Author: kannadanewsnow09

ಬೆಂಗಳೂರು: ರಾಜ್ಯದ ಜನರು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ, ಜಾತಕ ಪಕ್ಷಿಯಂತೆ ಕಾರ್ಡ್ ನೀಡುವುದನ್ನೇ ಕಾಯುತ್ತಿದ್ದಾರೆ. ಇನ್ನೂ ಕೆಲವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಕಾಯುತ್ತಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್.31ರ ಒಳಗಾಗಿ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ. ಏಪ್ರಿಲ್.1ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್‌ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ…

Read More

ನವದೆಹಲಿ: ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯದ ಸ್ವತಂತ್ರ ಉಸ್ತುವಾರಿ ಹೊಂದಿರುವ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಬೆಳವಣಿಗೆಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು. ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಫೆಬ್ರವರಿ 24 ರಂದು ನಿವೃತ್ತರಾದ ನಂತರ ನ್ಯಾಯಮೂರ್ತಿ ಅಂಜಾರಿಯಾ ಅವರು ಹೈಕೋರ್ಟ್ನ ಚುಕ್ಕಾಣಿ ಹಿಡಿಯಲಿದ್ದಾರೆ. 2011ರ ನವೆಂಬರ್ 21ರಂದು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಪದೋನ್ನತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅಭ್ಯಾಸ ಮಾಡಿದರು. https://kannadanewsnow.com/kannada/state-government-extends-deadline-for-installation-of-hsrp-number-plate-till-may-31/ https://kannadanewsnow.com/kannada/paytm-payments-bank-goes-missing-from-list-of-32-banks-for-buying-fastags/

Read More

ಬೆಂಗಳೂರು:- ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವು ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಇಡೀ ದೇಶವೇ ಕರ್ನಾಟಕದ ಕಡೆ ನೋಡುವಂತೆ ಮಾಡಿದ್ದರು. ಪ್ರಸಕ್ತ ಸಾಲಿನಲ್ಲಿಯೂ ಸಹ ರಾಜ್ಯದ ಜನರ ನಿರೀಕ್ಷೆಯಂತೆ ಆಶಾದಾಯಕ ಬಜೆಟ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುವುದಿಲ್ಲ ಎಂಬುದನ್ನು ಸ್ಪಷ್ಟ ಸಂದೇಶ ಸಾರಿದ್ದಾರೆ. ಈ ಮೂಲಕ ವಿಪಕ್ಷದವರ ಆರೋಪಗಳಿಗೆ ದಿಟ್ಟ ಉತ್ತರ ಕೊಟ್ಟಿದ್ದು, ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸಿರುವುದು ಹಾಗೂ ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯನ್ನು ಮತ್ತೊಮ್ಮೆ ಎತ್ತಿ ಹಿಡಿದಿರುವುದನ್ನು ಬಜೆಟ್‌ನಲ್ಲಿ ಕಾಣಬಹುದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಇಲಾಖೆಗಳ…

Read More

ಬೆಂಗಳೂರು: ಇದು ಡಿಪಿಆರ್ ಬಜೆಟ್! ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಪ್ರತಿಕ್ರಿಯೆ ಇದು. ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು. ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ ಎಂದು ಅವರು ಟೀಕಿಸಿದರು. ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಗೆ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ವಿಶ್ವಾಸ ಮೂಡುತ್ತಿಲ್ಲ ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು.…

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು, ಒಟ್ಟು 3,71,383 ಕೋಟಿ ಗಾತ್ರದ ರಾಜ್ಯ ಬಜೆಟ್ 2024-25 ಮಂಡಿಸಿದರು. ಇದಕ್ಕಾಗಿ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡರು. ಕಳೆದ ಬಾರಿ ಸಿದ್ದರಾಮಯ್ಯ ಅವರು 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು 3.17 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಆ ರಾಜ್ಯ ಬಜೆಟ್ 2024-25ರ ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ.  ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. ಡಾ|| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ”ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ: 3 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ. 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು. ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ‘ಕರ್ನಾಟಕ ಅಲೆಮಾರಿ ಮತ್ತು ಅರೆ…

Read More

ಬೆಂಗಳೂರು : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದ್ದಾರೆ. ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಡೆ ತಾಂಡವವಾಡಬೇಕು, ನಿಷ್ಪಕ್ಷಪಾತ ಮತ್ತು ನ್ಯಾಯಯತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದ್ದೇವೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ. ನಮ್ಮದು ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ಚೊಚ್ಚರ ರಾಜ್ಯ ಬಜೆಟ್ 2024-25 ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿವಿಧ ಹೊಸ ಯೋಜನೆಯನ್ನು ಸೇರಿದಂತೆ, ಗ್ಯಾರಂಟಿ ಸ್ಕೀಂಗಳಿಗೆ ಯಾವುದೇ ಅಡೆತಡೆಯಾಗದಂತೆ ತಮ್ಮ ಅಯವ್ಯಯವನ್ನು ಮಂಡಿಸಿದ್ದಾರೆ. ಹಾಗಾದ್ರೇ ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ರಾಜ್ಯ ಬಜೆಟ್ ನ ಇಲಾಖೆ, ಕ್ಷೇತ್ರವಾರು ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. ಡಾ|| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು…

Read More