Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಇಂದಿನ ಕಾಲದಲ್ಲಿ ಹಿತ ಶತ್ರುಗಳು ಗುಪ್ತ ಶತ್ರುಗಳು ಕಣ್ಣಿಗೆ ಕಾಣದಂತೆ ಪ್ರಯೋಗಾದಿಗಳನ್ನು ಮಾಡುತ್ತಲೇ ಇರುತ್ತಾರೆ ಇದರಿಂದ ರಕ್ಷಣೆ ಹೇಗೆ ಎಂಬ ಸಂಶಯ ಪ್ರತಿಯೊಬ್ಬರಲ್ಲೂ ಬರುವುದು ಸಹಜ ಅದಕ್ಕಾಗಿ. ತಂತ್ರ ಈ ರೀತಿ ಇದೆ ಮನೆಯ ಮುಖ್ಯದ್ವಾರದ ಮುಂದೆ ಹಾಗೂ ಹಿಂದೆ ಶುದ್ಧವಾದ ಪೂಜೆ ಅರಿಶಿಣವನ್ನು ಹಾಗೂ ಗಂಗಾಜಲವನ್ನು ಸ್ವಲ್ಪ ಮಿಕ್ಸ್ ಮಾಡಿ ಪೇಸ್ಟ್ ರೀತಿ ಮಾಡಿಕೊಂಡು ನಿಮ್ಮ ಎರಡು ಕೈಗಳನ್ನು ಒತ್ತಿದಾಗ ಹಸ್ತದ ಅಚ್ಚನ್ನು ನಿಮ್ಮ ಮನೆಯ ಬಾಗಿಲ ಮುಂದೆ ಹಾಗೂ ಹಿಂದೆ ಮೂಡುವಂತೆ ಮಾಡಬೇಕು. ಈ ಒಂದು ಸಣ್ಣ ತಂತ್ರದಿಂದ ನಿಮ್ಮ ಮನೆಯಾಗಲಿ ಅಂಗಡಿಯಾಗಿರಬಹುದು ಫ್ಯಾಕ್ಟರಿ ಆಗಿರಬಹುದು ದೊಡ್ಡ ದೊಡ್ಡ ಕಾರ್ಖಾನೆ ಆಗಿರಬಹುದು ಆಫೀಸ್ ಗಳಾಗಿರಬಹುದು ಇವೆಲ್ಲವುದಕ್ಕೂ ಯಾರು ಏನೇ ಮಾಡಿದರು ತಾಗುವುದಿಲ್ಲ. ನಿಮ್ಮ ಮನೆ ಅಥವಾ ಫ್ಯಾಕ್ಟರಿ ಹೊಸದಿರಲಿ ಹಳೆಯದೇ ಇರಲಿ ಈ ತಂತ್ರವನ್ನು ಮಾಡಿ ಕೃತ್ರಿಮ ಪ್ರಯೋಗಾದಿಗಳಿಂದ ರಕ್ಷಣೆಯನ್ನು ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್…

Read More

ಮುಂಬೈ : ಇಟಲಿಯ ಐಷಾರಾಮಿ ಬಟ್ಟೆ ತಯಾರಕ ಕಂಪನಿ ಪಾಲ್ ಅಂಡ್ ಶಾರ್ಕ್ ಭಾರತದ ಅತ್ಯಂತ ನಿಪುಣ ಕ್ರಿಕೆಟಿಗರಲ್ಲಿ ಒಬ್ಬರಾದ ಕೆಎಲ್ ರಾಹುಲ್ ಅವರೊಂದಿಗೆ ಪಾಲುದಾರಿಕೆಯನ್ನು ಹೆಮ್ಮೆಯಿಂದ ಘೋಷಿಸಿದೆ. ಪಾಲ್ ಅಂಡ್ ಶಾರ್ಕ್‌ನ ಜಾಗತಿಕ ರಾಯಭಾರಿಯಾಗಿ ನೇಮಕಗೊಂಡ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕೆಎಲ್ ರಾಹುಲ್, ಐಷಾರಾಮಿ, ಸಾಹಸ ಮತ್ತು ಆಧುನಿಕ ಶೈಲಿಯ ಬ್ರಾಂಡ್‌ನ ವಿಕಸನಗೊಳ್ಳುತ್ತಿರುವ ದೃಷ್ಟಿಕೋನವನ್ನು ಸಾಕಾರಗೊಳಿಸಲಿದ್ದಾರೆ. ಪಾಲ್ & ಶಾರ್ಕ್‌ಗೆ ಭಾರತೀಯ ಮಾರುಕಟ್ಟೆಯ ಕಾರ್ಯತಂತ್ರದ ಮಹತ್ವವನ್ನು ಇದು ಎತ್ತಿ ತೋರಿಸುತ್ತದೆ. ಈ ದೇಶದೊಂದಿಗೆ ಬ್ರ್ಯಾಂಡ್ ವ್ಯವಹಾರ ಮತ್ತು ಸಂವಹನ ಎರಡರಲ್ಲೂ ದೀರ್ಘಕಾಲದ ಸಂಬಂಧವನ್ನು ಹಂಚಿಕೊಂಡಿದೆ. ಇಂದು, ಬ್ರ್ಯಾಂಡ್ ಭಾರತದಲ್ಲಿ 15 ವರ್ಷಗಳನ್ನು ಹೆಮ್ಮೆಯಿಂದ ಆಚರಿಸುತ್ತದೆ. ಪ್ರಮುಖ ನಗರಗಳಲ್ಲಿ ಈ ಬ್ರ್ಯಾಂಡ್ ಅಸ್ತಿತ್ವ ಹೊಂದಿದೆ. ಕೆಎಲ್ ರಾಹುಲ್ ಪಾಲ್ & ಶಾರ್ಕ್‌ನ ಅಂತರರಾಷ್ಟ್ರೀಯ ಕ್ರೀಡಾ ರಾಯಭಾರಿಗಳ ಸಾಲಿಗೆ ಸೇರಿದ್ದಾರೆ. ಪಾಲ್ ಮತ್ತು ಶಾರ್ಕ್ ಮತ್ತು ಕೆಎಲ್ ರಾಹುಲ್ ನಡುವಿನ ಈ ಸಹಯೋಗವು ಸಮಕಾಲೀನ, ಕ್ರಿಯಾತ್ಮಕ ಸಂಬಂಧವಾಗಿದ್ದು, ಇದು…

Read More

ಅರ್ಜೆಂಟೀನಾ: ಅರ್ಜೆಂಟೀನಾ ಮತ್ತು ಚಿಲಿಯ ದಕ್ಷಿಣ ಕರಾವಳಿಯಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿ ಎದುರಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಚಿಲಿಯ ಸಂಪೂರ್ಣ ದಕ್ಷಿಣ ಕರಾವಳಿ ಪ್ರದೇಶವನ್ನು ಸ್ಥಳಾಂತರಿಸಲಾಗುವುದು ಎಂದು ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆ ಘೋಷಿಸಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಸ್ವಲ್ಪ ಮೊದಲು (ಯುಕೆಯಲ್ಲಿ ಮಧ್ಯಾಹ್ನ 2 ಗಂಟೆ) ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಅರ್ಜೆಂಟೀನಾದ ದಕ್ಷಿಣ ತುದಿಯಲ್ಲಿರುವ ಉಶುವಾಯಾ ನಗರದ ದಕ್ಷಿಣಕ್ಕೆ ಕೇವಲ 136 ಮೈಲಿ (219 ಕಿ.ಮೀ) ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ. ಸುನಾಮಿ ಬೆದರಿಕೆಯಿಂದಾಗಿ ಮಗಲೇನ್ಸ್ ಪ್ರದೇಶವನ್ನು ತಕ್ಷಣವೇ ಸ್ಥಳಾಂತರಿಸಲಾಗುವುದು ಎಂದು ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆ ಘೋಷಿಸಿದೆ. ದಕ್ಷಿಣ ಅಮೆರಿಕದ ದಕ್ಷಿಣ ಅಂಚಿನಲ್ಲಿ ವಾಸಿಸುವ ಜನರನ್ನು ಕರಾವಳಿಯಿಂದ ದೂರ ತೆರಳುವಂತೆ ಮತ್ತು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಒತ್ತಾಯಿಸಲಾಗಿದೆ. ಗ್ಲೋಬಲ್ ಕ್ವೇಕ್ ಪ್ರಕಾರ, ಭೂಕಂಪದ ಕೇಂದ್ರಬಿಂದುದಿಂದ 186 ಮೈಲಿ (300 ಕಿ.ಮೀ)…

Read More

ಅರ್ಜೆಂಟೀನಾ: ಅರ್ಜೆಂಟೀನಾದಲ್ಲಿ 7.4 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಕಂಪನದಿಂದಾಗಿ ಬೆಚ್ಚಿ ಬಿದ್ದಿರುವಂತ ಜನರು, ಮನೆಯಿಂದ ಹೊರ ಓಡಿ ಬಂದು ಬಯಲಿನಲ್ಲಿ ಕೆಲ ಹೊತ್ತು ಕಾಲ ಕಳೆಯುವಂತೆ ಆಗಿದೆ. ಕೆಲ ತಿಂಗಳ ಹಿಂದಷ್ಟೇ ಮಯನ್ಮಾರ್ ನಲ್ಲಿ ನಡೆದಿದ್ದಂತ ಭೂಕಂಪನದಿಂದ ತೀವ್ರ ಹಾನಿ ಉಂಟಾಗಿತ್ತು. ನೂರಾರು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಬೆನ್ನಲ್ಲೇ ಅರ್ಜೆಂಟೀನಾದಲ್ಲಿ 7.4ರ ತೀವ್ರತೆಯಲ್ಲಿ ಪ್ರಭಲ ಭೂಕಂಪನ ಉಂಟಾಗಿದೆ. ಅರ್ಜೆಂಟೀನಾದಲ್ಲಿ ಉಂಟಾದಂತ 7.4 ತೀರ್ವತೆಯ ಪ್ರಬಲ ಭೂಕಂಪನದಿಂದಾಗಿ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಸದ್ಯಕ್ಕೆ ಸಾವು ನೋವಿನ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಡ್ಯ : ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ಪ್ರೌಢಶಾಲಾ ವಿಭಾಗದಲ್ಲಿ ಪ್ರಸ್ತಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ದ್ವಿತೀಯ ಹಾಗೂ ಎಲ್.ಅನನ್ಯ 4 ನೇ ಸ್ಥಾನಗಳಿಸಿ ತೇರ್ಗಡೆಯಾಗುವ ಮೂಲಕ ತಾಲೂಕಿಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಬಿಇಒ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದರು. ಶಿವಪುರದ ಪೂರ್ಣಪ್ರಜ್ಞಾ ಶಾಲೆಯಲ್ಲಿ ಶುಕ್ರವಾರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಶೇ.(99.84) ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಗಳಿಸಿದ ಸಿ.ಪುನೀತಾ ಹಾಗೂ 622 ಶೇ(99.5) ರಷ್ಟು ಅಂಕಗಳಿಸಿ ರಾಜ್ಯಕ್ಕೆ 4 ನೇ ಸ್ಥಾನಗಳಿಸಿದ ಎಲ್.ಅನನ್ಯ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೆರ್ಗಡೆಗೊಂಡ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪರೀಕ್ಷೆಗೆ ಹಾಜರಾಗಿದ್ದ ಶಾಲೆಯ ಒಟ್ಟು 175 ವಿದ್ಯಾರ್ಥಿಗಳ ಪೈಕಿ 169 ವಿದ್ಯಾರ್ಥಿಗಳು ಉತ್ತೀಣರಾಗುವ ಮೂಲಕ ಶೇ.96 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಇವರಲ್ಲಿ 15 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕಗಳಿಸಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 58 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಸಂತಸ ವ್ಯಕ್ತಪಡಿಸಿದರು. ಎ.ಸಿಂಧು 617,…

Read More

ಕರಾಚಿ: ಪಾಕಿಸ್ತಾನದ ದಾಸು–ಮನ್ಸೆಹ್ರಾ 765Kv ಟ್ರಾನ್ಸ್‌ಮಿಷನ್ ಲೈನ್‌ನಲ್ಲಿ ಶುಕ್ರವಾರ ರಾನ್ಸಮ್‌ವೇರ್ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದ ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ ವೆಬ್‌ಸೈಟ್‌ನಲ್ಲಿ ನಡೆದ ಪ್ರಮುಖ ಸೈಬರ್ ದಾಳಿಯ ಕೆಲವೇ ಗಂಟೆಗಳ ನಂತರ ಇದು ಸಂಭವಿಸಿದೆ. ಇದರಲ್ಲಿ ಹ್ಯಾಕರ್‌ಗಳು ನಿರ್ಣಾಯಕ ಡೇಟಾವನ್ನು ಕದ್ದಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಜಮ್ಮು ಸೈಬರ್ ದಾಳಿಯಲ್ಲಿ, ಆಧಾರ್ ಸಂಖ್ಯೆಗಳು, ಆಸ್ತಿ ದಾಖಲೆಗಳು, ತೆರಿಗೆ ವಿವರಗಳು ಮತ್ತು ಆಡಳಿತಾತ್ಮಕ ದಾಖಲೆಗಳು ಮತ್ತು ಮೂಲಸೌಕರ್ಯ ಯೋಜನೆಗಳಂತಹ ನಾಗರಿಕರ ಡೇಟಾವನ್ನು ಒಳಗೊಂಡಿರುವ ಎಲ್ಲಾ ಪ್ರಮಾಣಪತ್ರಗಳು ಮತ್ತು ಡೇಟಾಬೇಸ್‌ಗಳು ಕಳೆದುಹೋಗಿವೆ. ಇಂತಹ ದಾಳಿಗಳು ಭಾರತೀಯ ಆಡಳಿತಾತ್ಮಕ ಮೂಲಸೌಕರ್ಯವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಪಾಕಿಸ್ತಾನ ಬೆಂಬಲಿತ ಸೈಬರ್ ಕಾರ್ಯಾಚರಣೆಗಳ ಮಾದರಿಗಳೊಂದಿಗೆ ಹೊಂದಿಕೆಯಾಗುತ್ತವೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/bjps-allegation-that-hindus-were-killed-more-during-congress-regime-is-baseless-minister-ishwar-khandre/ https://kannadanewsnow.com/kannada/for-the-first-time-in-the-state-powermen-were-given-safe-supplies-in-mandya/ https://kannadanewsnow.com/kannada/breaking-breaking-case-court-dismisses-ct-ravis-plea-seeking-quashing-of-case-against-laxmi-hebbalkar/

Read More

ಬೈಕೆರೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆ ಹೆಚ್ಚು ಎನ್ನುವಂತ ಬಿಜೆಪಿಯ ಆರೋಪ ನಿರಾಧಾರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೈಕೆರೆ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರು ಮಂಗಳೂರು ಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹಂತಕರಿಗೆ, ದರೋಡೆಕೋರರಿಗೆ, ವಂಚಕರಿಗೆ ಜಾತಿ, ಧರ್ಮ ಇರುವುದಿಲ್ಲ. ಕಾನೂನಿನ ರೀತ್ಯ ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ.  ಕಾಂಗ್ರೆಸ್ ಕಾರ್ಯಕಾಲದಲ್ಲಿ ಹಿಂದೂಗಳ ಹತ್ಯೆ ಹೆಚ್ಚುತ್ತದೆ ಎಂಬ ಬಿಜೆಪಿ ಆರೋಪ ನಿರಾಧಾರವಾದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು. ಜಾತಿಗಣತಿ- ಸಂಪುಟದಲ್ಲಿ ಅಭಿಪ್ರಾಯ ಮಂಡನೆ: ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಅದು ಕೇವಲ ಜಾತಿ ಗಣತಿ ಆಗದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ನೆಲೆಯಲ್ಲಿ ನಡೆಯಬೇಕು. ಆಗ ಮಾತ್ರ ವಂಚಿತರಿಗೆ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡದ ಅಸ್ಮಿತೆಯಾಗಿರುವ ಸರ್ಕಾರಿ ಶಾಲೆಗಳು ಈಗಾಗಲೇ ಇಳಿಮುಖವಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಿಂದ ದುಸ್ಥಿತಿಗೆ ತಲುಪಿವೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದು ಸಾವಿರಾರು ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ತಾಯ್ನುಡಿಯ ಶಿಕ್ಷಣದ ವೈಜ್ಞಾನಿಕ ಅವಶ್ಯಕತೆಯನ್ನು ಹಿನ್ನೆಲೆಗೆ ಸರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕನ್ನಡ ಕೇವಲ ಆಡುಭಾಷೆಯಾಗಿ ಉಳಿಯುವ ಅಪಾಯ ತಪ್ಪಿದ್ದಲ್ಲ ಎಂದು ಬಿಳಿಮಲೆ ಹೇಳಿದ್ದಾರೆ. ಅತಿಥಿ ಶಿಕ್ಷಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಕಳೆದ ಸಾಲಿನಲ್ಲಿ ಕೇವಲ ನಲವತ್ತಮೂರು ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದು, ಇದು ಬೋಧನಾ ವ್ಯವಸ್ಥೆಯನ್ನು ಇನ್ನಷ್ಟು ಸಂಕೀರ್ಣವಾಗಿಸಿದೆ. ಅತಿಥಿ ಶಿಕ್ಷಕರಿಗೆ ನೀಡುವ…

Read More

ಬೆಂಗಳೂರು: ನಗರದಲ್ಲಿ ನಿನ್ನೆ ಬಿರುಗಾಳಿ ಸಹಿತ ಸುರಿದಂತ ಭಾರೀ ಮಳೆಗೆ ಮೊದಲ ಬಲಿಯಾಗಿತ್ತು. ಮರದಡಿ ಆಟೋ ನಿಲ್ಲಿಸಿಕೊಂಡು ನಿಂತಿದ್ದಂತ ಚಾಲಕನ ಮೇಲೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿದ್ದನು. ಈ ಬೆನ್ನಲ್ಲೇ ಸಾರ್ವಜನಿಕರೇ ಗಾಳಿ ಮಳೆ ಸಂದರ್ಭದಲ್ಲಿ ಮರದ ಕೆಳಗೆ ನಿಲ್ಲಬೇಡಿ ಅಂತ ಬಿಬಿಎಂಪಿ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಬೆಂಗಳೂರಿನಾದ್ಯಂತ ನಿನ್ನೆ ದಿನಾಂಕ: 01-05-2025 ರಂದು ಸಂಜೆ ಸುರಿದ ಮಳೆಗೆ ಪಾಲಿಕೆಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ ಕತ್ರಿಗುಪ್ಪೆ ಗೋ-ಗ್ಯಾಸ್ ಬಂಕ್‌ನ ಸಮೀಪ ನಿಂತಿದ್ದ ಆಟೋ ಹಾಗೂ ಎರಡು ಕಾರುಗಳ ಮೇಲೆ ಒಂದು ಬೃಹತ್ ಮರವು ಮುರಿದು ಬಿದ್ದ ಪರಿಣಾಮ ಮಹೇಶ್ ಸುಮಾರು 40 ವರ್ಷ ಇವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದಿದೆ. ಮುಂದುವರಿದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿರುತ್ತಾರೆ. ಗಾಳಿ ಮಳೆಗೆ ಎಲ್ಲಾ ವಲಯಗಳ ವ್ಯಾಪ್ತಿಯಲ್ಲಿ ಸುಮಾರು 23 ಮರಗಳು ಹಾಗೂ 52 ಬೃಹತ್ ರೆಂಬೆಗಳು ಬಿದ್ದಿರುವುದು ವರದಿಯಾಗಿರುತ್ತದೆ. ಅರಣ್ಯ ಘಟಕವು ಆಯಾ ವಲಯಗಳ ಅಧಿಕಾರಿಗಳೊಂದಿಗೆ ಜೊತೆಗೂಡಿ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 12,692 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದೆ. ಇವರಿಗೆ ಪ್ರತಿ ತಿಂಗಳು 39,000 ವೇತನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು…

Read More