Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ 2027ರ ಭಾರತದ ಜನಗಣತಿಗಾಗಿ (Census of India 2027) ಸಿದ್ಧಪಡಿಸಲಾದ ಪ್ರಶ್ನಾವಳಿಗಳ ಅಧಿಕೃತ ಕನ್ನಡ ಆವೃತ್ತಿಯನ್ನು ಒಳಗೊಂಡ ‘ಕರ್ನಾಟಕ ರಾಜ್ಯಪತ್ರ’ದ ವಿಶೇಷ ಸಂಚಿಕೆಯನ್ನು ಹೊರಡಿಸಲಾಗಿದೆ. ಮನೆಗಳ ಪಟ್ಟಿ ಮತ್ತು ವಸತಿ ಗಣತಿಗಾಗಿ ಒಟ್ಟು 33 ಪ್ರಶ್ನೆಗಳನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕರ ಮಾಹಿತಿಗಾಗಿ ಇದನ್ನು ಪ್ರಕಟಿಸಲಾಗಿದೆ. ರಾಜ್ಯಪತ್ರದಲ್ಲಿ ಏನಿದೆ: ಕೇಂದ್ರದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಜನವರಿ 22, 2026 ರಂದು ಹೊರಡಿಸಿದ್ದ ಅಧಿಸೂಚನೆಗೆ ಪೂರಕವಾಗಿ, ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹಮೂರ್ತಿ ಜಿ.ಕೆ. ಅವರ ಆದೇಶದಂತೆ ಮಾರ್ಚ್ 6, 2026 ರಂದು ಈ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಗಣತಿಯ ವೇಳೆ ಕೇಳಲಾಗುವ ಪ್ರಮುಖ 33 ಪ್ರಶ್ನೆಗಳು: ಗಣತಿ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ ಸಂಗ್ರಹಿಸಲಿರುವ ಮಾಹಿತಿಯ ವಿವರಗಳು ಹೀಗಿವೆ: ಮನೆ ಮತ್ತು ಕಟ್ಟಡದ ವಿವರ: ಕಟ್ಟಡದ ಸಂಖ್ಯೆ, ಜನಗಣತಿ ಮನೆ ಸಂಖ್ಯೆ, ಮನೆಯ ನೆಲ, ಗೋಡೆ ಮತ್ತು ಮೇಲ್ಛಾವಣಿಗೆ ಬಳಸಲಾದ ಪ್ರಧಾನ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಅಧಿಕೃತ ಕೀ ಉತ್ತರಗಳನ್ನು (Key Answers) ಪ್ರಕಟಿಸಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಪರೀಕ್ಷೆಯ ಉತ್ತರಗಳ ಬಗ್ಗೆ ವಿದ್ಯಾರ್ಥಿಗಳು ಮಂಡಳಿಯ ವೆಬ್ಸೈಟ್ ಮೂಲಕ ಪರಿಶೀಲನೆ ನಡೆಸಬಹುದಾಗಿದೆ. ಫಲಿತಾಂಶ ಯಾವಾಗ? ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಮೌಲ್ಯಮಾಪನ ಮತ್ತು ಫಲಿತಾಂಶದ ವಿವರಗಳು ಹೀಗಿವೆ: ಎಸ್ಎಸ್ಎಲ್ಸಿ ಮೌಲ್ಯಮಾಪನ: ಏಪ್ರಿಲ್ 5 ರಿಂದ ಏಪ್ರಿಲ್ 20 ರವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ ಫಲಿತಾಂಶ: ಏಪ್ರಿಲ್ 24 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ದ್ವಿತೀಯ ಪಿಯುಸಿ ಫಲಿತಾಂಶ: ಪಿಯುಸಿ ಮೌಲ್ಯಮಾಪನ ಈಗಾಗಲೇ ಪೂರ್ಣಗೊಂಡಿದ್ದು, ಏಪ್ರಿಲ್ 7 ರಿಂದ 12 ರ ಒಳಗೆ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಪ್ರಕಟಿಸಲಾದ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಅಥವಾ ಪೋಷಕರಿಗೆ ಯಾವುದಾದರೂ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಮಂಡಳಿ ಅವಕಾಶ ನೀಡಿದೆ. ಕೊನೆಯ ದಿನಾಂಕ: ಏಪ್ರಿಲ್ 5, ಸಂಜೆ 5:30 ರ ಒಳಗಾಗಿ ಮನವಿ ಸಲ್ಲಿಸಬೇಕು.…
ಬೆಂಗಳೂರು: ಲಂಕೇಶ್ ಪತ್ರಿಕೆಯ ಖ್ಯಾತಿಯ, ನೇರ ನಡೆನುಡಿಯ ದಿಟ್ಟ ಪತ್ರಕರ್ತ ಟಿ.ಕೆ. ತ್ಯಾಗರಾಜ್ ಅವರ ಪತ್ನಿ ಶ್ರೀಮತಿ ಸರಸ್ವತಿ (ಸರಸ್ವತಿ ತ್ಯಾಗರಾಜ್) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ 9 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಕ್ಷ ವಕೀಲೆ ಮತ್ತು ಮಾನವೀಯ ಅಂತಃಕರಣದ ವ್ಯಕ್ತಿತ್ವ ವೃತ್ತಿಯಲ್ಲಿ ವಕೀಲರಾಗಿದ್ದ ಸರಸ್ವತಿ ಅವರು ಅತ್ಯಂತ ಬುದ್ಧಿವಂತ ಮತ್ತು ಮಾನವೀಯತೆಯುಳ್ಳವರಾಗಿದ್ದರು. ಕಠಿಣವಾದ ಕಾನೂನು ಹೋರಾಟಗಳ ಮೂಲಕ ಬಡವರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಅವರು ಮುಂಚೂಣಿಯಲ್ಲಿದ್ದರು. ಪತಿ ತ್ಯಾಗರಾಜ್ ಅವರ ಪತ್ರಿಕೋದ್ಯಮದ ದಿಟ್ಟತನಕ್ಕೆ ಸರಸ್ವತಿ ಅವರ ವೃತ್ತಿ ನಿಷ್ಠೆ ಮತ್ತು ಧೈರ್ಯ ದೊಡ್ಡ ಬಲವಾಗಿತ್ತು. ಇವರಿಬ್ಬರ ದಾಂಪತ್ಯ ನಾಡಿನ ಅನೇಕರಿಗೆ ಮಾದರಿಯಾಗಿತ್ತು. 9 ವರ್ಷಗಳ ಸುದೀರ್ಘ ಹೋರಾಟ ಮತ್ತು ಪತಿಯ ಅಪಾರ ಸೇವೆ ಸುಮಾರು 9 ವರ್ಷಗಳ ಹಿಂದೆ ‘ಥ್ರೋಂಬೋಸಿಸ್’ (ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ) ಕಾಯಿಲೆಗೆ ತುತ್ತಾಗಿದ್ದ ಸರಸ್ವತಿ ಅವರಿಗೆ ನಂತರ ಪಾರ್ಶ್ವವಾಯು ಕೂಡ ಸಂಭವಿಸಿತ್ತು. ಅಂದಿನಿಂದ ಪತ್ನಿಯನ್ನು ಮಗುವಿನಂತೆ…
ಬೆಂಗಳೂರು: ರಾಜ್ಯದ 20 ಜಿಲ್ಲೆಗಳ 60 ತಾಲ್ಲೂಕುಗಳಲ್ಲಿನ 324 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇವುಗಳ ಪೈಕಿ 76 ಗ್ರಾಮಗಳಿಗೆ 76 ಟ್ಯಾಂಕರ್ಗಳ ಮುಖಾಂತರ ಹಾಗೂ 248 ಗ್ರಾಮಗಳಿಗೆ 280 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತುರ್ತು ಕಾಮಗಾರಿಗಳನ್ನು ನಿರ್ವಹಿಸಲು ಈಗಾಗಲೇ 60 ಕೋಟಿ ರೂ.ಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದು, ಮಾರ್ಚ್ 2026ರಲ್ಲಿ ಟಾಸ್ಕ್ ಫೋರ್ಸ್ನಡಿ ಮುಂದುವರೆದ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಹೆಚ್ಚುವರಿಯಾಗಿ 48 ಕೋಟಿ ರೂ.ಗಳನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ ಹಾಗೂ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ 14.50 ಕೋಟಿ ರೂ.ಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಬೇಸಿಗೆ ಅವಧಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ನಿರಾತಂಕವಾಗಿರಬೇಕೆಂಬ…
ಕೊಪ್ಪಳ: ಅಟ್ರಾಸಿಟಿ ಪ್ರಕರಣವೊಂದರಲ್ಲಿ ಜಾಮೀನು ಕೊಡಿಸುವುದಾಗಿ ಲಂಚ ಸ್ವೀಕರಿಸುತ್ತಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (CRE) ಇಬ್ಬರು ಸಿಬ್ಬಂದಿಗಳು ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟನೆಯ ವಿವರ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗಳು, ಅಟ್ರಾಸಿಟಿ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಮೆಹಬೂಬ್ ಪಾಷಾ ಎಂಬುವವರಿಂದ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಡಿಜಿಟಲ್ ರೂಪದಲ್ಲಿ ಲಂಚ: ಈ ಪ್ರಕರಣದಲ್ಲಿ ಲಂಚದ ಹಣವನ್ನು ಡಿಜಿಟಲ್ ಪಾವತಿ ಮೂಲಕ ಪಡೆಯಲಾಗಿತ್ತು ಎಂಬುದು ವಿಶೇಷ. ಆರೋಪಿ ಕಾನ್ಸ್ಟೇಬಲ್ಗಳು ಪೋನ್ ಪೇ (PhonePe) ಮೂಲಕ 15,000 ರೂಪಾಯಿ ಲಂಚದ ಹಣವನ್ನು ಪಡೆದುಕೊಂಡಿದ್ದರು. ಈ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಲಂಚದ ಹಣದೊಂದಿಗೆ ಇಬ್ಬರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಕಾರ್ಯಾಚರಣೆ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಈ ಇಬ್ಬರು ಸಿಬ್ಬಂದಿಗಳನ್ನು ಸದ್ಯ ವಶಕ್ಕೆ…
ಬೆಂಗಳೂರು: ಇದೇ ಏಪ್ರಿಲ್ 11ರಂದು ಬೆಂಗಳೂರಿನ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಜನತಾ ಸಮಾವೇಶದ ಸಿದ್ಧತೆಗಳ ಬಗ್ಗೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು. ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಗ್ರೇಟರ್ ಬೆಂಗಳೂರು ಜನತಾದಳ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡರು ವಹಿಸಿದ್ದರು. ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ರಾಜ್ಯದಲ್ಲಿ ಮತ್ತು ರಾಜಧಾನಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಹಾಗೂ ಸಮಾವೇಶವನ್ನು ಯಶಸ್ವಿಗೊಳಿಸಲು ದುಡಿಮೆ ಮಾಡಬೇಕು ಎಂದು ರಮೇಶ್ ಗೌಡ ಅವರು ಕರೆ ನೀಡಿದರು. ರಾಜ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ನಗರದ ಜನರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಲೆ ಏರಿಕೆ ಹಾಗೂ ತೆರಿಗೆಗಳ ಹೇರಿಕೆಯಿಂದ ಅವರು ಬಸವಳಿದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಕೆಟ್ಟ ನಿರ್ಧಾರಗಳು ಹಾಗೂ ನಡವಳಿಕೆಗಳನ್ನು ಖಂಡಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಗ್ರೇಟರ್…
ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…
ಶಿವಮೊಗ್ಗ: ರಾಜ್ಯಕ್ಕೆ ಐದು ಪ್ರಮುಖ ಅಣೆಕಟ್ಟುಗಳ ನಿರ್ಮಾಣಕ್ಕಾಗಿ ತನ್ನ ಭೂಮಿಯನ್ನು ಧಾರೆ ಎರೆದು ಇಡೀ ನಾಡಿಗೆ ಬೆಳಕು ನೀಡಿದ ಹೊಸನಗರದ ಜನತೆ, ಇಂದಿಗೂ ಮೂಲಸೌಕರ್ಯಗಳಿಲ್ಲದೆ ಕತ್ತಲೆಯಲ್ಲಿ ಬದುಕುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ‘ಹೊಸನಗರ ವಿಧಾನಸಭಾ ಕ್ಷೇತ್ರ’ವನ್ನು ಮರುಸ್ಥಾಪಿಸಬೇಕು ಎಂಬ ಒತ್ತಾಯದೊಂದಿಗೆ ಬೃಹತ್ ಹೋರಾಟಕ್ಕೆ ಸಜ್ಜಾಗಲಾಗಿದೆ. ಈ ಕುರಿತು ರಿಪ್ಪನ್ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಅವರು, ಏಪ್ರಿಲ್ 5 ಮತ್ತು 6 ರಂದು ಮೂಲೆಗದ್ದೆ ಅಭಿನವ ಚನ್ನಬಸವ ಶ್ರೀಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಭೌಗೋಳಿಕವಾಗಿ ವಿಸ್ತಾರವಾಗಿರುವ ಹೊಸನಗರ ತಾಲೂಕಿನ ಹೋಬಳಿಗಳು ಪ್ರಸ್ತುತ ತೀರ್ಥಹಳ್ಳಿ ಮತ್ತು ಸಾಗರ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಹೋಗಿರುವುದರಿಂದ ತಾಲೂಕಿನ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಹಿನ್ನಡೆಯನ್ನು ಸರಿಪಡಿಸಲು ಹೊಸನಗರಕ್ಕೆ ಪ್ರತ್ಯೇಕ ಕ್ಷೇತ್ರದ ಅಸ್ತಿತ್ವ ಅನಿವಾರ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು. ಮಾಜಿ ಶಾಸಕ ಬಿ. ಸ್ವಾಮಿ ರಾವ್ ಅವರೂ ಪಾಲ್ಗೊಳ್ಳಲಿರುವ ಈ ಪಾದಯಾತ್ರೆಯು…
ಕಾರವಾರ: ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಆಯೋಗಕ್ಕೆ ದೂರು ಬಂದಿದೆ. ಈ ದೂರುಗಳನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ಇದುವರೆಗೆ 26 ಜನರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿರುವುದಾಗಿ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್.ಕೆ ತಿಳಿಸಿದರು. ಅವರು ಶನಿವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿದಾರರು ಕೋರುವ ಮಾಹಿತಿಯನ್ನು ವಿವರವಾಗಿ ಪರಿಶೀಲಿಸಿ ಅಗತ್ಯ ಮಾಹಿತಿಯನ್ನು, ನಿಗಧಿತ ಶುಲ್ಕ ಪಡೆದು ಕಾಲಮಿತಿಯಲ್ಲಿ ನೀಡಬೇಕು. ಈ ಕಾಯಿದೆಯ ದುರ್ಬಳಕೆ ಕುರಿತು ಕೂಡಾ ಆಯೋಗಕ್ಕೆ ದೂರುಗಳು ಬಂದಿದ್ದು, ಆಯೋಗವು ಇದುವರೆಗೆ 26 ಜನರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಆಯೋಗದಲ್ಲಿ 55400 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇತ್ತು, ನಂತರ ಈ ವರ್ಷ ಸಲ್ಲಿಕೆಯಾದ ಮೇಲ್ಮನವಿಗಳು ಸೇರಿ…
ಕಾರವಾರ : ಮಾಹಿತಿ ಹಕ್ಕು ಕಾಯಿದೆ ಯಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು. ಅವರು ಶನಿವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಹಿತಿ ಹಕ್ಕು ಕಾಯಿದೆಯು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಹಕಾರಿಯಾಗಿದ್ದು,ಇದು ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಣೆ ಮಾಡುವ ಕಾಯಿದೆಯಾಗಿ ಬದಲಾಗಿದೆ , ಅಧಿಕಾರಿಗಳು ಪ್ರಾಮಾಣಿಕವಾಗಿ ತಪ್ಪುಗಳನ್ನು ಮಾಡದಂತೆ ಕೆಲಸ ನಿರ್ವಹಿಸಲು ಕಾಯ್ದೆ ಸಹಕಾರಿಯಾಗಿದೆ ಎಂದರು. ಕಾಯಿದೆಯ ಕುರಿತಂತೆ ಅಗಿಂದಾಗ್ಗೆ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟ್ ನೀಡುವ ತೀರ್ಪುಗಳ ಕುರಿತಂತೆ ಮಾಹಿತಿ ಅಧಿಕಾರಿಗಳು ಅರಿವು ಹೊಂದಿರಬೇಕು, ಕಾಯಿದೆಯಲ್ಲಿನ…














