Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಲಿಗೆ ಹರಿಬಿಡುವುದರಲ್ಲಿ ಪ್ರಿಯಾಂಕ್ ಖರ್ಗೆಯವರು ಇಡೀ ಕಾಂಗ್ರೆಸ್ಸಿನಲ್ಲಿ ನಂಬರ್ 1 ಇದ್ದಾರೆ ಎಂದು ಟೀಕಿಸಿದರು. ಖರ್ಗೆ ಎಂಬ ಹೆಸರು ಪ್ರಿಯಾಂಕ್ ಪಕ್ಕದಲ್ಲಿ ಇಲ್ಲದೇ ಇರುತ್ತಿದ್ದರೆ ಅವರು ಮಂಡಲ ಪಂಚಾಯತ್ ಸದಸ್ಯರೂ ಆಗುತ್ತಿರಲಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗುಡುಗಿದ್ದಾರೆ. ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ವಂಶಪಾರಂಪರ್ಯದಲ್ಲಿ ಆ ರಾಜಮನೆತನದ ಆಡಳಿತವೇ ಮತ್ತೆ ಬಂದ ಹಾಗೆ ಕಾಣುತ್ತಿದೆ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆಯವರು ಸದನದಲ್ಲಿ ಉತ್ತರ ಕೊಡಬೇಕಾದ ವೇಳೆ ಪರಾರಿಯಾಗುತ್ತಾರೆ. ಅವರ ಸಾಧನೆ ಶೂನ್ಯವಾದುದೇ ಇದಕ್ಕೆ ಕಾರಣ ಎಂದು ತಿಳಿಸಿದರು. ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಅವರು ಭಾಗವಹಿಸಿದ್ದರು.
ಬೆಂಗಳೂರು: ನಿನ್ನೆ ರಾಜ್ಯದ ವಿಧಾನಪರಿಷತ್ತಿನಲ್ಲಿ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳಕಾರಿಯಾಗಿ ಮತ್ತು ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚಿಸುವಂತೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಯವರು ಕೂಡಲೇ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದರು. ನಿನ್ನೆ ಕರ್ನಾಟಕ ಸರಕಾರವು ದ್ವೇಷ ಭಾಷಣ ನಿಯಂತ್ರಣ ಕಾನೂನನ್ನು ಎರಡೂ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ. ಆ ಕಾನೂನಿನಡಿ ಪ್ರಿಯಾಂಕ್ ಖರ್ಗೆ ಮೊದಲನೇ ಅಪರಾಧಿ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಉತ್ತರ ಕರ್ನಾಟಕದ ಬಿಜಾಪುರ, ರಾಯಚೂರು, ಗುಲ್ಬರ್ಗ, ಹೈದರಾಬಾದ್ನಲ್ಲಿ ಒಂದು ನಾಣ್ಣುಡಿ ಇದೆ. ಸಣ್ಣ ಬಾಯೊಳಗೆ ದೊಡ್ಡ ಮಾತು (ಚೋಟಿ ಮುಹ್, ಬಡೀ ಬಾತ್) ಎಂಬರ್ಥವನ್ನು ಇದು ಕೊಡುತ್ತದೆ. ಈ ನಾಣ್ಣುಡಿ ಪ್ರಿಯಾಂಕ್ ಸಲುವಾಗಿಯೇ ಇದ್ದಂತಿದೆ…
ಬೆಂಗಳೂರು: ಜನಪರ ಸಚಿವರಾದ ಕೃಷ್ಣ ಬೈರೇಗೌಡರ ಮೇಲೆ ಏಕೆ ಈ ಸುಳ್ಳು ಆರೋಪ ಎನ್ನುವ ಬಗ್ಗೆ ಮುಂದೆ ಓದಿ.. – ಕಂದಾಯ ಇಲಾಖೆಯಲ್ಲಿ ವರ್ಗಾವಣೆಯಲ್ಲಿ ಪಾರದರ್ಶಕತೆ ತಂದಿದ್ದರು. – ಕೆಲಸ ಮಾಡದ ಎಸಿ-ತಹಶೀಲ್ದಾರ್ ಗಳ ವಿರುದ್ಧ ಕಠಿಣ ಕ್ರಮ ವಹಿಸಿ ಎಲ್ಲಾ ಅಧಿಕಾರಿಗಳಿಂದ ಕೆಲಸ ತೆಗೆಸಿದ್ದರು. – ಇಲಾಖೆಯ ಎಲ್ಲಾ ಕೆಲಸಗಳನ್ನೂ ಡಿಜಿಟಲೀಕರಣಗೊಳಿಸಿ ಇ-ಆಫೀಸ್ ಜಾರಿಗೆ ತಂದು ಭ್ರಾಷ್ಟಾಚಾರಕ್ಕೆ ಇತಿಶ್ರೀ ಹಾಡಿದ್ದರು. – ದಶಕಗಳ ಸಮಸ್ಯೆಯಾಗಿದ್ದ ಪೋಡಿ ದುರಸ್ಥಿಗೆ ಕೆಲಸಕ್ಕೆ ಕೈಹಾಕಿ ರೈತರಿಗೆ ನೆಮ್ಮದಿ ನೀಡಿದರು. – ಬಗರ್ ಹುಕುಂ ಮಂಜೂರಿಯಲ್ಲಿ ಪಾರದರ್ಶಕತೆ ತಂದರು. – ಆದರೂ, ಕೃಷ್ಣ ಬೈರೇಗೌಡರ ವಿರುದ್ಧ ಏಕೆ ಈ ಮಟ್ಟದ ಸುಳ್ಳು ಆರೋಪಗಳ ಷಡ್ಯಂತ್ರವಾಗಿದೆ ಎನ್ನಲಾಗುತ್ತಿದೆ. – ತಾನೂ ತಿನ್ನೋಲ್ಲ ತಿನ್ನೋರಿಗೂ ಬಿಡಲ್ಲ ಎಂಬ ನಿಲುವೇ ಮುಳುವಾಯಿತೇ.?? ಎಂಬುದು ಆಪ್ತ ವಲಯದ ಮಾತು. – ಅಕ್ರಮ ಭೂ ಮಂಜೂರಿಗಾಗಿ ಮನವಿ ಸಲ್ಲಿಸಿದ್ದ ಹಲವು ಪ್ರಭಾವಿಗಳ ಮನವಿಗೆ ಕಿವಿಗೊಡದ ಇದ್ದದ್ದೇ ತಪ್ಪಾಯಿತೇ? ಎಂಬ ಪ್ರಶ್ನೆ ಸಾರ್ವಜನಿಕರದ್ದು. -…
ವಿಜಯಪುರ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಿದ್ದಾರೆ. ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಯಿತು. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆ ಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಇಂದು ಚಾಲನೆ ನೀಡಲಾದ ಒಟ್ಟು 112 ನೂತನ ನಗರ ಸಾರಿಗೆ ಬಸ್ ಗಳನ್ನು ನಗರ ಭೂ ಸಾರಿಗೆ ನಿರ್ದೇಶನಾಲಯ, (Directorate of Urban Land Transport (DULT)) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯೋಜನೆ ಯಡಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ವಾಹನಗಳನ್ನು ವಿಜಯಪುರ ವಿಭಾಗಕ್ಕೆ 27, ವಿಜಯನಗರಕ್ಕೆ 25, ಕಲಬುರಗಿಗೆ 25, ರಾಯಚೂರಿಗೆ 18, ಬಳ್ಳಾರಿಗೆ 10, ಬೀದರಕ್ಕೆ 04 ಮತ್ತು ಯಾದಗಿರಿಗೆ 03 ಹಂಚಿಕೆ ಮಾಡಲಾಗಿದೆ. ಇದೇ ಯೋಜನೆಯಡಿಯಲ್ಲಿ ಮುಂದಿನ ದಿನಗಳಲ್ಲಿ ಸೇರ್ಪಡೆಗೊಳ್ಳಲಿರುವ 30 ಬಸ್ ಗಳನ್ನು ಅವಶ್ಯವಿರುವ ವಿಭಾಗ/ಘಟಕಕ್ಕೆ ಮಾನ್ಯ ಅಧ್ಯಕ್ಷರು…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು. ಸರ್ಕಾರದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಇಷ್ಟು ಮಾತ್ರ ನಾನೂ ಹೇಳಬಲ್ಲೇ ಎಂದು ಸಚಿವರು ವಿವರಿಸಿದರು. ಒಪ್ಪಂದದ ಬಗ್ಗೆ ನಮಗೆ ಯಾರಿಗೂ…
ಮಂಡ್ಯ: ಭ್ರಷ್ಟ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಬಿಗ್ ಶಾಕ್ ಎನ್ನುವಂತೆ ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಬೆಂಗಳೂರಿನಿಂದ ಬಂದಿರುವ ಇಬ್ಬರು ಡಿವೈಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿ, ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದು ಕಚೇರಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಾರ? ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಹೇಗಿದೆ? ಬರುವಾಗ ಜೇಬಿನಲ್ಲಿ ದುಡ್ಡು ಎಷ್ಟಿತ್ತು?, ಹೋಗಬೇಕಾದ್ರೆ ಎಷ್ಟಿದೆ.? ಮೊಬೈಲ್ ಗೂಗಲ್ ಪೇ, ಫೋನ್ ಪೇ ವಹಿವಾಟಿನ ಬಗ್ಗೆಯೂ ಚೆಕ್ ಮಾಡುತ್ತಿದ್ದಾರೆ. ಸಾರ್ವಜನಿಕರಿಂದ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು, ಅಹವಾಲನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸುತ್ತಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ
ಬೆಂಗಳೂರು :“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ…
ಶಿವಮೊಗ್ಗ: ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ ಮುಚ್ಚಿದಂತಾಗುತ್ತದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬಾಲ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವಣಗೊಳಿಸಲು ಅವಕಾಶ ಕಲ್ಪಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಕೂಡ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲೆಗಳು ಇಂತಹ ಚಟುವಟಿಕಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿವೆ. ದೇಶ ಕಟ್ಟಲು ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿರಬೇಕು. ಶಿಕ್ಷಣ ಎಲ್ಲರಿಗೂ ಅತಿ ಅಗತ್ಯವಾಗಿದ್ದು, ಬಹು ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ದೇಶಕ್ಕೆ ಉತ್ತಮ ಕೊಡುಗೆ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್ ಮತ್ತು ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ 20 ಐ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡದ ತಂಡವನ್ನು ಮುಂಬೈನ ಬಿಸಿಸಿಐ ಕಚೇರಿಯಲ್ಲಿ ಶನಿವಾರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಪ್ರಕಟಿಸಿದರು. ಭಾರತವು ನಮೀಬಿಯಾ, ನೆದರ್ಲ್ಯಾಂಡ್ಸ್, ಪಾಕಿಸ್ತಾನ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ತಂಡವು ಫೆಬ್ರವರಿ 7 ರಂದು ಮುಂಬೈನಲ್ಲಿ ಯುಎಸ್ಎ ವಿರುದ್ಧ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 01:30 ಕ್ಕೆ ಘೋಷಿಸಬೇಕಿದ್ದ ತಂಡವು ಸುಮಾರು 35 ನಿಮಿಷಗಳ ಕಾಲ ವಿಳಂಬವಾಯಿತು, ಏಕೆಂದರೆ ಅಹಮದಾಬಾದ್ನಲ್ಲಿದ್ದ ಸೂರ್ಯಕುಮಾರ್ ಯಾದವ್ ಸಭೆಗಾಗಿ ಮುಂಬೈಗೆ ತಡವಾಗಿ ಬಂದಿಳಿದರು. ಹೀಗಿದೆ 2026 ರ ಟಿ20 ವಿಶ್ವಕಪ್ಗಾಗಿ ಭಾರತ ತಂಡ ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಾರ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ತಿಲಕ್ ವರ್ಮಾ, ಅಕ್ಷರ್…
ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ಸಂತಾಪ ಸೂಚಿಸಿದೆ. ಹಿರಿಯ ಪತ್ರಕರ್ತರ ದೊಡ್ಡ ಬೊಮ್ಮಯ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದರು. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದರು. ಕೆಎಸ್ಆರ್ಟಿಸಿ ಬಸ್ ನಿಂದ ಇಳಿದು, ಬಾಗಲೂರಿನಲ್ಲಿರುವ ತಮ ಮನೆ ತಲುಪಲು ಬಿಎಂಟಿಸಿ ಬಸ್ ಹತ್ತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿದೆ. ಸಹಪ್ರಯಾಣಿಕರು ಉಪಚರಿಸಿದ ಹೊರತಾಗಿಯೂ…














