Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದಂತ ರಾಜ್ಯ ಬಜೆಟ್ 2024-25ರಲ್ಲಿ ಪ್ರವಾಸೋದ್ಯಮಕ್ಕೆ ಬಂಫರ್ ಗಿಫ್ಟ್ ನೀಡಿದ್ದಾರೆ. ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಆ ಎಲ್ಲಾ ಸಂಪೂರ್ಣ ಮಾಹಿತಿ ಮುಂದೆ ಓದಿ. ಪ್ರವಾಸೋದ್ಯಮ ಇಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದರು. ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.  ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ ವಿವಿಧ ಮಹತ್ವದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಘೋಷಣೆ ಮಾಡಿದ್ದಾರೆ. ಅದರಲ್ಲೂ ರಾಜ್ಯದಲ್ಲಿನ ಸುಮಾರು 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.  ಹಾಗಾದ್ರೇ ಕಂದಾಯ ಇಲಾಖೆಗೆ ರಾಜ್ಯ ಬಜೆಟ್ ನಲ್ಲಿ ಸಿಕ್ಕಿದ್ದು ಏನು ಎಂಬುದಾಗಿ ಮುಂದೆ ಓದಿ. ಕಂದಾಯ ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್ಲೈನ್ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು. ಆಕಾರ್‌ಬಂದ್‌ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್‌ಬಂದ್‌ಗಳ ಗಣಕೀಕರಣ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2024-25 ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇಂದು ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆಗೆ ಸಿಕ್ಕಿದ್ದೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ನಗರಾಭಿವೃದ್ಧಿ ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ ಎಂದರು. ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ; 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ…

Read More

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನುಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಈ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತುಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆನೀಡಿದರು. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿಕಿಯೋಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆಎಂದರು. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು. ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ ಎಂದರು. ಈ ವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳ್ನು ವಿಲೇವಾರಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಕರ್ನಾಟಕ ಬಜೆಟ್ 2024-25 ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಅವರು ರಾಜ್ಯ ಬಜೆಟ್ ಮಂಡಿಸುತ್ತಿದ್ದರೇ ಎಕ್ಸ್ ನಲ್ಲಿ ನಮ್ಮ ಬಜೆಟ್ 2024 ( #NammaBudget2024 ) ಹ್ಯಾಷ್ ಟ್ಯಾಗ್ ಪುಲ್ ಟ್ರೆಂಡಿಂಗ್ ಆಗಿದೆ. ಭಾರತದಲ್ಲಿ ನಂಬರ್.1 ಹ್ಯಾಷ್ ಟ್ಯಾಗ್ ಹೆಗ್ಗಳಿಕೆ ಗಳಿಸಿದೆ. ಇಂದು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. ಡಾ|| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಅದು ಏನು ಅನ್ನೋ ಸಂಪೂರ್ಣ ಮಾಹಿತಿ ಮುಂದೆ ಓದಿ.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು. ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು. ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು…

Read More

ಬೆಂಗಳೂರು: ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಅವರು,  ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು,…

Read More

ಬೆಂಗಳೂರು: ರಾಜ್ಯದ ಕೊಳಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಧಾನ ಮಂತ್ರಿ ಅವಾಸ್ ಯೋಜನೆಯ ವಂತಿಗೆ ಮಿತಿಯನ್ನು ಐದು ಲಕ್ಷದಿಂದ 1 ಲಕ್ಷಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಕೊಳಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮಂಡಿಸಿ ಮಾತನಾಡಿ, ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು ಎಂದರು. ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌…

Read More