Author: kannadanewsnow09

ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಶತಶತಮಾನಗಳಿಂದ ಗಳಿಸಿರುವ ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ಗುರುತಿಸಲ್ಪಡುತ್ತಾರೆ ಹಾಗೂ ಆರಾಧಿಸಲ್ಪಡುತ್ತಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಕ್ಷರದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತತ್ವದಿಂದ ದೈವತ್ವಕ್ಕೆ ಏರಿದ ತಮ್ಮ ಕೃತಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹನೀಯ ವಾಲ್ಮೀಕಿ ಅವರು ಆರಂಭದಲ್ಲಿ ಬೇಡರಾಗಿ ನಂತರ ಸಂತರಾಗಿ, ಅಹಿಂಸೆಯ ಪ್ರತಿಪಾದಕರಾಗಿ ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಮಹರ್ಷಿ ವಾಲ್ಮೀಕಿ ಎಂದವರು ಬಣ್ಣಿಸಿದರು. ಪ್ರಪಂಚದ ವಿವಿಧ ಭಾಷೆಗಳಿಗೆ ಅನುವಾದಗೊಂಡು ಜಗತ್ತಿನ ಪ್ರತಿಸ್ಥಿತ ವಿಶ್ವವಿದ್ಯಾಲಯ ಗಳಲ್ಲಿ ತತ್ವಜ್ಞಾನಿ ವಾಲ್ಮೀಕಿ ಅವರ ಕೃತಿ ಯನ್ನು ಓದುವ ಮೂಲಕ ಅವರ ಆದರ್ಶಗಳನ್ನು ಅನುಸರಿಸುತ್ತಿರುವುದು,…

Read More

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಿಬು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಇಂದು  ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಿಬು ದಾಖಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯ ಅರ್ಜಿಯ ವಿಚಾರಣೆ ನಡೆಸಿದರು. ಈ ಪ್ರಕರಣದ ವಿಚಾರಣೆಯ ಬಳಿಕ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಿಬು ಉಲ್ಲೇಖಿಸಿ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಿಬು ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಐವರು ಸಾಧಕರಿಗೆ ಘೋಷಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ. ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಶ್ರೀ ಡಿ.ದೇವರಾಜ ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ದಿನಾಂಕ:27-09-2019ರ ಆದೇಶದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪಶಸ್ತಿಯನ್ನು ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ…

Read More

ನವದೆಹಲಿ: ಪೌರತ್ವ ಕಾಯ್ದೆ 1955 ರ ಸೆಕ್ಷನ್ 6 ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ನ ಐದು ನ್ಯಾಯಾಧೀಶರ ಸಂವಿಧಾನ ಪೀಠ ಗುರುವಾರ ತೀರ್ಪು ನೀಡಲಿದೆ. ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಂ.ಎಂ.ಸುಂದರೇಶ್, ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು 2023 ರ ಡಿಸೆಂಬರ್ 12 ರಂದು ತೀರ್ಪನ್ನು ಕಾಯ್ದಿರಿಸುವ ಮೊದಲು ನಾಲ್ಕು ದಿನಗಳ ಕಾಲ ಈ ವಿಷಯವನ್ನು ಆಲಿಸಿತು. ಪೌರತ್ವ ಕಾಯ್ದೆ 1955 ರ ಸೆಕ್ಷನ್ 6 ಎ ಪ್ರಕಾರ, 1966 ರ ಜನವರಿ 1 ರ ನಂತರ ಮತ್ತು 1971 ರ ಮಾರ್ಚ್ 25 ಕ್ಕಿಂತ ಮೊದಲು ಅಸ್ಸಾಂಗೆ ಬಂದ ಭಾರತೀಯ ಮೂಲದ ವಿದೇಶಿ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವಿದೆ. ಅಸ್ಸಾಂನ ಕೆಲವು ಸ್ಥಳೀಯ ಗುಂಪುಗಳು ಈ ನಿಬಂಧನೆಯನ್ನು ಪ್ರಶ್ನಿಸಿವೆ, ಇದು ಬಾಂಗ್ಲಾದೇಶದಿಂದ ವಿದೇಶಿ ವಲಸಿಗರ ಅಕ್ರಮ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ವಾದಿಸಿದೆ. ಮಾರ್ಚ್ 25, 1971 ರ ನಂತರ (ಬಾಂಗ್ಲಾದೇಶ…

Read More

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ. ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ, ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ…

Read More

ಬೆಂಗಳೂರು: ಆಯುಷ್ಮಾನ್ ಭಾರತ್ ಜನಾರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ ಸಚಿವರು ರಾಜ್ಯದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆಸಿದರು. ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಅನುದಾನ ಭರಿಸುತ್ತಿದ್ದು, ಕೇಂದ್ರ ಸರ್ಕಾರ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿಕೊಡಬೇಕು ಎಂದು ಸಚಿವ ಜೆಪಿ ನಡ್ಡಾ ಅವರಿಗೆ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದ್ದಾರೆ. ಭೇಟಿಯ ವೇಳೆ ರಾಜ್ಯ ಆರೋಗ್ಯ ಇಲಾಖೆಯು ಕೈಗೊಂಡಿರುವ…

Read More

ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ. ಲಸಿಕೆಯ ಎರಡನೇ ಹಂತವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸಲು ಯೋಜಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು. ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ…

Read More

ನವದೆಹಲಿ: ಮೂರು ಭಾರತೀಯ ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ ಅಪ್ರಾಪ್ತ ವಯಸ್ಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತೀಯ ವಾಹಕಗಳ ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದ ಇತ್ತೀಚಿನ ವಿಧ್ವಂಸಕ ಕೃತ್ಯಗಳ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. “ನಾನು ಅಕ್ಟೋಬರ್ 14 ರಂದು ಡಿಜಿಸಿಎ, ಬಿಸಿಎಎಸ್, ಸಿಐಎಸ್ಎಫ್, ಎಂಎಚ್ಎ ಮತ್ತು ಎಂಒಸಿಎ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷತೆ ವಹಿಸಿದ್ದೆ. ನಾನು ನಿಯಮಿತವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ನಮ್ಮ ಕಾನೂನು ಜಾರಿ ಸಂಸ್ಥೆಗಳು ಎಲ್ಲಾ ಪ್ರಕರಣಗಳನ್ನು ಸಕ್ರಿಯವಾಗಿ ಅನುಸರಿಸುತ್ತಿವೆ” ಎಂದು ಅವರು ಹೇಳಿದರು. ಕಳೆದ ಮೂರು ದಿನಗಳಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 19 ಬಾಂಬ್ ಬೆದರಿಕೆಗಳು ಬಂದಿವೆ. https://kannadanewsnow.com/kannada/47-trees-57-branches-uprooted-due-to-heavy-rains-in-bengaluru-bbmp/ https://kannadanewsnow.com/kannada/heavy-rains-in-bengaluru-whats-going-on-in-trouble-here-are-the-pull-details/

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಉಂಟಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಾಳಿ, ಮಳೆಗೆ 47 ಮರಗಳು ಧರೆಗುರುಳಿದ್ದರೇ, 57 ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದಾವೆ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರಿನ ದಕ್ಷಿಣ ವಲಯದಲ್ಲಿ 40 ಮರಗಳು, ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ 4, ಬೊಮ್ಮನಹಳ್ಳಿಯಲ್ಲಿ 6, ಪಶ್ಚಿಮ ವಲಯದಲ್ಲಿ 5, ಮಹದೇವಪುರ ವಲಯದಲ್ಲಿ 6, ಯಲಹಂತ ಮತ್ತು ಪೂರ್ವ ವಲಯದಲ್ಲಿ ತಲಾ 7 ಮತ್ತು ದಾಸರಹಳ್ಳಿ ವಲಯದಲ್ಲಿ 2 ಸೇರಿದಂತೆ 47 ಮರಗಳು ಮಳೆಯಿಂದಾಗಿ ಧರೆಗೆ ಉರುಳಿದ್ದಾವೆ. ಇವುಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದೆ. ಇನ್ನೂ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ 20 ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ರಾಜರಾಜೇಶ್ವರಿ ನಗರ ವಲಯದಲ್ಲಿ 1, ಬೊಮ್ಮನಹಳ್ಳಿಯಲ್ಲಿ 8, ಪಶ್ಚಿಮದಲ್ಲಿ 7, ಮಹದೇವಪುರದಲ್ಲಿ 2, ಯಲಹಂಕ 5, ಪೂರ್ವ ವಲಯದಲ್ಲಿ 12 ಹಾಗೂ ದಾಸರಹಳ್ಳಿ ವಲಯದಲ್ಲಿ 2 ಸೇರಿದಂತೆ 57 ರೆಂಬೆ-ಕೊಂಬೆಗಳು ಮಳೆಯಿಂದ ಮುರಿದು ಬಿದ್ದಿದ್ದು, ಬಿಬಿಎಂಪಿ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ. https://kannadanewsnow.com/kannada/railway-passengers-attention-temporary-stoppage-of-trains-continues-at-ramagiri-birur-stations/ https://kannadanewsnow.com/kannada/heavy-rains-in-bengaluru-whats-going-on-in-trouble-here-are-the-pull-details/

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಅನೇಕ ಕಡೆಯಲ್ಲಿ ಭಾರೀ ಅವಾಂತರವೇ ಉಂಟಾಗಿದೆ. ಹಾಗಾದ್ರೇ ಬೆಂಗಳೂರಿನ ಯಾವ ಏರಿಯಾದಲ್ಲಿ ಏನೇನೋ ಮಳೆಯಿಂದ ಸಮಸ್ಯೆ ಆಗಿದೆ ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಯಲಹಂಕ ವಲಯ: ಯಲಹಂಕ ವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಇದರಿಂದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಲ್ಲಿ ನೀರು ನಿಂತಿದೆ. ಅಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನೀರು ತೆರವುಗೊಳಿಸಲು 13 ಪಂಪ್ ಗಳನ್ನಿಟ್ಟು ತೆರವುಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಪಾಲಿಕೆ ಹಾಗೂ ಅಗ್ನಿಶಾಮಕ ಅಧಿಕಾರಿ/ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ನಲ್ಲಿ ನಿಂತಿದ್ದ ನೀರನ್ನು ಪಂಪ್ ಮೂಲಕ ತೆರವುಗೊಳಿಸಲಾಗಿದೆ. ಇನ್ನು ನಿನ್ನೆ ಜೋರು ಮಳೆಯಿಂದಾಗಿ ಫಾತಿಮಾ ಲೇಔಟ್, ಬದ್ರಪ್ಪ ಲೇಔಟ್…

Read More