Author: kannadanewsnow09

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇಡೀ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರು ಮತ್ತು ಸದಸ್ಯರಿಗಾಗಿ ಗುರುವಾರ ಹಮ್ಮಿಕೊಂಡಿದ್ದ ವಿಡಿಯೋ ಕಾನ್ಫರೆನ್ಸ್ ಮೂಲಕದ ಯೂಟ್ಯೂಬ್ ಲೈವ್ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು. ಈ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಸಚಿವ ಶ್ರೀ ಮಧು ಬಂಗಾರಪ್ಪ ಅವರು SDMC ಸದಸ್ಯರನ್ನು ಶಾಲಾ ವ್ಯವಸ್ಥೆಯ ಸಕ್ರಿಯ ಪಾಲುದಾರರೆಂದು ಬಣ್ಣಿಸಿದರು ಮತ್ತು ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಸರ್ಕಾರ ಕೈಗೊಂಡಿರುವ ಪ್ರಮುಖ ಯೋಜನೆಗಳನ್ನು ಹಂಚಿಕೊಂಡರು. ಕಲ್ಯಾಣ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಗೆ ಸುಮಾರು 12,392 ಶಿಕ್ಷಕರನ್ನು ನೇಮಕಾತಿ ಮಾಡಲಾಗಿದೆ. ಇದಲ್ಲದೆ, ಈ ಹಿಂದೆ 10-15 ಸಾವಿರ ಅತಿಥಿ ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗುತ್ತಿತ್ತು, ಆದರೆ ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲೇ 51,000 ಅತಿಥಿ ಶಿಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು ಮುಂದಿನ…

Read More

ಗುಜರಾತ್: 2013 ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಅವರಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಗುಜರಾತ್ ಹೈಕೋರ್ಟ್ ಗುರುವಾರ ಆರು ತಿಂಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ರಾಜಸ್ಥಾನ ಹೈಕೋರ್ಟ್ ವೈದ್ಯಕೀಯ ಆಧಾರದ ಮೇಲೆ ಇದೇ ರೀತಿಯ ಪರಿಹಾರವನ್ನು ನೀಡಿದ ಸುಮಾರು ಒಂದು ವಾರದ ನಂತರ, ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ. ವಾಚಾನಿ ಅವರ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿತು. ರಾಜಸ್ಥಾನ ನ್ಯಾಯಾಲಯವು ಉಲ್ಲೇಖಿಸಿದ ಅದೇ ಆಧಾರದ ಮೇಲೆ 86 ವರ್ಷದ ಅಸಾರಾಂ ಅವರಿಗೆ ಜಾಮೀನು ವಿಸ್ತರಿಸುತ್ತಿರುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಅವರ ಆರೋಗ್ಯ ಹದಗೆಡುತ್ತಿರುವುದನ್ನು ಉಲ್ಲೇಖಿಸಿ ಅವರ ವಕೀಲರು ಹಿಂದಿನ ಆದೇಶವನ್ನು ಸಲ್ಲಿಸಿದರು ಮತ್ತು ಸಡಿಲಿಕೆ ಕೋರಿದರು. ರಾಜ್ಯ ಸರ್ಕಾರವು ಈ ಅರ್ಜಿಯನ್ನು ವಿರೋಧಿಸಿ, ಅಸಾರಾಂ ಅವರನ್ನು ಬಿಡುಗಡೆ ಮಾಡುವ ಬದಲು ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಸಾಕಷ್ಟು ಚಿಕಿತ್ಸೆ ಪಡೆಯಬಹುದು ಎಂದು ವಾದಿಸಿತು. ಕಳೆದ ತಿಂಗಳು, ಅಕ್ಟೋಬರ್ 29…

Read More

ನವದೆಹಲಿ : “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26 ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ನಾವು ಅದನ್ನು ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ” ಎಂದು ತಿಳಿಸಿದರು. ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ…

Read More

ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1986379735027593657 ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು. ಗೃಹಲಕ್ಷ್ಮಿ ಸೊಸೈಟಿ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ…

Read More

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28, 2026ರಿಂದ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್.18, 2026ರಿಂದ ಆರಂಭಗೊಳ್ಳಲಿದೆ. ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್‌ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್‌ 2ಕ್ಕೆ ಮುಕ್ತಾಯವಾಗಲಿದೆ. https://twitter.com/KarnatakaVarthe/status/1986384861909950844 https://kannadanewsnow.com/kannada/bihar-assembly-elections-60-25-voting-so-far-highest-in-begusarai-district/ https://kannadanewsnow.com/kannada/transport-minister-ramalinga-reddys-sudden-visit-to-kempegowda-bus-station-in-bengaluru/

Read More

ಬಿಹಾರ: ಬಿಹಾರ ವಿಧಾನಸಭಾ ಚುನಾವಣೆ-2025ಕ್ಕೆ ಇಂದು ಮೊದಲ ಹಂತಕ್ಕೆ ಮತದಾನ ನಡೆಯುತ್ತಿದೆ. ಇದೀಗ ದೊರೆತಂತ ಅಂಕಿ ಅಂಶದ ಪ್ರಕಾರವಾಗಿ ಇಂದಿನ ಮೊದಲ ಹಂತದ ಮತದಾನದ ವೇಳೆಯಲ್ಲಿ ಇದುವರೆಗೆ 60.25% ಮತದಾನವಾಗಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ. https://twitter.com/ANI/status/1986427709883584837 ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದಲ್ಲಿ ಆರಂಭವಾಗಿದೆ. ರಾಜ್ಯದ ಒಟ್ಟು 243 ಸ್ಥಾನಗಳ ಪೈಕಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಇಂದು ಸ್ಪರ್ಧಿಸುತ್ತಿರುವ ಪ್ರಮುಖರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ಅವರ ಸಹೋದರ ಮತ್ತು ಜನಶಕ್ತಿ ಜನತಾದಳ (ಜೆಜೆಡಿ) ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್, ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಮತ್ತು ಅನಂತ್ ಸಿಂಗ್ ಸೇರಿದ್ದಾರೆ. ಭದ್ರತಾ ಕಾರಣಗಳಿಂದಾಗಿ, ಸಿಮ್ರಿ ಭಕ್ತಿಯಾರ್‌ಪುರ, ಮಹಿಷಿ, ತಾರಾಪುರ, ಮುಂಗೇರ್, ಜಮಾಲ್‌ಪುರ ಮತ್ತು ಸೂರ್ಯಗಢ ಕ್ಷೇತ್ರದ ವ್ಯಾಪ್ತಿಯ 56 ಬೂತ್‌ಗಳಲ್ಲಿ…

Read More

ನವದೆಹಲಿ : ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಮೌಲ್ಯಮಾಪನವು 170 ಬಿಲಿಯನ್ ಅಮೆರಿಕನ್ ಡಾಲರ್ ತಲುಪಬಹುದು. ಕಂಪನಿಯ ಸಂಭಾವ್ಯ ಮೌಲ್ಯಮಾಪನವು ಭಾರತದ ಅಗ್ರ ಎರಡು ಅಥವಾ ಮೂರು ದೊಡ್ಡ ಕಂಪನಿಗಳಲ್ಲಿ ಸ್ಥಾನ ಪಡೆಯಬಹುದು ಎಂದು ಹೂಡಿಕೆ ಬ್ಯಾಂಕರ್‌ಗಳು ನಂಬುತ್ತಾರೆ. ಈ ಅಂಕಿ ಅಂಶವು ಭಾರ್ತಿ ಏರ್‌ಟೆಲ್‌ನಂತಹ ಕಂಪನಿಗಳಿಗಿಂತಲೂ ಹೆಚ್ಚಾಗಿದೆ. ಏರ್‌ಟೆಲ್‌ನ ಸದ್ಯದ ಮೌಲ್ಯಮಾಪನವು ಸುಮಾರು 12.7 ಲಕ್ಷ ಕೋಟಿ ರೂಪಾಯಿ (143 ಬಿಲಿಯನ್ ಅಮೆರಿಕನ್ ಡಾಲರ್). ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಐಪಿಒ 2006ರ ನಂತರದಲ್ಲಿ ಪ್ರಮುಖ ರಿಲಯನ್ಸ್-ಸಂಯೋಜಿತ ಘಟಕದಿಂದ ಮೊದಲ ಸಾರ್ವಜನಿಕ ಆಫರ್ ಆಗಿದೆ. ರಿಲಯನ್ಸ್ ಪೆಟ್ರೋಲಿಯಂ ಅನ್ನು 2006ರಲ್ಲಿ ಲಿಸ್ಟಿಂಗ್ ಮಾಡಲಾಯಿತು. ಬ್ಲೂಮ್‌ಬರ್ಗ್ ಪ್ರಕಾರ, ಹೂಡಿಕೆ ಬ್ಯಾಂಕರ್‌ಗಳು ಜಿಯೋಗೆ 130 ಬಿಲಿಯನ್ ನಿಂದ 170 ಬಿಲಿಯನ್ ಅಮೆರಿಕನ್ ಡಾಲರ್ ವರೆಗೆ ಮೌಲ್ಯಮಾಪನವನ್ನು ಪ್ರಸ್ತಾಪ ಮಾಡಿದ್ದಾರೆ. ಸದ್ಯಕ್ಕೆ ಚರ್ಚೆಗಳು ನಡೆಯುತ್ತಿದ್ದು, ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಇದಕ್ಕೂ ಮೊದಲು, ಸೆಪ್ಟೆಂಬರ್ 27 ರಂದು ದೇಶದ ಪ್ರಮುಖ ಬ್ರೋಕರೇಜ್ ಸಂಸ್ಥೆಯಾದ ಐಸಿಐಸಿಐ ಸೆಕ್ಯೂರಿಟೀಸ್ ನಿಂದ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಸರಣಿಗೆ ಬಿಸಿಸಿಐ ಭಾರತೀಯ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಗಾಯಗೊಂಡ ನಂತರ ಹಲವಾರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ರಿಷಭ್ ಪಂತ್ ತಂಡಕ್ಕೆ ಮರಳಿದ್ದಾರೆ. ಮೊದಲ ಟೆಸ್ಟ್ ಪಂದ್ಯ ನವೆಂಬರ್ 14 ರಿಂದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದ್ದು, ನಂತರ ಎರಡನೇ ಪಂದ್ಯ ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಂಗಾಳ ಪರ ಮೊದಲ ಎರಡು ರಣಜಿ ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದರೂ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿಲ್ಲ. ಬಂಗಾಳದ ಮತ್ತೊಬ್ಬ ವೇಗಿ ಆಕಾಶ್ ದೀಪ್ ಗಾಯಗಳಿಂದಾಗಿ ಹಲವಾರು ಟೆಸ್ಟ್ ಪಂದ್ಯಗಳಿಗೆ ಗೈರುಹಾಜರಾದ ನಂತರ ತಂಡಕ್ಕೆ ಮರಳಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಕೂಡ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದ್ದಾರೆ ಮತ್ತು ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ಅವರೊಂದಿಗೆ ಆಲ್ರೌಂಡ್ ಆಯ್ಕೆಗಳಲ್ಲಿ ಒಬ್ಬರಾಗಿರುತ್ತಾರೆ. ಟಿ 20 ಐ ತಂಡದಿಂದ ಬಿಡುಗಡೆಗೊಂಡು ಎರಡನೇ ನಾಲ್ಕು ದಿನಗಳ ಪಂದ್ಯಕ್ಕೆ ಭಾರತ ಎ ತಂಡಕ್ಕೆ…

Read More

ಮನೆ ಬಾಗಿಲಿಗೆ ಸಣ್ಣ ವಸ್ತುವನ್ನು ಕಟ್ಟಿದರೆ ಸಾಕು ಮೂರೇ ದಿನಗಳಲ್ಲಿ ಹಣದ ಸಮಸ್ಯೆ ಕಳೆದು, ದಾರಿದ್ರ್ಯ ಕಳೆದು ಯಶಸ್ಸು ನಿಮ್ಮದಾಗುತ್ತದೆ ಬೇಕಾದರೆ ಪರೀಕ್ಷಿಸಿ 100% ಫಲಿತಾಂಶ ಇದೊಂದು ವಸ್ತುವನ್ನು ಮನೆ ಬಾಗಿಲಿಗೆ ಕಟ್ಟಿದರೆ ಹಣಕಾಸಿನ ಸಮಸ್ಯೆ ಮೂರೇ ದಿನದಲ್ಲಿ ಕಳೆಯುತ್ತದೆ.! ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಹಣಕಾಸಿನ ವಿಚಾರವಾಗಿ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತದೆ. ಹೌದು ನಾವು ಸಂಪಾ ದನೆ ಮಾಡಿದ ಹಣದಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಸಹ ಉಳಿತಾಯ ಮಾಡಲು ಸಾಧ್ಯವಾಗದೇ ಇರುವುದು ಹಲವಾರು ಸಮಯದಲ್ಲಿ ಕೆಲ ವೊಂದು ಸಮಯದಲ್ಲಿ ನಮಗೆ ತಿಳಿಯದ ಹಾಗೆ ಹಣಕಾಸು ಖರ್ಚಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು: ರಾಜ್ಯದ 6 ಸಚಿವರು 66 ವಿಧಾನಸಭಾ ಸದಸ್ಯರು ಹಾಗೂ 28 ವಿಧಾನ ಪರಿಷತ್ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬುದಾಗಿ ಪಟ್ಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಅಧಿನಿಯಮ)ರ ಕಲಂ 22(1), ಕಲಂ 7ರ ಉಪ ಕಲಂ (1)ರಲ್ಲಿ ಉಲ್ಲೇಖಿಸಿರುವ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನು 30ನೇ ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂದು ಅಧ್ಯಾದೇಶಿಸುತ್ತದೆ ಎಂದಿದೆ. ಮೇಲ್ಕಂಡ ವಿವರಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ವೈಫಲ್ಯತೆ ಉಂಟಾದಲ್ಲಿ, ಈ ಅಧಿನಿಯಮದಲ್ಲಿ ನಿಗದಿಪಡಿಸಿರುವಂತೆ ಆಸ್ತಿ ಮತ್ತು ದಾಯಿತೃಗಳ ವಿವರಣಾ ಪಟ್ಟಿಯ ಸಲ್ಲಿಸದಿರುವಿಕೆಯ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಲೋಕಾಯುಕ್ತರು ವರದಿ ಮಾಡಬೇಕೆಂದು ಅಧಿನಿಯಮದ ಕಲಂ 22(2)ರಲ್ಲಿ ಅಧ್ಯಾದೇಶಿಸಲಾಗಿದೆ. ಅದರಂತೆ ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಆ ವರದಿಯ…

Read More