Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 1975ರಲ್ಲಿ ಮತಗಳ್ಳತನ ಮಾಡಿ ಸಿಕ್ಕಿಬಿದ್ದ ಇಂದಿರಾಗಾಂಧಿಯವರು ತನ್ನ ಅಧಿಕಾರ ಉಳಿಸಿಕೊಳ್ಳಲು ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದರು. ಯಾವ ಕೋರ್ಟುಗಳೂ ಪ್ರಶ್ನೆ ಮಾಡದಂತೆ ನೋಡಿಕೊಂಡಿದ್ದರು. ನ್ಯಾಯಾಲಯಗಳೇ ತಟಸ್ಥವಾಗಿ ಇರುವಂತೆ ಮಾಡಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಂವಿಧಾನ ಸಮರ್ಪಣ ದಿವಸದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂಥ ಅನಾಹುತಗಳನ್ನು ಮಾಡಿದ ಕಾಂಗ್ರೆಸ್ ಪಕ್ಷವು ಮತಗಳ್ಳತನದ ಮಾತನಾಡುತ್ತಿದೆ. ನಾವು ಸಂವಿಧಾನದ ವಿರೋಧಿಗಳು ಎನ್ನುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಮೊದಲು ಸಂವಿಧಾನದ ಕೊಲೆ ಮಾಡುತ್ತದೆ. ತನಿಖೆ ಮಾಡಿದಾಗ ಕಾಂಗ್ರೆಸ್ಸೇ ಬಂಧನಕ್ಕೆ ಒಳಗಾಗುತ್ತದೆ ಎಂದು ಅವರು ವಿಶ್ಲೇಷಿಸಿದರು. ಮತಗಳ್ಳತನದ ಮಾತನಾಡುತ್ತಾರೆ; ಕೋರ್ಟಿಗೆ ಹೋಗುವುದಿಲ್ಲ. ಯಾಕೆಂದರೆ ರಾಹುಲ್ ಗಾಂಧಿ ಬಂಧನಕ್ಕೆ ಒಳಗಾಗುತ್ತಾರೆ ಎಂಬುದೇ ಇದಕ್ಕೆ ಕಾರಣ ಎಂದು ತಿಳಿಸಿದರು. ಇಂಥ ಕಳ್ಳ ಕಾಂಗ್ರೆಸ್ ಕೈಯಲ್ಲಿ ದೇಶ ಬದುಕುತ್ತಿದೆಯಲ್ಲವೇ? ಬೇಕೇ ಇದು ಎಂದು ಕೇಳಿದರು. ಕಾಂಗ್ರೆಸ್ಸಿಗೆ ಯಾವುದೇ ನೈತಿಕತೆ ಉಳಿದಿಲ್ಲ; ಸಂವಿಧಾನ…
ಶಿವಮೊಗ್ಗ: ಶಿವಮೊಗ್ಗ ತಾಲೂಕು ಮೀನುಗಾರಿಕೆ ಇಲಾಖೆಯು 2025-26 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿಯಲ್ಲಿ ಮೀನು ಮಾರಾಟ ಮಾಡಲು ದ್ವಿಚಕ್ರ ವಾಹನ ಮತ್ತು ಶಾಖ ನಿರೋಧಕ ಪೆಟ್ಟಿಗೆ ಖರೀದಿ ಮಾಡಲು ಶಿವಮೊಗ್ಗ ತಾಲ್ಲೂಕಿನ ವಿರುಪಿನಕೊಪ್ಪ ಮತ್ತು ಸದಾಶಿಪುರ ಗ್ರಾಮಗಳಿಗೆ ಸೇರಿದ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿ.06 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಸರ್ಕಾರದ ಕಾರ್ಯಕ್ರಮವೊಂದನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಮಹತ್ವದ ಮಾಹಿತಿ ಎನ್ನುವಂತೆ ಸಂಚಾರ ಬದಲಾವಣೆ ಮಾಡಿರುವುದಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಹಾಗೂ ಬಳ್ಳಾರಿ ರಸ್ತೆ, ನಂ-01, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 28.11.2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆ ಸಚಿವರು. ಇತರೆ ಗಣ್ಯವ್ಯಕ್ತಿಗಳು ಸೇರಿದಂತೆ ಅಂದಾಜು 40,000 ಸಾರ್ವಜನಿಕರು ಹಾಗೂ 959 ವಾಹನಗಳು ಬರುವ ನಿರೀಕ್ಷೆ ಇರುತ್ತದೆ ಎಂದಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳವಾದ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಸಿ ವಿ ರಾಮನ್ ರಸ್ತೆ,…
ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು; ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. 2025 ನವೆಂಬರ್ 13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು; ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು…
ಕೊಪ್ಪಳ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೋ ಕೇಸ್ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಹೊಡ್ಡೆ ನೋವು ಕಾಣಿಸಿಕೊಂಡಿತ್ತು. ನೋವಿನಿಂದ ನರಳಾಡಿದಂತ ವಿದ್ಯಾರ್ಥಿನಿಯನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಅಪ್ರಾಪ್ತ 10ನೇ ತರಗತಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ ಆಸ್ಪತ್ರೆಗೆ ಭೇಟಿ ನೀಡಿ, ಬಾಲಕಿಯ ಆರೋಗ್ಯ ವಿಚಾರಿಸಿದರು. ಮತ್ತೊಂದೆಡೆ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಂತ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/before-ambedkars-constitution-the-unwritten-manusmriti-was-in-force-in-the-country-cm-siddaramaiah/ https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/
ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ. ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. ಮುಖ್ಯಮಂತ್ರಿಗಳ ಭಾಷಣದ ಪ್ರಮುಖ ಹೈಲೈಟ್ಸ್… We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ *ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ…
ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿತ್ತು. ಆದರೇ ಈ ಸಭೆಯನ್ನು ಬೆಳಗ್ಗೆ ಇದ್ದದ್ದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಈ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 27-11-2025ರ ಗುರುವಾರದ ನಾಳೆಯ ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದ್ದಂತ 27ನೇ ಸಚಿವ ಸಂಪುಟದ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಅದೇ ದಿನ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ. https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/ https://kannadanewsnow.com/kannada/shivamurthy-muruga-sharan-is-innocent-in-pocso-case-lawyer-kbk-swamy/
ಚಿತ್ರದುರ್ಗ: ಮೊದಲ ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಕೋರ್ಟ್ ನಿರ್ದೋಷಿ ಎಂಬುದಾಗಿ ತೀರ್ಪು ನೀಡಿದೆ. ಹೀಗಾಗಿ ಶಿವಮೂರ್ತಿ ಮುರುಘಾ ಶರಣರು ನಿರಾಳರಾಗಿದ್ದಾರೆ ಎಂಬುದಾಗಿ ಮುರುಘಾ ಶ್ರೀ ಪರ ವಕೀಲ ಕೆಬಿಕೆ ಸ್ವಾಮಿ ತಿಳಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುರುಘಾ ಶರಣರು, ಮತ್ತಿಬ್ಬರು ಆರೋಪಿಗಳಿಗೆ ಕೋರ್ಟ್ ಪೋಕ್ಸೋ ಕೇಸಲ್ಲಿ ಖುಲಾಸೆಗೊಳಿಸಿದೆ. ಮುಂದಿನ ದಿನಗಳಲ್ಲಿ ಮುರುಘಾ ಮಠಕ್ಕೆ ಒಳ್ಳೆಯದನ್ನು ತರಲಿ. ಮುರುಘಾ ಶ್ರೀಗಳು ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. ನಾಳೆ ಶ್ರೀಗಳಿಗೆ ಮತ್ತೊಂದು ತಪಾಸಣೆ ಇದೆ ಎಂದರು. ಮುರುಘಾ ಶರಣರಿಗೆ ನಿರ್ಬಂಧ ವಿಚಾರವಾಗಿ ಈಗ ಪ್ರತಿಕ್ರಿಯಿಸಲ್ಲ ಎಂದು ಹೇಳಿದರು. ಅಂದಹಾಗೇ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೋ ಕೇಸಲ್ಲಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/ https://kannadanewsnow.com/kannada/marriages-are-now-banned-in-this-famous-temple-in-the-state-what-is-the-reason/
ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್ನ ವಿಚಾರಣೆ ನಡೆದಿತ್ತು. ಏನಿದು ಪ್ರಕರಣ? ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ,…
ಶಿವಮೊಗ್ಗ: ನವೆಂಬರ್.30ರಂದು ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೇ ಕೊರಚ ಕೊರಮರಿಗೆ ಸೂಕ್ತ ಸ್ಥಾನ ಮಾನವನ್ನು ಬೈಲಾದಲ್ಲಿ ನೀಡಿಲ್ಲ ಎಂಬುದಾಗಿ ಆರೋಪಿಸಿ ಹೈಕೋರ್ಟ್ ನಿಂದ ತಡೆಯಾಜ್ಞೆ ತರಲಾಗಿದೆ. ಇದರ ಹಿಂದೆ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ಕೈವಾಡವಿದೆ ಎಂಬುದಾಗಿ ಆರೋಪ ಕೇಳಿ ಬಂದಿತ್ತು. ಈ ಎಲ್ಲಾ ವಿಚಾರಗಳಿಂದ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಹಿತರಕ್ಷಣಾ ಸಮಿತಿ ಸಿಡಿದೆದ್ದಿದೆ. ಇದನ್ನು ಖಂಡಿಸಿ ನಾಳೆ ಭಿಕ್ಷಾಟನೆ, ಪ್ರತಿಕೃತಿ ದಹನದಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿಯನ್ನು ಶ್ರೀ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸಂಚಾಲಕರಾದಂತ ಎಂ.ಡಿ ಆನಂದ್ ಹಂಚಿಕೊಂಡಿದ್ದು, ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಯ ಭ್ರಷ್ಟಾಚಾರ ಮತ್ತು ಪಟ್ಟ ಭದ್ರ ಹಿತಾಸಕ್ತಿ ಯ ವಿರುದ್ಧ ದಿನಾಂಕ 27-11-2025 ರಂದು ಬೆಳಿಗ್ಗೆ 10-30 ರಿಂದ 1-00 ಗಂಟೆಯವರೆಗೆ ಸಾಗರ ಹೊಟೆಲ್ ವೃತ್ತದಲ್ಲಿ ಭಿಕ್ಷಾಟನೆ ಮತ್ತು ಪ್ಲೇ ಕಾರ್ಡ್ ಹಾಗೂ ಪ್ರತಿಕೃತಿ ದಹನ ನಡೆಸಲಾಗುತ್ತದೆ ಎಂದಿದ್ದಾರೆ. ನಾಳೆ ಸಾಗರ ಹೋಟೆಲ್ ವೃತ್ತದಲ್ಲಿ…














