Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : 1 ಮಿಲಿಯನ್ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯಿಂದ 2021 ನೇ ಸಾಲಿನಲ್ಲಿ ಘೋಷಿಸಲಾಗಿದ್ದ ಸೆಮಿಕಾನ್ ಇಂಡಿಯಾ ಯೋಜನೆ ಉದ್ದೇಶಿತ ಗುರಿಯನ್ನು ತಲುಪುವಲ್ಲಿ ವಿಫಲವಾಗಿರುವುದು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವರಾದ ಜಿತಿನ್ ಪ್ರಸಾದ್ ಲೋಕಸಭೆಗೆ ನೀಡಿದ ತಮ್ಮ ಲಿಖಿತ ಉತ್ತರ ಮೂಲಕ ಸ್ಪಷ್ಟವಾಗಿದೆ, ಸೆಮಿಕಾನ್ ಇಂಡಿಯಾ ಯೋಜನೆಯ ಅನುಷ್ಠಾನದಲ್ಲಿ ಅಗಿರುವ ಲೋಪಗಳು ಕ್ವಾಂಟಮ್ ಮಿಷನ್ನಲ್ಲಿ ಮರುಕಳಿಸದೇ ಇರುವಂತೆ ಎಚ್ಚರವಹಿಸುವುದು ಬಹಳ ಅಗತ್ಯವಾಗಿದೆ ಎಂದು ರಾಯಚೂರು ಸಂಸದರಾದ ಜಿ ಕುಮಾರ ನಾಯಕ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಸೆಮಿಕಾನ್ ಇಂಡಿಯಾ ಯೋಜನೆಯ ಮೂಲಕ 27 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಸರ್ಕಾರ ತಮ್ಮ ಉತ್ತರದಲ್ಲಿ ಹೇಳಿಕೊಂಡಿದೆ. ಆದರೆ, 2021 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದ ಸಂಧರ್ಭದಲ್ಲಿ 1 ಮಿಲಿಯನ್ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಗುರಿಯನ್ನು ಇಟ್ಟುಕೊಳ್ಳಲಾಗಿತ್ತು. ಈಗ ತಮ್ಮ ಉತ್ತರದಲ್ಲಿ ನಮೂದಿಸಿರುವ ಉದ್ಯೋಗಾವಕಾಶಗಳ ಸಂಖ್ಯೆಯನ್ನು ನೋಡಿದಾಗ, ಯೋಜನೆ ಘೋಷಣೆಗಷ್ಟೇ ಸೀಮಿತವಾಗಿರುವುದು ಸ್ಪಷ್ಟವಾಗುತ್ತಿದೆ. ಭಾರತ…
ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಮಲೆ…
ನವದೆಹಲಿ: ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾದಾಗ ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್ಟಿಎ) ಔಪಚಾರಿಕವಾಗಿ ಸಹಿ ಹಾಕಿದರು. ಇದು ಎರಡೂ ದೇಶಗಳು ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮಹತ್ವದ ತಿರುವು ಎಂದು ಬಣ್ಣಿಸಿವೆ. ಎಫ್ಟಿಎ ಸುಂಕದಿಂದ ಭಾರತೀಯ ರಫ್ತಿನ 99 ಪ್ರತಿಶತದಷ್ಟು ಪ್ರಯೋಜನವನ್ನು ಪಡೆಯುತ್ತದೆ ಮತ್ತು ಬ್ರಿಟಿಷ್ ಕಂಪನಿಗಳು ಒಟ್ಟಾರೆ ವ್ಯಾಪಾರ ಬುಟ್ಟಿಯನ್ನು ಹೆಚ್ಚಿಸುವುದರ ಜೊತೆಗೆ ಭಾರತಕ್ಕೆ ವಿಸ್ಕಿ, ಕಾರುಗಳು ಮತ್ತು ಇತರ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭಗೊಳಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಗಂಟೆಗಳ ಮೊದಲು, ಸ್ಟಾರ್ಮರ್ ಭಾರತದ ವ್ಯಾಪಾರ ಒಪ್ಪಂದವನ್ನು ‘ಕ್ರಿಯೆಯಲ್ಲಿ ಬದಲಾವಣೆಗಾಗಿ ಯೋಜನೆ’ ಎಂದು ಕರೆದರು. “ಭಾರತದೊಂದಿಗಿನ ಒಂದು ಮಹತ್ವದ ಒಪ್ಪಂದ ಎಂದರೆ ಯುಕೆಯಲ್ಲಿ ಉದ್ಯೋಗಗಳು, ಹೂಡಿಕೆ ಮತ್ತು ಬೆಳವಣಿಗೆ. ಇದು ಸಾವಿರಾರು ಬ್ರಿಟಿಷ್ ಉದ್ಯೋಗಗಳನ್ನು ಸೃಷ್ಟಿಸುತ್ತದೆ, ವ್ಯವಹಾರಗಳಿಗೆ ಹೊಸ ಅವಕಾಶಗಳನ್ನು ತೆರೆಯುತ್ತದೆ ಮತ್ತು ದುಡಿಯುವ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಈ ಕಾಯ್ದೆ ಸದನದಲ್ಲಿ ಮಂಡನೆಯಾಗಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ ಆಗಲಿದೆ. ಹೌದು ಇನ್ಮುಂದೆ ಬಾಲ್ಯ ವಿವಾಹದಂತ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮವಾಗುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಲುವಾಗಿ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಇದಷ್ಟೇ ಅಲ್ಲದೇ ಬಾಲ್ಯ ವಿವಾಹಕ್ಕೆ ಕುಟುಂಬಸ್ಥರ ಒಪ್ಪಿಗೆ ಇದ್ದರೂ ಇನ್ಮುಂದೆ ಕಾನೂನು ಕ್ರಮ ಆಗಲಿದೆ. ತೊಟ್ಟಿಲು ಮದುವೆಯಾದರೂ ಶಿಕ್ಷೆಯನ್ನು ಕೈಗೊಳ್ಳುವಂತ ಅವಕಾಶವನ್ನು ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆಯಡಿ ಜಾರಿಗೆ ತರಲಾಗಿದೆ. ಯಾರೇ ಒತ್ತಡ ಹಾಕಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿಗೆ ತಿದ್ದುಪಡಿ ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ 2024-2029ಕ್ಕೆ ತಿದ್ದುಪಡಿ ಮಾಡಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ಮರಳಿ ಜಾತಿ ಗಣತಿ ಮಾಡಲಿದೆ ಎಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ. ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ…
ಬೆಂಗಳೂರು: ನಗರದಲ್ಲಿ ಶಾಕಿಂಗ್ ಎನ್ನುವಂತ ಘಟನೆಯೊಂದು ನಡೆದಿದೆ. ಹೆತ್ತ ತಾಯಿಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಲಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಾಲಕ್ಷ್ಮೀ ಎಂಬುವರು ತನ್ನ ಐದು ವರ್ಷದ ಪುತ್ರಿ ಸಿರಿಯನ್ನು ಕೊಂದು ತಾನೂ ಆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೇ ಆತ್ಮಹತ್ಯೆ ಯತ್ನ ವಿಫಲವಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಮಹಾಲಕ್ಷ್ಮೀ 8 ವರ್ಷಗಳ ಹಿಂದೆ ಪ್ರೀತಿಸಿ ಜಯರಾಮ್ ಎಂಬುವರನ್ನು ಮದುವೆಯಾಗಿದ್ದರು. ಆದರೇ ಇತ್ತೀಚೆಗೆ ಜಯರಾಮ್ ಹಾಗೂ ಮಹಾಲಕ್ಷ್ಮಿ ನಡುವೆ ಜಗಳ ಹೆಚ್ಚಾಗಿತ್ತು. ಇಂದು ಕೂಡ ಜಗಳವಾದ ನಂತ್ರ ಗಂಡನ ಮೇಲಿನ ಸಿಟ್ಟಿನಿಂದ ಪುತ್ರಿ ಸಿರಿ ಕೊಂದು, ತಾನೂ ಆತ್ಮಹತ್ಯೆ ಯತ್ನದಂತ ಘಟನೆ ನಡೆದಿದೆ ಎನ್ನಲಾಗುತ್ತಿದೆ. https://kannadanewsnow.com/kannada/here-are-the-main-highlights-of-todays-state-cabinet-meeting/ https://kannadanewsnow.com/kannada/you-can-remove-stains-from-clothes-using-paracetamol-video-goes-viral-watch-video/
ಬೆಂಗಳೂರು: ಇಂದು ಮುಂಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಹುಮಹಡಿಕಟ್ಟಡಗಳಿಗೆ 1% ಸೆಸ್ ತೆರಿಗೆ ವಿಧಿಸುವುದು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ ಸೇರಿದಂತೆ ಇತರೆ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಒಪ್ಪಿಗೆ ನೀಡಲಾಯಿತು. ಇದಲ್ಲೇ ಇತರೆ ಮಹತ್ವದ ನಿರ್ಧಾರಗಳನ್ನು ಇಂದಿನ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗಿದೆ. ಆ ಪ್ರಮುಖ ನಿರ್ಧಾರಗಳ ಹೈಲೈಟ್ಸ್ ಮುಂದಿದೆ ಓದಿ. ಸ್ಪೇಸ್ಟೆಕ್ನಲ್ಲಿ ಉತ್ಕೃಷ್ಠತಾ ಕೇಂದ್ರ ಸ್ಪೇಸ್ಟೆಕ್ನಲ್ಲಿ ಉತ್ಕೃಷ್ಠತಾ ಕೇಂದ್ರ (CoE) ವನ್ನು ಐದು ವರ್ಷಗಳ ಅವಧಿಯಲ್ಲಿ ಒಟ್ಟು ರೂ.10.00 ಕೋಟಿಗಳ ಆಯವ್ಯಯದಲ್ಲಿ ಸ್ಥಾಪಿಸಲು; ಸ್ಪೇಸ್ಟೆಕ್ನಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಕಂಪನಿ ಕಯ್ದೆ, 2013ರಡಿ ಸೆಕ್ಷನ್-ಬಿ ಕಂಪನಿಯಾಗಿ ಸ್ಥಾಪಿಸಲು; ಸ್ಪೇಸ್ಟೆಕ್ನಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವ ಕುರಿತು Satellite Communication Industry Association (SIA-India) ಅನ್ನು ಅನುಷ್ಠಾನ ಪಾಲುದಾರರಾಗಿ ಆಯ್ಕೆ ಮಾಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999ರ ಸೆಕ್ಷನ್ 4(ಜಿ) ರಡಿ ವಿನಾಯಿತಿ…
ಬೆಂಗಳೂರು: ರಾಜ್ಯದ ಬಹುಮಹಡಿ ಕಟ್ಟದ ಮಾಲೀಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಇದೀಗ ಬಹುಮಹಡಿ ಕಟ್ಟಡಗಳಿಗೆ ಶೇ.1% ಸೆಸ್ ವಿಧಿಸುವಂತ ತೀರ್ಮಾನವನ್ನು ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತ ಪ್ರಕರಣ ಸಂಬಂಧ ಆರ್ ಸಿ ಬಿ, ಕೆ ಎಸ್ ಎ, ಡಿಎನ್ ಎ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಅಧಿಕೃತ ಒಪ್ಪಿಗೆ ನೀಡಲಾಗಿದೆ. ಇನ್ನೂ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯದ ವಿವಿಧ ಜೈಲಿನಲ್ಲಿರುವಂತ ಖೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ಹಲವು ಖೈದಿಗಳಿಗೆ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯ ಭಾಗ್ಯ ಸಿಕ್ಕಂತೆ ಆಗಲಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಅಗ್ನಿಶಾಮಕ ದಳದ ಕಾಯ್ದೆಯ ಅನುಸಾರವಾಗಿ ಬಹುಮಹಡಿ ಕಟ್ಟಡಗಳಿಗೆ ಇನ್ಮುಂದೆ ಶೇ.1% ಸೆಸ್ ವಿಧಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ. ಇದಕ್ಕೆ ಸಂಪುಟದಲ್ಲಿ ಒಪ್ಪಿಗೆ ದೊರೆತ ಕಾರಣ ರಾಜ್ಯದ ಎಲ್ಲಾ ಬಹುಮಹಡಿ…
ಶಿವಮೊಗ್ಗ: ಇಂದು ಭೀಮನ ಅಮಾವಾಸ್ಯೆ. ಈ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭಕ್ತ ಜನಸಾಗರವೇ ಹರಿದು ಬಂದಿದೆ. ಈ ಸುಸಂದರ್ಭದಲ್ಲಿ ಚೌಡೇಶ್ವರಿ ದೇವಿಗೆ ವಿಶೇಷ ಅಲಂಕಾರವನ್ನು ಕೂಡ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರಿಗೆ ಸೇತುವೆ ಸಂಪರ್ಕ ದೊರೆತ ನಂತ್ರ ಭಕ್ತರು ಹರಿದು ಬರುತ್ತಿದ್ದಾರೆ. ಭೀಮನ ಅಮಾವಾಸ್ಯೆಯ ದಿನವಾದಂತ ಇಂದು ಸಾವಿರಾರೂ ಜನರು ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಾನಕ್ಕೆ ಆಗಮಿಸಿದ್ದಾರೆ. ತಾಯಿಗೆ ಮಾಡಿರುವಂತ ವಿಶೇಷ ಅಲಂಕಾರವನ್ನು ಕಣ್ ತುಂಬಿಕೊಂಡು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಹರಕೆ ಮಾಡುತ್ತಿರುವುದು ಕಂಡು ಬಂದಿದೆ. ಇಂದು ಭೀಮನ ಅಮಾವಾಸ್ಯೆ ಪ್ರಯುಕ್ತ ಸಿಗಂದೂರು ಚೌಡೇಶ್ವರಿ ದೇವಿಗೆ ಹೂವಿನಿಂದ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಮುಂಜಾನೆಯಿಂದಲೇ ಪೂಜೆ ಪುರಸ್ಕಾರ ಆರಂಭಗೊಂಡಿದ್ದು, ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಸಿಗಂದೂರು ಚೌಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿಯನ್ನು ಮಾಡಲಾಯಿತು. ಮತ್ತೊಂದೆಡೆ ಭೀಮನ ಅಮಾವಾಸ್ಯೆಯಂದು ಶ್ರಾವಣ ಮಾಸವನ್ನು ಸ್ವಾಗತಿಸಲು ಸಿಂಗಾರಗೊಂಡ ಸಿಗಂದೂರು ಶ್ರೀ…
ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರರಿಗೆ ಜಾಮೀನು ನೀಡಿದ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನಟ ದರ್ಶನ್ ಮತ್ತು ಇತರರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ನೀಡಿದ ರೀತಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿ, “ಹೈಕೋರ್ಟ್ನ ವಿಧಾನವು ನಮಗೆ ತೊಂದರೆ ನೀಡುತ್ತಿದೆ” ಎಂದು ಹೇಳಿದೆ. ಹೈಕೋರ್ಟ್ ನ್ಯಾಯಾಧೀಶರ ತಿಳುವಳಿಕೆಯನ್ನು ಮತ್ತಷ್ಟು ಪ್ರಶ್ನಿಸಿ, ಇದನ್ನು “ವಿವೇಚನೆಯ ವಿಕೃತ ವ್ಯಾಯಾಮದ ಪ್ರಶ್ನೆ” ಎಂದು ಕರೆದಿದೆ. “ನಾವು ವಿವೇಚನೆಯನ್ನು ಚಲಾಯಿಸುವಾಗ ಹೈಕೋರ್ಟ್ ತನ್ನ ಮನಸ್ಸನ್ನು ವಿವೇಚನೆಯಿಂದ ಬಳಸಿದೆಯೇ ಎಂದು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ; ಅದು ನಮ್ಮ ಕಾಳಜಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪವಿತ್ರಾ ಅವರ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯ, “ಇದೆಲ್ಲವೂ ನಿಮ್ಮಿಂದಾಗಿ ಸಂಭವಿಸಿದೆ. ನೀವು ಸಮಸ್ಯೆಗೆ ಮೂಲ ಕಾರಣ” ಎಂದು ಹೇಳಿದೆ. “ನಾವು ಎಲ್ಲವನ್ನೂ ಪರಿಶೀಲಿಸುತ್ತೇವೆ ಮತ್ತು ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಸುಪ್ರೀಂ…