Author: kannadanewsnow09

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳೂರಿನಿಂದ ಶಿವಮೊಗ್ಗದ ಜೋಗದ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದಂತ ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗದ ಸಾಗರ ಬಳಿಯ ಜೋಗದ ಜಲಪಾತ ವೀಕ್ಷಣೆಗಾಗಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ಮಂಗಳೂರಿನ 55 ಮಂದಿ ತೆರಳಿದ್ದರು. ಈ ಬಸ್ ಅರಳಗೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಪಲ್ಟಿ ಹೊಡೆದಿದೆ. ಈ ಸಂದರ್ಭದಲ್ಲಿ ಪ್ರವಾಸಿ ಬಸ್ಸಿನಲ್ಲಿ 55 ಜನರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಇವರಲ್ಲಿ 15 ಮಂದಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕಾರ್ಗಲ್ ಹಾಗೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/national-energy-conservation-2024-karnataka-ranks-second-energy-development-corporations-achievement-award/ https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/

Read More

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಸ್ಥಾನ ದೊರೆತಿದೆ. ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್‌, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ. ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌ ಇಂಧನ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ರಾಷ್ಟ್ರಮಟ್ಟದಲ್ಲಿ ಎರಡನೇ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌,…

Read More

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಗೊಳಿಸಿದಂತ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದರು. ಡ್ರೋನ್ ಪ್ರತಾಪ್ ಗೆ ಸಹಾಯ ಮಾಡಿದಂತ ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಕೃಷಿ ಹೊಂಡ ಒಂದರದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದನು. ಈ ಸಂಬಂಧ ಕೇಸ್ ದಾಖಲಾಗಿತ್ತು. ಆನಂತ್ರ ಆತನನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ವೀಡಿಯೋ ಮಾಡಿದ್ದಂತ ಕ್ಯಾಮೆರಾಮ್ಯಾನ್ ವಿನಯ್ ಹಾಗೂ ಆತನಿಗೆ ಸ್ಟೂಡಿಯೋ ಕೊಡಿಸಿದ್ದಂತ ಗೆಳೆಯ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದಲ್ಲದೇ ಡ್ರೋನ್ ಪ್ರತಾಪ್ ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಿದರು. ಅವೆನ್ಯೂ ರಸ್ತೆಯಲ್ಲಿ ಸೋಡಿಯಂ ಖರೀದಿಸಿದಂತ ಮಾಹಿತಿ ಪಡೆದು ಅಂಗಡಿಗೂ ಕರೆದೊಯ್ದು ಸ್ಥಳ ಮಹಜರು ಮಾಡಿದರು. ಅಲ್ಲದೇ ಡ್ರೋನ್ ಪ್ರತಾಪ್ ಮನೆ, ಕಚೇರಿಗೂ ಕರೆದೊಯ್ದು ಸ್ಥಳ ಮಹಜರು ಮಾಡಿದರು.

Read More

ಹುಬ್ಬಳ್ಳಿ: “ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ಆಸಕ್ತಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಅಧಿವೇಶನದಲ್ಲಿ ನಾಲ್ಕು ದಿನ ಬಾಕಿ ಇದ್ದು, ಉತ್ತರ ಕರ್ನಾಟಕದ ವಿಚಾರ ಚರ್ಚೆ ಬಗ್ಗೆ ಕೇಳಿದಾಗ, “ಅವರಿಗೆ ರಾಜಕಾರಣ ಹೊರತಾಗಿ ಬೇರೆ ವಿಚಾರ ಬೇಕಿಲ್ಲ. ಅವರ ಪಕ್ಷದಲ್ಲಿ ಒಗ್ಗಟ್ಟಿಲ್ಲ” ಎಂದು ತಿಳಿಸಿದರು. ಉತ್ತರ ಕರ್ನಾಟಕದ ಉತ್ತರ ಕರ್ನಾಟಕದ ನೀರಾವರಿ ವಿಚಾರವಾಗಿ ಚರ್ಚೆಯಾಗಬೇಕು ಎಂಬ ಪ್ರಶ್ನೆಗೆ, “ನೀರಾವರಿ ವಿಚಾರವಾಗಿ ಚರ್ಚೆ ಮಾಡಲು ನಾನು ಸಿದ್ಧ. ನೀರಾವರಿ ಜತೆಗೆ ಬೇರೆ ವಿಚಾರಗಳೂ ಚರ್ಚೆಯಾಗಲಿ” ಎಂದು ಉತ್ತರಿಸಿದರು. ಶೆಟ್ಟರ್- ಜೋಷಿ ನೇತೃತ್ವ ವಹಿಸಿ ಅನುಮತಿ ಕೊಡಿಸಲಿ ಮಹದಾಯಿ ಯೋಜನೆಗೆ ತಾರ್ಕಿಕ ಅಂತ್ಯ ಯಾವಾಗ ಎಂದು ಕೇಳಿದಾಗ, “ಇತ್ತೀಚೆಗಷ್ಟೇ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಿದೆ. ಅವರು ಕೂಡ ಅರಣ್ಯ ಸಚಿವರ ಜತೆ ಚರ್ಚೆ…

Read More

ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ತಮ್ಮ ಮನವಿಗೆ ಸಚಿವ ಸಂಪುಟ ಸ್ಪಂದಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯಿಸಿದೆ. ಹೀಗಾಗಿ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಸಮಸ್ಯೆ ನಿವಾರಣೆ ಆಗಿದೆ. ಆರ್ಥಿಕವಾಗಿ ತೊಂದರೆಯಲ್ಲಿದ್ದ ಸರಕಾರಿ ಸ್ವಾಮ್ಯದ ಈ ಕಾರ್ಖಾನೆಯನ್ನು ಉಳಿಸಿ, ರೈತರು ಬೆಳೆದಿರುವ ಕಬ್ಬು ನುರಿಸುವ ಕಾರ್ಯ ಆರಂಭಿಸಲು ಸಾಧ್ಯವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಕಂಪನಿಗೆ ವಿದ್ಯುತ್ ಬಾಕಿ ಪಾವತಿಸಲು ನೆರವಾಗುವಂತೆ ಕಳೆದ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಹಲವೆಡೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ನಾಳೆ ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ: 15.12.2024 ರ ಭಾನುವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 15.12.2024 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-II ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ…

Read More

ಬೆಂಗಳೂರು: ಗೃಹಲಕ್ಷ್ಮೀ ಹಣದಿಂದ ಈಗಾಗಲೇ ಟಿವಿ, ಫ್ರಿಡ್ಜ್, ಬೈಕ್ ಖರೀದಿಸಿಸಲಾಗಿತ್ತು. ಈಗ ಮುಂದುವರೆದು ಬೋರ್ ವೆಲ್ ಅನ್ನೇ ಗೃಹ ಲಕ್ಷ್ಮೀ ಹಣದಿಂದ ಅತ್ತೆ-ಸೊಸೆ ಕೊರೆಸಿದ್ದಾರೆ. ಈ ಮಾಹಿತಿಯನ್ನು ಹಂಚಿಕೊಂಡಿರುವಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ರಾಜ್ಯದಲ್ಲಿ ತನ್ನದೇ ಆದ ಸದ್ದನ್ನು ಮಾಡುತ್ತಿದ್ದು, ಲಕ್ಷಾಂತರ ಕೆಲಸ ಕಾರ್ಯಗಳಿಗೆ ಗೃಹಲಕ್ಷ್ಮಿಯ ಹಣ ವರದಾನವಾಗಿದೆ. ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2,000/- ರೂ, ಹಣ ಕೂಡಿಟ್ಟು ಗದಗ ಜಿಲ್ಲೆಯ ಗಜೇಂದ್ರಗಡ್ ಪಟ್ಟಣದ ಮಾಲದಾರ ಓಣಿಯ ಅತ್ತೆ ಹಾಗೂ ಸೊಸೆ ಬೊರವೆಲ್ ಹಾಕಿಸಿದ್ದು, ಬೊರವೆಲ್ ನಿಂದ ಒಳ್ಳೆಯ ನೀರನ್ನು ಪಡೆದಿದ್ದಾರೆ ಎಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೊರವೆಲ್ ಹಾಕಿಸಲು ಒಟ್ಟು 60 ಸಾವಿರ ರೂ,ಗಳು ಖರ್ಚಾಗಿದ್ದು, ಗೃಹಲಕ್ಷ್ಮಿ ಯೋಜನೆಯ 44 ಸಾವಿರ ಬಳಕೆ…

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದೆ. ತಿರುವು ಪಡೆಯುತ್ತಿದ್ದಂತ ವೇಳೆಯಲ್ಲಿ ಬೈಕ್ ಗೆ ಡಿಕ್ಕಿಯಾದ ಕಾರಣಕ್ಕೆ ಮಹಿಳೆಯೊಬ್ಬರು ಚಾಲಕನ ಮೇಲೆ ಹಲ್ಲೆ ನಡೆಸಿರುವಂತ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ನಿಂದ ಕೆ ಆರ್ ಮಾರುಕಟ್ಟೆಗೆ ಬಿಎಂಟಿಸಿ ಬಸ್ ಒಂದು ತೆರಳುತ್ತಿತ್ತು. ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯಲ್ಲಿ ಬಲ ಭಾಗಕ್ಕೆ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲಿ ಮಹಿಳೆ ಓಡಿಸುತ್ತಿದ್ದಂತ ಬೈಕ್ ಗೆ ಡಿಕ್ಕಿಯಾಗಿತ್ತು. ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆ ಕೆಳಗೆ ಬಿದ್ದು ಗಾಯಗೊಂಡಿದ್ದರು. ಇಂತಹ ಮಹಿಳೆ ಚಾಲಕನ ಮೇಲೆ ಹಲ್ಲೆ ಮಾಡಿದ್ದಾಗಿ ತಿಳಿದು ಬಂದಿದೆ. ಈ ಘಟನೆ ಕುರಿತಂತೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. https://kannadanewsnow.com/kannada/head-constable-suicide-case-fir-lodged-against-wife-father-in-law-brother-in-law/ https://kannadanewsnow.com/kannada/video-couples-khatarnak-racket-1000-pairs-of-shoes-stolen-from-100-houses-sold-in-market/

Read More

ಬೆಂಗಳೂರು: ಬೈಯಪ್ಪನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ತಿಪ್ಪಣ್ಣ (33) ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಅವರು ಪಾಳಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಮತ್ತು ಅವರ ಹೆಂಡತಿಯ ನಡುವೆ ಬಿಸಿಯಾದ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಇದು ಅವರನ್ನು ತೀವ್ರ ಕ್ರಮ ತೆಗೆದುಕೊಳ್ಳಲು ಕಾರಣವಾಯಿತು ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ತಿಪ್ಪಣ್ಣ ತಂದೆ ನೀಡಿದಂತ ದೂರನ್ನು ಆಧರಿಸಿ, ಅವರ ಪತ್ನಿ, ಮಾವ ಹಾಗೂ ಬಾಮೈದನ ವಿರುದ್ಧ ಜೀವ ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಿಪ್ಪಣ್ಣ ಅವರು ಕನ್ನಡದಲ್ಲಿ ಬರೆದಿರುವ ಒಂದು ಪುಟದ ಡೆತ್ ನೋಟ್ ನಲ್ಲಿ ಪತ್ನಿ ಮತ್ತು ಮಾವನ ಮೇಲೆ ಚಿತ್ರಹಿಂಸೆ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ. ಡಿಸೆಂಬರ್ 12 ರಂದು ತನ್ನ ಮಾವ ತನಗೆ ಬೆದರಿಕೆ ಹಾಕಿದ್ದರು, ನಿಮ್ಮ ಮಗಳು ಶಾಂತಿಯಿಂದ ಬದುಕಲು ಸಾಯಬೇಕು ಅಥವಾ ಕೊಲ್ಲಬೇಕು ಎಂದು…

Read More