Author: kannadanewsnow09

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿದಂತ ಭೂಕುಸಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಕನ್ನಡಿಗರು ಬಲಿಯಾಗಿದ್ದಾರೆ. ಅಲ್ಲದೇ ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ತಿಳಿದು ಬಂದಿದೆ. ಈ ಕುರಿತಂತೆ ಚಾಮರಾಜನಗರ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಇವರು ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೋರಲ್ಲಾದಲ್ಲಿ ವಾಸವಾಗಿದ್ದರು. ನಾಪತ್ತೆಯಾಗಿರುವವರ ಪತ್ತೆಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ ಅಂತ ತಿಳಿಸಿದೆ. ಇನ್ನೂ ಕೇರಳದ ಮೆಪ್ಪಾಡಿಯಲ್ಲಿ ವಾಸವಿದ್ದಂತ ಚಾಮರಾಜನಗರದ ಪುಟ್ಟಸಿದ್ಧಿ(62) ಹಾಗೂ ರಾಣಿ ಎಂಬುವರ ತಾಯಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿಸಿದೆ. ಕೇರಳದ ವಯಾನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರ್ಘಟನೆಯಲ್ಲಿ ಈವರೆಗೆ 128ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/wayanad-landslide-state-govt-launches-helpline-number-to-rescue-kannadigas/ https://kannadanewsnow.com/kannada/microsoft-365-users-face-access-issues-days-after-crowdstrike-outage/

Read More

ಬೆಂಗಳೂರು: ನೆರೆಯ ಕೇರಳದ ವಯನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿತ್ತು. ಈ ಘಟನೆಯಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ ನೆರವಿಗೆ ಹಾಗೂ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದೆ. ಅಲ್ಲದೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಪ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳ ತ್ವರಿತ ರವಾನೆ ಮಾಡಲಾಗುತ್ತದೆ. ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ರವಾನೆಗೆ ನೆರವು ನೀಡಲಾಗುವುದು ಎಂದಿದೆ. ಕನ್ನಡಿಗರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಮನ್ವಯಕ್ಕಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಿ.ಜಾಫರ್ -9448355577 ಹಾಗೂ ದಿಲೀಶ್ ಶಶಿ-9446000514 ಗೆ ಸಂತ್ರಸ್ತರು ಕರೆ ಮಾಡಿ, ನೆರವು ಪಡೆಯಬಹುದು ಅಂತ ಹೇಳಿದೆ. ಇದಷ್ಟೇ ಅಲ್ಲದೇ ಚಾಮರಾಜನ ನಗರ ಜಿಲ್ಲಾಧಿಕಾರಿ ಕಚೇರಿಯಿಂದ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. 08226-223163, 223161, 223160 ಹಾಗೂ ವಾಟ್ಸ್ ಆಪ್ ಸಂಖ್ಯೆ 9740942901ಗೆ…

Read More

ನವದೆಹಲಿ: ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತದ ಪರಿಣಾಮ ನೂರಾರು ಜನರು ಸಾವನ್ನಪ್ಪಿದ್ದರೇ, ಹಲವರು ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಕೇರಳದ ವಯನಾಡಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಕೇರಳದ ವಯನಾಡು ಜಿಲ್ಲೆಯಲ್ಲಿ ಭೂ ಕುಸಿತದ ಪರಿಣಾಮದಿಂದ ಈವರೆಗೆ 123 ಮಂದಿ ಸಾವನ್ನಪ್ಪಿದ್ದಾರೆ. ಮೆಪ್ಪಾಡು ಸೇರಿದಂತೆ ವಿವಿಧ ಗ್ರಾಮಗಳೇ ಭೂ ಕುಸಿತದಿಂದ ಕೊಚ್ಚಿ ಹೋಗಿ, ಹಲವರು ಸಾವನ್ನಪ್ಪಿದ್ದಾರೆ. ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಕೇರಳದ ವಯನಾಡಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವಂತ ಅವರು, ಮೈಸೂರಿನಿಂದ ರಸ್ತೆ ಮಾರ್ಗದ ಮೂಲಕ ನಾಳೆ ವಯನಾಡಿಗೆ ಪ್ರಯಾಣ ಬೆಳಸಲಿದ್ದಾರೆ. ಕಾರಿನಲ್ಲಿ ವಯನಾಡಿಗೆ ತೆರಳಲಿರುವಂತ ರಾಹುಲ್ ಗಾಂಧಿ ಭೂ ಕುಸಿತ ಪ್ರದೇಶವನ್ನು ವೀಕ್ಷಣೆ ಮಾಡಲಿದ್ದಾರೆ. https://kannadanewsnow.com/kannada/priest-arrested-for-raping-woman-on-pretext-of-performing-puja-for-removal-of-defects/ https://kannadanewsnow.com/kannada/microsoft-365-users-face-access-issues-days-after-crowdstrike-outage/

Read More

ಹಾಸನ: ದೋಷ ನಿವಾರಣೆ ಮಾಡುವುದಾಗಿ ಕರೆಸಿಕೊಂಡಂತ ಪೂಜಾರಿಯೊಬ್ಬ, ಆ ಮಹಿಳೆಯ ಮೇಲೆಯೇ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ದಾಖಲಾಗಿದ್ದಂತ ದೂರಿನ ಅನ್ವಯ ಪೊಲೀಸರು ಪೂಜಾರಿಯನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಮಹಿಳೆಯೊಬ್ಬರು ಪುರದಮ್ಮ ದೇಗುಲಕ್ಕೆ ತೆರಳಿದ್ದಂತ ವೇಳೆಯಲ್ಲಿ ದೋಷ ಇದೆ. ಪೂಜೆ ಮಾಡಬೇಕು ಅಂತ ಸೂಚಿಸಿದ್ದರು. ಪೂಜಾರಿಯ ಮಾತು ನಂಬಿ ದೇವಸ್ಥಾನಕ್ಕೆ ತೆರಳಿದ್ದಂತ ವೇಳೆಯಲ್ಲಿ ಪೂಜೆ ಮಾಡೋದಕ್ಕೆ ಹಣ ಪಡೆದಿದ್ದು ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾಗಿ, ಸಂತ್ರಸ್ತ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ದಾಖಲಿಸಿಕೊಂಡ ಬಾಗಲಗುಂಟೆ ಠಾಣೆಯ ಪೊಲೀಸರು, ದೋಷ ನಿವಾರಣೆಗಾಗಿ ಕರೆಸಿಕೊಂಡು ಅತ್ಯಾಚಾರವೆಸಗಿದಂತ ಪುದಮ್ಮ ದೇಗುಲದ ಪೂಜಾರಿ ದಯಾನಂದ್ ಎಂಬಾತನ್ನು ಬಂಧಿಸಿದ್ದಾರೆ. https://kannadanewsnow.com/kannada/actor-darshan-writes-to-jail-authorities-requests-them-to-allow-home-cooked-meals/ https://kannadanewsnow.com/kannada/microsoft-365-users-face-access-issues-days-after-crowdstrike-outage/

Read More

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಮೈಕ್ರೋಸಾಫ್ಟ್ ಸೇವೆ ಸ್ಥಗಿತಗೊಂಡಿತ್ತು. ಈ ಬೆನ್ನಲ್ಲೇ ಇಂದು ಮೈಕ್ರೋಸಾಫ್ಟ್ 365 ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಬಳಕೆದಾರರು ಪರದಾಡುತ್ತಿರುವುದಾಗಿ ತಿಳಿದು ಬಂದಿದೆ. ನಾವು ಪ್ರಸ್ತುತ ಅನೇಕ ಮೈಕ್ರೋಸಾಫ್ಟ್ 365 ಸೇವೆಗಳು ಮತ್ತು ವೈಶಿಷ್ಟ್ಯಗಳೊಂದಿಗೆ ಪ್ರವೇಶ ಸಮಸ್ಯೆಗಳು ಮತ್ತು ಕಳಪೆ ಕಾರ್ಯಕ್ಷಮತೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಅಡ್ಮಿನ್ ಸೆಂಟರ್ನಲ್ಲಿ MO842351 ಅಡಿಯಲ್ಲಿ ಕಾಣಬಹುದು ಎಂದು ಜಾಗತಿಕ ಟೆಕ್ ಮೇಜರ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ನಾವು ತಗ್ಗಿಸುವಿಕೆಗಳನ್ನು ಅನ್ವಯಿಸಿದ್ದೇವೆ ಮತ್ತು ಪರಿಹಾರವನ್ನು ಒದಗಿಸಲು ಬಳಕೆದಾರರ ವಿನಂತಿಗಳನ್ನು ಮರುಹೊಂದಿಸಿದ್ದೇವೆ. ರೆಸಲ್ಯೂಶನ್ ಅನ್ನು ದೃಢೀಕರಿಸಲು ನಾವು ಸೇವೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಆಡಳಿತ ಕೇಂದ್ರದಲ್ಲಿ https://status.cloud.microsoft ಅಥವಾ MO842351 ಕೆಳಗೆ ಕಾಣಬಹುದು ಎಂದಿದೆ. ಆದಾಗ್ಯೂ, ಟೆಕ್ ಸಂಸ್ಥೆ ಒದಗಿಸಿದ ಲಿಂಕ್ ಹಲವಾರು ಬಳಕೆದಾರರಿಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಮೈಕ್ರೋಸಾಫ್ಟ್, “ಅಜುರೆ ಸೇವೆಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಯ” ಬಗ್ಗೆಯೂ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಇದನ್ನು ಆದಷ್ಟು…

Read More

ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನ ಊಟದಿಂದಾಗಿ ದೇಹದ ತೂಕ ಇಳಿಕೆಯಾಗುತ್ತಿದೆ. ಮನೆಯ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅವರು ಮನೆಯೂಟ, ಹಾಸಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಆದ್ರೇ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಆ ಬಳಿಕ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ, ತಾಂತ್ರಿಕ ಕಾರಣದಿಂದ ವಾಪಾಸ್ ಪಡೆಯಲಾಗಿತ್ತು. ಆ ನಂತ್ರ ಹೈಕೋರ್ಟ್ ಗೆ ಮೇಲ್ಮನವಿಯನ್ನು ನಟ ದರ್ಶನ್ ಪರ ವಕೀಲರು ಮನೆಯೂಟಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ನನಗೆ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನಟ ದರ್ಶನ್ ಜೈಲು ಅಧಿಕಾರಿಗಳಿಗೆ ಬರೆದಿರುವಂತ ಪತ್ರದಲ್ಲಿ ಜೈಲೂಟದಲ್ಲಿ ನನಗೆ…

Read More

ಬೆಂಗಳೂರು: ನಗರದ ಬಿಬಿಎಂಪಿ ಕಂದಾಯ ಕಚೇರಿಗಳು ನಾಳೆ ರಾತ್ರಿ.9 ಗಂಟೆಯವರೆಗೆ ತೆರೆದಿರಲಿದ್ದಾವೆ. ಇದಕ್ಕೆ ಕಾರಣ ಒಂದು ಬಾರಿಗೆ ನಗರದ ಜನರು ತೆರಿಗೆ ಪಾವತಿಗೆ ಕೊನೆಯ ದಿನವಾಗಿರೋದಕ್ಕೆ ಆಗಿದೆ. ಈ ಬಗ್ಗೆ ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯು ನಾಳೆ ಮುಕ್ತಾಯಗೊಳ್ಳುವ ಹಿನ್ನಲೆಯಲ್ಲಿ ಆಯಾ ವಲಯ ಕಛೇರಿಗಳು ಮತ್ತು ಸಹಾಯಕ ಕಂದಾಯ ಅಧಿಕಾರಿ ಕಛೇರಿಗಳು ನಾಳೆ ರಾತ್ರಿ 09.00 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ. ಒಂದು ಬಾರಿ ಪರಿಹಾರ ಯೋಜನೆಯಡಿ ಆಸ್ತಿ ತೆರಿಗೆ ತಂತ್ರಾಂಶದ ಮೂಲಕ ಪಾವತಿಸುವಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ, ಪಾಲಿಕೆ ದಾಖಲೆಯಲ್ಲಿ ಅಸ್ತಿತ್ವದಲ್ಲಿರುವ ಸ್ವತ್ತುಗಳು ಎಸ್.ಎ.ಎಸ್ ಅರ್ಜಿ ಸಂಖ್ಯೆಯನ್ನು ನಮೂದಿಸಿ ಭಾಗಶಃ ಪಾವತಿ ಅಥವಾ ಪೂರ್ಣ ಪಾವತಿಯನ್ನು ವಲಯ ಕಛೇರಿಯಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ಸ್ವೀಕರಿಸಲಾಗುವ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವಯಂ ಮೌಲ್ಯಮಾಪನ ಪರಿಗಣಿಸಲಾಗುತ್ತದೆ‌. ನಂತರ ಪಾಲಿಕೆಯಿಂದ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಎಂದಿದ್ದಾರೆ.…

Read More

ಬೆಂಗಳೂರು: ಈಗಾಗಲೇ ಒಂದು ಬಾರಿ 384 ಕೆ ಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಮತ್ತೆಯೂ ಮುಂದೂಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೇ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ರಂದೇ ನಡೆಸಲಾಗುತ್ತದೆ. ಆ ದಿನಾಂಕದಲ್ಲಿ ಬದಲಾವಣೆ ಇಲ್ಲ ಅಂತ ಕೆಪಿಎಸ್ಸಿ ಕಾರ್ಯದರ್ಶಿ ಕೆ.ರಾಕೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಈಗಾಗಲೇ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಿ, ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಫೈನಲ್ ಮಾಡಲಾಗಿದೆ. ಆಗಸ್ಟ್.25ರಂದೇ ಪೂರ್ವಭಾವಿ ಪರೀಕ್ಷೆಯನ್ನು 384 ಕೆಎಎಸ್ ಹುದ್ದೆ ನೇಮಕ ಸಂಬಂಧ ನಡೆಸಲಾಗುತ್ತದೆ. ಪರೀಕ್ಷೆ ದಿನಾಂಕದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದರು. ಅಂದಹಾಗೇ ಆಗಸ್ಟ್.25ರಂದು ವಿವಿಧ ಬ್ಯಾಂಕುಗಳ ನೇಮಕಾತಿಗೆ ಸಂಬಂಧಿಸಿದಂತೆ 6,128 ಗುಮಾಸ್ತ ಹುದ್ದೆಗಳಿಗೆ ಬ್ಯಾಂಕಿಂಗ್ ಪರೀಕ್ಷೆಯನ್ನು ಐಬಿಪಿಎಸ್ ನಡೆಸಲಿದೆ. ಇವುಗಳಲ್ಲಿ 457 ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇದ್ದಾವೆ. ಈ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗಳಿಗೂ ಅರ್ಜಿಯನ್ನು ಅಭ್ಯರ್ಥಿಗಳು ಹಾಕಿರುವ ಕಾರಣ, ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡುವಂತೆ…

Read More

ಬೆಂಗಳೂರು: ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ…

Read More

ಶಿವಮೊಗ್ಗ: ಪುತ್ರಿಯ ಮನೆಗೆ ಬೆಲ್ಜಿಯಂಗೆ ತೆರಳಿದ್ದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬೆಂಗಳೂರಿಗೆ ಇಂದು ವಾಪಾಸ್ ಆಗಿದ್ದರು. ಈ ಬೆನ್ನಲ್ಲೇ ಸಾಗರದ ಸ್ವ ಕ್ಷೇತ್ರಕ್ಕೆ ಆಗಮಿಸುತ್ತಿರುವಂತ ಆವರು, ನಾಳೆ ಇಡೀ ದಿನ ಸಾಗರ ನಗರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಳೆಯಿಂದ ಬಿದ್ದಂತ ಮನೆಗಳನ್ನು ವೀಕ್ಷಣೆ ಮಾಡಲಿದ್ದಾರೆ. ವಿದೇಶಕ್ಕೆ ತೆರಳಿದ್ದಂತ ಶಾಸಕ ಬೇಳೂರು ಗೋಪಾಲಕೃಷ್ಣ ಬೆಂಗಳೂರಿಗೆ ಮರಳಿದ್ದು, ಇಂದು ಮಧ್ಯರಾತ್ರಿ ಸಾಗರಕ್ಕೆ ಆಗಮಿಸಲಿದ್ದಾರೆ. ಆ ನಂತ್ರ ದಿನಾಂಕ 31-07-2024ರ ನಾಳೆ ಬೆಳಿಗ್ಗೆ 8 ಗಂಟೆಯಿಂದಲೇ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಚಂದ್ರಮಾವಿನ ಕೊಪ್ಪಲು, ಜೆಪಿ ನಗರ, ಸುಭಾಷ್ ನಗರ, ಅರಮನೆಕೇರಿ, ಎಲ್ ಬಿ ನಗರ, ರೈಲ್ವೆ ಸ್ಟೇಷನ್ ರಸ್ತೆ, ಸೊರಬ ರಸ್ತೆ ಹಾಗೂ ಮಾರಿಕಾಂಬ ರಸ್ತೆಗಳಲ್ಲಿ ಮಳೆಯಿಂದ ಹಾನಿಗೊಂಡ ಮನೆಗಳನ್ನು ವೀಕ್ಷಿಸಲಿದ್ದಾರೆ. ಈ ಬಳಿಕ ಅಣಲೇಕೊಪ್ಪದ ಸ್ತ್ರೀ ಶಕ್ತಿ ಭವನದಲ್ಲಿ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವಂತ ಪತ್ರಿಕಾ ದಿನಾಚಕರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಮತ್ತೆ…

Read More