Author: kannadanewsnow09

ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ದಿನೇ ದಿನೇ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದುರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ ನನ್ನ ಮೈಸೂರು ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಪೊಲೀಸರು ವಶಕ್ಕೆ ಪಡೆದಿರೋ ವ್ಯಕ್ತಿ ರೇಣುಕಾಸ್ವಾಮಿ ಕೊಲೆಯಾದ ಶೆಡ್​ಗೆ ಪವಿತ್ರಾ ಜೊತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗ್ತಿದ್ದು, ಇದೇ ಕಾರಣಕ್ಕೆ ದೇವರಾಜ್ ನನ್ನ ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ವಶಕ್ಕೆ ಪಡೆದಿರುವಂತ ದೇವರಾಜ್ ಗೌಡ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತ್ರ, ಅಗತ್ಯ ಬಿದ್ರೆ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದೇವರಾಜ್ ಗೌಡ ಬಂಧನ ಹಿನ್ನೆಲೆಯಲ್ಲಿ ಪವಿತ್ರಗೌಡಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಳು ಹೊರ ಬರುವ ಸಾಧ್ಯತೆ ಇದೆ. ಪ್ರಕರಣಕ್ಕೆ…

Read More

ಚಿತ್ರದುರ್ಗ: ರೇಣುಕಾಸ್ವಾಮಿ ಮರ್ಡರ್ ಗೂ ಮುನ್ನ, ಬೆಂಗಳೂರಿಗೆ ಆತನನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಇಂದು ರೇಣುಕಾಸ್ವಾಮಿ ಕಿಡ್ನ್ಯಾಪ್ ಗೆ ಬಳಸಿದ್ದಂತ ಕಾರೊಂದನ್ನು ಸೀಜ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಚಿತ್ರದುರ್ಗ ಪೊಲೀಸರು ಹಾಗೂ ಕಾಮಾಕ್ಷಿಠಾಣೆಯ ಪೊಲೀಸರು ಜಂಟಿಯಾಗಿ ತನಿಖೆಗೆ ಇಳಿದಿದ್ದಾರೆ. ಚಿತ್ರದುರ್ಗದ ಐನಳ್ಳಿ ಬಳಿಯ ಕುರುಬರಹಟ್ಟಿಯಲ್ಲಿ ಆರೋಪಿ ರವಿಶಂಕರ್ ಮನೆಯಲ್ಲಿ ನಿಲ್ಲಿಸಿದ್ದಂತ ಇಟಿಯೋಸ್ ಕಾರನ್ನು ಪರಶಿಲೀನೆ ನಡೆಸಿದ್ದರು. ಇದೇ ಕಾರಲ್ಲಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿ ಕರೆದೊಯ್ಯಲಾಗಿತ್ತಂತೆ. ಈ ಹಿನ್ನಲೆಯಲ್ಲಿ ರೇಣುಕಾಸ್ವಾಮಿ ಹತ್ಯೆಗೂ ಮುನ್ನಾ ಕಿಡ್ನ್ಯಾಪ್ ಮಾಡಲು ಬಳಸಿದ್ದಂತ ಕಾರಿನಲ್ಲಿ ಯಾವುದಾದರೂ ಸುಳಿವು ಸಿಗಲಿದ್ಯಾ ಅಂತ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಮುಖ್ಯ ಸಾಕ್ಷಿಯಾಗಿರುವಂತ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. https://kannadanewsnow.com/kannada/renukaswamy-murder-case-police-conduct-searches-at-pavithra-gowdas-residence/ https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಹಲವು ಮಹತ್ವದ ದಾಖಲೆಗಳು ಪೊಲೀಸರಿಗೆ ಸಿಕ್ಕಿದ್ದಾವೆ ಎನ್ನಲಾಗುತ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಬಂಧನಕ್ಕೆ ಒಳಗಾಗಿರುವಂತ ಎ.1 ಆರೋಪಿ ಪವಿತ್ರಾ ಗೌಡ ಹಾಗೂ ಎ.3 ಆರೋಪಿಯಾಗಿರುವಂತ ಪವನ್ ಜೊತೆಗೂಡಿ ಪೊಲೀಸರು ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಕಳೆದ ಎರಡು ಗಂಟೆಯಿಂದಲೂ ಬೆಂಗಳೂರಿನ ಪವಿತ್ರಾ ಗೌಡ ಮನೆಯಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಮೊದಲ, ಎರಡನೇ ಮಹಡಿಯಲ್ಲಿ ಸ್ಥಳ ಮಹಜರು ಪೊಲೀಸರು ನಡೆಸುತ್ತಿದ್ದಾರೆ. ಪವಿತ್ರಾ ಗೌಡ ಅವರ ನೆಲ ಮಹಡಿಯಲ್ಲಿ ಕೆಲಸಗಾರನಾಗಿ ಪವನ್ ವಾಸವಾಗಿದ್ದನಂತೆ. ಪವಿತ್ರಾ ಗೌಡ ಅವರ ನಾಯಿಗಳನ್ನು ನೋಡಿಕೊಳ್ಳೋ ಕೆಲಸ ಮಾಡುತ್ತಿದ್ದನಂತೆ. ಪವಿತ್ರಾ ಗೌಡ ನಿವಾಸಕ್ಕೆ ಆಗಾಗಲ ನಟ ದರ್ಶನ್ ಬಂದು ಹೋಗುತ್ತಿದ್ದನಂತೆ. ಇದೀಗ ಎ.1 ಪವಿತ್ರಾ ಗೌಡ, ಎ3 ಆರೋಪಿ ಪವನ್ ಸಮ್ಮುಖದಲ್ಲಿ ಸ್ಥಳ ಮಹಜರನ್ನು ಪೊಲೀಸರು ನಡೆಸುತ್ತಿದ್ದಾರೆ. https://kannadanewsnow.com/kannada/good-news-for-the-people-of-kalyana-karnataka-state-government-to-open-1419-kannada-english-medium-schools/ https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ 1ನೇ ತರಗತಿಯಿಂದಲೇ ಕನ್ನಡ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಶಿಕ್ಷಣ ನೀಡುವ ಸಲುವಾಗಿ 1,419 ಶಾಲೆಗಳನ್ನು ಆರಂಭಕ್ಕೆ ರಾಜ್ಯ ಸರ್ಕಾರ ಆದೇಶಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಲ್ಯಾಣ ಕರ್ನಾಟಕದ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು ಪ್ರಾಥಮಿಕ ಹಂತದಲ್ಲಿಯೇ/ಆರಂಭಿಕ ಹಂತದಿಂದಲೇ ʼಭದ್ರ ಬುನಾದಿʼಯನ್ನು ಹಾಕುವ ನಿಟ್ಟಿನಲ್ಲಿ 2024-25ನೇ ಸಾಲಿನಿಂದ ಅರ್ಹ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ) ತರಗತಿಗಳನ್ನು ರಾಜ್ಯದ 1419 ಸರ್ಕಾರಿ ಶಾಲೆಗಳಲ್ಲಿ  ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ. ಇದಕ್ಕಾಗಿ, ಡಾ. ಅಜಯ ಸಿಂಗ, ಅಧ್ಯಕ್ಷರು, ಕಲ್ಯಾಣ ಕರ್ನಾಟಕ ಪ್ರಾಧೇಶಿಕ ಅಭಿವೃದ್ಧಿ ಮಂಡಳಿ ಇವರ ನೇತೃತ್ವದಲ್ಲಿ ಮಂಡಳಿಯು ಉತ್ತಮ ಹೆಜ್ಜೆಯನ್ನಿಟ್ಟು ಸರ್ಕಾರದೊಂದಿಗೆ ʼಅಕ್ಷರ ಆವಿಷ್ಕಾರʼ ಯೋಜನೆಯ ಮುಖಾಂತರ ಕೈ ಜೋಡಿಸಿದೆ. ತನ್ಮೂಲಕ ಮಕ್ಕಳಿಗೆ ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ) ಕಲಿಕಾ ಸೌಲಭ್ಯವನ್ನು ಕಲ್ಪಿಸಿಕೊಡುವ…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಆರಂಭಗೊಂಡಿದೆ. ರೇಣುಕಾಸ್ವಾಮಿ ಹತ್ಯೆ ದಿನ ಧರಿಸಿದ್ದಂತ ಬಟ್ಟೆ, ಶೂಗಳನ್ನು ಪೊಲೀಸರು ಸ್ಥಳ ಮಹಜರು ವೇಳೆಯಲ್ಲಿ ಸೀಜ್ ಮಾಡಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಶೆಡ್ ಒಂದರಲ್ಲಿ ಕೂಡಿ ಹಾಕಿ, ಎಲೆಕ್ಟ್ರಿಕ್ ಶಾಕ್ ನೀಡಿ, ಮರ್ಮಾಂಗಕ್ಕೆ ಒದ್ದು ಚಿತ್ರಹಿಂಸೆ ನೀಡಿ ಹತ್ಯೆಗೈದಿತ್ತು. ಆ ಬಳಿಕ ಮೋರಿಗೆ ಶವವನ್ನು ಎಸೆಯಲಾಗಿತ್ತು. ಅಪರಿಚಿತ ಶವದ ಬಗ್ಗೆ ತನಿಖೆಗೆ ಇಳಿದಿದ್ದಂತ ಪೊಲೀಸರಿಗೆ ನಟ ದರ್ಶನ್ ಅಂಡ್ ಗ್ಯಾಂಗ್ ಕೃತ್ಯ ಬೆಳಕಿಗೆ ಬಂದಿತ್ತು. ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಅನೇಕರನ್ನು ಬಂಧಿಸಿದ್ದರು. ಬಳಿಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಈಗ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಕೋರ್ಟ್ ನಿಂದ ತಮ್ಮ ವಶಕ್ಕೆ ಪಡೆದಿರುವಂತ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಬೆನ್ನಲ್ಲೇ…

Read More

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ತಟಸ್ಥಗೊಳಿಸಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್ಗಳು ಹೇಳಿದ್ದಾರೆ. ಒಂಬತ್ತು ಜನರನ್ನು ಬಲಿ ತೆಗೆದುಕೊಂಡ ಮತ್ತು 40 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ ಭಯಾನಕ ದಾಳಿಗೆ ಕಾರಣವಾದ ಮಾಸ್ಟರ್ ಮೈಂಡ್ ಅನ್ನು ನಿರ್ಮೂಲನೆ ಮಾಡುವ ಬಗ್ಗೆ ಇಬ್ಬರು ವ್ಯಕ್ತಿಗಳು ಸ್ಫೋಟಕ ಹೇಳಿಕೆಗಳನ್ನು ನೀಡುತ್ತಿರುವುದನ್ನು ಆನ್ ಲೈನ್ ನಲ್ಲಿ ಹರಿದಾಡುತ್ತಿರುವ ವೀಡಿಯೊ ತೋರಿಸುತ್ತದೆ. https://twitter.com/MeghUpdates/status/1802057357083742269 ಸ್ಫೋಟಕ ಹೇಳಿಕೆಗಳನ್ನು ತೋರಿಸುವ ವೀಡಿಯೊ 16 ಸೆಕೆಂಡುಗಳ ಈ ಕ್ಲಿಪ್ನಲ್ಲಿ ಬಿಳಿ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಮೈಕ್ರೊಫೋನ್ ಹಿಡಿದು ತನ್ನ ಯೂಟ್ಯೂಬ್ ಚಾನೆಲ್ಗಾಗಿ ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದಾನೆ. ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಚರ್ಚಿಸುತ್ತಾರೆ ಮತ್ತು ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಮಾಸ್ಟರ್ ಮೈಂಡ್ ಅನ್ನು ತಟಸ್ಥಗೊಳಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸುತ್ತಾರೆ. ಪಾಕಿಸ್ತಾನದಲ್ಲಿ ಹೆಚ್ಚುತ್ತಿದೆ ಉದ್ದೇಶಿತ ಹತ್ಯೆಗಳು…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಬಂಧಿಸಲಾಗಿತ್ತು. 13 ಆರೋಪಿಗಳಿಗೆ ನಿನ್ನೆಯಷ್ಟೇ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು ವಿಶ್ವ ತಂದೆಯ ದಿನದಂದೇ, ಪವಿತ್ರಾ ಗೌಡ ಪುತ್ರಿ ಖುಷಿ ಭಾವನಾತ್ಮಕ ಪೋಷ್ಟ್ ಹಂಚಿಕೊಂಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಪವಿತ್ರಾ ಗೌಡ ಪುತ್ರಿ ಖುಷಿ ಸ್ಟೇಟಸ್ ಒಂದನ್ನು ವಿಶ್ವ ತಂದೆಯಂದಿರ ದಿನದ ಸಲುವಾಗಿ ಹಾಕಿದ್ದಾರೆ. ಅದರಲ್ಲಿ ನನ್ನ ಬಗುಕಿನಲ್ಲಿ ಎಲ್ಲವೂ ನೀನೇ ಎಂಬುದಾಗಿ ಹೇಳಿದ್ದಾರೆ. ಇನ್ನೂ ತಾಯಿ ಪವಿತ್ರಾ ಗೌಡಗೂ ಟ್ಯಾಗ್ ಮಾಡಿರುವಂತ ಪುತ್ರಿ ಖುಷಿ, ತನಗೆ ತಾಯಿ ಮುತ್ತಿಡುವಂತ ಪೋಟೋವನ್ನು ಹಂಚಿಕೊಂಡು, ಈ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟ ದರ್ಶನ್ ಪುತ್ರ ಕೂಡ ಪೋಸ್ಟ್ ಹಾಕಿ, ಪ್ರಕರಣದ ಬಗ್ಗೆ ಗಮನ ಸೆಳೆದಿದ್ದರು. ಈ ಬೆನ್ನಲ್ಲೇ ಇಂದು ಪವಿತ್ರಾ ಗೌಡ ಪುತ್ರಿ ಪೋಸ್ಟ್ ಹಾಕಿದ್ದಾರೆ. https://kannadanewsnow.com/kannada/breaking-rowdy-sheeter-ashok-brutally-killed-in-bhima-beach/ https://kannadanewsnow.com/kannada/terror-attack-in-jammu-and-kashmir-union-minister-amit-shah-chairs-high-level-meeting/

Read More

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ಆಯೋಜಿಸಲಿದೆ. ಪಿಎಂ ಕಿಸಾನ್ ನಿಧಿಯ 17 ನೇ ಕಂತನ್ನು ಬಿಡುಗಡೆ ಮಾಡಲು ಅಧಿಕಾರ ನೀಡುವ ಮೂಲಕ ಪಿಎಂ ಮೋದಿ ಜೂನ್ 10 ರಂದು ತಮ್ಮ ಮೂರನೇ ಅವಧಿಯನ್ನು ಪ್ರಾರಂಭಿಸಿದರು, ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳನ್ನು 2024-25ನೇ ಸಾಲಿನಲ್ಲಿ ವರ್ಗಾವಣೆಗಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಆರೋಗ್ಯ ಇಲಾಖೆಯ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಅದರಲ್ಲಿ 2024-25ನೇ ಸಾಲಿನ ವರ್ಗಾವಣೆಯನ್ನು ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011 ಹಾಗೂ ಕಾಲಕಾಲಕ್ಕೆ ಹೊರಡಿಸಲಾದ ತಿದ್ದುವಡಿ ಕಾಯ್ದೆಯಡಿ ಹಾಗೂ ಈ ಕಾಯ್ದೆಯಡಿ ರಚಿಸಲಾಗಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಡಿಸಿ ದಿನಾಂಕ:31.07.2024ರ ಒಳಗಾಗಿ ಪೂರ್ಣಗೊಳಿಸಲು ಸರ್ಕಾರ ಸಹಮತಿ ನೀಡಲಾಗಿದೆ ಎಂದಿದೆ. 2024-25ನೇ ಸಾಲಿನ ಸಾರ್ವಜನಿಕ ವರ್ಗಾವಣೆ ಪ್ರಕ್ರಿಯೆಯನ್ನು ಸಮಾಲೋಚನೆ ಮೂಲಕ ವರ್ಗಾವಣೆ ಕಾಯ್ದೆ ಮತ್ತು ನಿಯಮ-2011 ಹಾಗೂ ತಿದ್ದುಪಡಿ ನಿಯಮಗಳನ್ವಯ ಕೈಗೊಳ್ಳಲು ಅಗತ್ಯ ಮಾಹಿತಿ ಕ್ರೋಡೀಕರಿಸುವ ಹಾಗೂ ಪರಿಶೀಲನಾ ಕಾರ್ಯ ಕೈಗೊಳ್ಳಲು ವರ್ಗಾವಣಾ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಸಿದೆ. ವರ್ಗಾವಣೆ ಅರ್ಜಿಗಳನ್ನು ಸಲ್ಲಿಸುವ ವಿಧಾನ 1.…

Read More

ಬೆಂಗಳೂರು : “ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಅವರು “ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು. “ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ ಎಂದರು. “ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ…

Read More