Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024-25ನೇ ಸಾಲಿನ ರಾಜ್ಯ ಬಜೆಟ್ ಮಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸಂಪನ್ಮೂಲ ಕ್ರೂಢೀಕರಣದೊಂದಿಗೆ, ಅಭಿವೃದ್ಧಿಯ ಕನಸಿನ ಅಯವ್ಯಯವನ್ನು ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ರಾಜ್ಯದ ಜನತೆಯ ಚಿತ್ತ, ಇಂದಿನ 2024-25ನೇ ಸಾಲಿನ ಅಯವ್ಯಯದತ್ತ ನೆಟ್ಟಿದೆ. ಕಳೆದ ವರ್ಷ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 3.25 ಲಕ್ಷ ಕೋಟಿ ಬೃಹತ್ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು ಮಂಡಿಸಲಿರುವಂತ ಅಯವ್ಯಯದ ಗಾತ್ರ 3.80 ಲಕ್ಷ ಕೋಟಿ ರೂಪಾಯಿಯ ಬೃಹತ್ ಗಾತ್ರವನ್ನು ದಾಟುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ಬೆಳಿಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ 2024-25ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಸತತ 15ನೇ ಬಾರಿಗೆ ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಘೋಷಿಸಿದ್ದಂತ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ನಂತ್ರ, ಅವುಗಳನ್ನು ಮುಂದುವರೆಸೋದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದತ್ತಲೂ ಬಜೆಟ್ ನಲ್ಲಿ ಗಮನ ಹರಿಸಲಿದ್ದಾರೆ ಎನ್ನಲಾಗುತ್ತಿದೆ. ಒಂದೆಡೆ ಕೇಂದ್ರದಿಂದ ಅನುದಾನ ತಾರತಮ್ಯ. ತೆರಿಗೆ ಪಾಲಿನ ಕಡಿತ, ರಾಜ್ಯ ತೆರಿಗೆ…
ಬೆಂಗಳೂರು: ರಾಜ್ಯದಲ್ಲಿ ಹೊಸ ಜಿಲ್ಲೆಗಳ ಉದಯಕ್ಕೆ ನಾಳೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಂದಿ ಹಾಡಲಿದ್ದಾರೆ ಎನ್ನಲಾಗುತ್ತಿದೆ. ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತ ಫೆಬ್ರವರಿ.8ರಂದು ರಾಜ್ಯ ಸರ್ಕಾರ ಹೊರಡಿಸಿರುವಂತ ಸುತ್ತೋಲೆ ಈಗ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲಿ ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಲಾಗಿದೆ. ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖ ಮಾಡಲಾಗಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ಬಜೆಟ್ ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೇ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳು ಎಂಬುದಾಗಿ ಬೆಳಗಾವಿ ಹಾಗೂ ತುಮಕೂರು ಕರೆಯಲಾಗುತ್ತಿದೆ. ಈ ಜಿಲ್ಲೆಗಳನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ನಾಳೆ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ. https://kannadanewsnow.com/kannada/good-news-for-those-who-have-applied-for-new-bpl-apl-cards-minister-muniyappa-announces-that-cards-will-be-issued-from-april-1/ https://kannadanewsnow.com/kannada/good-news-for-transport-employees-here-are-the-details-of-all-private-hospitals-recognized-by-the-state-government/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ಜನರಿಗೆ ವಿತರಣೆ ಮಾಡುವಂತ ಘೋಷಣೆ ಮಾಡಿತ್ತು. ಅದಕ್ಕೆ ಅಕ್ಕಿ ಕೊಡಿ ಅಂತ ಕೇಂದ್ರ ಸರ್ಕಾರವನ್ನು ಕೇಳಿತ್ತು. ಆದ್ರೇ ಅಕ್ಕಿ ಇಲ್ಲ ಎಂದ ಕೇಂದ್ರ ಸರ್ಕಾರ, ಈಗ ಭಾರತ್ ಬ್ರ್ಯಾಂಡ್ ಹೆಸರಲ್ಲಿ ಮಾರುತ್ತಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ಅಕ್ಕಿಯನ್ನು ಕೇಂದ್ರ ಸರ್ಕಾರ 29ರೂಗೆ ಮಾರಾಟ ಮಾಡೋದಕ್ಕೆ ಇಟ್ಟಿದದಾರೆ. ಆದರೇ ಕೇಂದ್ರ ಸರ್ಕಾರ ಸ್ವಲ್ಪ ಬುದ್ಧಿವಂತಿಕೆಯಿಂದ ಯೋಚನೆ ಮಾಡಿದ್ದರೇ ನಾವೇ 34 ರೂಪಾಯಿಗೆ ತೆಗೆದುಕೊಳ್ಳುತ್ತೇವೆ ಅಂತ ಹೇಳಿದ್ದೆವು. ಈಗ ಮಾರಾಟ ಮಾಡುವುದಕ್ಕಿಂತ 5 ರೂ ಹೆಚ್ಚುಕೊಟ್ಟು ಖರೀದಿಗೆ ಪ್ರಸ್ತಾವನೆ ಕಳುಹಿಸಿದ್ದೆವು ಎಂದರು. ನಮಗೆ ಅಕ್ಕಿ ಕೊಡುವುದಕ್ಕೆ ಕೇಂದ್ರ ಸರ್ಕಾರ ಮುಂದೆ ಬರಲಿಲ್ಲ. ಈಗ ಮಾರುಕಟ್ಟೆಯಲ್ಲಿ 29 ರೂ.ಗೆ ಅಕ್ಕಿಯನ್ನು ಭಾರತ್ ಬ್ರ್ಯಾಂಡ್ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಕೇಂದ್ರ ಸರ್ಕಾರ ಯಾವ ರೀತಿಯಾಗಿ ಯೋಜನೆ ಮಾಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದರು.…
ಬೆಂಗಳೂರು: ಐದು ಗ್ಯಾರಂಟಿಗಳ ಪ್ರಚಾರ ಮತ್ತು ಸಮೀಕ್ಷೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರ ಜನರ ತೆರಿಗೆ ಹಣವನ್ನು ಮನಸೋ ಇಚ್ಛೆ ಪೋಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣಾ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು; ಗ್ಯಾರಂಟಿಗಳ ಪ್ರಚಾರಕ್ಕೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಸರಕಾರವು, ಬೇಕು ಬೇಕಾದವರಿಗೆ, ಶಾಸಕರ ಕುಟುಂಬಕ್ಕೆ ಸಮೀಕ್ಷೆಯ ಹೆಸರಿನಲ್ಲಿ ಹಣ ಕೊಟ್ಟಿದೆ ಎಂದು ದೂರಿದರು. ʼದ ಪಾಲಸಿ ಪ್ರಂಟ್ʼ ಎನ್ನುವ ದಿಕ್ಕಿಲ್ಲದ ಸಂಸ್ಥೆಗೆ ಸಮೀಕ್ಷೆ ಮಾಡುವುದಕ್ಕೆ 7.20 ಕೋಟಿ ರೂ. ಮೊತ್ತದ ಗುತ್ತಿಗೆ ಕೊಡಲಾಗಿದೆ. ಆದರೆ, ಕಂಪನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದರ ಹಿಂದೆ ಮುಂದೆ ಯಾರಿದ್ದಾರೆ ಎನ್ನುವುದೂ ತಿಳಿದಿಲ್ಲ. ಆದರೂ, ಸರಕಾರ ಇಷ್ಟು ಪ್ರಮಾಣದಷ್ಟು ಹಣವನ್ನು ಆ ಕಂಪನಿಗೆ ಕೊಟ್ಟಿದೆ. ಹಾಗಾದರೆ, ಆ ಕಂಪನಿ ಯಾರದು? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು. ʼದ ಪಾಲಸಿ ಫ್ರಂಟ್ʼ ಸಲ್ಲಿಸಿದ ಪ್ರಸ್ತಾವನೆಗೆ ಒಂದೇ ದಿನದಲ್ಲಿ…
ಬೆಂಗಳೂರು: ಒಂದು ಕೈಯ್ಯಲ್ಲಿ ಗ್ಯಾರಂಟಿಗಳನ್ನು ಕೊಟ್ಟು ಜನರನ್ನು ಬಡತನದಿಂದ ಮಧ್ಯಮ ವರ್ಗಕ್ಕೆ ತಂದಿದ್ದೇವೆ ಎನ್ನುವ ರಾಜ್ಯ ಸರಕಾರ, ಹಾಗೆ ಕೊಟ್ಟು ಹತ್ತು ಕೈಗಳಲ್ಲಿ ಹೀಗೆ ಆ ಹಣವನ್ನು ಕಿತ್ತುಕೊಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಇದು ರಾಜ್ಯವನ್ನು ವಿನಾಶದ ಅಂಚಿಗೆ ತಳ್ಳುತ್ತಿರುವ ʼಸಿದ್ದನಾಮಿಕ್ಸ್ʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ ಕುಮಾರಸ್ವಾಮಿ ಅವರು. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ʼಸಿದ್ದನಾಮಿಕ್ಸ್ʼ ಎನ್ನುವ ಮೂಲಕ ಮುಖ್ಯಮಂತ್ರಿಗಳಿಗೆ ಕುಟುಕಿದರು. ಐದು ಗ್ಯಾರಂಟಿಗಳ ಮೂಲಕ ಜನರ ಆರ್ಥಿಕ ಶಕ್ತಿ, ಕೊಳ್ಳುವ ಶಕ್ತಿ ಹೆಚ್ಚಿದೆ ಎನ್ನುವ ಸರಕಾರ, ಮುದ್ರಾಂಕ ಶುಲ್ಕವನ್ನು ಐದು ಪಟ್ಟು ಹೆಚ್ಚಿಸಿದೆ. ಮಾರ್ಗದರ್ಶಿ ಮೌಲ್ಯ (ಗೈಡ್ಲೆನ್ಸ್ ವ್ಯಾಲ್ಯೂ) ಆಸ್ತಿ ದರಕ್ಕಿಂತ ಹೆಚ್ಚಾಗಿದೆ. ಅಬ್ಕಾರಿ ಸುಂಕ ಏರುತ್ತಲೇ ಇದೆ. ಒಂದು ಕೈಯ್ಯಲ್ಲಿ ಗ್ಯಾರಂಟಿ ಅಂತ ಕೊಟ್ಟು ಹತ್ತು ಕೈಗಳಲ್ಲಿ ತೆರಿಗೆ ಹೇರುವ ನೀತಿ ಆರ್ಥಿಕತೆಗೆ ಅದ್ಯಾವ ಸೀಮೆಯ ಉತ್ತೇಜನ ನೀಡುತ್ತದೆ?…
ನವದೆಹಲಿ: ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unified Payments Interface -UPI) ಮತ್ತು ನ್ಯಾಷನಲ್ ಪೇಮೆಂಟ್ಸ್ ಇಂಟರ್ಫೇಸ್ (National Payments Interface -NPI) ಏಕೀಕರಣಕ್ಕಾಗಿ ಭಾರತ ಮತ್ತು ನೇಪಾಳದ ಸರ್ಕಾರಿ ಸ್ವಾಮ್ಯದ ಕೇಂದ್ರ ಬ್ಯಾಂಕುಗಳು ಗುರುವಾರ ಉಲ್ಲೇಖದ ನಿಯಮಗಳಿಗೆ ಸಹಿ ಹಾಕಿದವು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ನೇಪಾಳ ರಾಷ್ಟ್ರ ಬ್ಯಾಂಕ್ ಉಲ್ಲೇಖದ ನಿಯಮಗಳಿಗೆ ಸಹಿ ಹಾಕಿದವು. ಸಂಪರ್ಕದ ಔಪಚಾರಿಕ ಪ್ರಾರಂಭ ಅಥವಾ ಕಾರ್ಯಾಚರಣೆಯ ಪ್ರಾರಂಭವನ್ನು ನಂತರದ ದಿನಾಂಕದಲ್ಲಿ ಮಾಡಲಾಗುವುದು ಎಂದು ರಿಸರ್ವ್ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ. ಈ ಏಕೀಕರಣವು ಭಾರತ ಮತ್ತು ನೇಪಾಳದ ನಡುವೆ ಗಡಿಯಾಚೆಗಿನ ಹಣ ರವಾನೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಎರಡೂ ವ್ಯವಸ್ಥೆಗಳ ಬಳಕೆದಾರರಿಗೆ ತ್ವರಿತ, ಕಡಿಮೆ ವೆಚ್ಚದ ನಿಧಿ ವರ್ಗಾವಣೆ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಅದು ಹೇಳಿದೆ. ಯುಪಿಐ-ಎನ್ಪಿಐ ಸಂಪರ್ಕದ ಮೂಲಕ ತಮ್ಮ ವೇಗದ ಪಾವತಿ ವ್ಯವಸ್ಥೆಯನ್ನು ಸಂಪರ್ಕಿಸುವಲ್ಲಿ ಭಾರತ ಮತ್ತು ನೇಪಾಳದ ನಡುವಿನ ಸಹಯೋಗವು ಆರ್ಥಿಕ ಸಂಪರ್ಕವನ್ನು ಮತ್ತಷ್ಟು ಆಳಗೊಳಿಸುತ್ತದೆ. ಉಭಯ ದೇಶಗಳ…
ನವದೆಹಲಿ: ಬೆಳೆಗಳಿಗೆ ಎಂಎಸ್ಪಿಗಾಗಿ ಕಾನೂನು ಜಾರಿಗೆ ತರುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 200 ಕ್ಕೂ ಹೆಚ್ಚು ರೈತ ಸಂಘಗಳು ಫೆಬ್ರವರಿ 13, 2024 ರಂದು ರೈತರ ದೆಹಲಿ ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾವೆ. ಈ ಪ್ರತಿಭಟನೆಯ ಮಧ್ಯೆ, ರೈತರು ಫೆಬ್ರವರಿ 16, 2024ರ ನಾಳೆ ಗ್ರಾಮೀಣ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಈ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ವಿವಿಧ ರೈತ ಸಂಘಗಳು ಬೆಂಬಲಿಸಿವೆ. ಇದಕ್ಕಾಗಿ ತಮ್ಮೊಂದಿಗೆ ಕೈಜೋಡಿಸಲು ಜನರಿಗೆ ಮನವಿ ಮಾಡಲಾಗಿದೆ. ನಾಳೆ ಭಾರತ್ ಬಂದ್ಗೆ ಮುಂಚಿತವಾಗಿ, ಶಾಲೆಗಳು ಮತ್ತು ಶಾಪಿಂಗ್ ಮಾಲ್ಗಳಿಂದ ರೈಲುಗಳು, ಬ್ಯಾಂಕುಗಳು ಮತ್ತು ಸರ್ಕಾರಿ ಕಚೇರಿಗಳವರೆಗೆ, ಯಾವುದು ತೆರೆದಿದೆ, ಯಾವುದು ಮುಚ್ಚಲ್ಪಟ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಮುಂದೆ ಓದಿ. ಮೊದಲೇ ಹೇಳಿದಂತೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಸೇರಿದಂತೆ ರೈತ ಸಂಘಗಳು ಮತ್ತು ಒಕ್ಕೂಟಗಳು ನಾಳೆ ಫೆಬ್ರವರಿ 16, 2024 ರಂದು ಭಾರತ್ ಬಂದ್ಗೆ ಕರೆ ನೀಡಿವೆ. ರಾಷ್ಟ್ರವ್ಯಾಪಿ ಬೆಳಿಗ್ಗೆ 6:00 ರಿಂದ…
ಬೆಂಗಳೂರು: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು, ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ, ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ, ಬಳೆ ತೊಡುವುದರಲ್ಲಿ ಪವಿತ್ರತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು. ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ…
ಬೆಂಗಳೂರು: ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ, ಭಾರತ ದೇಶದ ಆರ್ಥಿಕ ಯಂತ್ರವಾಗಿ ಕಾರ್ಯ ನಿರ್ವಹಿಸುತ್ತಾ ಒಂದು ಅಮೋಘ ರಾಜ್ಯವಾಗಿ ರೂಪುಗೊಳ್ಳಲು ನಮ್ಮ ನಾಡಿನ ತಾತ್ವಿಕ ಅಡಿಪಾಯವೇ ಕಾರಣ. ಈ ತತ್ವಗಳ ಆಶಯವನ್ನು ಜಗತ್ತಿಗೆ ತಿಳಿಸಲು ಇರುವ ಭಾಷೆಯ ಅಂತರಕ್ಕೆ ಸೇತುವೆ ಕಟ್ಟುವ ಮಹತ್ತರವಾದ ಕೆಲಸ ಮಾಡುವ ನಿಟ್ಟಿನಲ್ಲಿ ಈ ಕೆಳಗಿನ ಎರಡು ಮನವಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ. 1) ವಚನ ಮಂಟಪ: ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ ಶರಣ ಸಾಹಿತ್ಯದ ಕೇಂದ್ರ ಬಿಂದುವಾಗಿದ್ದ ಕಲಬುರಗಿಯಲ್ಲಿ ಜಗಜ್ಯೋತಿ ಗುರು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳ ಮಾಚಿದೇವ, ದೇವರ ದಾಸಿಮ್ಮಯ್ಯ, ಅಂಬಿಗರ ಚೌಡಯ್ಯ, ಡೋಹರ ಕಕ್ಕಯ್ಯ, ಸರ್ವಜ್ಞರಂತಹ ನಾಡಿನ ಮೇರು…
ಬೆಂಗಳೂರು: ಮಂಗಳೂರಿನ ಸೆಂಟ್ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ದ ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲಿಸ್ ಠಾಣೆಯ ಪೊಲಿಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಪ್ರಕರಣ ಕುರಿತು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಅನಿಲ್ ಜರಾಬ್ ಲೊಬೊ ಅವರು ದೂರು ಕೊಟ್ಟಿದ್ದಾರೆ. ಅದು ಶಾಲೆಯಲ್ಲಿ ನಡೆದಿರುವ ಘಟನೆಯ ಬಗ್ಗೆ ದೂರು ಕೊಟ್ಟಿದ್ದಾರೆ. ಮೊದಲು ಮಕ್ಕಳು ದೂರು ಕೊಟ್ಟಾಗ ಅದನ್ನು ಎಫ್ಐ ಆರ್ ಮಾಡಲಿಲ್ಲ. ಅದನ್ನು ಪ್ರಾಥಮಿಕ ವಿಚಾರಣೆ ಮಾಡಿದಾಗ ಅದರಲ್ಲಿ ತಪ್ಪು ಕಂಡಿಲ್ಲ ಅಂತ ಎಫ್ ಐ ಆರ್ ಮಾಡಿಲ್ಲ ಅಂತೀರಾ. ಶಾಸಕರ ವಿರುದ್ದ ಯಾವುದೇ ವಿಚಾರಣೆ ಮಾಡದೇ ಎಫ್ ಐಆರ್ ಮಾಡಿದ್ದೀರಾ. ಪೊಲಿಸರು ತಮ್ಮ ಕೆಲಸದಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿದೆ. ಶಾಸಕರ ಮೇಲೆ ಎಫ್ ಐ ಆರ್ ಹಾಕಿರುವ ಪೊಲಿಸ್ ಅಧಿಕಾರಿಯನ್ನು…