Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ:ಯೋಗ ಬಲ್ಲವನಿಗೆ ರೋಗ ಇಲ್ಲ. ವೈದ್ಯರು ನೀಡುವ ಔಶಧಿ ಗುಣ ಯೋಗದಲ್ಲಿದೆ ಎಂದು ಐಯುಡಿಪಿನಿಸರ್ಗ ಯೋಗ ಕೇಂದ್ರದ ಅಧ್ಯಕ್ಷರಾದ ರಾಮಣ್ಣ ತಿಳಿಸಿದರು. ಚಿತ್ರದುರ್ಗದ ಐಯುಡಿಪಿ ಬಡಾವಣೆಯ ಪ್ರಶಾಂತಿ ವಿದ್ಯಾಲಯದಲ್ಲಿ ನಡೆದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು,ನಮ್ಮ ಯೋಗ ಕೇಂದ್ರದ ಯೋಗಪಟುಗಳಾದ ಗೀತಮ್ಮ ಹಾಗು ವಾಸವಿಯವರು ಹರಿದ್ವಾರದಲ್ಲಿ ನಡೆದ ಶಿಕ್ಷಕ ತರಭೇತಿ ಶಿಭಿರದಲ್ಲಿ ಭಾಗವಹಿಸಿ ಯಶಸ್ವಿಯಾಗಿ ತರಭೇತಿಪಡೆದು ತವರಿಗೆ ಮರಳಿದ್ದಾರೆ. ಇದು ನಮ್ಮ ಯೋಗ ಕೇಂದ್ರಕ್ಕೊಂದು ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆ ಇಡೀ ಹೆಣ್ಣು ಸಂಕುಲಕ್ಕೆ ಮಾದರಿ ಎನಿಸಿದೆ. ಇಂದು ಹೆಣ್ಣು ಸಂಕುಲವು ಯಾವುದರಲ್ಲು ಕಡಿಮೆ ಇಲ್ಲ. ಇಡೀ ಜಗತ್ತಿಗೆ ಹೆಣ್ಣಿನಸಾಧನೆ ಮಾದರಿ ಎನಿಸಿದೆ. ಹೆಣ್ಣು ಈಜಗತ್ತಿನ ಸೃಷ್ಟಿ ದೇವತೆ ಎನಿಸಿದ್ದಾರೆ. ಈ ಭೂಮಿ ಹೆಣ್ಣು,ನಾವು ನಿತ್ಯ ಖರ್ಚು ಮಾಡುವ ಲಕ್ಷ್ಮಿ ಹೆಣ್ಣು ಅಂತೆಯೇ ಕಲಿಯುವ ವಿದ್ಯೆ ಎನಿಸಿರುವ ಸರಸ್ವತಿ ಕೂಡ ಹೆಣ್ಣಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲು ಹೆಣ್ಮಕ್ಕಳು ಸಾಧನೆಯಲ್ಲಿ ಮುಂದಿದ್ದಾರೆ. ಹೀಗಾಗಿ ಹೆಣ್ಣುಮಕ್ಕಳು ಯಾವುದರಲ್ಲು ಕಡಿಮೆ ಇಲ್ಲ ಎನ್ನಿಸ್ತಿದೆ. ಒಂದು ಹೆಣ್ಣು ಮನಸು ಮಾಡಿದರೆ…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಂತ ಹಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಮಲ್ಲೇಶ್ವರಂ ಸುತ್ತಾಮುತ್ತ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ ಆಟೋ, ಬೈಕ್ ಜಖಂಗೊಂಡಿದ್ದಾವೆ. ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bengaluru-power-outages-in-these-areas-on-october-23/ https://kannadanewsnow.com/kannada/heavy-to-very-heavy-rainfall-in-bengaluru-and-these-districts-in-next-3-hours-imd/ https://kannadanewsnow.com/kannada/delhi-hyderabad-crpf-schools-receive-bomb-threats/
ಬೆಂಗಳೂರು: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯ ಅಡಿಯಲ್ಲಿ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ತಿಳಿಸಿದ್ದು, ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ (ಎಬಿಎಸ್ಎಸ್) ಅಡಿಯಲ್ಲಿ ಪರಿವರ್ತಕ ನಿಲ್ದಾಣ ಅಭಿವೃದ್ಧಿ ಕಾರ್ಯಗಳ ಇತ್ತೀಚಿನ ಪ್ರಗತಿಯನ್ನು ಹಂಚಿಕೊಳ್ಳಲು ಸಂತೋಷಪಡುತ್ತದೆ. ಈ ಮಹತ್ವಾಕಾಂಕ್ಷೆಯ ಉಪಕ್ರಮವು ವಿಭಾಗದಾದ್ಯಂತ ಪ್ರಮುಖ ಉಪನಗರೇತರ ದರ್ಜೆ (ಎನ್ಎಸ್ಜಿ) ನಿಲ್ದಾಣಗಳನ್ನು ಆಧುನೀಕರಿಸುವುದು, ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಮತ್ತು ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವವನ್ನು ನೀಡಲಿದೆ ಎಂದಿದೆ. ಈ ರೈಲ್ವೆ ನಿಲ್ದಾಣಗಳಲ್ಲಿ ಭರದಿಂದ ಸಾಗಿದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ ಬಂಗಾರಪೇಟೆಯಲ್ಲಿ (ಎನ್ಎಸ್ಜಿ -3) ಒಟ್ಟು 21.59 ಕೋಟಿ ರೂ.ಗಳ ಯೋಜನಾ ವೆಚ್ಚದೊಂದಿಗೆ, ನಿಲ್ದಾಣವು 22% ಭೌತಿಕ ಪ್ರಗತಿ ಮತ್ತು 9.26% ಆರ್ಥಿಕ ಪ್ರಗತಿಯನ್ನು ಸಾಧಿಸಿದೆ, ಇದು 2.00 ಕೋಟಿ ರೂ. ಚನ್ನಪಟ್ಟಣ (ಎನ್ಎಸ್ಜಿ -4) ಒಟ್ಟು 20.93 ಕೋಟಿ ರೂ.ಗಳ…
ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ( BESCOM ) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ದಿನಾಂಕ 23-10-2024ರ ನಾಳೆ, ಹಾಗೂ ದಿನಾಂಕ 24-10-2024ರ ಗುರುವಾರದ ನಾಡಿದ್ದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಂಗಳೂರು: 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ದಿನಾಂಕ: 23.10.2024 ರಂದು ಬುಧವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ. ನಾಳೆ ಈ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು: ನೆಲಮಂಗಲ ತಾಲ್ಲೂಕಿನ ಮಾಕಳಿ, ಮಂತ್ರಿ ಬಡಾವಣೆ, ನರಸೀಪುರ ಬಿಡಿಎ ಪ್ಲಾಟ್ಸ್, ಅಡಕಮಾರನಹಳ್ಳಿ, ದೊಂಬರಹಳ್ಳಿ, ರಾಜೇಶ್ವರಿ ನಗರ, ದಾಸನಪುರ, ದೇವಣ್ಣಪಾಳ್ಯ, ಹಾರೋಕ್ಯಾತನಹಳ್ಳಿ, ಗೌಡಹಳ್ಳಿ, ಹೆಗ್ಗಡದೇವನಪುರ, ಹುಸ್ಕೂರು…
Rain In Karnataka: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆ ಆರಂಭಗೊಂಡಿದೆ. ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖಎ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯೂ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದಿದೆ. ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/kalyan-banerjee-suspended-from-trinamool-congress-for-indiscipline/ https://kannadanewsnow.com/kannada/delhi-hyderabad-crpf-schools-receive-bomb-threats/
ನವದೆಹಲಿ: ವಕ್ಫ್ ಮಸೂದೆ ಕುರಿತು ನಡೆದ ಜೆಪಿಸಿ ಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮಂಗಳವಾರ ಅಮಾನತುಗೊಳಿಸಿದೆ. ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗಿನ ವಾಗ್ವಾದದ ವೇಳೆ ಮಮತಾ ಬ್ಯಾನರ್ಜಿ ಗಾಜಿನ ನೀರಿನ ಬಾಟಲಿಯನ್ನು ಒಡೆದು ಹಾಕಿದ್ದಾರೆ. ಒಟ್ಟಾರೆಯಾಗಿ ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ. https://kannadanewsnow.com/kannada/huge-tree-collapses-due-to-heavy-rains-in-bengaluru-several-vehicles-damaged/ https://kannadanewsnow.com/kannada/delhi-hyderabad-crpf-schools-receive-bomb-threats/
ಬೆಂಗಳೂರು: ನಗರದಲ್ಲಿ ಭಾರೀ ಮಳೆಗೆ ಬಹು ದೊಡ್ಡ ಅವಾಂತರವೇ ಸೃಷ್ಠಿಯಾಗಿದೆ. ಇದೀಗ ಮತ್ತೆ ನಗರದ ಹಲವೆಡೆ ಮಳೆ ಪುನರಾರಂಭಗೊಂಡಿದ್ದು, ಸಂಚಾರ ದಟ್ಟಣೆ ಕೂಡ ಉಂಟಾಗಿದೆ. ಇದರ ನಡುವೆ ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ, ಅದರಡಿ ನಿಲ್ಲಿಸಲಾಗಿದ್ದಂತ ಹಲವು ವಾಹನಗಳು ಜಖಂಗೊಂಡಿರುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಬೆಂಗಳೂರು ನಗರದಲ್ಲಿ ವರುಣ ಮತ್ತೆ ಆರ್ಭಟಿಸಿದ್ದಾನೆ. ಮಳೆಯಿಂದಾಗಿ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವ ಪರಿಣಾಮ, ರಸ್ತೆಗಳೆಲ್ಲ ಜಲಾವೃತಗೊಂಡು ರಸ್ತೆ ಯಾವುದೋ, ಗುಂಡಿ ಯಾವುದೋ ಒಂದೂ ವಾಹನ ಸವಾರರಿಗೆ ತಿಳಿಯದಂತೆ ಆಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಕೆ ಆರ್ ಮಾರ್ಕೆಟ್, ಕಲಾಸಿಪಾಳ್ಯ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಮತ್ತೆ ಮಳೆ ಆರಂಭಗೊಂಡಿದೆ. ಮಲ್ಲೇಶ್ವರಂನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದೆ. ಈ ಪರಿಣಾಮ ಮರವೊಂದು ಮುರಿದು ಬಿದ್ದು, ಅದರಡಿ ನಿಲ್ಲಿಸಲಾಗಿದ್ದಂತ ಆಟೋ, ಬೈಕ್, ಕಾರುಗಳು ಜಖಂಗೊಂಡಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿಯ ಸಿಬ್ಬಂದಿ ಆಗಮಿಸಿದ್ದು, ವಾಹನಗಳ ಮೇಲೆ ಮುರಿದು ಬಿದ್ದಿರುವಂತ ಬೃಹತ್ ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.…
ವಿಜಯಪುರ: ಇಂದು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಅಲ್ಲದೇ ಇದರೊಟ್ಟಿಗೆ ಜೋರು ಶಬ್ದ ಕೂಡ ಕೇಳಿ ಬಂದಿದೆ. ಈ ಶಬ್ದಕ್ಕೆ ಬೆಚ್ಚಿ ಬಿದ್ದಂತ ಜನರು ಮನೆಯಿಂದ ಹೊರ ಓಡಿ ಬಂದು ಆತಂಕದಲ್ಲಿ ಕೆಲ ಕಾಲ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಅಲ್ಲದೇ ಗಡಿ ಭಾಗದ ಮೊರಬಗಿ, ತಿಕ್ಕುಂಡಿ, ಆಸಂಗಿಯಲ್ಲಿಯೂ ಭೂಮಿ ಕಂಪಿಸಿದೆ ಎಂಬುದಾಗಿ ಜನರು ತಿಳಿಸಿದ್ದಾರೆ. ಇಂದು ಬೆಳಗ್ಗೆ 11.29ರ ಸುಮಾರಿಗೆ ಜೋರು ಶಬ್ದದೊಂದಿಗೆ ಭೂಮಿ ಕಂಪಿಸಿದ್ದು, ಅಡುಗೆ ಮನೆಯಲ್ಲಿನ ವಸ್ತುಗಳೆಲ್ಲ ಕೆಳಗೆ ಬಿದ್ದಿರುವುದಾಗಿ ಜನರು ಹೇಳಿದ್ದಾರೆ. ಜೋರು ಶಬ್ದ ಕೂಡ ಭೂ ಕಂಪನದ ಜೊತೆಗೆ ಬಂದ ಕಾರಣ, ಮನೆಯಿಂದ ಜನರು ಹೊರ ಓಡಿ ಬಂದು ಕೆಲ ಕಾಲ ಆತಂಕದಲ್ಲಿ ಬಯಲಿನಲ್ಲಿ ಕಾಲ ಕಳೆಯುವಂತೆ ಆಯ್ತು. https://kannadanewsnow.com/kannada/pakistans-lahore-declared-worlds-most-polluted-city/ https://kannadanewsnow.com/kannada/as-long-as-the-people-of-the-state-are-with-me-i-am-not-afraid-of-bjp-jds-conspiracy-siddaramaiah/
ಲಾಹೋರ್: ಪಾಕಿಸ್ತಾನದ ಸಾಂಸ್ಕೃತಿಕ ನಗರ ಲಾಹೋರ್ ಅನ್ನು ವಿಶ್ವದ ಅತ್ಯಂತ ಕಲುಷಿತ ನಗರವೆಂದು ಘೋಷಿಸಲಾಗಿದ್ದು, ಅಪಾಯಕಾರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 394 ರಷ್ಟಿದೆ ಮತ್ತು ಪಾಕಿಸ್ತಾನದ ಪಂಜಾಬ್ ಸರ್ಕಾರವು ಹೊಗೆಯ ಪರಿಣಾಮವನ್ನು ತಗ್ಗಿಸಲು ಕೃತಕ ಮಳೆಗೆ ಯೋಜಿಸಿದೆ. ಎಕ್ಯೂಐ ಎಂಬುದು ಗಾಳಿಯಲ್ಲಿನ ವಿವಿಧ ಮಾಲಿನ್ಯಕಾರಕಗಳ ಸಾಂದ್ರತೆಯ ಅಳತೆಯಾಗಿದೆ. 100 ಕ್ಕಿಂತ ಹೆಚ್ಚಿನ ಎಕ್ಯೂಐ ಅನಾರೋಗ್ಯಕರ ಮತ್ತು 150 ಕ್ಕಿಂತ ಹೆಚ್ಚಿನದನ್ನು “ತುಂಬಾ ಅನಾರೋಗ್ಯಕರ” ಎಂದು ಪರಿಗಣಿಸಲಾಗುತ್ತದೆ. ಬೆಳೆ ಉಳಿಕೆ ಸುಡುವಿಕೆ ಮತ್ತು ಕೈಗಾರಿಕಾ ಹೊರಸೂಸುವಿಕೆಯಿಂದ ಹೊಗೆ ಬಿಕ್ಕಟ್ಟು ಉಲ್ಬಣಗೊಂಡಿದೆ. ಅಪಾಯಕಾರಿ ಹೊಗೆಯು ನಗರದ ನಿವಾಸಿಗಳಲ್ಲಿ ಕೆಮ್ಮು, ಉಸಿರಾಟದ ತೊಂದರೆಗಳು, ಕಣ್ಣಿನ ಕಿರಿಕಿರಿ ಮತ್ತು ಚರ್ಮದ ಸೋಂಕುಗಳು ಸೇರಿದಂತೆ ವ್ಯಾಪಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. “ನಿನ್ನೆ ಲಾಹೋರ್ ಅನ್ನು ವಿಶ್ವದ ಅತ್ಯಂತ ಕಲುಷಿತ ನಗರವೆಂದು ಘೋಷಿಸಲಾಯಿತು. ಈ ವಿಷಯವನ್ನು ಪರಿಹರಿಸಲು ನಾವು ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದೇವೆ ಮತ್ತು ಈಗ ನಾವು ನಗರದಲ್ಲಿ ಕೃತಕ ಮಳೆಗೆ ಯೋಜಿಸುತ್ತಿದ್ದೇವೆ ” ಎಂದು ಪಂಜಾಬ್ ಮಾಹಿತಿ ಸಚಿವ…
ವರುಣಾ : ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು. ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು. ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು. ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ…












