Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸುತ್ತೂರು ಮಠವು ನಿಸ್ವಾರ್ಥ ಸೇವೆ ಮೂಲಕ ಲಕ್ಷಾಂತರ ಜನರು ಪ್ರಕಾಶಮಾನರಾಗಲು ಕಾರಣವಾಗಿದೆ. ಇದು ನಿರಂತರವಾಗಿ ಪರೋಪಕಾರದ ಕೇಂದ್ರವಾಗಿ ಹೊರಹೊಮ್ಮಿದೆ. ಬಿಜೆಪಿ ಈ ಸೇವೆಯನ್ನು ಗುರುತಿಸಿ ವಂದಿಸಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಅವರು ತಿಳಿಸಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಠದ 24 ಮಠಾಧೀಶರು ಇಲ್ಲಿ ನಿಸ್ವಾರ್ಥ ಸೇವೆ ಮಾಡಿದ್ದಾರೆ ಎಂದರು. ಸುತ್ತೂರು ಮಠದ ಜಗದ್ಗುರುಗಳ ಆಶೀರ್ವಾದ ಕೋರಿ ಅವರು ಭಾಷಣ ಆರಂಭಿಸಿದರು. ಬಸವಣ್ಣ ಕೇವಲ ಒಂದು ವರ್ಗಕ್ಕೆ ಸೀಮಿತರಲ್ಲ; ದೇಶದ ಕೋಟ್ಯಂತರ ಜನರಿಗೆ ಪ್ರೇರಣೆ ತುಂಬಿದ ಮಹಾಪುರುಷರು ಎಂದು ವಿಶ್ಲೇಷಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಇಲ್ಲಿನ ಶ್ರೀಗಳು ಯಡಿಯೂರಪ್ಪ ಅವರಿಗೆ ಮಾರ್ಗದರ್ಶನ ನೀಡಿದವರು ಎಂದು ಶ್ಲಾಘಿಸಿದರು. ಶ್ರೀಗಳ ಆಶೀರ್ವಾದದಿಂದ ಉತ್ತಮ ಮಳೆ, ಬೆಳೆ ಆಗಿ ರೈತರು ನೆಮ್ಮದಿಯಿಂದ ಬಾಳಿ ಬದುಕುವಂತಾಗಲಿ ಎಂದು ಹಾರೈಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ…
ಮೈಸೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಇಬ್ಬರು ಗೂಂಡಾಗಳು. ಇದು ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನೆಮಾ ಸ್ಟೈಲಿನಲ್ಲಿ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲೇ ಸೆಟಲ್ಮೆಂಟ್ ಆಗಿದೆ. ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗ್ತಾರೆ. ನೋಡ್ತಾ ಇರಿ. ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದರು. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಹೈಕಮಾಂಡ್ ಚರ್ಚೆ ಮಾಡುತ್ತಾರೆ. ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆಯಾಗಲಿದೆ. ಮುಂದಿನ ಅಭ್ಯರ್ಥಿಗಳು, ಮೈತ್ರಿ ಅಭ್ಯರ್ಥಿಯ ಬಗ್ಗೆ ಚರ್ಚೆಯಾಗೋ ಸಾಧ್ಯತೆ ಇದೆ ಎಂದರು. ನಾನು ರಾಷ್ಟ್ರದ್ರೋಹಿ ಹೇಳಿಕೆ ನೀಡೋರ ವಿರುದ್ಧ ಕ್ರಮ ಕೈಗೊಳ್ಳುವಂತ ಕಾನೂನು ಜಾರಿಯಾಗಬೇಕು ಅಂದ್ರೇ, ಅವರ ವಿರುದ್ಧ ಕ್ರಮ ಕೈಗೊಳ್ಳದೇ ನನಗೆ ನೋಟಿಸ್ ಕೊಡ್ತಾರೆ…
ಬೆಂಗಳೂರು: ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ. ಈ ಮೂಲಕ ನಿಮ್ಮ ಧಮ್ಮು, ತಾಕತ್ತು ತೋರಿಸಿ ಎಂಬುದಾಗಿ ಅಮಿತ್ ಶಾ ಅವರಿಗೆ ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಸವಾಲು ಹಾಕಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಪ್ರಶ್ನಿಸಿದ್ದಾರೆ. ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ‘’ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಹಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ,…
ಶಿವಮೊಗ್ಗ: ನನ್ನ ವಿರುದ್ಧ ನೂರು ಎಫ್ಐಆರ್ ದಾಖಲಿಸಿದ್ರೂ ನಾನು ಹೆದರೋದಿಲ್ಲ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ದೇಶದ್ರೋಹಿ ಹೇಳಿಕೆ ನೀಡಿರುವ ಸಂಸದ ಡಿ.ಕೆ ಸುರೇಶ್ ಮತ್ತು ಅವರನ್ನು ಬೆಂಬಲಿಸಿದವರಿಗೆ ನೋಟಿಸ್ ನೀಡಿಲ್ಲ. ಆದರೇ ದೇಶ ವಿಭಜಿಸುವ ಹೇಳಿಕೆ ನೀಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರಲು ಒತ್ತಾಯಿಸಿದಂತ ನನ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬುದಾಗಿ ಕಿಡಿಕಾರಿದರು. ದಾವಣಗೆರೆ ಪೊಲೀಸರು ಫೆಬ್ರವರಿ.15ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟು, ಎಫ್ಐಆರ್ ದಾಖಲಿಸಿದ್ದಾರೆ. ಇಂತಹ ನೂರು ನೋಟಿಸ್ ಕೊಟ್ಟರೂ, ಎಫ್ಐಆರ್ ದಾಖಲಿಸಿದರೂ ನಾನು ಹೆದರೋದಿಲ್ಲ ಎಬುದಾಗಿ ತಿಳಿಸಿದ್ದಾರೆ. ಡಿ.ಕೆ ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ನಾನೆಲ್ಲೂ ಹೇಳಿಲ್ಲ. ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದೇನೆ ಎಂಬುದಾಗಿ ಸ್ಪಷ್ಟಪಡಿಸಿದರು. https://kannadanewsnow.com/kannada/lok-sabha-elections-2024-former-minister-v-somanna-becomes-fully-active-after-meeting-high-command/ https://kannadanewsnow.com/kannada/announce-stoppage-of-guarantee-schemes-in-bjp-ruled-states-tagaru-challenges-chanakya/
BIG NEWS: ರಾಜ್ಯದ ‘ಅನುದಾನಿತ ಪ್ರೌಢಶಾಲಾ’ ಶಿಕ್ಷಕಿ, ನೌಕರರಿಗೆ ಗುಡ್ ನ್ಯೂಸ್: ‘ಶಿಶುಪಾಲನೆ ರಜೆ’ ಸೌಲಭ್ಯ ವಿಸ್ತರಣೆ
ಬೆಂಗಳೂರು: ರಾಜ್ಯದ ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ( High School Teacher ) ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Emeployees ) ಇರುವಂತೆ ಶಿಶುಪಾಲನೆ ರಜೆ ಸೌಲಭ್ಯವನ್ನು ವಿಸ್ತರಿಸಿ, ಸರ್ಕಾರ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ( School Education Department ) ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ನೀಡಲಾದ ಶಿಶುಪಾಲನ ರಜೆ ಸೌಲಭ್ಯವನ್ನು ಅನುದಾನಿತ ಪ್ರೌಢಶಾಲಾ ಮಹಿಳಾ ನೌಕರರಿಗೂ ವಿಸ್ತರಿಸುವ ಕುರಿತು ಕ್ರಮ ವಹಿಸೋದಕ್ಕೆ ತಿಳಿಸಿದ್ದಾರೆ. ಸದರಿ ಸೌಲಭ್ಯವನ್ನು ವಿಸ್ತರಿಸಿದಲ್ಲಿ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಇಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಪಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು, ಅನುದಾನಿತ ಶಾಲಾ ಮಹಿಳಾ ನೌಕರರಿಗೆ ಶಿಶುಪಾಲನೆ ರಜೆ ಮಂಜೂರು ಮಾಡುವಂತೆ…
ಬೆಂಗಳೂರು: ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಇದನ್ನು ಈ ಹಿಂದೆಯೂ ನಾನು ಹೇಳಿದ್ದೇನೆ. ಜೊತೆಗೆ ಯೂ ಟರ್ನ್ ಹೊಡೆಯೋ ಗಿರಾಕಿ ಅಲ್ಲ ಅಂತ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದಂತ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. 2019ರಲ್ಲಿ ಅಭ್ಯರ್ಥಿಯಾಗಿ ನಿಂತು ಸೋತಿದ್ದೇನೆ. ನನ್ನನ್ನು ಈಗಲೂ ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಯೂ ಟರ್ನ್ ಹೊಡೆಯಲ್ಲ. ನನ್ನ ನಿರ್ಧಾರ ಸ್ಪಷ್ಟವಾಗಿದೆ ಎಂದರು. ನನ್ನನ್ನು ಮಂಡ್ಯ ಮುಂಖಡರು ನೀವು ಬರಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಕಾರಣ ನಾನು ಮಂಡ್ಯ ಭಾಗದಲ್ಲಿ ಒಡಾಡಿದ್ದು ಆಗಿದೆ. ಮತ್ತೆ ಮೋದಿ ಪ್ರಧಾನಿ ಆಗಬೇಕು. ನಮ್ಮ ಗಮನ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲೋ ಕಡೆಯೋದು ಆಗಿದೆ ಎಂದರು. https://kannadanewsnow.com/kannada/lok-sabha-poll-strategy-to-be-discussed-in-amit-shahs-presence-by-vijayendra/ https://kannadanewsnow.com/kannada/lok-sabha-elections-2024-former-minister-v-somanna-becomes-fully-active-after-meeting-high-command/
ಬೆಂಗಳೂರು: ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಜೀ ಅವರು ರಾತ್ರಿ 2.45ಕ್ಕೆ ತಲುಪಿದ್ದು, ಬೆಳಿಗ್ಗೆ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಲ್ಲಿಂದ ನೇರವಾಗಿ ಅವರು ಸುತ್ತೂರಿಗೆ ತೆರಳಿ ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ ಇಲ್ಲಿ ಕೋರ್ ಕಮಿಟಿ ಮೀಟಿಂಗ್ ಇದೆ. ಅದಾದ ನಂತರ ರ್ಯಾಡಿಸನ್ ಹೋಟೆಲ್ನಲ್ಲಿ ನಡೆಯುವ 4 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮೈಸೂರು ಕ್ಲಸ್ಟರ್ನ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಇವತ್ತು ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರಮುಖರ ಸಭೆ ಕರೆದಿದ್ದೇವೆ. 4 ಲೋಕಸಭಾ ಕ್ಷೇತ್ರಗಳ 100-120 ಪ್ರಮುಖರು ಆ ಸಭೆಯಲ್ಲಿ ಭಾಗವಹಿಸುತ್ತಾರೆ. ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯತಂತ್ರ ಹೇಗಿರಬೇಕು, ಬಿಜೆಪಿ- ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದು, ತಳಹಂತದಲ್ಲಿ…
ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಶ್ಲೇಷಿಸಿದರು. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಘೋಷಣೆಯೊಂದಿಗೆ ಹೊರಟ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರಕಾರವು ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿಜೀ ಅವರು ಕೊಟ್ಟ ಕೊಡುಗೆಗಳು, ಯೋಜನೆಗಳನ್ನು ಒಂದು ಸಲ ಮೆಲುಕು ಹಾಕಿ ನೋಡಲಿ ಎಂದು ಆಗ್ರಹಿಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ- ಮುಖಂಡರು ಸಾಕಷ್ಟು ಭರವಸೆಗಳನ್ನು ಚುನಾವಣೆ ಸಂದರ್ಭದಲ್ಲಿ ಕೊಟ್ಟಿದ್ದರು. ಅಭೂತಪೂರ್ವ ಬೆಂಬಲದೊಂದಿಗೆ ಸರಕಾರ ಅಧಿಕಾರಕ್ಕೆ ಬಂದಾಗ ಸಹಜವಾಗಿ ರಾಜ್ಯದ ಜನರಲ್ಲಿ ಅಪೇಕ್ಷೆ, ನಿರೀಕ್ಷೆಗಳು ಸಾಕಷ್ಟಿದ್ದವು. ಆದರೆ, ಅವೆಲ್ಲವೂ ಮಣ್ಣುಪಾಲಾಗಿದೆ. ಮತದಾರರಲ್ಲಿ ತಾವು ಮೋಸಹೋಗಿದ್ದೇವೆ ಎಂಬ ಭಾವನೆ…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ಗುತ್ತಿಗೆದಾರರಿಂದ ಕಮೀಷನ್ ಆರೋಪ ಎದುರಿಸುತ್ತಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯಲು ಒಂದು ಕ್ಷಣವೂ ಅರ್ಹರಿಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂಬುದಾಗಿ ಆರ್ ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ” ಎಂದು ಮಾನ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದಿದ್ದಾರೆ. ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ…