Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಒಂದೆಡೆ ಸಿಎಂ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಹಗರಣದಲ್ಲಿ ಮತ್ತೊಂದು ಸಂಕಷ್ಟ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಮೈಸೂರಿನ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಿದ್ದಾರೆ. ನ್ಯಾಯಮೂರ್ತಿ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಲಾಗಿದ್ದು, ಈ ಖಾಸಗಿ ದೂರಿನ ಪ್ರಕರಣದ ವಿಚಾರಣೆಯನ್ನು ಆಗಸ್ಟ್.9ರ ನಾಳೆಗೆ ವಿಚಾರಣೆ ಬರುವ ನಿರೀಕ್ಷೆಯಿದೆ. ಫಿರ್ಯಾದುದಾರರ ಪರವಾಗಿ ಹೈಕೋರ್ಟ್ ನ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಗುರುವಾರ ಮಧ್ಯಾಹ್ನ 1 ಗಂಟೆಗೆ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳನ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಮುಡಾ ಹಗರಣ ಸಂಬಂಧ ದಾಖಲಿಸಿದ್ದಾರೆ. ಹೈಕೋರ್ಟ್ ವಕೀಲ ವಸಂತ ಕುಮಾರ್ ವಕಾಲತ್ತು ವಹಿಸಿದ್ದಾರೆ. ನಾಳೆ ಸಿಎಂ ಸಿದ್ಧರಾಮಯ್ಯ ವಿರುದ್ಧ…
ನವದೆಹಲಿ: ಆಗಸ್ಟ್ 11 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ ಪರೀಕ್ಷೆ, 2024 ಅನ್ನು ಮುಂದೂಡಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಗಸ್ಟ್ 9 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಅರ್ಜಿದಾರರ ಪರ ವಕೀಲರು ಈ ವಿಷಯದಲ್ಲಿ ತುರ್ತು ಇದೆ ಎಂದು ವಾದಿಸಿದ್ದರಿಂದ ಅರ್ಜಿಯನ್ನು ಪಟ್ಟಿ ಮಾಡಲು ನಿರ್ಧರಿಸಿತು. ಅರ್ಜಿದಾರರಾದ ವಿಶಾಲ್ ಸೊರೆನ್ ಮತ್ತು ಇತರರು ಎಲ್ಲಾ ಅಭ್ಯರ್ಥಿಗಳಿಗೆ ಏಕರೂಪದ ಮತ್ತು ನ್ಯಾಯಯುತ ಪರೀಕ್ಷಾ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಯನ್ನು ಮರು ನಿಗದಿಪಡಿಸಲು ಮತ್ತು ಒಂದೇ ಬ್ಯಾಚ್ನಲ್ಲಿ ನಡೆಸಲು ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದರು. ಪರೀಕ್ಷಾ ಕೇಂದ್ರ ಹಂಚಿಕೆ ಸಮಸ್ಯೆಗಳನ್ನು ಸರಿಪಡಿಸಲು ಮತ್ತು ಹತ್ತಿರದ ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಸಮಾನವಾಗಿ ಮತ್ತು ಪಾರದರ್ಶಕವಾಗಿ ಹಂಚಿಕೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅವರು ನ್ಯಾಯಾಲಯವನ್ನು ಕೇಳಿದರು. “ಪರೀಕ್ಷಾ ನಗರಗಳ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್ ಬಾಗ್ ಪ್ಲವರ್ ಶೋಗೆ ಚಾಲನೆ ನೀಡಿದು. ಈ ಸಂದರ್ಭದಲ್ಲಿ ಅಂಬೇಡ್ಕರ್ ಮೊಮ್ಮಗ ಕೂಡ ಬಾಗಿಯಾಗಿದ್ದರು. ಹಾಗಾದ್ರೆ ಟಿಕೆಟ್ ದರ ಎಷ್ಟು ಅಂತ ಮುಂದೆ ಓದಿ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ…
ಜಪಾನ್: ದಕ್ಷಿಣ ಜಪಾನ್ನಲ್ಲಿ 6.9 ತೀವ್ರತೆಯ ಮತ್ತು 7.1 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದ್ದು, ಜನರು ಜೀವಕ್ಕಾಗಿ ಓಡಿ ಪೀಠೋಪಕರಣಗಳ ಕೆಳಗೆ ಆಶ್ರಯ ಪಡೆಯುತ್ತಿದ್ದಂತೆ ನಾಟಕೀಯ ದೃಶ್ಯಗಳು ಹೊರಬಂದವು. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಳ್ಳಲಾದ ತುಣುಕಿನಲ್ಲಿ, ಜನರು ಭಯಭೀತರಾಗಿದ್ದರು ಮತ್ತು ಅವರ ಸುತ್ತಲಿನ ಭೂ ಪ್ರದೇಶಗಳು ನಡುಗಿದ್ದು, ಭಯಗೊಂಡಿದ್ದಾರೆ. ಅಲ್ಲದೇ ಭೂ ಕಂಪನದಿಂದ ಕೆಲವು ವಸ್ತುಗಳು ನೆಲದ ಮೇಲೆ ಬಿದ್ದವು. ಪ್ರಸಾರಕ ಎನ್ಎಚ್ಕೆ ವರದಿ ಮಾಡಿದಂತೆ, ಕ್ಯುಶು ಮತ್ತು ಶಿಕೊಕು ದ್ವೀಪಗಳ ಕರಾವಳಿ ಪ್ರದೇಶಗಳನ್ನು ಸುನಾಮಿ ತಲುಪುವ ನಿರೀಕ್ಷೆಯಿದೆ. ಆಗಸ್ಟ್ 8 ರಂದು ದಕ್ಷಿಣ ಜಪಾನ್ನಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜುಲೈ ಮಧ್ಯದಲ್ಲಿ ಜಪಾನ್ನ ಹೊಕ್ಕೈಡೋದಲ್ಲಿ 5.62 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿತ್ತು. https://kannadanewsnow.com/kannada/big-news-karnataka-high-court-stays-mandatory-service-order-of-pg-doctors-karnataka-high-court/ https://kannadanewsnow.com/kannada/good-news-for-govt-employees-awaiting-7th-pay-commission-7th-pay-commission/
ಬೆಂಗಳೂರು: ನಿನ್ನೆ ನಾನು ಕೋರ್ಟ್ ಹಾಲ್ ಬಿಟ್ಟು ಹೋಗೋದಿಲ್ಲ. ನನಗೆ ಬೆದರಿಕೆ ಇದೆ. ನನ್ನ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂಬುದಾಗಿ ಹೈಕೋರ್ಟ್ ನ್ಯಾಯಮೂರ್ತಿ ಮುಂದೆ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅಲವತ್ತುಕೊಂಡಿದ್ದರು. ಇಂದು ವಿಚಾರಣ ನಡೆಸಿದಂತ ನ್ಯಾಯಪೀಠದ ಮುಂದೆ ಎಎಸ್ ಪಿಪಿ ಅವರು ಅವರಿಗೆ ಯಾರೂ ಕಿರುಕುಳ ನೀಡಿಲ್ಲ ಎಂಬುದಾಗಿ ವಿವರಣೆ ನೀಡಿದ್ದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಕೆಪಿಟಿಸಿಎಲ್ ನಲ್ಲಿ ಸಹಾಯ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಶಾಂತಕುಮಾರ ಸ್ವಾಮಿ ಎಂ.ಜಿ ಎನ್ನುವವರು, ನಿನ್ನೆ ಹೈಕೋರ್ಟ್ ನಲ್ಲಿ ಹೈಡ್ರಾಮಾವನ್ನೇ ನಡೆಸಿದ್ದರು. ಸಾಗರ ಡಿವೈಎಸ್ಪಿ ಕಿರುಕುಳ ನೀಡುತ್ತಿದ್ದಾರೆ. ನ್ಯಾಯಾಲಯ ಬಿಟ್ಟು ಹೋಗಲ್ಲ. ನನ್ನನ್ನು ಕಾಪಾಡಿ ಅಂತ ಗೋಗರೆದಿದ್ದರು. ಈ ಘಟನೆಯ ಕುರಿತಂತೆ ಸಮಗ್ರ ಮಾಹಿತಿಯನ್ನು ನ್ಯಾಯಪೀಠದ ಮುಂದೆ ಹಿಡುವಂತೆ ಇಂದಿಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಪೀಠವು ಸೂಚಿಸಿತ್ತು. ನ್ಯಾಯಾಲಯದ ಸೂಚನೆಯಂತೆ ಇಂದು ಪ್ರಕರಣದ ವಿಚಾರಣೆ ಆರಂಭಗೊಂಡಾಗ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್ ಜಗದೀಶ್ ಅವರು,…
ಪ್ಯಾರಿಸ್ : ಮಹಿಳೆಯರ 50 ಕೆಜಿ ವಿಭಾಗದಲ್ಲಿ ಅನುಮತಿಸಲಾದ ಮಿತಿಗಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ನಿಂದ ಆಘಾತದಿಂದ ಅನರ್ಹಗೊಂಡ ನಂತರ ತಮ್ಮನ್ನು ಭೇಟಿಯಾದ ಭಾರತೀಯ ತರಬೇತುದಾರರಿಗೆ “ಇದು ಆಟದ ಒಂದು ಭಾಗವಾಗಿದೆ” ಎಂದು ಧೈರ್ಯಶಾಲಿ ವಿನೇಶ್ ಫೋಗಟ್ ಬುಧವಾರ ಇಲ್ಲಿ ನಡೆದ ಭಾರತೀಯ ತರಬೇತುದಾರರಿಗೆ ತಿಳಿಸಿದರು. ಮಹಿಳಾ ರಾಷ್ಟ್ರೀಯ ತರಬೇತುದಾರ ವೀರೇಂದ್ರ ದಹಿಯಾ ಮತ್ತು ಮಂಜೀತ್ ರಾಣಿ ಮಂಗಳವಾರ ನಡೆದ ಆರಂಭಿಕ ಸುತ್ತಿನಲ್ಲಿ ವಿಶ್ವದ ನಂ.1 ಮತ್ತು ಹಾಲಿ ಚಾಂಪಿಯನ್ ಯುಯಿ ಸುಸಾಕಿ ಅವರನ್ನು ಸೋಲಿಸುವ ಮೂಲಕ ಕುಸ್ತಿ ಅಖಾಡದಲ್ಲಿ ಸಂಚಲನ ಮೂಡಿಸಿದ್ದ ಉತ್ಸಾಹಿ ಕುಸ್ತಿಪಟುವನ್ನು ಭೇಟಿಯಾದರು. ವಿನೇಶ್ ಅವರ ಪದಕ ವಿಜೇತ ಓಟವನ್ನು ಆಚರಿಸಲು ರಾಷ್ಟ್ರವು ತಯಾರಿ ನಡೆಸುತ್ತಿರುವಾಗ – ಅವರಿಗೆ ಕನಿಷ್ಠ ಬೆಳ್ಳಿ ಪದಕದ ಭರವಸೆ ನೀಡಲಾಯಿತು – ವಿನೇಶ್ ಎರಡನೇ ತೂಕವನ್ನು ಏರಲು ಸಾಧ್ಯವಾಗದಿದ್ದಾಗ ಅವರನ್ನು ಅನರ್ಹಗೊಳಿಸಲಾಯಿತು. ಇದು ಕುಸ್ತಿ ತಂಡದಲ್ಲಿ ಆಘಾತವನ್ನುಂಟು ಮಾಡಿತು. ಸುದ್ದಿ ಹೊರಬಂದ ನಂತರ ಹುಡುಗಿಯರು ತುಂಬಾ ಖಿನ್ನತೆಗೆ…
ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಮನೆ ಬದಲಿಸಿದರೂ ಮತ್ತೆ ಪಡೆಯುವಂತ ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ನೀವು ಮನೆ ಬದಲಿಸಿದ್ದೀರಾ? ಮತ್ತೆ ಗೃಹ ಜ್ಯೋತಿ ಯೋಜನೆ ಪ್ರಯೋಜನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಬಗ್ಗೆ ಮುಂದೆ ಓದಿ. ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಬಿಲ್ನ ಹಣವನ್ನು ಮಕ್ಕಳ ಟ್ಯೂಷನ್ ಫೀಸ್, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿ-ಲಿಂಕ್ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಈ ರೀತಿ ಮತ್ತೆ ಗೃಹ ಜ್ಯೋತಿ ಪ್ರಯೋಜನಕ್ಕೆ ಅರ್ಜಿ ಸಲ್ಲಿಸಿ ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ…
ಬೆಂಗಳೂರು: ನಟ ದರ್ಶನ್ ಅವರು ಜೈಲು ಊಟ ಬೇಡ, ಮನೆಯೂಟ ಬೇಕು ಅಂತ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೇ ಅದಕ್ಕೆ ನಿರಾಕರಿಸಿತ್ತು. ಅಲ್ಲದೇ ಜೈಲು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಹೀಗಾಗಿ ಜೈಲು ಅಧಿಕಾರಿಗಳಿಗೆ ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಆದರೇ ನಟ ದರ್ಶನ್ ಗೆ ಮತ್ತೆ ಶಾಕ್ ಎನ್ನುವಂತೆ ಜೈಲು ಅಧಿಕಾರಿಗಳು ಕೂಡ ಮನೆ ಊಟ ನೀಡಲು ನಿರಾಕರಿಸಿದ್ದಾರೆ. ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದಂತ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅಲ್ಲದೇ ಅವರಿಗೆ ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ ವಕೀಲರಿಗೆ ಸೂಚಿಸಿ, ಆಗಸ್ಟ್.20ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿತ್ತು. ಹೈಕೋರ್ಟ್ ನಿರ್ದೇಶನದಂತೆ ನಟ ದರ್ಶನ್ ಜೈಲು ಊಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ಮನವಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಶೀಲಿಸಿದಂತ ಜೈಲು…
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಒದಗಿಸುವಂತ ಗೃಹ ಆರೋಗ್ಯ ಯೋಜನೆ ಸೆಪ್ಟೆಂಬರ್ ನಿಂದ 8 ಜಿಲ್ಲೆಗಳಲ್ಲಿ ಆರಂಭಗೊಳ್ಳಲಿದೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಲ್ಲಿ ಕೆಲವರು ನಿಯಮಿತವಾಗಿ ಮಾತ್ರೆಗಳನ್ನು ಸೇವಿಸುತ್ತಿಲ್ಲ. ಆರ್ಥಿಕ ಹೊರೆ ಸೇರಿ ವಿವಿಧ ಕಾರಣಗಳಿಂದ ಮಾತ್ರೆಗಳನ್ನು ಖರೀದಿಸುತ್ತಿಲ್ಲ. ಗೃಹ ಆರೋಗ್ಯ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/fire-breaks-out-in-bmtc-electric-bus-in-bengaluru/ https://kannadanewsnow.com/kannada/flower-show-to-begin-at-lalbagh-in-bengaluru-from-tomorrow-heres-how-the-ticket-prices-are/
ಬೆಂಗಳೂರು : ಕನ್ನಡಿಗರಿಗೆ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಸಿಹಿಸುದ್ದಿ ನೀಡಿದ್ದು, ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯ ಎಲ್ಲಾ ನೇಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ರೈಲ್ವೆ ಮಂಡಳಿ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ ಇಲಾಖೆಯಲ್ಲಿ ಮುಂಬಡ್ತಿ ನೀಡಲು ನಡೆಸುತ್ತಿದ್ದ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆಯನ್ನು ಶೀಘ್ರವೇ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡುವ ಆದೇಶ ಹೊರಬೀಳಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಗೆ ಸುತ್ತೋಲೆ ಹೊರಡಿಸುವ ಸಂದರ್ಭದಲ್ಲಿ ಕನ್ನಡಕ್ಕೆ ಅವಕಾಶ ನೀಡಿ ನಂತರ ಹಾಲ್ ಟಿಕೆಟ್ ನಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ತಿಳಿಸಲಾಗಿತ್ತು. ಈ ಬಗ್ಗೆ ರೈಲ್ವೆ ನೌಕರರ ಸಂಘಟನೆಗಳು…