Author: kannadanewsnow09

ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix…, https://cbseitms.nic.in/2024/nvsxi_11… ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/ballari-power-outage-in-siruguppa-limits-on-oct-23/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬಳ್ಳಾರಿ : ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಅ.23 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಸಿರುಗುಪ್ಪ ನಗರದ ಆದೋನಿ ರಸ್ತೆಗೆ ಹೊಂದಿಕೊಂಡಿರುವ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಎಫ್-12 ಆದೋನಿ ರಸ್ತೆ ಮತ್ತು ಎಫ್-13 ಅರಳಿಗನೂರು ಕೈಗಾರಿಕಾ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣೆ ಕಾರ್ಯ ಮುಗಿಯುವವರೆಗೂ ಅಥವಾ ಮುಗಿದ ತಕ್ಷಣ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಚಾಲನೆ ಮಾಡುವ ಸಾಧ್ಯತೆ ಇರುತ್ತದೆ, ಹಾಗಾಗಿ ಗ್ರಾಹಕರು ವಿದ್ಯುತ್ ಮಾರ್ಗಗಳ ಹತ್ತಿರ ಯಾವುದೇ ತರಹದ ಕೆಲಸಗಳನ್ನು ಮಾಡಬಾರದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/nandini-to-be-inaugurated-in-delhi-on-october-27-28/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್‌) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1848363513477308826 ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ. https://kannadanewsnow.com/kannada/103-acres-of-forest-encroachments-to-be-removed-in-1-year-in-bengaluru-city-limits-minister-ishwar-khandre/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬೆಂಗಳೂರು : ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ ಮಾರಸಂದ್ರದ ಗಸ್ತು ಸರ್ವೆ ನಂ.182ರಲ್ಲಿ ಒತ್ತುವರಿ ಮಾಡಲಾಗಿದ್ದ 2 ಎಕರೆ 10 ಗುಂಟೆ ಅರಣ್ಯ ಜಮೀನನ್ನು ತೆರವು ಮಾಡಿ ಅಲ್ಲಿ ಸ್ಥಳೀಯ ಜಾತಿಯ ಸಸಿಗಳನ್ನು ನೆಟ್ಟು ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭೈರಾರೆಡ್ಡಿ ಎಂಬುವವರು ಮಾರಸಂದ್ರದ ಮೀಸಲು ಅರಣ್ಯ ಸರ್ವೆ ನಂ182ರಲ್ಲಿ ಅರಣ್ಯ ಇಲಾಖೆಗೆ ಸೇರಿದ 2.10 ಎಕರೆ ಜಮೀನು ಒತ್ತುವರಿ ಮಾಡಿದ್ದರು. ಈ ಸಂಬಂಧ ಎಫ್.ಐ.ಆರ್. ದಾಖಲಿಸಿಕೊಂಡಿದ್ದ ಬೆಂಗಳೂರು ನಗರ ಜಿಲ್ಲೆಯ ಅರಣ್ಯಾಧಿಕಾರಿಗಳು ಜೆಸಿಬಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ರೂ.ಗೂ ಅಧಿಕ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ 1 ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು: ಬೆಂಗಳೂರಿನಲ್ಲಿ ಭೂಮಿಗೆ…

Read More

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.  https://twitter.com/KarnatakaVarthe/status/1848347056018178220 ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು. ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ ಜೊತೆಗೆ ಬೆಂಗಳೂರಿನ ಈ ಭಾಗದ…

Read More

ಮಂಗಳವಾರ ದಿನ ಗುಪ್ತ ಆಂಜನೇಯ ಸ್ವಾಮಿಯ ಮಂತ್ರ ಇದನ್ನು ಕೇವಲ ಹೇಳಿದರೆ ಸಹ ನಿಮ್ಮ ಎಲ್ಲ ತೊಂದರೆಗಳು ದೂರವಾಗುತ್ತದೆ 24ಗಂಟೆಯಲ್ಲಿ ಪ್ರಭುವ ನೀವೇ ನೋಡಿ.. ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…

Read More

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮಳ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ. ವೀರ ವನಿತೆ, ಕನ್ನಡ ನಾಡಿಗೆ ಕೇಂದ್ರದ ಗೌರವ: ಕೇಂದ್ರ ಸರ್ಕಾರ ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದು, ಈ ಮೂಲಕ ರಾಣಿ ಚೆನ್ನಮ್ಮ ಮತ್ತು ಕನ್ನಡ ನಾಡಿಗೆ ಅಭೂತಪೂರ್ವ ಗೌರವ ಸಲ್ಲಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಭಯ್ ಪಾಟೀಲ್, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಕಿತ್ತೂರು ಕರ್ನಾಟಕ…

Read More

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಸಿ.ಪಿ ಯೋಗೇಶ್ವರ್ ಗೆ ಕೈತಪ್ಪೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಈ ಸಂಬಂಧ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಎಸ್ ನಿರ್ಮಲಾ ಅವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಸಿ.ಪಿ ಯೋಗೇಶ್ವರ್ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು ಎಂದಿದ್ದಾರೆ. ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ಸಿ.ಪಿ ಯೋಗೇಶ್ವರ್ ನೀಡಿದ್ದಂತ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ದಿನಾಂಕ 21-10-2024ದು ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ 185(2)ರ ಮೇರೆಗೆ ಅಂಗೀಕರಿಸಿರುತ್ತಾರೆ ಎಂದು ತಿಳಿಸಿದ್ದಾರೆ. https://kannadanewsnow.com/kannada/minister-ns-boseraju-clarifies-on-reserve-forest-encroachment-complaint/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬೆಂಗಳೂರು : ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್‌.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1987 ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು. ಭೂಮಿ ಖರೀದಿಯ ಸಂಧರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆ ನಂತರ ಮೂಲ ಜಮೀನಿನ ಮಾಲೀಕರಿಂದ ಭೂಮಿಯನ್ನು ಖರೀದಿಸಲಾಗಿತ್ತು. ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ ಶಾಸಕನಾಗಿದ್ದೂ ಕೂಡಾ 1999 ರಲ್ಲಿ. 1987 ರಲ್ಲಿ ಪ್ರಭಾವ…

Read More

ನವದೆಹಲಿ: ಜಾತ್ಯತೀತತೆ ಎಂಬ ಪದವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಮತ್ತು ಹಲವಾರು ತೀರ್ಪುಗಳಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ನ್ಯಾಯಪೀಠವು ಸಂವಿಧಾನದಲ್ಲಿ ಬಳಸಲಾದ ಸಮಾನತೆಯ ಹಕ್ಕು ಮತ್ತು ಪದ ಭ್ರಾತೃತ್ವದ ಹಕ್ಕು ಮತ್ತು ಭಾಗ 3 ರ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ನೋಡಿದರೆ, ಜಾತ್ಯತೀತತೆಯನ್ನು ಸಂವಿಧಾನದ ಪ್ರಮುಖ ಲಕ್ಷಣವಾಗಿ ಪರಿಗಣಿಸಲಾಗಿದೆ ಎಂಬುದರ ಸ್ಪಷ್ಟ ಸೂಚನೆ ಇದೆ ಎಂದು ಹೇಳಿದರು. “ಜಾತ್ಯತೀತತೆಗೆ ಸಂಬಂಧಿಸಿದಂತೆ, ಸಂವಿಧಾನವನ್ನು ಅಂಗೀಕರಿಸಿದಾಗ ಮತ್ತು ಚರ್ಚೆ ನಡೆಯುತ್ತಿದ್ದಾಗ ನಾವು ಫ್ರೆಂಚ್ ಮಾದರಿಯನ್ನು ಮಾತ್ರ ಹೊಂದಿದ್ದೇವೆ. ನಾವು ಅದನ್ನು ವಿಕಸನಗೊಳಿಸಿದ ರೀತಿ ವಿಭಿನ್ನವಾಗಿದೆ. ನಾವು ನೀಡಿರುವ ಹಕ್ಕುಗಳು… ನಾವು ಅದನ್ನು ಸಮತೋಲನಗೊಳಿಸಿದ್ದೇವೆ”. “ಸಮಾಜವಾದಿ ಎಂಬ ಪದವನ್ನು ನೀವು ಪಾಶ್ಚಾತ್ಯ ಪರಿಕಲ್ಪನೆಯ ಪ್ರಕಾರ ನೋಡಿದರೆ, ಅದು ವಿಭಿನ್ನ ಅರ್ಥವನ್ನು ಹೊಂದಿದೆ. ಆದರೆ ನಾವು ಅದನ್ನು ಅನುಸರಿಸಿಲ್ಲ. ಆಗಿರುವ ಬದಲಾವಣೆಗಳಿಂದ ನಮಗೆ ತುಂಬಾ ಸಂತೋಷವಾಗಿದೆ… ಆಗಿರುವ ಆರ್ಥಿಕ ಬೆಳವಣಿಗೆ” ಎಂದು ನ್ಯಾಯಪೀಠ ಹೇಳಿದೆ.…

Read More