Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಮನೆ ಬದಲಿಸಿದವರಿಗೂ ಗೃಹ ಜ್ಯೋತಿ ಸೌಲಭ್ಯದ ಅವಕಾಶವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಮನೆ ಬದಲಿಸಿದರೂ ಡಿ-ಲಿಂಕ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಈ ಆದೇಶ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಡಿ-ಲಿಂಕ್ ಮಾಡುವುದು ಹೇಗೆ? ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory…
ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆಯಿಲ್ಲದೇ ಸುಳ್ಳು ಆರೋಪ ಮಾಡಿ, ಪತ್ರಕರ್ತರ ಬಗ್ಗೆ ಬರೆದವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಉಪ ವಿಭಾಗೀಯ ಅಧಿಕಾರಿಗಳಿಗೆ ಮನವಿ ಮಾಡಲಾಯಿತು. ಈ ವೇಳೆ ಮಾತನಾಡಿದಂತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ಶಾಖೆಯಿಂದ ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ ಅವರು, ಇತ್ತೀಚಿನ ದಿನಗಳಲ್ಲಿ ಸಾಗರ ತಾಲ್ಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದರಂತೆ ದಾಖಲೆಯಿಲ್ಲದೇ ಬರೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂಬುದಾಗಿ ಒತ್ತಾಯಿಸಿದರು. ದಾಖಲೆಯಿಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಪತ್ರಕರ್ತರ ಬಗ್ಗೆ ಬರೆಯಲಾಗುತ್ತಿದೆ. ನಗರಸಭೆ ಆಯುಕ್ತರು ಐಪೋನ್ ಗಿಫ್ಟ್ ನೀಡಿದ್ದಾರೆ ಪತ್ರಕರ್ತರೊಬ್ಬರಿಗೆ ಅಂತ ಆರೋಪಿಸಲಾಗಿದೆ. ಆಯುಕ್ತರು ಕೊಟ್ಟಿದ್ದು ಯಾರಿಗೆ.? ಪಡೆದ ಪತ್ರಕರ್ತ ಯಾರು ಎನ್ನುವುದನ್ನು ಕೊಟ್ಟವರು, ಬರೆದವರನ್ನು ಕರೆದು ಎಸಿಯವರು ವಿಚಾರಿಸಿ, ಸತ್ಯಾಸತ್ಯತೆಯನ್ನು ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು. ಸಾಗರದ ಅಧಿಕಾರಿಗಳ ಹತ್ತಿರ…
ಮಂಡ್ಯ : “ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವಥ್ ನಾರಾಯಣ್, ಯೋಗಿಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಅವರು ಮಾತನಾಡಿದರು. “ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ”ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು. “ಮೋದಿ ಅವರ ಕೈ ಹಿಡಿದು…
ವಯನಾಡ್: ವಿನಾಶಕಾರಿ ಮುಂಡಕ್ಕೈ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 406 ಕ್ಕೆ ಏರಿದೆ, ಪತ್ತೆಯಾದ 180 ಶವಗಳು ಮಣ್ಣು ಮತ್ತು ಚಾಲಿಯಾರ್ ನದಿಯಲ್ಲಿ ಪತ್ತೆಯಾಗಿವೆ. ಆದಾಗ್ಯೂ, ಅಧಿಕೃತ ಸಾವಿನ ಸಂಖ್ಯೆ 222 ರಷ್ಟಿದೆ. ಅಲ್ಲದೆ, 180 ಜನರು ಇನ್ನೂ ಕಾಣೆಯಾಗಿದ್ದಾರೆ. ವಯನಾಡ್ನಲ್ಲಿ ರಕ್ಷಣಾ ಪ್ರಯತ್ನಗಳು ಮತ್ತು ಪರಿಹಾರ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ. ಅಲ್ಲಿ ಕೇರಳ ಸರ್ಕಾರವು ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಕಾರ್ಯಕ್ರಮವನ್ನು ರೂಪಿಸಲು ನಿರ್ಧರಿಸಿದೆ. ಈ ಯೋಜನೆಯಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು, ಹೊಸ ಮನೆಗಳನ್ನು ನಿರ್ಮಿಸುವುದು ಮತ್ತು ಪೀಡಿತ ಸಮುದಾಯಗಳನ್ನು ಬೆಂಬಲಿಸಲು ಅಗತ್ಯ ಮೂಲಸೌಕರ್ಯಗಳನ್ನು ಸ್ಥಾಪಿಸುವುದು ಸೇರಿದೆ. ದುರಂತದ ಎಂಟು ದಿನಗಳ ನಂತರ ಮಂಗಳವಾರ (ಆಗಸ್ಟ್ 6) ವಯನಾಡಿನ ಮೆಪ್ಪಾಡಿ ಪಂಚಾಯತ್ನಲ್ಲಿ ರಕ್ಷಣಾ ಪ್ರಯತ್ನಗಳು ಮುಂದುವರೆದಿವೆ. ಮಿಲಿಟರಿ ಸಿಬ್ಬಂದಿ, ವಿಪತ್ತು ಪ್ರತಿಕ್ರಿಯೆ ಪಡೆಗಳು, ಪೊಲೀಸ್, ಶ್ವಾನ ಘಟಕಗಳು, ಅರಣ್ಯ ಅಧಿಕಾರಿಗಳು ಮತ್ತು ನೌಕಾ ತಜ್ಞರ ಸಂಯೋಜಿತ ತಂಡವು ಶೋಧವನ್ನು ನಡೆಸುತ್ತಿದೆ. ಉದ್ದೇಶಿತ ಕಾರ್ಯಾಚರಣೆಯು ಸೂಚಿಪ್ಪರ ಮತ್ತು ಪೋತುಕಲ್ಲು ನಡುವಿನ ದೂರದ ಪ್ರದೇಶವನ್ನು ಕೇಂದ್ರೀಕರಿಸುತ್ತದೆ. ಈ ಕಾರ್ಯಾಚರಣೆಗಳಿಗೆ…
ಢಾಕಾ: ಬಾಂಗ್ಲಾದೇಶದ ಅವಾಮಿ ಲೀಗ್ ಪಕ್ಷದ ನಾಯಕರೊಬ್ಬರ ಒಡೆತನದ ಹೋಟೆಲ್ ಗೆ ಪ್ರತಿಭಟನಾಕಾರರು ಬೆಂಕಿ ಇಟ್ಟ ಪರಿಣಾಮ, ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಗುಂಪೊಂದು ಜೀವಂತವಾಗಿ ಸುಟ್ಟುಹಾಕಿದೆ ಎಂದು ಸ್ಥಳೀಯ ಪತ್ರಕರ್ತರು ಮತ್ತು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಸೋಮವಾರ ತಡರಾತ್ರಿ ಈ ದುರಂತ ಘಟನೆ ನಡೆದಿದೆ. ಜೋಶೋರ್ ಜಿಲ್ಲೆಯ ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಶಾಹಿನ್ ಚಕ್ಲಾದಾರ್ ಒಡೆತನದ ಜಬೀರ್ ಇಂಟರ್ನ್ಯಾಷನಲ್ ಹೋಟೆಲ್ಗೆ ಗುಂಪು ಬೆಂಕಿ ಹಚ್ಚಿದಾಗ ಸಂತ್ರಸ್ತರು, ಮುಖ್ಯವಾಗಿ ಅತಿಥಿಗಳು ಸಿಕ್ಕಿಬಿದ್ದು ಜೀವಂತವಾಗಿ ಸುಟ್ಟುಹೋದರು. ಘಟನೆಯಲ್ಲಿ ಇಬ್ಬರು ಭಾರತೀಯ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಂಡೋನೇಷ್ಯಾ ಪ್ರಜೆಯೂ ಸೇರಿದ್ದಾರೆ ಎಂದು ಸ್ಥಳೀಯ ಪತ್ರಕರ್ತರೊಬ್ಬರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. https://twitter.com/visegrad24/status/1820754316858122662 ಜೋಶೋರ್ ಜನರಲ್ ಆಸ್ಪತ್ರೆಯ ವೈದ್ಯರು 24 ಶವಗಳನ್ನು ಎಣಿಸಿದ್ದಾರೆ ಎಂದು ದೃಢಪಡಿಸಿದರೆ, ಬದುಕುಳಿದ ಹೋಟೆಲ್ ಸಿಬ್ಬಂದಿ ಅವಶೇಷಗಳಲ್ಲಿ…
ಪ್ಯಾರಿಸ್ : ಒಲಿಂಪಿಕ್ಸ್ನಲ್ಲಿ ಭಾರತಕ್ಕಾಗಿ ಪದಕ ಗೆದ್ದ ಸ್ಟಾರ್ ಮಹಿಳಾ ಶೂಟರ್ಗಳಾದ ಮನು ಭಾಕರ್ ಮತ್ತು ಸ್ವಪ್ನಿಲ್ ಕುಸಾಲೆ ಸೇರಿ ಅನೇಕ ಭಾರತೀಯ ಕ್ರೀಡಾಪಟುಗಳು ಇಂಡಿಯಾ ಹೌಸ್ ನಲ್ಲಿ ಭಾರತೀಯತೆಯನ್ನು ಸಂಭ್ರಮಿಸಿದರು. ಈ ಎಲ್ಲರನ್ನೂ ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ಮತ್ತು ಐಒಸಿ ಸದಸ್ಯೆಯೂ ಆದ ನೀತಾ ಅಂಬಾನಿ ಅವರು ಸ್ವಾಗತಿಸಿ, ಪ್ರೋತ್ಸಾಹಿಸಿದರು. ಇಂಡಿಯಾ ಹೌಸ್ ಗೆ ಬಂದ ಆಟಗಾರರಲ್ಲಿ ಬ್ಯಾಡ್ಮಿಂಟನ್ ಆಟಗಾರರಾದ ಲಕ್ಷ್ಯ ಸೇನ್, ವಿಶ್ವ ಚಾಂಪಿಯನ್ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್, ಸ್ಕೀಟ್ ಶೂಟರ್ ಮಹೇಶ್ವರಿ ಚೌಹಾಣ್, ಅನಂತ್ಜಿತ್ ಸಿಂಗ್ ನರುಕಾ, ಶೂಟರ್ಗಳಾದ ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್, ಅಂಜುಮ್ ಮೌದ್ಗಿಲ್, ಸಿಫ್ಟ್ ಕೌರ್ ಸಮ್ರಾ, ಇಶಾ ಸಿಂಗ್, ರೈಜಾ ಭಾನ್ ಧಿಲ್ಲಾನ್, ಅನಿಶ್ವೆ ಭಾನ್ ಧಿಲ್ಲಾನ್, ಬಾಕ್ಸರ್ ನಿಶಾಂತ್ ದೇವ್, ಅಥ್ಲೆಟಿಕ್ಸ್ ತಂಡದ ಅಕ್ಷದೀಪ್ ಸಿಂಗ್, ಪರಮ್ಜಿತ್ ಸಿಂಗ್ ಬಿಶ್ತ್, ವಿಕಾಸ್ ಸಿಂಗ್, ತಜಿಂದರ್ ಪಾಲ್ ಸಿಂಗ್ ತೂರ್, ಅಂಕಿತಾ ಧ್ಯಾನಿ, ಜೆಸ್ವಿನ್ ಆಲ್ಡ್ರಿನ್ ಮತ್ತು ಪಾರುಲ್ ಚೌಧರಿ ಮತ್ತಿತರರು…
ಬೆಂಗಳೂರು : ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಡಿ-ಲಿಂಕ್ ಮಾಡುವುದು ಹೇಗೆ? ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ. ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್ ನಂಬರ್ ಜತೆ ಲಿಂಕ್ ಆಗಿರುವ ಆರ್.ಆರ್. ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್…
BREAKING: ‘ರಾಷ್ಟ್ರೀಯ ಮಹಿಳಾ ಆಯೋಗ’ದ ಅಧ್ಯಕ್ಷೆ ಸ್ಥಾನಕ್ಕೆ ‘ರೇಖಾ ಶರ್ಮಾ’ ರಾಜೀನಾಮೆ | Rekha Sharma Steps Down
ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (National Commission For Women – NCW) ಮುಖ್ಯಸ್ಥೆ ಸ್ಥಾನಕ್ಕೆ ರೇಖಾ ಶರ್ಮಾ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ರೇಖಾ ಶರ್ಮಾ ( Rekha Sharma ) ಅವರು ಆಗಸ್ಟ್ 7, 2018 ರಂದು ಎನ್ಸಿಡಬ್ಲ್ಯೂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು ಮತ್ತು ಆಗಸ್ಟ್ 2021 ರಲ್ಲಿ ಮೂರು ವರ್ಷಗಳ ವಿಸ್ತರಣೆಯನ್ನು ನೀಡಲಾಯಿತು. ರೇಖಾ ಶರ್ಮಾ ಅವರು ಆಗಸ್ಟ್, 2015 ರಿಂದ ಆಯೋಗದ ಸದಸ್ಯರಾಗಿ ಸಂಬಂಧ ಹೊಂದಿದ್ದಾರೆ. ಅದರ ನಿಯಮಿತ ಮುಖ್ಯಸ್ಥರಾಗುವ ಮೊದಲು ಸೆಪ್ಟೆಂಬರ್ 29, 2017 ರಿಂದ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. “ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯೂ) ಅಧ್ಯಕ್ಷೆಯಾಗಿ ನನ್ನ ಒಂಬತ್ತು ವರ್ಷಗಳ ಅಧಿಕಾರಾವಧಿಯ ಕೊನೆಯ ದಿನ ಇಂದು. ಈ ಒಂಬತ್ತು ವರ್ಷಗಳು ನನಗೆ ರೋಲರ್ ಕೋಸ್ಟರ್ ಸವಾರಿಯಂತೆ. ವಿನಮ್ರ ಹಿನ್ನೆಲೆಯಿಂದ ಬಂದ ನಾನು ಎನ್ಸಿಡಬ್ಲ್ಯೂನಲ್ಲಿ ಮೂರು ಅವಧಿಗಳನ್ನು ಪೂರ್ಣಗೊಳಿಸುವುದು ನಾನು ಬಹಳ ದೂರ ಸಾಗಿದ್ದೇನೆ” ಎಂದು ರೇಖಾ ಶರ್ಮಾ ಹೇಳಿದರು. “ನಾನು ಈ ಪಾತ್ರದಿಂದ…
ನವದೆಹಲಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆಯನ್ನು ಮಾಡಿದೆ. ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ಬೀಜಗಳು, ಮೇವು, ಉಪಕರಣಗಳು ಮತ್ತು ವೃತ್ತಿಪರ ತರಬೇತಿಯನ್ನು ನೀಡಲಾಗುವುದು, ಇದರಿಂದ ಅವರ ಜೀವನವು ಮತ್ತೆ ಹಳಿಗೆ ಮರಳುತ್ತದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಗಳು ಆಗದಿರುವಂತೆ ರಿಲಯನ್ಸ್ ಫೌಂಡೇಷನ್ ನಿಂದ ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡಂತೆ ಶಿಕ್ಷಣಕ್ಕೆ ಬೇಕಾದ ಬೆಂಬಲವನ್ನು ನೀಡುತ್ತದೆ. ರಕ್ಷಣಾ ಕಾರ್ಯಕರ್ತರು ಮತ್ತು ವಿಪತ್ತು ನಿರ್ವಹಣಾ ತಂಡಗಳ ಸುಗಮ ಕಾರ್ಯನಿರ್ವಹಣೆಗಾಗಿ ರಿಲಯನ್ಸ್ ಜಿಯೋ ವಿಶೇಷ ಟವರ್ಗಳನ್ನು ಸ್ಥಾಪಿಸಿದೆ. ಇದರಿಂದ ಸಂವಹನವನ್ನು ಸುಧಾರಿಸಬಹುದು ಮತ್ತು…
ಶಿವಮೊಗ್ಗ: ಕೆಪಿಟಿಸಿಎಲ್ ಇಂಜಿನಿಯರ್ ಶಾಂತ ಕುಮಾರಸ್ವಾಮಿ ಯಾರು ಎಂಬುದೇ ಗೊತ್ತಿಲ್ಲ. ಆತ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲೂ ಇಲ್ಲ. ನಾನು ಹಣಕ್ಕೂ ಬೇಡಿಕೆ ಇಟ್ಟಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳ ಮುಂದೆ ನಾನು ಹಣ ಪೀಕಲು ಪ್ರಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಅಂತಹ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ದಾಖಲಿಸುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ನಲ್ಲಿ ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು? ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಸುದ್ದಿಯ ಬಳಿಕ ಪ್ರತಿಕ್ರಿಯಿಸಿರುವಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ನಾನು ಶಾಂತ ಕುಮಾರಸ್ವಾಮಿಯನ್ನು ನೋಡಿಯೇ ಇಲ್ಲ. ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲೂ ಅವರು ಕಾರ್ಯನಿರ್ವಹಿಸುತ್ತಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಆನಂದಪುರದಲ್ಲಿ ಇಂಜಿನಿಯರ್ ಆಗಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಆ ರೀತಿಯ ಹೆಸರಿನ ಯಾರು ಅಲ್ಲಿ ಇಲ್ಲ. ತಾಳಗುಪ್ಪ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ಇಂಜಿನಿಯರ್ ಆಗಿದ್ದರು ಎಂಬುದಾಗಿ ಮಾಹಿತಿಯಿದೆ. ತಾಳಗುಪ್ಪ ಸೊರಬ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ನಾನು…