ನಡೆಸಲು ಅಗತ್ಯವಿರುವ ಅತ್ಯುತ್ತಮ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸುವತ್ತ ಈ ರೋಡ್‌ಮ್ಯಾಪ್ ಗಮನ ಹರಿಸಲಿದೆ ಎಂದಿದ್ದಾರೆ. “ಬೆಂಗಳೂರು ನಗರವು ಈಗಾಗಲೇ…

Read More

ಬೆಂಗಳೂರು: ಒಳ ಮೀಸಲಾತಿ ಸಂಬಂಧಿತ ಕಾಯ್ದೆಗೆ ಕೋರ್ಟ್ ಒಪ್ಪಿಗೆ ಇಲ್ಲದ ಕಾರಣ ಮಾನ್ಯ ರಾಜ್ಯಪಾಲರಿಂದ ಅಂಕಿತ ಪಡೆಯಬಾರದಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಒಳ ಮೀಸಲಾತಿ ಶೇ 15ರಿಂದ 17ಕ್ಕೆ ಏರಿಸಲಾಗಿತ್ತು. ನ್ಯಾ.ನಾಗಮೋಹನ್‍ದಾಸ್ ಅವರ ವರದಿಯನ್ನೂ ಪಡೆದರು. ಅದರ ಪ್ರಕಾರವೇ 6, 6, 5 ಎಂದು ಹಂಚಿಕೆ ಮಾಡಿದ್ದರು. ಕಾಯ್ದೆ ಅನುಮೋದಿಸಿ ಮಾನ್ಯ ರಾಜ್ಯಪಾಲರಿಂದ ಅಂಕಿತವನ್ನೂ ಪಡೆದಿದ್ದರು ಎಂದು ಗಮನಕ್ಕೆ ತಂದರು. ನೀವ್ಯಾಕೆ ಗೌರವಾನ್ವಿತ ರಾಜ್ಯಪಾಲರ ಅಂಕಿತ ತೆಗೆದುಕೊಂಡಿರಿ? ನಿಮಗೆ ಪ್ರಜ್ಞೆ, ಬುದ್ಧಿ ಇಲ್ಲವೇ ಎಂದು ಕೇಳಿದರು. ಅಂಕಿತ ಪಡೆದ ಮೇಲೆ ಅದನ್ನೇ ಜಾರಿಗೊಳಿಸಬೇಕಿತ್ತು ಎಂದು ಆಗ್ರಹಿಸಿದರು. ಶೇ 15 ರ ಮೇಲೆ ಹಂಚಿಕೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದೀರಿ. ಹಾಗಾಗಿ ಈ ಕಾಯ್ದೆ ಅನೂರ್ಜಿತ. ಅದು ತಿಪ್ಪೆಗುಂಡಿಗೆ ಹೋದಂತೆ ಎಂದು ನುಡಿದರು. ನೀವು ಯಾವ ರೀತಿ 56 ಸಾವಿರ ಹುದ್ದೆಗಳನ್ನು ತುಂಬುತ್ತೀರಿ?…

Read More

ಶಿವಮೊಗ್ಗ : ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೧೯೦೮ ರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಿದ ಮಹಿಳಾ ಕಾರ್ಮಿಕರಿಗೆ ನಮನಗಳು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷಣೆಯಾಗಲು ಈ ಹೋರಾಟವೂ‌ ಕಾರಣವಾಗಿದೆ. ಮನೆಯಿಂದ ಸಮಾಜ ಶುರುವಾಗುತ್ತದೆ.‌ಅಲ್ಲಿಂದಲೇ ಅವಕಾಶ ಸಿಕ್ಕರೆ ಪ್ರಗತಿ ಸಾಧಿಸಲು ಸಾಧ್ಯವಾಗಿದ್ದು ಶಿಕ್ಷಣ ಪಡೆಯುವುದು ಬಹಳ‌ ಮುಖ್ಯವಾಗಿದೆ. ಭೂಮಿಯಿಂದ ಆಕಾಶದವರೆಗೆ ಇಂದು ಎಲ್ಲ ಕ್ಷೇತ್ರದಲ್ಲಿ ಹೆಣ್ಣು ಮುಂದೆ ಬರುತ್ತದ್ದಾಳೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹಿಂದೆ ಹೆಣ್ಣುಮಕ್ಕಳಿಗೆ ಹೆಚ್ಚಿನದಾಗಿ ಮೌಲ್ಯಾಧಾರಿತ ಉಪಚಾರ ಹೇಳಲಾಗುತ್ತಿತ್ತು. ಆಕೆಯ ಪ್ರಗತಿ‌ಗೆ ಅವಕಾಶ ಇರಲಿಲ್ಲ.…

Read More

ನವದೆಹಲಿ: ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಅಧಿಕೃತವಾಗಿ ಜನತಾದಳ (ಯುನೈಟೆಡ್) ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್ ಅವರು ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ​ವಿನಯವಂತಿಕೆಗೆ ಹೆಸರಾದ ಇಂಜಿನಿಯರಿಂಗ್ ಪದವೀಧರ ​ಸುಮಾರು 40ರ ಹರೆಯದ ನಿಶಾಂತ್ ಕುಮಾರ್ ವೃತ್ತಿಯಲ್ಲಿ ಇಂಜಿನಿಯರಿಂಗ್ ಪದವೀಧರರು. ಸಾರ್ವಜನಿಕವಾಗಿ ಅಷ್ಟಾಗಿ ಕಾಣಿಸಿಕೊಳ್ಳದಿದ್ದರೂ, ಅಪರೂಪಕ್ಕೆ ಮಾಧ್ಯಮಗಳ ಮುಂದೆ ಬಂದಾಗಲೆಲ್ಲಾ ಅವರು ತಮ್ಮ ಸರಳತೆ ಮತ್ತು ವಿನಯವಂತಿಕೆಯಿಂದ ಜನರ ಗಮನ ಸೆಳೆದಿದ್ದಾರೆ. ತಮ್ಮ ತಂದೆ ಕೈಗೊಂಡಿರುವ ಜನಪರ ಕೆಲಸಗಳನ್ನು ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಅವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದು ಮಾಧ್ಯಮಗಳೊಂದಿಗಿನ ಅವರ ಸಂವಾದದ ವೇಳೆ ಸಾಬೀತಾಗಿದೆ. ​ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣು? ​ನಿಶಾಂತ್ ಅವರ ಈ ರಾಜಕೀಯ ಪ್ರವೇಶ ಬಿಹಾರದ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ. ಮುಂಬರುವ…

Read More

ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವತಿಯಿಂದ ಬೆಂಗಳೂರಿನ ರಾಮ ಮಂದಿರ ಮೈದಾನದಲ್ಲಿ ಅದ್ದೂರಿ ಹೋಳಿ ರಂಗ ಪಂಚಮಿ ಕಾರ್ಯಕ್ರಮ ಆಚರಿಸಲಾಯಿತು.ಕಾಮದಹನ ಮಾಡಿ ಬಣ್ಣದೋಕುಳಿ ಆಡುವ ಮೂಲಕ ಮಹಿಳೆಯರು ಮಕ್ಕಳು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ಮಾತನಾಡಿ, ನಮ್ಮ ಮಹಾ ಸಂಸ್ಥೆ ವತಿಯಿಂದ ಪ್ರತಿ ವರ್ಷ ಬೆಂಗಳೂರಿನಲ್ಲಿ ಕಾಮ ದಹನ ಮಾಡುವ ಮೂಲಕ ಹೋಳಿ ಆಚರಿಸಿ, ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡುತ್ತಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಕುಳ್ಳು ಕಟ್ಟಿಗೆ ಕದ್ದು ಕಾಮಣ್ಣನ ಸುಡುವುದೇ ಸಂಭ್ರಮವಾಗಿರುತ್ತದೆ. ಬೆಂಗಳೂರಿನಲ್ಲಿರುವ ನಾವೆಲ್ಲ ಇಲ್ಲಿಯೂ ನಮ್ಮ ಭಾಗದ ಸಂಸ್ಕೃತಿ ಸಂಭ್ರಮ ಉಳಿಸಿಕೊಂಡು ಹೋಗೋಣ ಎಂದರು. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ಮಾತನಾಡಿ ಉತ್ತರ ಕರ್ನಾಟಕ ಭಾಗದ ಸಾಂಸ್ಕೃತಿಕ ಹಬ್ಬಗಳಾದ ರಂಗ ಪಂಚಮಿ, ಬನ್ನಿ ಹಬ್ಬ, ರೊಟ್ಟಿ ಪಂಚಮಿ ಹಬ್ಬಗಳನ್ನು ಆಚರಿಸುತ್ತ ಬೆಂಗಳೂರಿನಲ್ಲಿಯೂ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಮುಂದಿನ ಪೀಳಿಗೆಗೆ…

Read More

ಸಾಗರ: ಕ್ರೀಡಾಭಿಮಾನಿಗಳ ಪಾಲಿಗೆ ಇಂದು ಸಂಭ್ರಮದ ದಿನ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಸಾಗರದ ಪ್ರಸಿದ್ಧ ಗಾಂಧಿ ಮೈದಾನದಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಕ್ರಿಕೆಟ್ ಪ್ರೇಮಿಗಳಿಗಾಗಿ ಮೈದಾನದಲ್ಲಿ ಬೃಹತ್ ಎಲ್‌ಇಡಿ (LED) ಪರದೆಯ ವ್ಯವಸ್ಥೆ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ​ಅಭಿಮಾನಿಗಳೊಂದಿಗೆ ಶಾಸಕರು: ಕಳೆದ ವರ್ಷವೂ ಸಹ ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಶಾಸಕರು ಇದೇ ರೀತಿಯ ವ್ಯವಸ್ಥೆ ಮಾಡುವ ಮೂಲಕ ಸಾವಿರಾರು ಅಭಿಮಾನಿಗಳಿಗೆ ಕ್ರೀಡೆಯನ್ನು ಒಟ್ಟಾಗಿ ಸವಿಯುವ ಅವಕಾಶ ಮಾಡಿಕೊಟ್ಟಿದ್ದರು. ಈ ಬಾರಿಯೂ ಅದೇ ಉತ್ಸಾಹ ಮುಂದುವರಿದಿದ್ದು, ಸ್ವತಃ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಭಿಮಾನಿಗಳ ಜೊತೆಯಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ. ​ಇಂದು ಸಾಗರದ ಗಾಂಧಿ ಮೈದಾನದಲ್ಲಿ ಹಬ್ಬದ ವಾತಾವರಣ: ಭಾರತ ತಂಡವು ಗೆಲುವಿನ ನಗೆ ಬೀರಲಿ ಎಂದು ಹಾರೈಸುತ್ತಿರುವ ಅಭಿಮಾನಿಗಳು, ಅತಿ ದೊಡ್ಡ LED ಪರದೆಯ ಮೇಲೆ ಪಂದ್ಯ ವೀಕ್ಷಿಸಲು ಕಾತರರಾಗಿದ್ದಾರೆ.…

Read More

ಉತ್ತರ ಕನ್ನಡ: ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಎಂದು ಪರಿಗಣಿಸಲಾಗಿದ್ದು, 2022 ವರ್ಷದ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ವಾರ್ಷಿಕವಾಗಿ 79,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ಮತ್ತು 34,800 ಸಾವುಗಳು ಇದರಿಂದ ಸಂಭವಿಸುತ್ತಿವೆ. ಗರ್ಭಕಂಠದ ಕ್ಯಾನ್ಸರ್ ಗೆ ಒಳಗಾಗುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ವತಿಯಿದ ಮುನ್ನೆಚ್ಚರಿಕ ಕ್ರಮವಾಗಿ 14 ರಿಂದ 15 ವರ್ಷದೊಳಗಿನ ಎಲ್ಲಾ ಹೆಣ್ಣುಮಕ್ಕಳಿಗೆ ಉಚಿತವಾಗಿ ಹೆಚ್.ಪಿ.ವಿ. ಲಸಿಕೆ ನೀಡುವ (3 ತಿಂಗಳ) ಅಭಿಯಾನವನ್ನು ಆರಂಭಿಸಲು ಸಿದ್ದತೆ ಮಾಡಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ 14 ರಿಂದ 15 ವರ್ಷದೊಳಗಿನ 14,835 ಹೆಣ್ಣುಮಕ್ಕಳಿಗೆ ಉಚಿತವಾಗಿ ಹೆಚ್.ಪಿ.ವಿ. ಲಸಿಕೆ ನೀಡಲು ಗುರಿ ಹೊಂದಲಾಗಿದ್ದು, ಈಗಾಗಲೇ ಜಿಲ್ಲೆಗೆ ಮೊದಲ ಹಂತದಲ್ಲಿ 5,300 ಲಸಿಕೆಗಳು ಆಗಮಿಸಿದ್ದು, ಜಿಲ್ಲೆಗೆ ಅಗತ್ಯವಿರುವಷ್ಟು, ಸಂಖ್ಯೆಯಲ್ಲಿ ಲಸಿಕೆಯನ್ನು ಪೂರೈಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ದವಾಗಿದ್ದು, ಈ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಆಯ್ದ ಪ್ರಾಥಮಿಕ ಆರೋಗ್ಯ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಗರ್ಭಾವಸ್ಥೆಯಲ್ಲಿ ತಾಯಿ ಸೇವಿಸುವ ಆಹಾರ ಮಗುವಿನ ಬುದ್ಧಿಶಕ್ತಿಯ ಮೇಲೆ ಪ್ರಭಾವ ಬೀರುತ್ತದೆಯೇ? ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ‘ಕೋಲಿನ್’ (Choline) ಎಂಬ ಪೋಷಕಾಂಶವು ಭ್ರೂಣದ ಮೆದುಳಿನ ಬೆಳವಣಿಗೆ ಮತ್ತು ಅರಿವಿನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ವಹಿಸುವ ಪಾತ್ರದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಅಮೆರಿಕದ ಅರಿವಳಿಕೆ ತಜ್ಞ ಮತ್ತು ನೋವು ನಿವಾರಕ ವೈದ್ಯರಾದ ಡಾ. ಕುನಾಲ್ ಸೂದ್ ಅವರು ಈ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಗರ್ಭಾವಸ್ಥೆಯಲ್ಲಿ ಕೋಲಿನ್ ಸೇವನೆಯ ಮಹತ್ವ ಮತ್ತು ಅದು ಮಗುವಿನ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ವಿವರಿಸಿದ್ದಾರೆ. ಕೋಲಿನ್ ಎಂಬುದು ಮ್ಯಾಜಿಕ್ ಅಲ್ಲ, ಆದರೆ ಅಡಿಪಾಯ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋವೊಂದರಲ್ಲಿ, ಎರಡು ತಿಂಗಳ ಮಗು ಪುಸ್ತಕ ಓದುತ್ತಿರುವಂತೆ ಕಾಣುವ ದೃಶ್ಯಕ್ಕೆ ಪ್ರತಿಕ್ರಿಯಿಸಿದ ಡಾ. ಸೂದ್, “ಕೋಲಿನ್ ಪೂರಕಗಳನ್ನು ತೆಗೆದುಕೊಂಡ ತಕ್ಷಣ ನವಜಾತ ಶಿಶುಗಳು ಓದಲು ಕಲಿಯುತ್ತವೆ ಎಂಬುದು ನಿಜವಲ್ಲ. ಆದರೆ ಭ್ರೂಣದ ಮೆದುಳಿನ ಬೆಳವಣಿಗೆಯನ್ನು ಬೆಂಬಲಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ” ಎಂದು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಕೊಲೊನ್ ಕ್ಯಾನ್ಸರ್ (ಕರುಳಿನ ಕ್ಯಾನ್ಸರ್) ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಕೇವಲ ವಯಸ್ಸಾದವರಿಗೆ ಬರುವ ಕಾಯಿಲೆಯಾಗಿ ಉಳಿದಿಲ್ಲ. ನಮ್ಮ ದೈನಂದಿನ ಆಹಾರ ಪದ್ಧತಿ ಮತ್ತು ಜೀವನಶೈಲಿಯು ಈ ಕ್ಯಾನ್ಸರ್ ಅಪಾಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಗುರುಗ್ರಾಮದ ಖ್ಯಾತ ಕ್ಯಾನ್ಸರ್ ತಜ್ಞರಾದ ಡಾ. ವರ್ತಿಕಾ ವಿಶ್ವಾನಿ ಅವರು ಕರುಳಿನ ಕ್ಯಾನ್ಸರ್ ತಡೆಗಟ್ಟಲು ನಾವು ತಕ್ಷಣವೇ ತ್ಯಜಿಸಬೇಕಾದ 5 ಪ್ರಮುಖ ಆಹಾರಗಳ ಬಗ್ಗೆ ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವುಗಳ ವಿವರ ಇಲ್ಲಿದೆ: 1. ಸಂಸ್ಕರಿಸಿದ ಮಾಂಸ (Processed Meat) ಬೇಕನ್, ಸಾಸೇಜ್‌ಗಳು ಮತ್ತು ಹಾಟ್ ಡಾಗ್ಸ್‌ಗಳಂತಹ ಸಂಸ್ಕರಿಸಿದ ಮಾಂಸಗಳನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ‘ಗ್ರೂಪ್ 1 ಕಾರ್ಸಿನೋಜೆನ್’ (ಕ್ಯಾನ್ಸರ್ ಕಾರಕ) ಎಂದು ವರ್ಗೀಕರಿಸಿದೆ. ಇವುಗಳಲ್ಲಿ ಮಾಂಸವನ್ನು ಸಂರಕ್ಷಿಸಲು ಬಳಸುವ ‘ನೈಟ್ರೈಟ್ಸ್’ ಎಂಬ ರಾಸಾಯನಿಕಗಳು ಕರುಳಿನ ಒಳಪದರವನ್ನು ಹಾನಿಗೊಳಿಸಿ ಕ್ಯಾನ್ಸರ್ ಉಂಟುಮಾಡುವ ಸಂಯುಕ್ತಗಳಾಗಿ ಬದಲಾಗುತ್ತವೆ. 2. ಕೆಂಪು ಮಾಂಸ (Red Meat) ದನದ ಮಾಂಸ, ಕುರಿ…

Read More

ಉತ್ತರ ಕನ್ನಡ: ರೈತರಿಗೆ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿರಂತರವಾಗಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಉದ್ದೇಶದ ಸೋಲಾರ್ ಪಂಪ್‌ಸೆಟ್ ಯೋಜನೆ, ಕುಸುಮ್-ಬಿ ಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ರೈತರು ಅತೀ ಕಡಿಮೆ ವೆಚ್ಚದಲ್ಲಿ ಮತ್ತು ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್‌ಗಳನ್ನು ಪಡೆಯುವ ಮೂಲಕ ನಿರಾಂತಕವಾಗಿ ಕೃಷಿ ಚುಟುವಟಿಕೆಗಳನ್ನು ಕೈಗೊಳ್ಳಬಹುದಾಗಿದೆ. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೊಜನೆ ರೂಪಿಸಲಾಗಿದ್ದು, ಈ ಯೋಜನೆಯ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು ಮತ್ತು ಸೌರಶಕ್ತಿ ಬಳಕೆಯ ಉತ್ತೇಜನ ಮಾಡಲು ಸರ್ಕಾರದಿಂದ ಶೇ.80 ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವು ಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದ್ದು, ರೈತರಿಗೆ ಸೌರ ಫಲಕಗಳು, ಸಬ್ ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿAಗ್…

Read More