Author: kannadanewsnow09

ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದರು. ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು…

Read More

ನವದೆಹಲಿ: ಕರ್ನಾಟಕದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಜಿಸಿ ಚಂದ್ರಶೇಖರ್ ಸೇರಿದಂತೆ ಮೂವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಪ್ರಕಟಿಸಿದ್ದು, ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ಮುಂಬರುವಂತ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಕರ್ನಾಟಕದ ಕೈ ಅಭ್ಯರ್ಥಿಗಳ ರಾಜ್ಯಸಭಾ ಚುನಾವಣೆಯ ಪಟ್ಟಿ ಅಜಯ್ ಮಕೇನ್ ಡಾ.ಸೈಯದ್ ನಾಸೀರ್ ಜಿ.ಸಿ ಚಂದ್ರಶೇಖರ್ ಇನ್ನೂ ಮದ್ಯಪ್ರದೇಶದಿಂದ ಅಶೋಕ್ ಸಿಂಗ್, ತೆಲಂಗಾಣದಿಂದ ರೇಣುಕ ಚೌದರಿ ಹಾಗೂ ಎಂ ಅನಿಲ್ ಕುಮಾರ್ ಯಾದವ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Read More

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಜನರಲ್ ಸೆಕ್ರೇಟರಿ ಮಾಹಿತಿ ನೀಡಿದ್ದು, 2024ರ ರಾಜ್ಯ ಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷರು ಈ ಕೆಳಕಂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ ಎಂದಿದ್ದಾರೆ. ಕರ್ನಾಟಕದಿಂದ ಅಜಯ್ ಮಕೇನ್, ಡಾ.ಸೈಯದ್ ನಾಸೀರ್ ಹುಸೇನ್ ಹಾಗೂ ಜಿಸಿ ಚಂದ್ರಶೇಖರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಮದ್ಯಪ್ರದೇಶದಿಂದ ಅಶೋಕ್ ಸಿಂಗ್, ತೆಲಂಗಾಣದಿಂದ ರೇಣುಕ ಚೌದರಿ ಹಾಗೂ ಎಂ ಅನಿಲ್ ಕುಮಾರ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರಗಳು, ಸೀರಿಯಲ್ ಗಳಲ್ಲಿ ಮಕ್ಕಳು ನಟಿಸುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದರೊಟ್ಟಿಗೆ ಅವರ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ. ಈ ಕಾರಣದಿಂದಾಗಿ ಇನ್ಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಮಕ್ಕಳನ್ನು ಧಾರವಾಹಿ, ಚಲನಚಿತ್ರಗಳಲ್ಲಿ ನಟಿಸಲು ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು. ಮಕ್ಕಳು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದ ನಂತ್ರವೇ ಸಿನಿಮಾ, ಸೀರಿಯಲ್ ಗಳಲ್ಲಿ ನಟಿಸಲು ಅವಕಾಶ ಎಂಬುದಾಗಿ ತಿಳಿಸಿದೆ. ಒಂದು ದಿನದಲ್ಲಿ 5 ಗಂಟೆಗೂ ಹೆಚ್ಚು ಕಾಲ ಮಕ್ಕಳನ್ನು ನಟಿಸೋದಕ್ಕೆ ಬಳಸಿಕೊಳ್ಳಬಾರದು. ತಿಂಗಳಲ್ಲಿ ಕೇವಲ 27 ದಿನಗಳು ಮಾತ್ರವೇ ಮಕ್ಕಳನ್ನು ಶೂಟಿಂಗ್ ನಲ್ಲಿ ಬಳಿಸಿಕೊಳ್ಳಬೇಕು ಎಂಬುದಾಗಿಯೂ ಷರತ್ತು ವಿಧಿಸಿದೆ. ಮಕ್ಕಳ ಶಿಕ್ಷಣದ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬಾಲ ನಟ, ನಟಿಯಾಗಿ ಸೀರಿಯಲ್ ನಲ್ಲಿ ಮಕ್ಕಳು ನಡಿಸೋದಕ್ಕೆ ನಿರ್ಮಾಪಕರು, ಆಯೋಜಕರು, ಆಯಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂಬುದಾಗಿ ತಿಳಿಸಲಾಗಿದೆ. ಒಂದು ವೇಳೆ ಕಾರ್ಮಿಕ…

Read More

ಬೆಂಗಳೂರು: ಕೆಎಸ್ಆರ್ ಟಿಸಿಯಿಂದ ವಿವಿಧ ಕಾರಣಗಳಿಂದ ಮೃತಪಟ್ಟಂತ  16 ನೌಕರರ ಕುಟುಂಬದಲವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರವಾಗಿ ತಲಾ 10 ಲಕ್ಷವನ್ನು ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ತನ್ನ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ ಹಾಗೂ ಇತರೆ ಕಾರಣಗಳಿಂದ‌ ಮೃತಪಟ್ಟ (ಹೃದಯಾಘಾತ/ ಕ್ಯಾನ್ಸರ್ , ಸ್ಟ್ರೋಕ್) 16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ರೂ.10 ಲಕ್ಷ ನೀಡಲಾಗಿದೆ ಎಂದಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸಿಬ್ಬಂದಿಗಳ ಅವಲಂಬಿತರನ್ನು ಭೇಟಿ ಮಾಡಿ, ನಿಗಮವು ಕಳೆದ ಎರಡು ತಿಂಗಳ‌ ಹಿಂದಷ್ಟೇ ಪರಿಹಾರ ಮೊತ್ತವನ್ನು ರೂ.3 ಲಕ್ಷದಿಂದ ರೂ.10 ಲಕ್ಷಗಳಿಗೆ ಏರಿಕೆ ಮಾಡಿದ್ದು, ಇದರಿಂದ‌ ಇಂದು 16 ಕುಟುಂಬಗಳಿಗೆ ಆರ್ಥಿಕವಾಗಿ ಸ್ವಲ್ಪ ಹೆಚ್ಚು ಹಣ ದೊರೆಯುವಂತಾಗಿದ್ದು, ಜೀವಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ, ಆದರೂ ಪರಿಹಾರ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಸುಸೂತ್ರ ಜೀವನ…

Read More

ನವದೆಹಲಿ: ರಾಜ್ಯಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಕ್ರೀಯ ರಾಜಕಾರಣದಿಂದ ದೂರವೇ ಉಳಿದಿದ್ದಂತ ಸೋನಿಯಾ ಗಾಂಧಿ, ಇದೀಗ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಣಕ್ಕೆ ಇಳಿಯಲಿದ್ದಾರೆ. ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಂಬರುವಂತ ರಾಜ್ಯಸಭಾ ಚುನಾವಣೆ 2024ಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರೋದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಪ್ರಕಟಿಸಿರುವಂತ ಪಟ್ಟಿಯಲ್ಲಿ ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಡಾ.ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಹಾಗೂ ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೊರೆ ಕಣಕ್ಕೆ ಇಳಿಯೋದಾಗಿ ತಿಳಿಸಿದೆ. https://twitter.com/INCIndia/status/1757649263822352547

Read More

ನವದೆಹಲಿ: ರಾಜ್ಯಸಭಾ ಚುನಾವಣೆಗೆ ( Rajya Sabha Election ) ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ( BJP ) ಸೇರಿದ್ದಂತ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚೌವ್ಹಾಣ್ ಅವರಿಗೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಈ ಸಂಬಂಧ ಬಿಜೆಪಿಯಿಂದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚೌವ್ಹಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದಿಂದ ಎಲ್ ಮುರುಗನ್ ಕಣಕ್ಕೆ ಇಳಿಯಲಿದ್ದಾರೆ. ಒಡಿಶಾದಿಂದ ಅಶ್ವಿನಿ ವೈಷ್ಣವ್ ಕಣಕ್ಕೆ ಇಳಿದ್ರೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹೀಗಿದೆ ಬಿಜೆಪಿ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಮಹಾರಾಷ್ಟ್ರ- ಅಶೋಕ್ ಚೌವ್ಹಾಣ್ ಗುಜರಾತ್ – ಜೆಪಿ ನಡ್ಡಾ ಒಡಿಶಾ – ಅಶ್ವಿನಿ ವೈಷ್ಣವ್ ಮಧ್ಯಪ್ರದೇಶ – ಎಲ್ ಮುರುಗನ್ https://twitter.com/ANI/status/1757688142121877623

Read More

ಬೆಂಗಳೂರು: ಫೆಬ್ರವರಿ.17ರಂದು ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವಣಗೊಳಿಸಲಾಗುತ್ತದೆ. ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬೆಲ್ಲ ಮೊಳಗಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಈ ಬಳಿಕ ಮಾತನಾಡಿದ ಅವರು, ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದರು. ನುಡಿದಂತೆ ನಡೆದವರ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ವಚನಗಳನ್ನು…

Read More

ನವದೆಹಲಿ: ಶಿಕ್ಷಕರ ನೇಮಕಾತಿಗೆ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ಹೊಸ ನಿಯಮಗಳನ್ನು ಪ್ರಸ್ತಾಪಿಸಿದೆ. ಈ ಮೂಲಕ 9 ರಿಂದ 12ನೇ ತರಗತಿ ಶಿಕ್ಷಕರಾಗೋದಕ್ಕೆ ಬಯಸೋ ಅಭ್ಯರ್ಥಿಗಳಿಗೆ ಟಿಇಟಿ ಪರೀಕ್ಷೆಯನ್ನು ಪಾಸ್ ಕಡ್ಡಾಯಗೊಳಿಸೋದಕ್ಕೆ ಮುಂದಾಗಿದೆ. ಎನ್ಇಪಿ ಪ್ರಸ್ತಾವನೆಯ ಪ್ರಕಾರ, ನಿನ್ನೆ ನಡೆದ ಟಿಇಟಿ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಚರ್ಚಿಸಿದಂತೆ ಮಾಧ್ಯಮಿಕ ಮಟ್ಟದಲ್ಲಿ (9 ರಿಂದ 12 ನೇ ತರಗತಿ) ಟಿಇಟಿಯನ್ನು ಕಡ್ಡಾಯಗೊಳಿಸಲು ಅವರು ಶಿಫಾರಸು ಮಾಡಿದ್ದಾರೆ. ಶಾಲೆಗಳಲ್ಲಿ ಶಿಕ್ಷಕರಾಗಲು ಬಯಸುವ ಅಭ್ಯರ್ಥಿಗಳಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಒಂದು ಪ್ರಮುಖ ಪರೀಕ್ಷೆಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಬೆಳಕಿನಲ್ಲಿ ಅಗತ್ಯವಿರುವ ಬದಲಾವಣೆಗಳನ್ನು ಚರ್ಚಿಸಲು ಮತ್ತು ಕೆಲಸ ಮಾಡಲು ಕೌನ್ಸಿಲ್ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಸಹಭಾಗಿತ್ವದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತು 1 ದಿನದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿತ್ತು. ಅಧಿವೇಶನದಲ್ಲಿ, ಎನ್ಸಿಟಿಇ ಸದಸ್ಯ ಕಾರ್ಯದರ್ಶಿ ಕೇಸಾಂಗ್ ವೈ. ಶೆರ್ಪಾ ಐಆರ್ಎಸ್, ಎನ್ಇಪಿ 2020 ವಿವಿಧ ಹಂತಗಳಲ್ಲಿ ಟಿಇಟಿಯನ್ನು ಶಿಫಾರಸು…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ, ಸದ್ದಿಲ್ಲದಂತೆ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಈಗ 200 ಯೂನಿಟ್ ಉಚಿತ ವಿದ್ಯುತ್ ಕೊಟ್ಟು, ಬೆಂಗಳೂರಲ್ಲಿ ನೀರಿನ ಬಿಲ್ ಹೆಚ್ಚಳಕ್ಕೆ ಚಿಂತನೆ ನಡೆಸಿರೋ ಸುಳಿವನ್ನು ಸ್ವತಹ ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಮಂಗಳವಾರದಂದು ಸದಸ್ಯ ಸಿ.ಕೆ ರಾಮಮೂರ್ತಿ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಬೆಂಗಳೂರಿನಲ್ಲಿ ಜಲಮಂಡಳಿಯ ನೀರಿನ ದರ ಹೆಚ್ಚಳವಾಗದ ಬಗ್ಗೆ ಪ್ರಸ್ತಾಪ ಮಾಡಿದರು. ಕಳೆದ 11 ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲು ಆಗಿಲ್ಲ. ಆದ್ರೇ ರಾಜ್ಯದಲ್ಲಿ ಪ್ರತಿ ವರ್ಷ ವಿದ್ಯುತ್ ದರ ಹೆಚ್ಚಾಗುತ್ತಲೇ ಇದೆ ಎಂದರು. ರಾಜಧಾನಿ ಬೆಂಗಳೂರಲ್ಲಿ ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಕುಡಿಯುವ ನೀರಿಗೂ ತೀವ್ರ ಬೇಡಿಕೆ ಉಂಟಾಗುತ್ತಿದೆ. ವಿವಿಧ ಕಾರಣಕ್ಕಾಗಿ ನೀರಿನ ದರವನ್ನು ಹೆಚ್ಚಳ ಮಾಡಲಾಗಿಲ್ಲ. ಬೆಂಗಳೂರಲ್ಲಿ ಶೇ.20ರಷ್ಟು ನೀರಿನ ಅಗತ್ಯವನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಈ ಎಲ್ಲ ಕಾರಣಗಳಿಂದ ನೀರಿನ…

Read More