Author: kannadanewsnow09

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷವಾಗಲಿರುವುದಾಗಿ ತಿಳಿಸಿದ್ದಾರೆ. ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು. ಈ ಬಾರಿ 1700 ಮಕ್ಕಳು ಭಾಗವಹಿಸಲಿದ್ದಾರೆ, ಅವರಲ್ಲಿ 700 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು. ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ…

Read More

ಶಿವಮೊಗ್ಗ : ಇಂದು ಜಿಲ್ಲೆಯ ಸಾಗರದಲ್ಲಿ ನಕಲಿ ಯೂಟ್ಯೂಬರ್ಸ್ ಮತ್ತು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲಾಕ್‌ಮೈಲ್ ಮಾಡುತ್ತಿರುವವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಹೆಸರಿನಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ತಿರುಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ತಮ್ಮದು ಯೂಟ್ಯೂಬ್ ಚಾನಲ್ ಇದೆ ಎಂದು ಪತ್ರಕರ್ತರ ಸಂಘದ ಹೆಸರು ಹೇಳಿಕೊಂಡು ಬ್ಲಾಕ್‌ಮೈಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದಾರೆ. ಕೊಡದಿದ್ದರೇ ಬೆದರಿಸುವಂತಹ ಕೃತ್ಯಗಳು ನಡೆಯುತ್ತಿರುವುದು ಸಂಘದ ಗಮನಕ್ಕೆ ಬಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅದರಲ್ಲೂ ಸಾಗರ ತಾಲ್ಲೂಕಿನ ಲೇಔಟ್ ಮಾಲೀಕರಿಗೆ, ಉದ್ಯಮಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ, ಶಿಕ್ಷಕರಿಗೆ ಯೂಟ್ಯೂಬ್ ಚಾನಲ್‌ನಲ್ಲಿ ನಿಮ್ಮ ವಿರುದ್ದ ಸುದ್ದಿ ಪ್ರಕಟಿಸುತ್ತೇವೆ ಎಂದು ಹೆದರಿಸಿ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ. ಇವರಿಗೆ ಪತ್ರಕರ್ತರ ಸಂಘಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಮನವಿಯಲ್ಲಿ ಸ್ಪಷ್ಟ ಪಡಿಸಲಾಗಿದೆ. ಯೂಟ್ಯೂಬ್…

Read More

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸಲಾಗಿತ್ತು. ಈ ವೇಳೆ ಹಲವರ ವಿರುದ್ಧ ದಾಖಲಾಗಿರುವಂತ ಪ್ರಕರಣವನ್ನು ಹಿಂಪಡೆಯುವುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅ.31ರಂದು ಅಲೆಮಾರಿ ಸಮುದಾಯಗಳ ಸಭೆ ಮಾಡ್ತೀವಿ. ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಮಾಡಿದ್ದೇವೆ. ಇದರ ಅನುಷ್ಠಾನಕ್ಕೆ ಬಿಲ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಂಬಂಧಿಸಿದ ಇಲಾಖೆಗಳ ಜೊತೆಗೆ ಚರ್ಚೆ ಮಾಡಲಾಗಿದೆ ಎಂದರು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್ ಪಡೆಯುವುದಾಗಿ ಇದೇ ಸಂದರ್ಭದಲ್ಲಿ ಸಚಿವ ಮಹದೇವಪ್ಪ ಘೋಷಿಸಿದರು.

Read More

ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 06, 2025 ರೊಳಗಾಗಿ ವಿಶೇಷ ಡಿಇಡಿ, ಬಿಇಡಿ ಪ್ರಮಾಣ ಪತ್ರ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಧಾರವಾಡ ಕಚೇರಿಯ ಅಧೀಕ್ಷಕರನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/state-government-orders-mandatory-screening-of-kannada-films-in-all-cinemas-for-one-week/ https://kannadanewsnow.com/kannada/sharavati-pumped-storage-project-is-destroying-the-environment-and-biodiversity-farmer-leader-dinesh-shirwala/

Read More

ಬಳ್ಳಾರಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ಮಾಲೀಕರು ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ. ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/business-license-mandatory-for-residential-pg-businesses-in-bengaluru-gba-order/ https://kannadanewsnow.com/kannada/shivananda-tagadur-re-elected-as-the-state-president-of-karnataka-working-journalists-association-kuwj/

Read More

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳ ಉದ್ದಿಮೆದಾರರಿಗೆ ಅಂತಿಮ ಎಚ್ಚರಿಕೆಯಾಗಿದೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ PG ಗಳು ಉದ್ದಿಮೆ ಪರವಾನಗಿ ಪಡೆಯದೆ ಹಾಗೂ ಸ್ಥಾಪಿತ ಮಾನದಂಡಗಳನ್ನು ಉಲ್ಲಂಘಿಸಿ ವಾಹಿವಾಟು ಮಾಡುತ್ತಿರುವ ದೂರು ಬಂದಿರುತ್ತದೆ. ಪ್ರದೇಶದ ಪ್ರಮುಖ ಉಲ್ಲಂಘನೆಗಳಲ್ಲಿ:- * ವಸತಿ ವಲಯಗಳಲ್ಲಿ ಅನುಮತಿಯಿಲ್ಲದೆ ವಾಹಿವಾಟು ಮಾಡುತ್ತಿರುವುದು. * ಮೂಲಭೂತ ಸುರಕ್ಷತೆ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು. * ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು * ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸದಿರುವುದು, ಇತ್ಯಾದಿ. ಈ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಹೊಂದಿಲ್ಲದೇ ಸಾರ್ವಜನಿಕ ಆರೋಗ್ಯಕ್ಕೆ, ರಕ್ಷಣೆಗಳಿಗೆ ಅಪಾಯಕ್ಕೆ ಕಾರಣವಾಗುವ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯಲ್ಲಿ ಅಂತಹ ಅನಧಿಕೃತ PG ವಸತಿಗೃಹಗಳನ್ನು ನಿಯಂತ್ರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ 07 ದಿನಗಳಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ…

Read More

ಬೆಂಗಳೂರು: ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ವಿಳಾಸಕ್ಕೆ ಸ್ಥಳಾಂತರಗೊಂಡಿದ್ದು, ಸಾರ್ವಜನಿಕರು ಇಲಾಖೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ಭೇಟಿ ನೀಡಬಹುದು ಎಂದು ಬೆಂಗಳೂರು (ದಕ್ಷಿಣ) ಜಯನಗರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಅಧಿಕಾರಿಗಳು ತಿಳಿಸಿದ್ದಾರೆ. ಅಂಜನಾಪುರ ಪ್ರಾದೇಶಿಕ ಕಚೇರಿ ಯಿಂದ ಬಸ್ ಬಿಡುವ ಸಮಯ ವೇಳಾ ಪಟ್ಟಿ ಬೆಳಿಗ್ಗೆ 09 :10, 09: 35, 10: 20,11: 00,11: 35 ಗಂಟೆಗೆ. ಮಧ್ಯಾಹ್ನ 12: 05, 01:05, 2:00, 3:00, 3:25, 04: 05, 04:30. ಮತ್ತು ಸಂಜೆ 05:10, 06: 15 ಗಂಟೆಗೆಳಿಗೆ. ಕೆ.ಆರ್.ಮಾರ್ಕೆಟ್ ಬಸ್ ನಿಲ್ದಾಣದಿಂದ ಬಿಡುವ ಸಮಯ ವೇಳಾ ಪಟ್ಟಿ ಬೆಳಿಗ್ಗೆ 08: 05, 08:30, 09: 00, 10:00,10:30,…

Read More

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) 2025-26ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಮತ್ತು ಆಡಿಟ್ ವರದಿಗಳನ್ನು ಸಲ್ಲಿಸಲು ಗಡುವನ್ನು ವಿಸ್ತರಿಸಿದೆ. ತೆರಿಗೆದಾರರು ಈಗ ನವೆಂಬರ್ 10 ರವರೆಗೆ ಆಡಿಟ್ ವರದಿಗಳನ್ನು ಸಲ್ಲಿಸಲು ಮತ್ತು ಡಿಸೆಂಬರ್ 10 ರವರೆಗೆ ITR ಗಳನ್ನು ಸಲ್ಲಿಸಲು ಅವಕಾಶವಿದೆ. ಈ ನಿರ್ಧಾರವು ಮೂಲ ಗಡುವನ್ನು ಪೂರೈಸಲು ಹೆಣಗಾಡುತ್ತಿರುವ ತೆರಿಗೆದಾರರು ಮತ್ತು ವೃತ್ತಿಪರರಿಗೆ ಪರಿಹಾರವನ್ನು ನೀಡುತ್ತದೆ. ಆಡಿಟ್ ವರದಿಗಳಿಗೆ ಪರಿಷ್ಕೃತ ಗಡುವುಗಳು ಆರಂಭದಲ್ಲಿ, ತೆರಿಗೆ ಆಡಿಟ್ ವರದಿಗಳನ್ನು ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 30 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಅದನ್ನು ಅಕ್ಟೋಬರ್ 31, 2025 ರವರೆಗೆ ವಿಸ್ತರಿಸಲಾಯಿತು. ವಿವಿಧ ಹೈಕೋರ್ಟ್‌ಗಳ ಆದೇಶಗಳ ನಂತರ CBDT ಈ ಗಡುವನ್ನು ನವೆಂಬರ್ 10 ಕ್ಕೆ ವಿಸ್ತರಿಸಿತು. ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ಮತ್ತು ಗುಜರಾತ್ ಹೈಕೋರ್ಟ್‌ಗಳ ನಿರ್ಧಾರಗಳಿಂದ ಈ ವಿಸ್ತರಣೆಗಳು ಪ್ರಭಾವಿತವಾಗಿವೆ. ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಗಳು ಸೇರಿದಂತೆ ವೃತ್ತಿಪರ ಸಂಘಗಳಿಂದ ಹಲವಾರು ವಿನಂತಿಗಳ ನಂತರ ಈ…

Read More

ಮಂಡ್ಯ : ಶೋಷಣೆಗೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಅಧ್ಯಕ್ಷರಾದ ಡಾ. ಎಲ್ ಮೂರ್ತಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 20 ದಿನಗಳ ಹಿಂದೆ ನಾನು ಆಯೋಗಕ್ಕೆ ನೂತನ ಅಧ್ಯಕ್ಷನಾಗಿ ನೇಮಕ ಕೊಂಡಿದ್ದೇನೆ, ಆಯೋಗದಲ್ಲಿ ಒಟ್ಟಾರೆ 1503 ಪ್ರಕರಣಗಳು ಹಾಗೂ 4943 ಪತ್ರ ವ್ಯವಹಾರದ ಕಡತಗಳು ಬಾಕಿ ಇವೆ ಎಲ್ಲವನ್ನೂ ಶೀಘ್ರವಾಗಿ ವಿಲೇವಾರಿ ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು. ಆಯೋಗದ ಅಧ್ಯಕ್ಷನಾದ ನಂತರ ಮೊದಲು ನಾನು ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಸುತಿದ್ದೇನೆ, ಮಂಡ್ಯ ಜಿಲ್ಲೆಯ ಸ್ಥಿತಿ ಗತಿಗಳ ಕುರಿತು ಹತ್ತಿರದಿಂದ ನಾನು ಬಲ್ಲೆ ಏಕೆಂದರೆ ನಾನು…

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union Of Working Journalist-KUWJ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು. ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರು. 2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ ಸುಸಜ್ಜಿತ ಪತ್ರಕರ್ತರ ಭವನವನ್ನು ನಿರ್ಮಾಣ…

Read More