Author: kannadanewsnow09

ಪ್ರತಿಯೊಬ್ಬ ವ್ಯಕ್ತಿಗೂ ದೇವರಲ್ಲಿ ನಂಬಿಕೆ ಇರುತ್ತದೆ. ಆದ್ದರಿಂದಲೇ ನಮಗೆ ಕಷ್ಟ ಬಂದಾಗೆಲ್ಲ ದೇವರನ್ನು ಮೊದಲು ಸ್ಮರಿಸುತ್ತೇವೆ. ಪ್ರತಿ ಹಿಂದೂ ಕುಟುಂಬದಲ್ಲಿ ದೇವರು ಮತ್ತು ದೇವತೆಗಳನ್ನು ಪ್ರತಿದಿನ ಪೂಜಿಸಲಾಗುತ್ತದೆ. ಆದರೆ ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು. ಪ್ರತಿದಿನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುವುದರಿಂದ ಒಂದಲ್ಲ ಎರಡಲ್ಲ 36 ಪ್ರಯೋಜನಗಳಿವೆ ಮತ್ತು ಈ ಪ್ರಯೋಜನಗಳನ್ನು ಧರ್ಮ ಗ್ರಂಥಗಳ ಆಧಾರದ ಮೇಲೆ ಮತ್ತು ವೈಜ್ಞಾನಿಕ ಆಧಾರದ ಮೇಲೆ ಪ್ರಯೋಜನಕಾರಿ ಎಂದು ಪರಿಗಣಿಸ ಲಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…

Read More

ಬೆಂಗಳೂರು : ನೀರಾವರಿ ಕ್ಷೇತ್ರದ ಅಭಿವೃದ್ಧಿ, ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸುವುದಕ್ಕೆ ಮೊದಲ ಆದ್ಯತೆ. ನಂತರ ರಸ್ತೆ ಅಭಿವೃದ್ದಿಗೆ ಒತ್ತು ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೃಹತ್ ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರು ಯಗಚಿ ನದಿ ಆಣೆಕಟ್ಟಿನ ಅಭಿವೃದ್ಧಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ; “ಯಗಚಿ ನದಿ ಅಣೆಕಟ್ಟಿನ ಕಾಲುವೆಗಳ ಅಭಿವೃದ್ದಿ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದು, ಈಗಾಗಲೇ 5.5 ಕಿ.ಮೀ.ನಷ್ಟು ಮಣ್ಣನ್ನು ತೆಗೆದಿದ್ದು, 1.5 ಕಿ.ಮೀ.ನಷ್ಟು ಕಾಮಗಾರಿ ಭೂಸ್ವಾಧೀನದ ವಿಚಾರವಾಗಿ ಸ್ಥಗಿತಗೊಂಡಿದೆ. ಎತ್ತಿನಹೊಳೆ ಯೋಜನೆಗೆ ಮಹತ್ವ ನೀಡಿದಂತೆ ಯಗಚಿ ಯೋಜನೆಗೂ ಮೊದಲ ಆದ್ಯತೆ ನೀಡುತ್ತೇವೆ” ಎಂದರು. ಚಿಕ್ಕನಾಯಕನಹಳ್ಳಿ ಶಾಸಕರಾದ ಸುರೇಶ್ ಬಾಬು ಅವರ “ಭದ್ರಾ ಮೇಲ್ದಂಡೆ ಯೋಜನೆಯ ಮಂದಗತಿ ಕಾಮಗಾರಿಯ ಬಗ್ಗೆ…

Read More

ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಜೆಟ್ 2.98 ಲಕ್ಷ ಕೋಟಿ ಇದ್ದು, ಫೆಬ್ರವರಿ ಮಧ್ಯಭಾಗಕ್ಕೆ ಬಂದರೂ ಶೇ 38 ರಷ್ಟು ಹಣ ವ್ಯಯಿಸದೆ ಬಾಕಿ ಇದೆ. 1.13 ಲಕ್ಷ ಕೋಟಿ ಹಣ ಖರ್ಚಾಗಿಲ್ಲ. ನಮ್ಮ ಕಡೆ ಒಮ್ಮೆ ಬಂದು ಚೆಕ್ ಮಾಡಿ ಎಂದರಲ್ಲದೆ, ನಮ್ಮಲ್ಲಿ ಪ್ರತಿ ತಿಂಗಳೂ ಪ್ರಧಾನಿಯವರು ಹಣ ಖರ್ಚಾದುದರ ಕುರಿತು ಸಭೆ ನಡೆಸುತ್ತಾರೆ. ಇಲ್ಲಿ ಮಾರ್ಚ್‍ನಲ್ಲಿ ಲೆಕ್ಕ ತೋರಿಸುತ್ತಾರಷ್ಟೇ ಎಂದು ಟೀಕಿಸಿದರು. ಕೇಂದ್ರ ಪ್ರಾಯೋಜಿತ ವಿವಿಧ ಯೋಜನೆಗಳ ಶೇ 34 ರಷ್ಟು (5,727 ಕೋಟಿ ರೂ) ಹಣ ಖರ್ಚಾಗದೆ ಉಳಿದಿದೆ.…

Read More

ಬೆಂಗಳೂರು: ನಗರದ ಯಲಹಂಕ ವಲಯದ ಕೊಡಿಗೇಹಳ್ಳಿ ವಾರ್ಡ್ ನಲ್ಲಿ ಸುಮಾರು 85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಬಿಎಂಪಿಯು, ನಗರದ ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಒತ್ತುವರಿಮಾಡಿಕೊಂಡಿದ್ದ ಸುಮಾರು 85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಾಲಿಕೆ ವಶಪಡಿಸಿಕೊಂಡಿದೆ ಎಂದಿದೆ. ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಾಗದಲ್ಲಿ ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡು ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರು ಎಂದು ತಿಳಿಸಿದೆ. ಅದರಂತೆ, ದಿನಾಂಕ: 13-02-2024 ರಂದು ಬಿಬಿಎಂಪಿಯ ಯಲಹಂಕ ವಲಯ ವಲಯದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಯ ಸಹಯೋಗದೊಂದಿಗೆ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದಿದೆ. ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ 4 ಜೆ.ಸಿ.ಬಿ. 6 ಟಿಪ್ಪರ್‌ಗಳು, 12…

Read More

ದುಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮಂಗಳವಾರ ಅಬುಧಾಬಿಯಲ್ಲಿ ಯುಪಿಐ ರುಪೇ ಕಾರ್ಡ್ ಸೇವೆಯನ್ನು ಪರಿಚಯಿಸಿದರು. ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅವರು ಆಗಮಿಸಿದಾಗ, ಯುಎಇ ಅಧ್ಯಕ್ಷರು ಅವರನ್ನು ಸ್ವಾಗತಿಸಿದರು ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು. https://twitter.com/ANI/status/1757368963405647882 ಈಗಾಗಲೇ ಶ್ರೀಲಂಕಾ, ಮಾರೀಷ್ ನಲ್ಲಿಯೂ ಯುಪಿಐ ಪಾವತಿ ಸೇವೆಯನ್ನು ಭಾರತ ಆರಂಭಿಸಿದೆ. ಈಗ ಮುಂದುವರೆದು ಅಬುದಾಬಿಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುವ ಮೂಲಕ ಪ್ರಾರಂಭಿಸಲಾಗಿದೆ. https://kannadanewsnow.com/kannada/launch-of-upi-a-milestone-in-existing-strong-bilateral-ties-mauritius-envoy/ https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/

Read More

ಬೆಂಗಳೂರು: ಸರ್ಕಾರ ಗ್ರಾಮ ಪಂಚಾಯತಿಗಳನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಿಷ್ಠಗೊಳಿಸುವ ಸಂಕಲ್ಪ ಮಾಡಿದ್ದು, ಗ್ರಾಮ ಪಂಚಾಯತಿ ಸದಸ್ಯರು ಸರ್ಕಾರದ ಜೊತೆ ಕೈ ಜೋಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬೇಡಿಕೆಗಳನ್ನು ಆಲಿಸಿ ವಿಸೃತವಾಗಿ ಚರ್ಚಿಸಿದ ನಂತರ ಒಕ್ಕೂಟ ನೀಡಿರುವ ಬೇಡಿಕೆಗಳನ್ನು ಪರಿಶೀಲಿಸಿ ಸಾಧ್ಯವಾಗಬಲ್ಲ ಬೇಡಿಕೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಜವಾಬ್ದಾರಿ ನಕ್ಷೆಯಲ್ಲಿರುವ ರೀತಿಯಲ್ಲಿ ಅಧಿಕಾರ, ಹಣಕಾಸು, ಮಾನವ ಸಂಪನ್ಮೂಲ ಹಾಗೂ ಜವಾಬ್ದಾರಿ ನಿರ್ವಹಿಸುವ ಸ್ವಾತಂತ್ರ್ಯವನ್ನು ಪಂಚಾಯತಿಗಳಿಗೆ ವರ್ಗಾಯಿಸುವ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎಂ.ಚಲಪತಿ ಮತ್ತು ಪದಾಧಿಕಾರಿಗಳಿಗೆ ತಿಳಿಸಿದರು ಗ್ರಾಮಸಭೆಗಳು ಸದೃಢವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವುದು, ಬಾಪೂಜಿ ಸೇವಾ ಕೇಂದ್ರಗಳನ್ನು ಸಶಕ್ತಗೊಳಿಸುವುದು, ಗ್ರಾಮ…

Read More

ನವದೆಹಲಿ: ಪ್ರಧಾನಿ ಮೋದಿಯವರ “ಮೋದಿ ಕಿ ಗ್ಯಾರಂಟಿಗಳಿಗೆ” ಪ್ರತಿಕ್ರಿಯೆಯಾಗಿ, ಕಾಂಗ್ರೆಸ್ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಭರವಸೆ ಸೇರಿದಂತೆ ಹಲವಾರು “ಕಾಂಗ್ರೆಸ್ ಕಿ ಗ್ಯಾರಂಟಿಗಳನ್ನು” ಘೋಷಿಸಿತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯತ್ತ ನಡೆಯುತ್ತಿರುವ ರೈತರ ಮೆರವಣಿಗೆಯನ್ನುದ್ದೇಶಿಸಿ ಮಾತನಾಡುತ್ತಾ, ಅವರು ರೈತರ ಪ್ರತಿಭಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಎಂಎಸ್ಪಿಗೆ ಕಾನೂನು ಹಕ್ಕುಗಳನ್ನು ಶಿಫಾರಸು ಮಾಡುವ ಎಂಎಸ್ ಸ್ವಾಮಿನಾಥನ್ ವರದಿಯ ಅನುಷ್ಠಾನದ ಬೇಡಿಕೆಯನ್ನು ಒತ್ತಿ ಹೇಳಿದರು. “ಐಎನ್ಡಿಐಎ ಸರ್ಕಾರ ಅಧಿಕಾರಕ್ಕೆ ಬಂದಾಗ, ಸ್ವಾಮಿನಾಥನ್ ವರದಿಯಲ್ಲಿ ಉಲ್ಲೇಖಿಸಿದ್ದನ್ನು ಪೂರೈಸುವ ಮೂಲಕ ನಾವು ಭಾರತದ ರೈತರಿಗೆ ಎಂಎಸ್ಪಿಯ ಖಾತರಿಯನ್ನು ನೀಡುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. https://twitter.com/ANI/status/1757357239436800104 ಛತ್ತೀಸ್ಗಢದ ಅಂಬಿಕಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖರ್ಗೆ, “ನಾವು ಅದನ್ನು ಕಾಂಗ್ರೆಸ್ ಗ್ಯಾರಂಟಿ ಎಂದು ಕರೆಯುತ್ತೇವೆ, ಆದರೆ ಅವರು ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ. ಇಷ್ಟೊಂದು ಅಹಂಕಾರದಿಂದ ಅವರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದ್ದಾರೆಯೇ…

Read More

ಚನ್ನರಾಯಪಟ್ಟಣ: ನಗರದ ಬೈರಾಪಟ್ಟಣ ಗ್ರಾಮದಲ್ಲಿ ಸರ್ಕಾರದಿಂದ ನೀಡಲಾಗುತ್ತಿದ್ದಂತ ಚುಚ್ಚುಮದ್ದು ಪಡೆದಂತ ಒಂದೇ ಗಂಟೆಯಲ್ಲಿ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ಸ್ಪೂರ್ತಿ ಹಾಗೂ ಮೋಹನ್ ಎಂಬುವರ ದಂಪತಿಯ ಒಂದೂವರೆ ತಿಂಗಳ ಮಗುವನ್ನು ಜಸ್ಟಿಂಕ್ ಪೆಂಟಾ ಎಂಬಂತ ವ್ಯಾಕ್ಸಿನ್ ಕೊಡಿಸೋದಕ್ಕೆ ಕರೆದೊಯ್ಯಲಾಗಿತ್ತು. ಸರ್ಕಾರಿ ಆಸ್ಪತ್ರೆಗೆ ತೆರಳಿ ಜಸ್ಟಿಂಕ್ ಪೆಂಟಾ ವ್ಯಾಕ್ಸಿನ್ ಪಡೆದು ಮನೆಗೆ ಮರಳಿದಾಗ, ಮನೆಗೆ ಮಗು ಮರಳಿದಂತ ಒಂದೇ ಗಂಟೆಯಲ್ಲಿ ಮಗು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಒಂದು ತಿಂಗಳ ಗಂಡು ಮಗು ವ್ಯಾಕ್ಸಿನ್ ಪಡೆದ ನಂತ್ರ ಸಾವನ್ಪಪ್ಪಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/congress-has-decided-to-give-legal-guarantee-of-msp-on-crops-to-farmers-rahul-gandhi/ https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/

Read More

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷದಿಂದ ಜನತೆಗೆ ಗ್ಯಾರಂಟಿ ಯೋಜನೆಯೊಂದನ್ನು ಘೋಷಣೆ ಮಾಡಲಾಗಿದೆ. ಅದೇ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿರೋದು ಆಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ರೈತ ಸಹೋದರರೇ, ಇಂದು ಐತಿಹಾಸಿಕ ದಿನ! ಸ್ವಾಮಿನಾಥನ್ ಆಯೋಗದ ಪ್ರಕಾರ ಪ್ರತಿಯೊಬ್ಬ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಸಮೃದ್ಧಿಯನ್ನು ಖಚಿತಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ. ಇದು ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ನ ಮೊದಲ ಖಾತರಿಯಾಗಿದೆ ಎಂದು  ಹೇಳಿದ್ದಾರೆ. https://twitter.com/RahulGandhi/status/1757352569310163423 https://kannadanewsnow.com/kannada/vishwaguru-basavanna-cultural-leader-slogan-in-all-government-offices-cm-siddaramaiah/ https://kannadanewsnow.com/kannada/launch-of-upi-a-milestone-in-existing-strong-bilateral-ties-mauritius-envoy/

Read More

ಬೆಂಗಳೂರು : ವಿಶ್ವ ಗುರು ಬಸವಣ್ಣ ಸಾಂಸ್ಕøತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿದರು. ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದರು. ಬಸವ ಜಯಂತಿ ಆಚರಿಸಿ, ಹಣೆಬರಹ, ನನ್ನ ಕರ್ಮ ಎನ್ನುವುದು ಪುನ: ದಾರಿ ತಪ್ಪಿಸಿದಂತಾಗುತ್ತದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕøತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ ಎಂದರು. ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಶಿವಮೊಗ್ಗದಲ್ಲಿ…

Read More