Subscribe to Updates
Get the latest creative news from FooBar about art, design and business.
Author: kannadanewsnow09
ತಮಿಳುನಾಡು: ಇಂದು ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ತಮಿಳುನಾಡಿ ವಿರುದುನಗರದಲ್ಲಿರುವಂತ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದಂತ ಸ್ಪೋಟದಿಂದಾಗಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸ್ಪೋಟದಿಂದ ಕಾರ್ಖಾನೆ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/balarama-ayodhye/
ಬೆಂಗಳೂರು: ರಥ ಸಪ್ತಮಿ ದಿನವಾದ ಫೆಬ್ರವರಿ 16ರಂದು ಕೊಳ್ಳೆಗಾಲದ ಶ್ರೀರಾಮ ದೇವಸ್ಥಾನದಲ್ಲಿ ರಥೋತ್ಸವ ನಡೆಯಿತು. ಜನಪ್ರಿಯ ಉದ್ಯಮಿ ಸುನಿತಾ ತಿಮ್ಮೇಗೌಡ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸುನಿತಾ ಅವರ ತಾಯಿ ದಿ. ಸಾವಿತ್ರಮ್ಮ ತಿಮ್ಮೇಗೌಡ ಅವರ ಜನ್ಮದಿನದ ಅಂಗವಾಗಿ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮವನ್ನೂ ನೆರವೇರಿಸಲಾಯಿತು. ಹಲವಾರು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜನಜನಿತರಾಗಿದ್ದ ಸಾವಿತ್ರಮ್ಮ ಅವರ ಸೇವೆಗಳನ್ನು ಸ್ಮರಿಸಲಾಯಿತು. ಶ್ರೀರಾಮ ದೇವಸ್ಥಾನದಲ್ಲಿ ನಡೆದ ರಥೋತ್ಸವ ಸಂದರ್ಭದಲ್ಲಿ ಸಾವಿತ್ರಮ್ಮ ಅವರ ಭಾವಚಿತ್ರವನ್ನಿಟ್ಟು ಪುಷ್ಪಾರ್ಚನೆ ಮಾಡಲಾಯಿತು ಹಾಗೂ ಮೆರವಣಿಗೆ ಮಾಡಲಾಯಿತು. ದೇಗುಲ ನಿರ್ಮಾಣದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಅವರ ಕಾರ್ಯವನ್ನು ಸ್ಮರಿಸಿಕೊಳ್ಳಲಾಯಿತು. ರಥೋತ್ಸವದ ಬಳಿಕ ದೇವಸ್ಥಾನಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಈ ಎಲ್ಲ ಕಾರ್ಯಕ್ರಮಗಳನ್ನು ಸಾವಿತ್ರಮ್ಮ ಟ್ರಸ್ಟ್ ಮೂಲಕ ಉದ್ಯಮಿ ಸುನಿತಾ ಅವರು ನೆರವೇರಿಸಿದರು. ಸಾವಿತ್ರಮ್ಮ ತಿಮ್ಮೇಗೌಡ ಅವರು ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜನಪ್ರಿಯರಾಗಿದ್ದರು. ಕರ್ನಾಟಕದಾದ್ಯಂತ ಹಲವಾರು ದೇವಸ್ಥಾನಗಳ ಅಭಿವೃದ್ದಿ ಕಾರ್ಯದಲ್ಲಿ ತೊಡಗಿದ್ದರು. ಅದೇ…
ಬೆಂಗಳೂರು: ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ & ಟ್ರ್ಯಾಕ್ಟರ್ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ಹೀಗಿದ್ದರೂ ಅನೇಕ ವಾಹನ ಸವಾರರು ಮಾತ್ರ ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಮೇ.31ರವರೆಗೆ ಅವಧಿ ವಿಸ್ತರಿಸಿ ಆದೇಶಿಸಲಾಗಿದೆ. ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಹಾಗೇ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿತ್ತು. ಎಚ್ಎಸ್ಆರ್ಪಿ ಅಳವಡಿಸದಿದ್ರೆ ವಾಹನ ಮಾಲೀಕತ್ವ, ವಿಳಾಸ ವರ್ಗಾವಣೆ, ಕಂತು ಕರಾರು ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಸೇವೆಗೆ ಅನುಮತಿ ಇರುತ್ತಿರಲಿಲ್ಲ. ಹಾಗೇ ಇದರ ಜೊತೆ…
ಕಾಗೆ ಗುಬ್ಬಚ್ಚಿಗಳು ಸಹ ತಮ್ಮ ಗೂಡುಗಳನ್ನು ಕಟ್ಟಿಕೊಂಡಾಗ, ಮನುಷ್ಯರಿಗೆ ಮನೆ ಹೊಂದುವುದು ಸಮಂಜಸವಾದ ಬಯಕೆಯಾಗಿದೆ. ಆದರೆ ಅಂತಹ ಮನೆ ಎಲ್ಲರಿಗೂ ಸುಲಭವಲ್ಲ. ಇಂದಿಗೂ ಒಂದಲ್ಲ ಒಂದು ದಿನ ಸ್ವಂತ ಮನೆಯಲ್ಲಿ ಇರಲು ಹಂಬಲಿಸುವ ಸಾವಿರಾರು ಮಂದಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಈಗ ನಾವು ಆಧ್ಯಾತ್ಮದ ಈ ಪೋಸ್ಟ್ನಲ್ಲಿ ಆ ಎಲ್ಲಾ ಹಂಬಲಗಳಿಗೆ ಪರಿಹಾರವನ್ನು ತಿಳಿಯಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…
ಬೆಂಗಳೂರು: ರಾಜ್ಯದ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ( hsrp number plate ) ಅಳವಡಿಸುವುದು ಕಡ್ಡಾಯಗೊಳಿಸಲಾಗಿತ್ತು. ಹೀಗಿದ್ದೂ ಅನೇಕ ವಾಹನ ಸಾವರರು ನಂಬರ್ ಪ್ಲೇಟ್ ಅಳವಡಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಮತ್ತೆ ಅವಧಿಯನ್ನು ದಿನಾಂಕ 31-05-2024ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ( Karnataka Government ) ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ( Transport Department ) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್.1, 2019ಕ್ಕಿಂತ ಮೊದಲು ಖರೀದಿಸಿದಂತ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿವುದು ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ. ಈ ಮೊದಲು HSRP ನಂಬರ್ ಪ್ಲೇಟ್ ಅಳವಡಿಸೋದಕ್ಕೆ ದಿನಾಂಕ 16-11-2023ರವರೆಗೆ ಅವಕಾಶ ನೀಡಲಾಗಿತ್ತು. ಆನಂತ್ರ ಅದನ್ನು ದಿನಾಂಕ 17-02-2024ರವರೆಗೆ ವಿಸ್ತರಿಸಲಾಗಿತ್ತು. ಆದ್ರೇ ಇನ್ನೂ ವಾಹನ ಸಾವರರು ಹೆಚ್ಚು ಕಾಲಾವಕಾಶ ಕೋರಿದ್ದರಿಂದ ದಿನಾಂಕ 31-05-2024ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ದಿನಾಂಕ 17-08-2023ರಂದು ರಾಜ್ಯ…
ಬೆಂಗಳೂರು: ರಾಜ್ಯದ ಜನರು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ, ಜಾತಕ ಪಕ್ಷಿಯಂತೆ ಕಾರ್ಡ್ ನೀಡುವುದನ್ನೇ ಕಾಯುತ್ತಿದ್ದಾರೆ. ಇನ್ನೂ ಕೆಲವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಕಾಯುತ್ತಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್.31ರ ಒಳಗಾಗಿ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ. ಏಪ್ರಿಲ್.1ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ…
ನವದೆಹಲಿ: ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯದ ಸ್ವತಂತ್ರ ಉಸ್ತುವಾರಿ ಹೊಂದಿರುವ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಬೆಳವಣಿಗೆಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು. ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಫೆಬ್ರವರಿ 24 ರಂದು ನಿವೃತ್ತರಾದ ನಂತರ ನ್ಯಾಯಮೂರ್ತಿ ಅಂಜಾರಿಯಾ ಅವರು ಹೈಕೋರ್ಟ್ನ ಚುಕ್ಕಾಣಿ ಹಿಡಿಯಲಿದ್ದಾರೆ. 2011ರ ನವೆಂಬರ್ 21ರಂದು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಪದೋನ್ನತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅಭ್ಯಾಸ ಮಾಡಿದರು. https://kannadanewsnow.com/kannada/state-government-extends-deadline-for-installation-of-hsrp-number-plate-till-may-31/ https://kannadanewsnow.com/kannada/paytm-payments-bank-goes-missing-from-list-of-32-banks-for-buying-fastags/
ಬೆಂಗಳೂರು:- ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವು ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಇಡೀ ದೇಶವೇ ಕರ್ನಾಟಕದ ಕಡೆ ನೋಡುವಂತೆ ಮಾಡಿದ್ದರು. ಪ್ರಸಕ್ತ ಸಾಲಿನಲ್ಲಿಯೂ ಸಹ ರಾಜ್ಯದ ಜನರ ನಿರೀಕ್ಷೆಯಂತೆ ಆಶಾದಾಯಕ ಬಜೆಟ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುವುದಿಲ್ಲ ಎಂಬುದನ್ನು ಸ್ಪಷ್ಟ ಸಂದೇಶ ಸಾರಿದ್ದಾರೆ. ಈ ಮೂಲಕ ವಿಪಕ್ಷದವರ ಆರೋಪಗಳಿಗೆ ದಿಟ್ಟ ಉತ್ತರ ಕೊಟ್ಟಿದ್ದು, ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸಿರುವುದು ಹಾಗೂ ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯನ್ನು ಮತ್ತೊಮ್ಮೆ ಎತ್ತಿ ಹಿಡಿದಿರುವುದನ್ನು ಬಜೆಟ್ನಲ್ಲಿ ಕಾಣಬಹುದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಇಲಾಖೆಗಳ…
ಬೆಂಗಳೂರು: ಇದು ಡಿಪಿಆರ್ ಬಜೆಟ್! ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಪ್ರತಿಕ್ರಿಯೆ ಇದು. ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು. ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ ಎಂದು ಅವರು ಟೀಕಿಸಿದರು. ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಗೆ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ವಿಶ್ವಾಸ ಮೂಡುತ್ತಿಲ್ಲ ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು.…
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು, ಒಟ್ಟು 3,71,383 ಕೋಟಿ ಗಾತ್ರದ ರಾಜ್ಯ ಬಜೆಟ್ 2024-25 ಮಂಡಿಸಿದರು. ಇದಕ್ಕಾಗಿ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡರು. ಕಳೆದ ಬಾರಿ ಸಿದ್ದರಾಮಯ್ಯ ಅವರು 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು 3.17 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಆ ರಾಜ್ಯ ಬಜೆಟ್ 2024-25ರ ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ…