Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ, ಸದ್ದಿಲ್ಲದಂತೆ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಈಗ 200 ಯೂನಿಟ್ ಉಚಿತ ವಿದ್ಯುತ್ ಕೊಟ್ಟು, ಬೆಂಗಳೂರಲ್ಲಿ ನೀರಿನ ಬಿಲ್ ಹೆಚ್ಚಳಕ್ಕೆ ಚಿಂತನೆ ನಡೆಸಿರೋ ಸುಳಿವನ್ನು ಸ್ವತಹ ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಮಂಗಳವಾರದಂದು ಸದಸ್ಯ ಸಿ.ಕೆ ರಾಮಮೂರ್ತಿ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಬೆಂಗಳೂರಿನಲ್ಲಿ ಜಲಮಂಡಳಿಯ ನೀರಿನ ದರ ಹೆಚ್ಚಳವಾಗದ ಬಗ್ಗೆ ಪ್ರಸ್ತಾಪ ಮಾಡಿದರು. ಕಳೆದ 11 ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲು ಆಗಿಲ್ಲ. ಆದ್ರೇ ರಾಜ್ಯದಲ್ಲಿ ಪ್ರತಿ ವರ್ಷ ವಿದ್ಯುತ್ ದರ ಹೆಚ್ಚಾಗುತ್ತಲೇ ಇದೆ ಎಂದರು. ರಾಜಧಾನಿ ಬೆಂಗಳೂರಲ್ಲಿ ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಕುಡಿಯುವ ನೀರಿಗೂ ತೀವ್ರ ಬೇಡಿಕೆ ಉಂಟಾಗುತ್ತಿದೆ. ವಿವಿಧ ಕಾರಣಕ್ಕಾಗಿ ನೀರಿನ ದರವನ್ನು ಹೆಚ್ಚಳ ಮಾಡಲಾಗಿಲ್ಲ. ಬೆಂಗಳೂರಲ್ಲಿ ಶೇ.20ರಷ್ಟು ನೀರಿನ ಅಗತ್ಯವನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಈ ಎಲ್ಲ ಕಾರಣಗಳಿಂದ ನೀರಿನ…
ಬೆಂಗಳೂರು: 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಮಂಗಳವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು. ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮಿಕ್ಕ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರಕಾರವು ಬಿಯಾಂಡ್ ಬೆಂಗಳೂರು…
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧವನ್ನು 5 ಸಾವಿರದಿಂದ 7 ಸಾವಿರಕ್ಕೆ ಹೆಚ್ಚಳ ಮಾಡಲಾಗುತ್ತದೆ. ಉಚಿತ ಮೊಬೈಲ್ ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದಾರೆ. ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಂತ ಆಶಾ ಕಾರ್ಯಕರ್ತೆಯರ ಬಳಿಗೆ ತೆರಳಿದಂತ ಅವರು, ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ 5 ಸಾವಿರದ ಬದಲು 7 ಸಾವಿರ ನೇರ ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲುಗಳನ್ನ ಆಲೀಸಿದ ಸಚಿವವರು, ಆಶಾ ಕಾರ್ಯಕರ್ತೆಯರ ಪರ ಸರ್ಕಾರವಿದೆ. ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ ನಮ್ಮ ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಾಗಿದೆ. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ…
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಫೆಬ್ರವರಿ.16ರಂದು ಚುನಾವಣೆ ಘೋಷಣೆ ಮಾಡಲಾಗಿದೆ. ಚುನಾವಣೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ 48 ಗಂಟೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದರು. ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಇದೀಗ ಹೋಟೆಲ್ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಹೈಕೋರ್ಟ್ ಗೆ ಬೆಂಗಳೂರು ಹೋಟೇಲ್ ಮಾಲೀಕರ ಸಂಘದಿಂದ ಅರ್ಜಿಯನ್ನು ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳು 48 ಗಂಟೆ ಮಧ್ಯ ಮಾರಾಟ ನಿಷೇಧ ಮಾಡಿ ಹೊರಡಿಸಿರುವಂತ ಆದೇಶವನ್ನು ಪ್ರಶ್ನಿಸಿದ್ದಾರೆ. ಹೈಕೋರ್ಟ್ ಗೆ ಸಲ್ಲಿಸಿರುವಂತ ಅರ್ಜಿಯಲ್ಲಿ ಕೇವಲ 16 ಸಾವಿರ ಶಿಕ್ಷಕ ಮತದಾರರು ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ. ಮದ್ಯ ಮಾರಾಟ ಮಾಡುವುದರಿಂದ ವರ್ತಕರು, ಹೋಟೆಲ್ ಗಳಿಗೆ ಕುತ್ತು ಬಂದು ಸಮಸ್ಯೆ ಉಂಟಾಗಲಿದೆ. 48 ಗಂಟೆಗಳ ಅವಧಿಗೆ ಮಧ್ಯ ಮಾರಾಟ ನಿಷೇಧ ಅನಗತ್ಯವೆಂದು ಮನವಿ ಮಾಡಲಾಗಿದೆ. ಹೋಟೆಲ್ ಮಾಲೀಕರು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ನಾಳೆಯೊಳಗೆ ಸರ್ಕಾರ ಪ್ರತಿಕ್ರಿಯಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿದೆ. https://kannadanewsnow.com/kannada/development-of-irrigation-filling-up-of-tanks-top-priority-deputy-cm-dk-shivakumar-shivakumar/ https://kannadanewsnow.com/kannada/india-uae-dosti-zindabad-here-are-the-highlights-of-pm-modis-speech/
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಬುಧಾಬಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡುತ್ತಾ, ಕ್ರೀಡಾಂಗಣದಲ್ಲಿನ ಪ್ರತಿ ಉಸಿರು, ಪ್ರತಿ ಧ್ವನಿ ಭಾರತ-ಯುಎಇ ‘ದೋಸ್ತಿ ಜಿಂದಾಬಾದ್’ (ಭಾರತ-ಯುಎಇ ಸ್ನೇಹವು ದೀರ್ಘಕಾಲ ಬಾಳಲಿ) ಎಂದು ಹೇಳುತ್ತಿದೆ ಎಂದು ಹೇಳಿದರು. ಈ ಮೂಲಕ ಅಬುದಾಬಿಯಲ್ಲಿ ಭಾರತ-ಯುಎಇ ದೋಸ್ತಿ ಜಿಂದಾಬಾದ್ ಮೊಳಗಿತು. ಹಾಗಾದ್ರೇ ಇಂದಿನ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ ಮುಂದೆ ಓದಿ. ಅಬುದಾಬಿಯಲ್ಲಿ ಇಂದು ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ಇಂದು ಅಬುಧಾಬಿಯಲ್ಲಿ ನೀವು ಹೊಸ ಇತಿಹಾಸವನ್ನು ರಚಿಸಿದ್ದೀರಿ. ನೀವು ಯುಎಇಯ ಎಲ್ಲಾ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದಿದ್ದೀರಿ. ಆದರೆ ಎಲ್ಲರ ಹೃದಯ ಸಂಪರ್ಕ ಹೊಂದಿದೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ, ಪ್ರತಿ ಹೃದಯ ಬಡಿತ, ಪ್ರತಿ ಉಸಿರು, ಪ್ರತಿ ಧ್ವನಿ ಹೇಳುತ್ತದೆ – ಭಾರತ-ಯುಎಇ ಸ್ನೇಹವು ದೀರ್ಘಕಾಲ ಬಾಳಲಿ ಎಂದರು. https://twitter.com/ANI/status/1757422549082816979 ಕುಟುಂಬ ಸದಸ್ಯರನ್ನು ಭೇಟಿಯಾಗಲು ಅಬುಧಾಬಿಗೆ ಬಂದಿದ್ದೇನೆ ಎಂದು ಭಾಸವಾಗುತ್ತಿದೆ. ನೀವು ಹುಟ್ಟಿದ ಮಣ್ಣಿನ ಸುಗಂಧವನ್ನು ನಾನು ತಂದಿದ್ದೇನೆ. 140 ಕೋಟಿ…
ಅಬುದಾಬಿ: ಭಾರತ ಮತ್ತು ಯುಎಇ ಪರಸ್ಪರರ ಪ್ರಗತಿಯಲ್ಲಿ ಪಾಲುದಾರರು. ನಮ್ಮ ಸಂಬಂಧವು ಪ್ರತಿಭೆ, ಸಂಸ್ಕೃತಿ ಮತ್ತು ಪ್ರಗತಿಯನ್ನು ಆಧರಿಸಿದೆ. ಇಂದು, ಯುಎಇ ಭಾರತದ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರ. ಇದು ಏಳನೇ ಅತಿದೊಡ್ಡ ಹೂಡಿಕೆದಾರ. ನಮ್ಮ ಎರಡೂ ದೇಶಗಳು ಸುಗಮ ಜೀವನ ಮತ್ತು ಸುಗಮ ವ್ಯಾಪಾರಕ್ಕಾಗಿ ಸಹಕರಿಸುತ್ತಿವೆ” ಎಂದು ಮೋದಿ ಹೇಳಿದರು. ಇಂದು ಅಬುದಾಬಿಯಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ಯುಎಇಯ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಜಾಯೆದ್ ಅನ್ನು ಪಡೆದಿರುವುದು ನನ್ನ ಅದೃಷ್ಟ. 2019ರಲ್ಲಿ ಅವರಿಗೆ ಈ ಬಿರುದು ನೀಡಲಾಗಿತ್ತು ಎಂದರು. “ಕಳೆದ 10 ವರ್ಷಗಳಲ್ಲಿ ಯುಎಇಗೆ ಇದು ನನ್ನ ಏಳನೇ ಭೇಟಿಯಾಗಿದೆ, ಬುರ್ ಸಹೋದರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೊದಲ ಬಾರಿಗೆ ಮಾಡಿದಷ್ಟೇ ಆತ್ಮೀಯತೆಯಿಂದ ನನ್ನನ್ನು ಸ್ವಾಗತಿಸುತ್ತಾರೆ” ಎಂದು ಮೋದಿ ಹೇಳಿದರು. ಭಾರತೀಯರ ಬಗ್ಗೆ ತೋರಿಸಿದ ಪ್ರೀತಿಗಾಗಿ ತಮ್ಮ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಕೃತಜ್ಞನಾಗಿದ್ದೇನೆ…
ಮಂಡ್ಯ: ತೀವ್ರ ಕುತೂಹಲ ಕೆರಳಿಸಿದ್ದಂತ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಗೆ ಸ್ಪರ್ಧಿಸೋ ಗೊಂದಲಕ್ಕೆ ತೆರೆ ಬಿದ್ದದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಲೋಕಸಭೆಗೆ ಕುಮಾರಸ್ವಾಮಿ ನಿಲ್ಲೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ ನಿಲ್ಲಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಇಲ್ಲಿ ಅವರು ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ, ಇರುವ…
ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರ ಗೌರವಧನವನ್ನು 7,000ಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿಯಾದಂತ ಅವರು ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5,000 ಜೊತೆಗೆ, 2,000 ಸೇರಿಸಿ ಒಟ್ಟು 7,000 ನೀಡಲಾಗುವುದು ಎಂದು ತಿಳಿಸಿದರು. ಇನ್ನೂ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ, ಪ್ರೋತ್ಸಾಹಧನವನ್ನು ಪಾರದರ್ಶಕವಾಗಿ ನೀಡಲಾಗುವುದು ಎಂಬುದಾಗಿ ಹೇಳಿದರು. ಒಂದು ವೇಳೆ ಯಾರಿಗೆ ತಮ್ಮ ಚಟುವಟಿಕೆಗಳ ಪ್ರಕಾರ ಪ್ರೋತ್ಸಾಹಧನ ದೊರೆಯುವುದಿಲ್ಲ ಅದನ್ನ 6 ತಿಂಗಳ ಕಾಲಮಿತಿಯೊಳಗೆ ಪರಿಹರಿಸಬೇಕು. ಕಾಲಮಿತಿಯೊಳಗೆ ಪರಿಹಾರವಾಗದಿದ್ದರೆ ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಶಹಧನ ವರ್ಗಾವಣೆಯಾಗುವಂತೆ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಅಲ್ಲದೇ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಚಟುವಟಿಕೆಗಳಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ನ್ನು ಆಶಾ ನಿಧಿ ತಂತ್ರಾಂಶದ ಮುಖೇನವೇ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ತಾವು ನಿರ್ವಹಿಸಿದ ಚಟುವಟಿಕೆಗಳನ್ನು…
ಬೆಂಗಳೂರು: ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ .ಜಯಚಂದ್ರ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯಲ್ಲಿ ಇರುವ ತೊಡಕುಗಳನ್ನ ನಿವಾರಿಸಿ ಆದಷ್ಟು ಬೇಗ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು. ಟಿ.ಬಿ ಜಯಚಂದ್ರ ಅವರು ಮಾತನಾಡು ಶಿರಾ ತಾಲೂಕಿನ 200 ಕೆರೆಗಳಿಗೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ಹರಿಸಲು ಯೋಜನೆ ರೂಪಿಸಲಾಗಿದ್ದು ಕಾಮಗಾರಿ ಕುಂಟುತ್ತಾ ಸಾಗಿದೆ ಎಂದು ಗಮನ ಸೆಳೆದರು. “ಈಗಾಗಲೇ ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಶಿರಾ ಹಾಗೂ ಮಧುಗಿರಿ ತಾಲೂಕುಗಳ ಅಂತರ್ಜಲ ಅಭಿವೃದ್ಧಿಗೆ 4.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಶಿರಾ ತಾಲೂಕಿನ ಕೆರೆಗಳಲ್ಲಿ ಮಳೆ ನೀರು ಶೇಖರಣೆ ಕಷ್ಟವಾಗಿದ್ದು, ಈ ಭಾಗದ ಅಂತರ್ಜಲ ಮಟ್ಟ ಕುಸಿದಿದೆ. ಈ ಭಾಗದ ಜನ ಫ್ಲೋರೈಡ್ ಗಳಿಂದ ಕೂಡಿದ ನೀರನ್ನು ಕುಡಿಯುವಂತಾಗಿದೆ…
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಂಡಿದೆ. ಭಾರತೀಯ ಸಂಸ್ಥೆ ಸರಿಯಾದ ಸಮಯದಲ್ಲಿ ಚುನಾವಣೆ ನಡೆಸಲು ವಿಫಲವಾದ ನಂತರ ಯುಡಬ್ಲ್ಯೂಡಬ್ಲ್ಯೂ ಕಳೆದ ವರ್ಷ ಆಗಸ್ಟ್ 23 ರಂದು ಡಬ್ಲ್ಯುಎಫ್ಐ ಅನ್ನು ತಾತ್ಕಾಲಿಕ ಅಮಾನತುಗೊಳಿಸಿತ್ತು. ಒಕ್ಕೂಟದಲ್ಲಿ ಪರಿಸ್ಥಿತಿ ಕನಿಷ್ಠ ಆರು ತಿಂಗಳವರೆಗೆ ಮೇಲುಗೈ ಸಾಧಿಸಿದ್ದರಿಂದ ಸಂಸ್ಥೆಯ ಮೇಲೆ ತಾತ್ಕಾಲಿಕ ಅಮಾನತು ವಿಧಿಸಲು ಸಾಕಷ್ಟು ಆಧಾರಗಳಿವೆ ಎಂದು ಯುಡಬ್ಲ್ಯೂಡಬ್ಲ್ಯೂ ಶಿಸ್ತು ಚೇಂಬರ್ ನಿರ್ಧರಿಸಿತು. https://twitter.com/wrestling/status/1757405017575760148 ಇತರ ವಿಷಯಗಳ ನಡುವೆ ಅಮಾನತು ಪರಿಶೀಲಿಸಲು ಯುಡಬ್ಲ್ಯೂಡಬ್ಲ್ಯೂ ಬ್ಯೂರೋ ಫೆಬ್ರವರಿ 9 ರಂದು ಸಭೆ ಸೇರಿ ಎಲ್ಲಾ ಅಂಶಗಳು ಮತ್ತು ಮಾಹಿತಿಯನ್ನು ಪರಿಗಣಿಸಿ, ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಅಮಾನತು ತೆಗೆದುಹಾಕಲು ನಿರ್ಧರಿಸಿತು. ಡಬ್ಲ್ಯೂಎಫ್ಐ ತನ್ನ ಅಥ್ಲೀಟ್ಗಳ ಆಯೋಗದ ಚುನಾವಣೆಗಳನ್ನು ಮತ್ತೆ ಕರೆಯಬೇಕಾಗಿದೆ. ಈ ಆಯೋಗದ ಅಭ್ಯರ್ಥಿಗಳು ಸಕ್ರಿಯ ಕ್ರೀಡಾಪಟುಗಳಾಗಿರಬೇಕು ಅಥವಾ ನಾಲ್ಕು ವರ್ಷಗಳಿಗಿಂತ ಹೆಚ್ಚು ಕಾಲ ನಿವೃತ್ತರಾಗಬಾರದು. ಮತದಾರರು ಪ್ರತ್ಯೇಕವಾಗಿ ಕ್ರೀಡಾಪಟುಗಳಾಗಿರುತ್ತಾರೆ. ಈ ಚುನಾವಣೆಗಳು ಟ್ರಯಲ್ಸ್ ಅಥವಾ…