Author: kannadanewsnow09

ಬೆಂಗಳೂರು/ಚಿತ್ರದುರ್ಗ:  ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ8ನೇ ಆರೋಪಿಯಾಗಿದ್ದಂತವರೊಬ್ಬರು ಡಿವೈಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬೆಂಗಳೂರಲ್ಲಿ ಇನ್ನಿಬ್ಬರು ಸೇರಿದಂತೆ ನಾಲ್ವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದಂತ ಮತ್ತಿಬ್ಬರನ್ನು ಚಿತ್ರದುರ್ಗದ ಡಿವೈಎಸ್ಪಿ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಎಡೆಮುರಿಕಟ್ಟಿ ಬಂದಿಸಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.6 ಆರೋಪಿಯಾಗಿದ್ದಂತ ಜಗ್ಗ ಆಲಿಯಾಸ್ ಜಗದೀಶ್ ಹಾಗೂ ಎ.7 ಆರೋಪಿಯಾಗಿದ್ದಂತ ಅನು ಆಲಿಯಾಸ್ ಅನುಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಚಿತ್ರದುರ್ಗ ನಗರದಿಂದ ಬಂಧಿಸಲಾಗಿದ್ದು, ಆ ನಂತ್ರ ಬೆಂಗಳೂರಿಗೆ ಕರೆದೊಯ್ಯುತ್ತಿರೋದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಇಬ್ಬರು ಆರೋಪಿಗಳ ಬಂಧನ ಇನ್ನೂ ಬೆಂಗಳೂರಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಪುನೀತ್, ಹೇಮಂತ್ ಎಂಬಾತನನ್ನು ಬಂಧಿಸಿದ್ದಾರೆ. ಈ ಇಬ್ಬರು ಸೇರಿದಂತೆ ನಾಲ್ವರನ್ನು ಕೋರ್ಟ್ ಗೆ ಹಾಜರುಪಡಿಸಿ, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯುವ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಕಾರಣ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿತ್ತು. ಈ ಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ನಡೆಸಿತು. ನ್ಯಾಯಪೀಠದ ಮುಂದೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೆಕ್ಷನ್ 8ರಡಿಯಲ್ಲಿ ಫೆಬ್ರವರಿ.2ರಂದು…

Read More

ನವದೆಹಲಿ: ನಾಸಾ 2024 ಎಲ್ಎಲ್ 1 ಎಂಬ ದೊಡ್ಡ ಕ್ಷುದ್ರಗ್ರಹವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದು ಪ್ರಸ್ತುತ ಹೆಚ್ಚಿನ ವೇಗದಲ್ಲಿ ಭೂಮಿಯತ್ತ ಬರುತ್ತಿದೆ. ಹೀಗಾಗಿ ಭೂಮಿಗೆ ಕ್ಷುದ್ರಗ್ರಹ ಅಪ್ಪಳಿಸೋ ಶಂಕೆಯನ್ನು ವ್ಯಕ್ತ ಪಡಿಸಿದ್ದಾರೆ. ಅಪೊಲೊ ಕ್ಷುದ್ರಗ್ರಹ ಎಂದು ವರ್ಗೀಕರಿಸಲಾದ ಇದು ಸುಮಾರು 68 ಅಡಿ (20.69 ಮೀಟರ್) ಗಾತ್ರವನ್ನು ಹೊಂದಿದೆ. ಗಂಟೆಗೆ 33,186 ಕಿಲೋಮೀಟರ್ (ಗಂಟೆಗೆ 20,621 ಮೈಲಿಗಳು) ವೇಗದಲ್ಲಿ ಚಲಿಸುತ್ತಿದೆ. ಈ ಕ್ಷುದ್ರಗ್ರಹವು ಜೂನ್ 15, 2024 ರಂದು 07:58 ಯುಟಿಸಿ (ಭಾರತೀಯ ಕಾಲಮಾನ ಮಧ್ಯಾಹ್ನ 1:28) ಕ್ಕೆ ಭೂಮಿಗೆ ಹತ್ತಿರವಾಗಲಿದೆ, ಆಗ ಅದು ನಮ್ಮ ಗ್ರಹದಿಂದ ಸುಮಾರು 1.99 ಮಿಲಿಯನ್ ಕಿಲೋಮೀಟರ್ ಒಳಗೆ ಬರಲಿದೆ. ಈ ದೂರವು ಆತಂಕಕಾರಿಯಾಗಿ ತೋರಿದರೂ, ಈ ನಿರ್ದಿಷ್ಟ ಕ್ಷುದ್ರಗ್ರಹದಿಂದ ಪರಿಣಾಮ ಬೀರುವ ಯಾವುದೇ ಅಪಾಯವಿಲ್ಲ ಎಂದು ನಾಸಾ ಭರವಸೆ ನೀಡುತ್ತದೆ. ನಾಸಾದ ಸೆಂಟರ್ ಫಾರ್ ನಿಯರ್ ಅರ್ಥ್ ಆಬ್ಜೆಕ್ಟ್ ಸ್ಟಡೀಸ್ (ಸಿಎನ್ಇಒಎಸ್) ಪ್ರಕಾರ, ಭೂಮಿಯ ಸಮೀಪವಿರುವ ಹೆಚ್ಚಿನ ವಸ್ತುಗಳು ನಮಗೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ…

Read More

ಅಮರಾವತಿ: ಆಂಧ್ರಪ್ರದೇಶದಲ್ಲಿ ಹೊಸದಾಗಿ ರಚನೆಯಾದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ನಂತರ, ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಹೊಸ ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಾಗಾದ್ರೆ ಯಾರಿಗೆ ಯಾವ ಖಾತೆ ಹಂಚಿಕೆ ಅಂತ ಮುಂದೆ ಓದಿ. ಆಂಧ್ರಪ್ರದೇಶದ ಸಚಿವರ ಖಾತೆಗಳ ಪಟ್ಟಿಯ ಪ್ರಕಾರ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಪಂಚಾಯತ್ ರಾಜ್, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವನ್ನು ಹಂಚಿಕೆ ಮಾಡಲಾಗಿದ್ದು, ಸಿಎಂ ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರಿಗೆ ಮಾನವ ಸಂಪನ್ಮೂಲ, ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದ ಜವಾಬ್ದಾರಿಯನ್ನು ನೀಡಲಾಗಿದೆ. ವಿಶೇಷವೆಂದರೆ, ಇತ್ತೀಚೆಗೆ ಮುಕ್ತಾಯಗೊಂಡ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ನೇತೃತ್ವದ ಪವನ್ ಕಲ್ಯಾಣ್ ಅವರ ಜನಸೇನಾ ಮೈತ್ರಿಕೂಟವು ರಾಜ್ಯದಲ್ಲಿ ಅದ್ಭುತ ವಿಜಯವನ್ನು ದಾಖಲಿಸಿದೆ. ಒಟ್ಟು 175 ಸ್ಥಾನಗಳಲ್ಲಿ ಮೈತ್ರಿಕೂಟವು 164 ಸ್ಥಾನಗಳನ್ನು ಗೆದ್ದರೆ, ಟಿಡಿಪಿ 135 ಸ್ಥಾನಗಳನ್ನು ಗೆದ್ದರೆ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನಸೇನಾ 21…

Read More

ನವದೆಹಲಿ: ಬಿಎಸ್ಇ-ಲಿಸ್ಟೆಡ್ ಎಲ್ಲಾ ಕಂಪನಿಗಳ ಒಟ್ಟು ಮಾರುಕಟ್ಟೆ ಕ್ಯಾಪ್ ಮತ್ತೆ ಹಾಂಗ್ ಕಾಂಗ್ ಅನ್ನು ಹಿಂದಿಕ್ಕಿ ಜಾಗತಿಕವಾಗಿ ನಾಲ್ಕನೇ ಅತಿ ಹೆಚ್ಚು ಈಕ್ವಿಟಿ ಮಾರುಕಟ್ಟೆಯಾಗಿದೆ. ಬ್ಲೂಮ್ಬರ್ಗ್ನ ಅಂಕಿಅಂಶಗಳ ಪ್ರಕಾರ, ಪ್ರಸ್ತುತ, ಬಿಎಸ್ಇ ಎಲ್ಲಾ ಪಟ್ಟಿ ಮಾಡಲಾದ ಎಂಸಿಎಪಿ 5.18 ಟ್ರಿಲಿಯನ್ ಡಾಲರ್ ಆಗಿದ್ದು, ಹಾಂಗ್ ಕಾಂಗ್ಗೆ 5.17 ಟ್ರಿಲಿಯನ್ ಡಾಲರ್ ಆಗಿದೆ. ಪ್ರಸ್ತುತ, ಯುಎಸ್ 56.49 ಟ್ರಿಲಿಯನ್ ಡಾಲರ್ ಎಂಸಿಎಪಿಯೊಂದಿಗೆ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಚೀನಾ 8.84 ಟ್ರಿಲಿಯನ್ ಡಾಲರ್ ಮತ್ತು ಜಪಾನ್ 6.30 ಟ್ರಿಲಿಯನ್ ಡಾಲರ್ ಎಂಸಿಎಪಿಯೊಂದಿಗೆ ನಂತರದ ಸ್ಥಾನದಲ್ಲಿದೆ. ಕಳೆದ ಬಾರಿ ಜನವರಿ 23 ರಂದು, ಭಾರತೀಯ ಮಾರುಕಟ್ಟೆಗಳು ಹಾಂಗ್ ಕಾಂಗ್ ಅನ್ನು ಮೀರಿಸಿದವು, ಆದರೆ ಹಾಂಗ್ ಕಾಂಗ್ ಶೀಘ್ರದಲ್ಲೇ ನಾಲ್ಕನೇ ಸ್ಥಾನವನ್ನು ಮರಳಿ ಪಡೆಯಿತು. ಏಪ್ರಿಲ್ ನಿಂದೀಚೆಗೆ ಹಾಂಗ್ ಕಾಂಗ್ ನ ಹಾಂಗ್ ಸೆಂಗ್ ಸೂಚ್ಯಂಕ ಶೇ.12ರಷ್ಟು ಏರಿಕೆ ಕಂಡಿದ್ದು, ಜನವರಿಯಲ್ಲಿ ಕನಿಷ್ಠ ಶೇ.20ರಷ್ಟು ಏರಿಕೆ ಕಂಡಿದೆ. ಚೀನಾದ ಆರ್ಥಿಕ ಕಾಳಜಿಗಳು ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ…

Read More

ದಾವಣಗೆರೆ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಹತ್ಯೆಗೆ ನ್ಯಾಯ ದೊರೆಯಬೇಕು ಅಂತ ಆದ್ರೇ, ಅದು ನಟ ದರ್ಶನ್ ಕನ್ನಡ ಚಿತ್ರರಂಗಳನ್ನು ಬ್ಯಾನ್ ಮಾಡಿದಾಗ ಮಾತ್ರವೇ ಆಗಿದೆ. ಅಲ್ಲದೇ ನಟ ದರ್ಶನ್ ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧ ಮಾಡಬೇಕು ಎಂಬುದಾಗಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹತ್ಯೆಗೀಡಾದಂತ ದರ್ಶನ್ ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಈ ನೆಲದ ಕಾನೂನಿಡಿ ಆರೋಪಿಯಾಗಿರುವಂತ ನಟ ದರ್ಶನ್ ಗೆ ಶಿಕ್ಷೆಯಾಗಬೇಕು ಎಂದರು. ನಟ ದರ್ಶನ್ ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು. ಸಿಟ್ಟು ಬಂದಿದ್ದರೇ ಎರಡು ಹೊಡೆದಿದ್ದರೇ ಆಗಿತ್ತು. ಅದರ ಬದಲಿಗೆ ಹೀಗೆ ಹತ್ಯೆ ಮಾಡಿದ್ದು ಕ್ರೂರತನವಾಗಿದೆ. ಇಂತಹ ನಟ ದರ್ಶನ್ ತಪ್ಪು ಮಾಡಿದ್ರೇ ಸೂಕ್ತ ಕಾನೂನು ಕ್ರಮ ಆಗಲಿ ಎಂದರು. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಬಗ್ಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಈ ರೀತಿ ದ್ವೇಷದ…

Read More

ಬೆಂಗಳೂರು: ನಗರದಲ್ಲಿನ ಜವಾಹರ್ ಬಾಲಭವನ ಸೊಸೈಟಿಯ ಅಧ್ಯಕ್ಷರನ್ನಾಗಿ ಬಿಆರ್ ನಾಯ್ಡು ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ ಎಸ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಬಿಆರ್ ನಾಯ್ಡು, ಎಂಬೇಸಿ ಹ್ಯಾಬಿಟೆಟ್, ಅರಮನೆ ರಸ್ತೆ, ವಸಂತನಗರ, ಬೆಂಗಳೂರು ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಯಡಿಯಲ್ಲಿ ಬರುವ ಜವಾಹರ್ ಬಾಲಭವನ ಸೊಸೈಟಿ, ಬೆಂಗಳೂರು ಇದರ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ. https://kannadanewsnow.com/kannada/420-cases-registered-against-union-minister-v-somannas-son/ https://kannadanewsnow.com/kannada/note-applications-invited-for-scholarships-from-scheduled-tribe-law-graduates/

Read More

ಬೆಂಗಳೂರು: ಕೇಂದ್ರ ಸಚಿವರಾದಂತ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ವಿರುದ್ಧ 420 ಕೇಸ್ ದಾಖಲಾಗಿದೆ. ಈ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಲಾಗಿದೆ. ಈ ಸಂಬಂಧ ಅರುಣ್ ಸೋಮಣ್ಣ, ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ನ್ಯಾಯಾಲಯದ ಕರ್ತವ್ಯ ಸಿಬ್ಬಂದಿ ಪಿಸಿ 14233 ರವರು ಠಾಣೆಗೆ ಹಾಜರಾಗಿ ನೀಡಿದ ಪಿ.ಸಿ.ಆರ್ ನಂ 6013/2024 ರ ದೂರಿನ ಸಾರಾಂಶವೆನೆಂದರೆ, ದೂರುದಾರರಾದ ತೃಪ್ತಿ ಮತ್ತು ಆಕೆಯ ಗಂಡ ಮಧ್ವರಾಜ್ ರವರು ಇವೆಂಟ್ ಮ್ಯಾನೇಜ್ ಮೆಂಟ್ ಕೆಲಸವನ್ನು ಮಾಡಿಕೊಂಡಿದ್ದು, 2013 ರಲ್ಲಿ ದೂರುದಾರರ ಪತಿಯು ನಡೆಸುತ್ತಿದ್ದ ವೆಂಟ್ ಮ್ಯಾನೇಜ್ ಮೆಂಟ್ ವ್ಯವಹಾರಕ್ಕೆ…

Read More

ಚಿತ್ರದುರ್ಗ: ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ8ನೇ ಆರೋಪಿಯಾಗಿದ್ದಂತವರೊಬ್ಬರು ಡಿವೈಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದಂತ ಮತ್ತಿಬ್ಬರನ್ನು ಚಿತ್ರದುರ್ಗದ ಡಿವೈಎಸ್ಪಿ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಎಡೆಮುರಿಕಟ್ಟಿ ಬಂದಿಸಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.6 ಆರೋಪಿಯಾಗಿದ್ದಂತ ಜಗ್ಗ ಆಲಿಯಾಸ್ ಜಗದೀಶ್ ಹಾಗೂ ಎ.7 ಆರೋಪಿಯಾಗಿದ್ದಂತ ಅನಿ ಆಲಿಯಾಸ್ ಅನಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಚಿತ್ರದುರ್ಗ ನಗರದಿಂದ ಬಂಧಿಸಲಾಗಿದ್ದು, ಆ ನಂತ್ರ ಬೆಂಗಳೂರಿಗೆ ಕರೆದೊಯ್ಯುತ್ತಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/fir-registor-union-mister/ https://kannadanewsnow.com/kannada/note-applications-invited-for-scholarships-from-scheduled-tribe-law-graduates/

Read More

ಬೆಂಗಳೂರು: ರಾಜ್ಯದ ಜನತೆಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವಂತ ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿಗೆ ಮತ್ತೊಂದು ಗರಿಮೆ ಸಂದಿದೆ. ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವಂತ ಕೆ ಎಸ್ ಆರ್ ಟಿಸಿಗೆ ಈಗ ಮಧ್ಯಪ್ರದೇಶ ನಾಯಕತ್ವ ಪ್ರಶಸ್ತಿ 2024 ಪಡೆದಿದೆ. ಇದು ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಲಭಿಸಿದೆ. ಇಂದು ಹೋಟೇಲ್ WoW crest, IHCL SeleQtions, ಇಂದೋರ್ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ಆರ್. ಎಲ್. ಭಾಟಿಯ, ಸಂಸ್ಥಾಪಕರು ವರ್ಲ್ಡ್ ಸಿಎಸ್ಆರ್ ಡೇ ಮತ್ತು ವರ್ಲ್ಡ್ ಸಸ್ಟೈನ್ಬಿಲಿಟಿ ಹಾಗೂ ಡಾ. ಅಲೋಕ್ ಪಂಡಿತ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಫನ್ ಅಂಡ್ ಜಾಯ್ ಮತ್ತು ಕಾರ್ಯ ನಿರ್ವಾಹಣಾ ನಿರ್ದೇಶಕರು ಸಿ.ಎಂ.ಓ ಏಷ್ಯಾ ರವರು, ನಿಗಮಕ್ಕೆ ಪ್ರಶಸ್ತಿ ಪ್ರಧಾನ ಮಾಡಿದರು. ಜೆ ಆಂಥೋಣಿ ಜಾರ್ಜ್, ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ) ಹಾಗೂ ಜಿ.ಎನ್ ಲಿಂಗರಾಜು, ಮುಖ್ಯ ಭಧ್ರತಾ ಮತ್ತು ಜಾಗೃತಾಧಿಕಾರಿ, ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ ರವರು ನಿಗಮದ…

Read More