Author: kannadanewsnow09

ಬೆಂಗಳೂರು: ಫೆಬ್ರವರಿ.16, 2024ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ಶಿಕ್ಷಕರು ಮತದಾನದಲ್ಲಿ ಪಾಲ್ಗೊಳ್ಳೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಿನಾಂಕ:16.02.2024ರ ಶುಕ್ರವಾರದಂದು ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್‌ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತ ದಿನಾಂಕ : 16.02.2024ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದ್ದಾರೆ. ಈ ಉಪ ಚುನಾವಣೆಯ…

Read More

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲೂ ವೈರಲ್ ಆಗಿರುವಂತ ಏನಿಲ್ಲ, ಏನಿಲ್ಲ ಹಾಡು ಸದ್ದು ಮಾಡಿದೆ. ಇದನ್ನು ಸದನದಲ್ಲೇ ಹಾಡಿದಂತ ವಿಪಕ್ಷ ನಾಯಕ ಆರ್ ಅಶೋಕ್ ಅವರು, ಸೋಷಿಯಲ್ ಮೀಡಿಯದಲ್ಲಿ ಏನಿಲ್ಲ ಹಾಡು ಟ್ರೆಂಡ್ ಆಗಿದೆ. ಹಾಗೆ ಇಲ್ಲಿ ನೀರಿಲ್ಲ ನೀರಿಲ್ಲ ಎನ್ನುವಂತೆ ಆಗಿದೆ ಎಂಬುದಾಗಿ ರಾಜ್ಯ ಸರ್ಕಾರವನ್ನು ಕಾಲು ಎಳೆದರು. ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ನಾನು ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿಲ್ಲ. ಸರ್ಕಾರ ಎಲ್ಲೋ ಒಂದು ಕಡೆ ಕೆಟ್ಟೋಗಿರೋ ಬಸ್ ತರ ನಿಂತು ಹೋಗಿದೆ. ಇದು ಮುಂದೆ ಹೋಗುತ್ತೋ ಇಲ್ವೋ ಗೊತ್ತಿಲ್ಲ ಎಂದರು. ನೀವು ಸೋಷಿಯಲ್ ಮೀಡಿಯಾದಲ್ಲಿ ನೋಡಬೇಕು. ಏನಿಲ್ಲ ಏನಿಲ್ಲ ಅಂತ ಹಾಡೊಂದು ಟ್ರೆಂಡ್ ಆಗಿದೆ. ಇಲ್ಲಿ ನೀರಿಲ್ಲ. ನೀರಿಲ್ಲ. ಮೇವಿಲ್ಲ. ಅಕ್ಕಿಯಿಲ್ಲ. ಕೊನೆಗೆ ಏನು ಹಾಕಿದ್ದಾರೆ ಅಂದರೇ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ. ಈ ಸರ್ಕಾರ ಸತ್ತೋಗಿದೆ ಅಂತ ಹಾಡಿನಲ್ಲಿ ಹಾಕಿದ್ದಾರೆ. ಅದನ್ನು ನಾನು ಇಲ್ಲಿ ಹೇಳುತ್ತಿದ್ದೇನೆ ಎಂಬುದಾಗಿ ಹೇಳಿದರು. ರಾಜ್ಯದಲ್ಲಿ ಕುಡಿಯುವ ನೀರಿಗೆ ಆಹಾಹಾಕಾರ ಇದೆ. ಕಾನೂನು ಸುವ್ಯವಸ್ಥೆ…

Read More

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಮೂಲಕ ಮಹತ್ವದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆಯ ಅನುಮೋದನೆಯನ್ನು ನೀಡಲಿದ್ದಾರೆ. ಈ ಕುರಿತಂತೆ ಸಚಿವ ಸಂಪುಟ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 15-02-2024ರ ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ನಾಳೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಲಿದ್ದಾರೆ. ಈ ಸಂಪುಟ ಸಭೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಾಧ್ಯತೆ ಇದೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಬೆಂಗಳೂರು: ರಾಜ್ಯದ ಅಂಗಡಿ-ಮುಂಗಟ್ಟುಗಳಿಗೆ ಶೇ.60ರಷ್ಟು ನಾಮಫಲಕವನ್ನು ಕನ್ನಡದಲ್ಲೇ ಹಾಕುವಂತೆ ಕಡ್ಡಾಯಗೊಳಿಸಲಾಗಿದೆ. ಇದನ್ನು ಈಗ ಮಸೂದೆಯಾಗಿ ಜಾರಿಗೊಳಿಸೋದಕ್ಕಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಂಡಿಸಲಾಗಿದೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡುವುದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿತ್ತು. ಇದಕ್ಕೆ ರಾಜ್ಯಪಾಲರಿಗೆ ಅಂಕಿತ ಸೂಚಿಸೋದಕ್ಕೂ ಕಾಯ್ದೆಯನ್ನು ಕಳುಹಿಸಲಾಗಿತ್ತು. ಆದ್ರೇ ರಾಜ್ಯಪಾಲರು ಇದನ್ನು ವಾಪಾಸ್ ಕಳುಹಿಸಿದ್ದರು. ಇದೀಗ ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವರ ಪರವಾಗಿ ಗೃಹ ಸಚಿವ ಜಿ.ಪರಮೇಶ್ವರ ಮಸೂದೆಯನ್ನು ಮಂಡಿಸಿದರು. ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು, ಪ್ರಯೋಗಾಲಯಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ. 2022ರ ಕಾಯ್ದೆಗೆ ಈ ತಿದ್ದುಪಡಿಯನ್ನು ತರಲಾಗುತ್ತಿದೆ. https://kannadanewsnow.com/kannada/former-corporator-padmaraj-arrested-for-threatening-to-kill-bjp-mla-k-gopalaiah/ https://kannadanewsnow.com/kannada/list-of-candidates-for-rajya-sabha-elections-from-karnataka-announced/

Read More

ಬೆಂಗಳೂರು: ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀಪ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಕಾರ್ಪೋರೇಟರ್ ಪದ್ಮರಾಜ್ ಅವರನ್ನು ಬಂಧಿಸಲಾಗಿದೆ. ಈ ಕುರಿತಂತೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರ ವಿರುದ್ಧ ದೂರು ದಾಖಲಾಗಿತ್ತು. ಮಹಾರಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ ಅವರಿಗೆ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ಬಂಧಿಸಿದ್ದಾರೆ. ಆ ನಂತ್ರ ಅವರು ದೂರಿನ ಸಂಬಂಧ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ.ಟ ನಾನು ಧರ್ಮಸ್ಥಳ ಮಂಜುನಾಥನ ಮೇಲಾಣೆ ಬೆದರಿಕೆ ಹಾಕಿಲ್ಲ ಬೆಂಗಳೂರು: ನಾನು ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ ಮಾಡಿ ಹೇಳುತ್ತೇನೆ ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಬೆದರಿಕೆ ಹಾಕಿಲ್ಲ. ಕೊಟ್ಟ ಹಣ ವಾಪಾಸ್ ಕೇಳುವ ವೇಳೆಯಲ್ಲಿ ವಾಗ್ವಾದ ಆಗಿದೆ ಎಂಬುದಾಗಿ ಮಾಜಿ ಕಾರ್ಪೋರೇಟರ್ ಪದ್ಮರಾಜ್ ಸ್ಪಷ್ಟ ಪಡಿಸಿದ್ದಾರೆ. ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ…

Read More

ಹಾವೇರಿ: 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ…

Read More

ನವದೆಹಲಿ: ದೆಹಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಇದೀಗ 6ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆರನೇ ಸಮನ್ಸ್ ನೀಡಿದೆ. ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಮತ್ತು ಆರನೇ ಸಮನ್ಸ್ ಜಾರಿ ಮಾಡಿದೆ. ಮಾಹಿತಿಯ ಪ್ರಕಾರ, ಫೆಬ್ರವರಿ 19 ರಂದು ಇಡಿ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ 6 ತಿಂಗಳಲ್ಲಿ ಮಾದಕ ದ್ರವ್ಯ ಮುಕ್ತ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ಕಳೆದ ಏಳು ತಿಂಗಳಲ್ಲಿ 9,645 ಕೆಜಿ ಗಾಂಜಾ ಮತ್ತು 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ 142 ಕೋಟಿಯಾಗಿದೆ ಎಂದಿದ್ದಾರೆ. ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನೂ ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಕಳೆದ ಏಳು ತಿಂಗಳಲ್ಲಿ 9,645 ಕೆ.ಜಿ ಗಾಂಜಾ ಮತ್ತು 233 ಕೆ.ಜಿ ಸಿಂಥೆಟಿಕ್‌ ಡ್ರಗ್ಸ್‌ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ ₹142 ಕೋಟಿ. ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭರವಸೆ ನೀಡಿದ್ದಾರೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಮಂಡ್ಯ: ಜಿಲ್ಲೆಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಸ್ವಿಪ್ಟ್ ಕಾರಿಗೆ ವರ್ಣಾ ಕಾರು ಡಿಕ್ಕಿಯಾಗಿದೆ. ಕಾರು ಕಾರುಗಳ ನಡುವಿನ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಬೆಂಗಳೂರು : “ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು “ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ ಎಂದರು. ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, “ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ” ಎಂದರು. ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂದು ಕೇಳಿದಾಗ, “ನಾವು ಇನ್ನು…

Read More