Author: kannadanewsnow09

ಬೆಂಗಳೂರು: ನಮ್ಮ ಕಾಲದಲ್ಲಿ‌‌ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರ್ಕಾರ ಇರುವುದನ್ನು ತೋರಿಸುತ್ತದೆ.‌ ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಯಾವುದೆ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌ ಎಂದು ಹೇಳಿದರು. ನೀರಾವರಿ ಯೋಜನೆಗಳಿಗೆ ಎಂಟು ತಿಂಗಳಲ್ಲಿ 10 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ಸಾರೆ ಎಂದು ದಾಖಲೆ ನೀಡಲಿ. ತಮ್ಮ ಬೆನ್ನು ತಾವೆ ತಟ್ಟಿಕೊಳ್ಳುವ…

Read More

ಬೆಂಗಳೂರು : “ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಮಾಡಲಾಗದನ್ನು ನಾವು ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಇದನ್ನು ವಿರೋಧ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ.” ಕೇಸರಿ ಯಾರ ಮನೆಯ ಆಸ್ತಿಯಲ್ಲ ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ ಬಗ್ಗೆ ಕೇಳಿದಾಗ, “ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ…

Read More

ನವದೆಹಲಿ: ಫೆಬ್ರವರಿ 12 ರ ಸೋಮವಾರ, ದೇಶೀಯ ಈಕ್ವಿಟಿ ಮಾರುಕಟ್ಟೆಯು ಕೆಳಮುಖ ಪ್ರವೃತ್ತಿಗೆ ಸಾಕ್ಷಿಯಾಯಿತು. ನಿಫ್ಟಿ 50 ಮತ್ತು ಸೆನ್ಸೆಕ್ಸ್ನಂತಹ ಪ್ರಮುಖ ಮಾನದಂಡಗಳು ನಷ್ಟದೊಂದಿಗೆ ಕೊನೆಗೊಂಡವು, ಮುಖ್ಯವಾಗಿ ಬ್ಯಾಂಕಿಂಗ್ ಮತ್ತು ಹಣಕಾಸು ದೈತ್ಯರಿಂದ ನಡೆಸಲ್ಪಟ್ಟವು. ಪ್ರಮುಖ ಸ್ಥೂಲ ಆರ್ಥಿಕ ಸೂಚಕಗಳು ಮತ್ತು ಜಾಗತಿಕ ಮಾರುಕಟ್ಟೆಗಳಿಂದ ಮಿಶ್ರ ಸಂಕೇತಗಳ ನಿರೀಕ್ಷೆಯ ನಡುವೆ ಈ ಕುಸಿತ ಸಂಭವಿಸಿದೆ. ಇಂದು, ಭಾರತವು ಜನವರಿಯ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರ ಅಂಕಿಅಂಶಗಳು ಮತ್ತು ಡಿಸೆಂಬರ್ನಲ್ಲಿ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ಡೇಟಾ ಸೇರಿದಂತೆ ನಿರ್ಣಾಯಕ ಡೇಟಾವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಏಷ್ಯಾದ ಹೆಚ್ಚಿನ ಪ್ರಮುಖ ಮಾರುಕಟ್ಟೆಗಳು ರಜಾದಿನಗಳಿಗಾಗಿ ಮುಚ್ಚಲ್ಪಟ್ಟಿದ್ದರೂ, ಸೆನ್ಸೆಕ್ಸ್ ಮುಚ್ಚಿದಾಗ ಯುರೋಪಿಯನ್ ಮಾರುಕಟ್ಟೆಗಳು ವಹಿವಾಟಿನ ಸಮಯದಲ್ಲಿ ಮಿಶ್ರ ಭಾವನೆಗಳನ್ನು ಪ್ರದರ್ಶಿಸಿದವು. ವಿಶ್ವಾದ್ಯಂತ ಹೂಡಿಕೆದಾರರು ಮಂಗಳವಾರ ನಿಗದಿಯಾಗಿರುವ ಯುಎಸ್ ಹಣದುಬ್ಬರ ದತ್ತಾಂಶಕ್ಕಾಗಿ ಕಾಯುತ್ತಿದ್ದರು, ಜೊತೆಗೆ ಬ್ರಿಟಿಷ್ ಹಣದುಬ್ಬರ ದತ್ತಾಂಶ ಮತ್ತು ಬುಧವಾರ ಯುರೋಜೋನ್ ಜಿಡಿಪಿ ಅಂಕಿಅಂಶಗಳು. ನಿಫ್ಟಿ 50 166 ಪಾಯಿಂಟ್ ಅಥವಾ ಶೇಕಡಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕಾರಣದಿಂದಾಗಿಯೇ ಕಾಂಪೌಂಡ್ ನಿರ್ಮಾಣ ಮಾಡೋದಕ್ಕೆ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯದ ವಕ್ಸ್ ಆಸ್ತಿಗಳಾದ ಖಬರಸ್ಥಾನ್, ಈದಾದ ಜಾಗಗಳನ್ನು ಅಕ್ರಮ ಒತ್ತುವರಿ, ಅನಧಿಕೃತ ಸ್ವಾಧೀನ ಮತ್ತು ವಿವಾದಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ತಡೆಯಲು ಆಸ್ತಿಗಳ ಸುತ್ತ ಬೇಲಿ, ಗೋಡೆಯನ್ನು ಹಾಕುವುದು ಅವಶ್ಯಕವಾಗಿರುವುದರಿಂದ, ಅದನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ಕೆಲವು ನಿಬಂಧನೆಗಳನ್ನು ರೂಪಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ರಾಜ್ಯದ ವಿವಿಧ ವಕ್ಸ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವಂತೆ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ. ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಕೆಳಕಂಡಂತೆ ಆದೇಶಿಸಿದೆ ಎಂದು ಹೇಳಿದ್ದಾರೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿ ನಮೂದಿಸಿರುವಂತೆ ರಾಜ್ಯದ ಒಟ್ಟು 416…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ ಮಾತನಾಡುತ್ತಿರುವ ಬಿಜೆಪಿ ಸುಳ್ಳಿನ ಫ್ಯಾಕ್ಟರಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದುರೇಟು ನೀಡಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣವನ್ನು ಬಿಜೆಪಿ ಟೀಕಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಹೀಗೆ ಖಾರವಾಗಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷವು ಮಾತು ಮತ್ತು ಕೃತಿಗಳಲ್ಲಿ ಸದಾ ಒಂದಾಗಿದೆ. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ. ತಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನೆಲ್ಲ ವಾಪಸ್ ತಂದು ಒಬ್ಬೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆಂದರು; ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಮಾತುಗಳನ್ನಾಡಿದರು; ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿಕೊಂಡು ಬಂದರು. ಆದರೆ, ಈ ಭರವಸೆಗಳ…

Read More

ಶಿವಮೊಗ್ಗ : ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಅವರ ಆರೋಗ್ಯ ಕಾಪಾಡುವುದು ಅತಿ ಅವಶ್ಯಕವಾಗಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಾಸ್ಟೆಲ್ ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಬಿಟ್ಟು ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಮತ್ತು ಅಲ್ಲಿನ ಸಿಬ್ಬಂದಿಗಳ ಮೇಲೆ ನಂಬಿಕೆ ಇಟ್ಟುಕೊಂಡು ಬಂದಿರುತ್ತಾರೆ. ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುತ್ತಾರೆ. ಆದ್ದರಿಂದ ಮೇಲ್ವಿಚಾರಕರು ಅವರನ್ನು ಪ್ರೀತಿ ಮತ್ತು ಕಾಳಜಿ ಯಿಂದ ನೋಡಿಕೊಳ್ಳಬೇಕು. ಆಹಾರ ತಯಾರಿಯಲ್ಲಿ ಸ್ವಚ್ಚತೆ, ಗುಣಮಟ್ಟ ಕಾಪಾಡಿಕೊಂಡು ಬರಬೇಕು. ಅಡುಗೆಯ ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರು ನಡುವೆ ಹೊಂದಾಣಿಕೆ…

Read More

ಬೆಂಗಳೂರು: ರಾಜ್ಯದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಸಿದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಲೈವ್ ಬರಲಿದ್ದಾರೆ. ಫೆಬ್ರವರಿ.14ರಂದು ಸಂಜೆ.6.45ರಿಂದ ಲೈವ್ ನಲ್ಲಿ ಕುಳಿತು ಮಾತನಾಡಲಿರುವಂತ ಅವರು, ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೂ ಉತ್ತರ ನೀಡಲಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಫೆ.14ರಂದು ಸಂಜೆ 6.45ಕ್ಕೆ ಎಕ್ಸ್ ಮಾಧ್ಯಮದ ಮೂಲಕ ನೇರಪ್ರಸಾರದಲ್ಲಿ ಮಾತನಾಡಲಿದ್ದಾರೆ ಎಂಬುದಾಗಿ ತಿಳಿಸಿದೆ. ಸಿಎಂ ಸಿದ್ಧರಾಮಯ್ಯ ಅವರು ಲೈವ್ ನಲ್ಲಿ ಸಾರ್ವಜನಿಕರು ಕೇಳುವಂತ ಪ್ರಶ್ನೆಗೆ ಉತ್ತರವನ್ನು ನೀಡಲಿದ್ದಾರೆ. ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯದ ಅಂಶಗಳ ಬಗ್ಗೆಯೂ ಮಾತನಾಡಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ. ತೆರಿಗೆ ಹಂಚಿಕೆ ಬಗ್ಗೆ ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಲಿದ್ದಾರೆ. ಈ ಮೂಲಕ ಎಕ್ಸ್ ಲೈವ್ ನಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದೆ. https://kannadanewsnow.com/kannada/it-is-mandatory-to-put-up-basavannas-portrait-in-state-government-offices-siddaramaiah/ https://kannadanewsnow.com/kannada/note-the-written-examination-for-the-post-of-1137-civil-police-constables-will-be-held-on-february-25-this-dress-code-will-come-into-force/

Read More

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ; ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಅವರು ದೂರಿದರು. ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ!! ಕರ್ನಾಟಕ ಹಣಕಾಸು…

Read More

ಮನೆಯಲ್ಲಿ ಮಹಾಲಕ್ಷ್ಮಿಯ ಅಂಶವು ನೆರವೇರಲು ನಾವು ಮಾಡಬೇಕಾದ ಸುಲಭ ಪರಿಹಾರದ ಬಗ್ಗೆ ಇಂದು ನಾವು ನೋಡಲಿದ್ದೇವೆ. ಶುಕ್ರವಾರದಂದು ಮನೆಯಲ್ಲಿ ದೀಪವನ್ನು ಹಚ್ಚಿ ಮತ್ತು ಎಂದಿನಂತೆ ಮಹಾಲಕ್ಷ್ಮಿಗೆ ಸಣ್ಣ ಪೂಜೆಯನ್ನು ಮಾಡಿ ಮತ್ತು ಈ ಪರಿಹಾರವನ್ನು ಪ್ರಯತ್ನಿಸಿ. ನಿಮ್ಮ ಮನೆಯಲ್ಲಿನ ಹಣದ ಸಮಸ್ಯೆಗಳು ಖಂಡಿತವಾಗಿಯೂ ಪರಿಹಾರವಾಗುತ್ತವೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಸರಳ ಮತ್ತು ಅಗ್ಗದ ಪರಿಹಾರವನ್ನು ತಿಳಿದುಕೊಳ್ಳಲು ಆಸಕ್ತಿಯುಳ್ಳವರು ಈ ಆಧ್ಯಾತ್ಮಿಕ ಪುಸ್ತಕವನ್ನು ಓದುವುದನ್ನು ಮುಂದುವರಿಸಬಹುದು ಮತ್ತು ಪ್ರಯೋಜನ ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಗಾರು ಮಳೆ ಕೈಕೊಟ್ಟ ನಂತ್ರ ಬರ ಉಂಟಾದ ಕಾರಣ, ರೈತರ ನೆರವಿಗೆ ಧಾವಿಸಿತ್ತು. ರೈತರ ಬೆಳೆಗೆ ಬರ ಪರಿಹಾರವಾಗಿ 2000 ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಬರ ಪರಿಹಾರದ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಪ್ರಕಟಿಸಲಾಗಿದೆ. ಕಳೆದ ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯಾದ್ಯಂತ ಬರ ಪೀಡಿತ ಪ್ರದೇಶಗಳಲ್ಲಿ ಪ್ರತಿ ರೈತರಿಗೆ ತಲಾ 2,000 ರೂ. ನಂತೆ 32 ಲಕ್ಷ ರೈತರಿಗೆ ಈವರೆಗೆ 575 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದರು. ರಾಜ್ಯದಲ್ಲಿ ಈ ವರ್ಷ ಇತಿಹಾಸ ಕಾಣದ ಬರ ಎದುರಾಗಿದೆ. ಕೇಂದ್ರದಿಂದ ಬರ ಪರಿಹಾರ ಈವರೆಗೆ ಲಭ್ಯವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ ರೈತರಿಗೆ 2,000 ರೂ ನೀಡಲು ನಿರ್ಧರಿಸಿ ಈಗಾಗಲೇ 32 ಲಕ್ಷ ರೈತರಿಗೆ ಪರಿಹಾರದ ಹಣ ನೀಡಲಾಗಿದೆ.‌ ಕೊಡಗಿನಲ್ಲೂ ಸಹ 11,000 ರೈತರಿಗೆ 1.5 ಕೋಟಿ ರೂ.…

Read More