Author: kannadanewsnow09

ಬೆಂಗಳೂರು: ನಗರದಲ್ಲಿ ಹೊಟ್ಟೆನೋವು ಅಂತ ಆಸ್ಪತ್ರೆಗೆ ತೆರಳಿದಂತ ಯುವಕನೊಬ್ಬ ಚಿಕಿತ್ಸೆ ಪಡೆದುಕೊಂಡು ವಾಪಾಸ್ ಆಗಿದ್ದನು. ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಇದು ವೈದ್ಯರ ಎಡವಟ್ಟಿನ ಕಾರಣ ಅಂತ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಕೂಡಿಗೇನಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿನ ನಾರಾಯಣ ಆಸ್ಪತ್ರೆಗೆ ರಮೇಶ್ ಎಂಬ ಯುವಕ ಹೊಟ್ಟೆನೋವಿನ ಕಾರಣದಿಂದ ಚಿಕಿತ್ಸೆಗೆ ತೆರಳಿದ್ದನು. ಚಿಕಿತ್ಸೆ ಪಡೆದಿದ್ದಂತ ರಮೇಶ್, ಮನೆಗೆ ಮರಳಿದ್ದರು. ಯುವಕ ರಮೇಶ್ ಮನೆಗೆ ಮರಳಿದ ನಂತ್ರ ದಿಢೀರ್ ತಲೆ ಸುತ್ತು ಬಂದು ಕುಸಿದು ಬಿದ್ದಿದ್ದನು. ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಂತ ವೇಳೆಯಲ್ಲಿ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಯುವ ರಮೇಶ್ ಸಾವಿಗೆ ನಾರಾಯಣ ಆಸ್ಪತ್ರೆಯ ವೈದ್ಯರ ಎಡವಟ್ಟು ಕಾರಣ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದೀಗ ಮೃತ ರಮೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/minister-laxmi-hebbalkar-gives-this-update-on-delay-in-depositing-funds-under-griha-lakshmi-scheme/ https://kannadanewsnow.com/kannada/tungabhadra-dam-crest-gate-cut-r-ashoka-lashes-out-at-dk-shivakumar/

Read More

ಬೆಂಗಳೂರು: ಯಜಮಾನಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣವನ್ನು ಜಮಾ ಮಾಡಿಲ್ಲ. ಅಲ್ಲದೇ ಆಗಸ್ಟ್ ತಿಂಗಳ ಹಣ ಕೂಡ ವರ್ಗಾವಣೆ ಮಾಡುವುದಿದೆ. ಇದೀಗ ಗೃಹ ಲಕ್ಷ್ಮೀ ಯೋಜನೆಯ ಹಣ ಜಮಾ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಪ್ರತಿ ತಿಂಗಳು ಗೃಹ ಲಕ್ಷ್ಮೀ ಯೋಜನೆಗಾಗಿ ರೂ.2,400 ಕೋಟಿ ಖರ್ಚಾಗುತ್ತಿದೆ. ಮಂಡ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ವರ್ಗಾವಣೆಗೆ ಡಿಪಿಟಿಗೆ ಪುಷ್ ಮಾಡಲಾಗಿತ್ತು. ಆದರೇ ಮೂರು ದಿನಗಳು ಆದರೂ ಕೆಲವರಿಗೆ ಹಣ ವರ್ಗಾವಣೆಯಾಗಿಲ್ಲ ಎಂದರು. ಕೆಲವು ಜಿಲ್ಲೆಗಳ ಯಜಮಾನಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಮಾಡಲಾಗಿದೆ. ಬಾಕಿ ಜಮಾ ಆಗದಂತ ಯಜಮಾನಿಯರ ಖಾತೆಗೆ ಇನ್ನೂ ನಾಲ್ಕೈದು ದಿನಗಳಲ್ಲಿ ಆಗಲಿದೆ. ಅವರಿಗೆ ಜಮಾ ಮಾಡೋದಕ್ಕೆ ಬ್ಯಾಂಕ್ ಗಳಿಗೂ ಕಳಿಸಲಾಗಿದೆ ಎಂದು ಹೇಳಿದರು. ಈಗಾಗಲೇ ಜೂನ್…

Read More

ನವದೆಹಲಿ: ಒಂದು ಕಾಲದಲ್ಲಿ ತನ್ನ ಖಾಸಗಿ ವಲಯದ ಪ್ರತಿಸ್ಪರ್ಧಿಗಳಿಂದ ಮಸುಕಾಗಿದ್ದ ಅಸ್ತಿತ್ವದಲ್ಲಿರುವ ಟೆಲಿಕಾಂ ಸೇವಾ ಪೂರೈಕೆದಾರ ಬಿಎಸ್ಎನ್ಎಲ್ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಬಲವಾದ ಪುನರಾಗಮನವನ್ನು ಮಾಡುತ್ತಿದೆ. ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ಎನ್ನುವಂತೆ ಡೇಟಾ ದರವನ್ನು ಕಡಿತಗೊಳಿಸಿದೆ. ಜಿಯೋ, ಏರ್ಟೆಲ್ ಮತ್ತು ವಿ (ವೊಡಾಫೋನ್ ಐಡಿಯಾ) ತಮ್ಮ ಯೋಜನಾ ಬೆಲೆಗಳನ್ನು ಹೆಚ್ಚಿಸಿದ್ದರಿಂದ ಸರ್ಕಾರಿ ಸ್ವಾಮ್ಯದ ಟೆಲಿಕಾಂ ದೈತ್ಯ ಹೊಸ ಗಮನವನ್ನು ಸೆಳೆದಿದೆ. ಇದು ಹೆಚ್ಚಿನ ಬಳಕೆದಾರರನ್ನು ಬಿಎಸ್ಎನ್ಎಲ್ನ ವೆಚ್ಚ-ಪರಿಣಾಮಕಾರಿ ಕೊಡುಗೆಗಳತ್ತ ತಳ್ಳಿದೆ. ಕಂಪನಿಯು ನಿರಂತರವಾಗಿ ಹೊಸ ಕೈಗೆಟುಕುವ ರೀಚಾರ್ಜ್ ಯೋಜನೆಗಳನ್ನು ಪ್ರಾರಂಭಿಸುತ್ತಿದೆ, ಇದು ಗ್ರಾಹಕರ ಆದ್ಯತೆಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗಿದೆ. ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್ಎನ್ಎಲ್ ಪುನರುಜ್ಜೀವನ ಹಲವು ವರ್ಷಗಳಿಂದ, ಬಿಎಸ್ಎನ್ಎಲ್ನ ಗ್ರಾಹಕರ ಸಂಖ್ಯೆ ವೇಗವಾಗಿ ಕುಸಿಯುತ್ತಿದೆ. ಆದರೆ ಇತ್ತೀಚಿನ ಬೆಳವಣಿಗೆಗಳು, ಇದು ನೆಟ್ವರ್ಕ್ನ ಬೇಡಿಕೆಯ ಪುನರುಜ್ಜೀವನವನ್ನು ಹುಟ್ಟುಹಾಕಿದೆ. ಖಾಸಗಿ ಟೆಲಿಕಾಂ ಆಪರೇಟರ್ಗಳ ಬೆಲೆ ಏರಿಕೆಯು ಬಿಎಸ್ಎನ್ಎಲ್ನ ಗ್ರಾಹಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ. ಉದಾಹರಣೆಗೆ, ಆಂಧ್ರಪ್ರದೇಶದಲ್ಲಿ, ಜುಲೈನಲ್ಲಿ (2024) 2.17 ಲಕ್ಷಕ್ಕೂ…

Read More

ಬೆಳಗಾವಿ: ಜಿಲ್ಲೆಯ ರೆಸಾರ್ಟ್ ಒಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ಸಿಡಿದೆದ್ದಿದ್ದಂತ ರೆಬಲ್ ನಾಯಕರು, ರಹಸ್ಯ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲೇ ಮೈಸೂರು ಚಲೋಗೆ ಸೆಡ್ಡು ಹೊಡೆದು ಬಳ್ಳಾರಿ ಪಾದಯಾತ್ರೆಯನ್ನು ಸೆಪ್ಟೆಂಬರ್.17ರಂದು ನಡೆಸುವಂತ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬೆಳಗಾವಿಯ ಜಾಂಬೋಟಿ ರೆಸ್ತೆಯಲ್ಲಿರುವಂತ ರೆಸಾರ್ಡ್ ಒಂದರಲ್ಲಿ ಬಿಜೆಪಿಯ ರೆಬಲ್ ನಾಯಕರು ರಹಸ್ಯ ಸಭೆಯನ್ನು ನಡೆಸಲಿದ್ದಾರೆ ಎನ್ನಲಾಗಿದೆ. ರೆಸಾರ್ಟ್ ನಲ್ಲಿ ನಡೆದಂತ ರಹಸ್ಯ ಸಭೆಯಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಎನ್.ಆರ್ ಸಂತೋಷ್ ಕೂಡ ಭಾಗಿಯಾಗಿದ್ದು ತೀವ್ರ ಕುತೂಹಲವನ್ನು ಮೂಡಿಸಿತ್ತು. ಅಂದಹಾಗೇ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಸಿಡಿದೆದ್ದಿದ್ದರು. ಈಗ ಇಬ್ಬರು ನಾಯಕರ ಜೊತೆಗೆ ಹಲವು ಅಸಮಾಧಾನಿತ ಬಿಜೆಪಿ ನಯಾಕರು ಇವರೊಂದಿಗೆ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಜಾಂಬೋಟಿ ಬಳಿಯ ರೆಸಾರ್ಟ್ ನಲ್ಲಿ ನಡೆದಂತ ಬಿಜೆಪಿ ಅಸಮಾಧಾನಿತರ ರಹಸ್ಯ ಸಭೆಯಲ್ಲಿ ಮಾಜಿ…

Read More

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಫ್ಲೋರ್ ವ್ಯಾಯಾಮದಲ್ಲಿ ಗೆದ್ದ ಕಂಚಿನ ಪದಕವನ್ನು ಅಮೆರಿಕದ ಜಿಮ್ನಾಸ್ಟ್ ಜೋರ್ಡಾನ್ ಚಿಲಿಸ್ ಹಿಂದಿರುಗಿಸಬೇಕು ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ( International Olympic Committee-IOC) ಭಾನುವಾರ ದೃಢಪಡಿಸಿದೆ. ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್ಐಜಿ) ಶನಿವಾರ ರಾತ್ರಿ ನ್ಯಾಯಾಲಯದ ತೀರ್ಪನ್ನು ಗೌರವಿಸುವುದಾಗಿ ಮತ್ತು ಬಾರ್ಬೊಸುವನ್ನು ಮೂರನೇ ಸ್ಥಾನಕ್ಕೆ ಏರಿಸುವುದಾಗಿ ಹೇಳಿದ ನಂತರ ಸೋಮವಾರದ ಮಹಿಳಾ ಫ್ಲೋರ್ ಫೈನಲ್ನಿಂದ ಕಂಚಿನ ಪದಕವನ್ನು ರೊಮೇನಿಯಾದ ಅನಾ ಬಾರ್ಬೊಸುಗೆ ಮರು ಹಂಚಿಕೆ ಮಾಡುವುದಾಗಿ ಐಒಸಿ ಭಾನುವಾರ ಮುಂಜಾನೆ ಘೋಷಿಸಿತು. ಚಿಲಿಸ್ ತಂಡವನ್ನು ವೇದಿಕೆಗೆ ಏರಿಸಿದ ಸ್ಪರ್ಧೆಯ ಸಂದರ್ಭದಲ್ಲಿ ಟೀಮ್ ಯುಎಸ್ಎ ಕೋಚ್ ಸೆಸಿಲಿ ಲ್ಯಾಂಡಿ ಮಾಡಿದ ಸ್ಕೋರಿಂಗ್ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ರದ್ದುಗೊಳಿಸಿದ 24 ಗಂಟೆಗಳ ನಂತರ ಈ ನಿರ್ಧಾರ ಬಂದಿದೆ. ಚಿಲಿಯ ಸ್ಕೋರ್ ಗೆ 0.1 ಅನ್ನು ಸೇರಿಸುವಂತೆ ಲಾಂಡಿ ಮಾಡಿದ ಮನವಿಯು ಎಫ್ಐಜಿ ಅನುಮತಿಸಿದ 1 ನಿಮಿಷದ ವಿಂಡೋದ ಹೊರಗೆ ಬಂದಿದೆ ಎಂದು ಸಿಎಎಸ್ ಶನಿವಾರ ತೀರ್ಪು ನೀಡಿತು.…

Read More

ಬೆಂಗಳೂರು : ಬೆಂಗಳೂರು ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿರುವ ಸಚಿವರು, ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ಸಂಸ್ಥೆ ಅಕ್ರಮವಾಗಿ ಸರಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಒಟ್ಡು 599 ಎಕರೆ ಅರಣ್ಯ ಭೂಮಿಯ ಪೈಕಿ ಎಚ್.ಎಂ.ಟಿ. ನೀಡಲಾಗಿದೆ ಎನ್ನಲಾದ 469ಎಕರೆ…

Read More

ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ ಸಮಾನಾಂತರವಾದ ಅಣೆಕಟ್ಟು ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ, ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು. ಸರ್ಕಾರ ಈ ಕೂಡಲೇ…

Read More

ನವದೆಹಲಿ : ಕೃಷಿ ಉತ್ಪಾದಕತೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ 109 ಅಧಿಕ ಇಳುವರಿ, ಹವಾಮಾನ-ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೀಜ ಪ್ರಭೇದಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಿದರು. ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಅಭಿವೃದ್ಧಿಪಡಿಸಿದ ಈ ಪ್ರಭೇದಗಳು 34 ಕ್ಷೇತ್ರ ಬೆಳೆಗಳು ಮತ್ತು 27 ತೋಟಗಾರಿಕೆ ಬೆಳೆಗಳು ಸೇರಿದಂತೆ 61 ಬೆಳೆಗಳನ್ನು ವ್ಯಾಪಿಸಿದೆ. ದೆಹಲಿಯ ಪೂಸಾ ಕ್ಯಾಂಪಸ್ನಲ್ಲಿ ಮೂರು ಪ್ರಾಯೋಗಿಕ ಕೃಷಿ ಪ್ಲಾಟ್ಗಳಲ್ಲಿ ಮೋದಿ ಬೀಜಗಳನ್ನು ಅನಾವರಣಗೊಳಿಸಿದರು, ಅಲ್ಲಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಕ್ಷೇತ್ರ ಬೆಳೆ ಪ್ರಭೇದಗಳಲ್ಲಿ ಏಕದಳ ಧಾನ್ಯಗಳು, ರಾಗಿ, ಮೇವಿನ ಬೆಳೆಗಳು, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು, ಕಬ್ಬು, ಹತ್ತಿ ಮತ್ತು ನಾರು ಬೆಳೆಗಳು ಸೇರಿವೆ. ತೋಟಗಾರಿಕೆಗಾಗಿ, ಹೊಸ ರೀತಿಯ ಹಣ್ಣುಗಳು, ತರಕಾರಿಗಳು, ತೋಟದ ಬೆಳೆಗಳು, ಗೆಡ್ಡೆಗಳು, ಮಸಾಲೆಗಳು, ಹೂವುಗಳು ಮತ್ತು ಔಷಧೀಯ ಸಸ್ಯಗಳನ್ನು ಪ್ರಧಾನಿ ಬಿಡುಗಡೆ ಮಾಡಿದರು. https://twitter.com/ANI/status/1822541836885307848 2014…

Read More

ಮಧ್ಯಪ್ರದೇಶ: ಇಲ್ಲಿನ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಭಾನುವಾರ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಖಾಸಗಿ ವಾಯುಯಾನ ಅಕಾಡೆಮಿಗೆ ಸೇರಿದ ಎರಡು ಆಸನಗಳ ಸೆಸ್ನಾ 152 ವಿಮಾನವು ಏರ್ ಸ್ಟ್ರಿಪ್ ನಲ್ಲಿ ಅಪಘಾತಕ್ಕೀಡಾಗಿದೆ. ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಎಂಜಿನ್ ವೈಫಲ್ಯದಿಂದಾಗಿ 40 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಾಟ ನಡೆಸಿತ್ತು ಎಂದು ಗುನಾ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಾಜೋರಿಯಾ ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡ ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷೆ ಮತ್ತು ನಿರ್ವಹಣೆಗಾಗಿ ವಿಮಾನವು ಕೆಲವು ದಿನಗಳ ಹಿಂದೆ ಇಲ್ಲಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/muda-scam-jds-releases-letter-seeking-alternative-site-for-siddaramaiah/ https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ಅವರು 1984ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ಬದಲಿ ನಿವೇಶನ ಕೋರಿ, ಮುಡಾ ಅಧ್ಯಕ್ಷರಿಗೆ ಬರೆದಿದ್ದಂತ ಪತ್ರವನ್ನು ಜೆಡಿಎಸ್ ಬಿಡುಗಡೆ ಮಾಡಿದೆ.  ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… “ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದಿದೆ.  ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ ಎಂದು ಹೇಳಿದೆ. ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ…

Read More