Author: kannadanewsnow09

ರಾಯಚೂರು: ಜಿಲ್ಲೆಯಲ್ಲಿ ಒಂದೇ ಶಾಲೆ 100ಕ್ಕೂ ಹೆಚ್ಚು ಮಕ್ಕಳಿಗೆ ಮಂಗನ ಬಾವು ರೋಗ ತಗುಲಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ದಿನೇ ದಿನೇ ಮತ್ತಷ್ಟು ಮಕ್ಕಳಿಗೆ ರೋಗ ವ್ಯಾಪಿಸುತ್ತಿರೋದು ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟಿಸಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದಲ್ಲಿರುವಂತ ಸರ್ಕಾರಿ ಶಾಲೆಯ ಮಕ್ಕಳಿಗೆ ಮಂಗನ ಬಾವು ಖಾಯಿಲೆ ಶಾಕ್ ನೀಡಿದೆ. ಶಾಲೆಯ 100ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ದೃಢಪಟ್ಟಿರೋದಾಗಿ ತಿಳಿದು ಬಂದಿದೆ. ನೀರಲಕೇರಿ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಒಬ್ಬರಿಂದ ಒಬ್ಬರಿಗೆ ಮಂಗನ ಬಾವು ಹರಡಿದೆ. ಗಂಟಲು ಭಾಗದಲ್ಲಿ ಬಾವು, ತಲೆ ನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿರೋದಾಗಿ ತಿಳಿದು ಬಂದಿದೆ. ಮಂಗನ ಬಾವಿನಿಂದ ಬಳಲುತ್ತಿರೋ ಮಕ್ಕಳು ಶಾಲೆ ತಪ್ಪಿಸಿ, ಗೈರಾಗುತ್ತಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಗ್ರಾಮದಲ್ಲೇ ಆರೋಗ್ಯ ಅಧಿಕಾರಿಗಳು ಮೊಕ್ಕಾಂ ಹೂಡಿ, ಪರೀಕ್ಷೆ, ಚಿಕಿತ್ಸೆಯಲ್ಲಿ ತೊಡಗಿದ್ದಾರೆ. https://kannadanewsnow.com/kannada/breaking-son-in-law-kills-mother-in-law-who-went-to-settle-a-dispute-between-husband-and-wife-in-tumkur/ https://kannadanewsnow.com/kannada/lok-sabha-elections-2024-former-minister-v-somanna-becomes-fully-active-after-meeting-high-command/

Read More

ಮೈಸೂರು: ಕ್ಲಸ್ಟರ್ ಮಟ್ಟದ ನಾಯಕರ ಲೈನ್ ಅಪ್ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತದ ವೇಳೆಯಲ್ಲೇ ಬಿಜೆಪಿಯ ಮಾಜಿ ಶಾಸಕ, ಹಾಲಿ ಸಂಸದರು ಕಿತ್ತಾಡಿಕೊಂಡ ಘಟನೆ ನಡೆದಿರೋದಾಗಿ ತಿಳಿದು ಬಂದಿದೆ. ಇಂದು ಮೈಸೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳ ನಿಮಿತ್ತ ಆಗಮಿಸಿದ್ದಾರೆ. ಅವರನ್ನು ಸ್ವಾಗತ ಮಾಡೋದಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಕ್ಲಸ್ಟರ್ ಮಟ್ಟದ ನಾಯಕರನ್ನು ಲೈನ್ ಅಪ್ ಮಾಡೋ ಹೊಣೆಗಾರಿಕೆಯನ್ನು ನೀಡಲಿಗ್ತುತ. ಬಿಜೆಪಿ ನಾಯಕರ ಲೈನ್ ಅಪ್ ಪಟ್ಟಿಯನ್ನು ಗಮನಿಸಿದಂತ ಸಂಸದ ಪ್ರತಾಪ್ ಸಿಂಹ ಅವರು, ಸ್ಥಳೀಯ ನಾಯಕರು ಪಟ್ಟಿಯಲ್ಲಿ ಇರದೇ ಇರೋದರಿಂದ ಸಿಟ್ಟಾಗಿದ್ದಾರೆ. ಇದನ್ನು ನೇರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಭೇಟಿಯಾಗೇ ಪ್ರಶ್ನಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಶ್ನೆಗೆ ತಾನು ಮಾಡಿದ್ದೇ ಸರಿ ಎನ್ನುವಂತೆ ಮಾಜಿ ಶಾಸಕ ಪ್ರೀತಂ ಗೌಡ ಉತ್ತರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತ ಸಂದರ್ಭದಲ್ಲಿಯೇ…

Read More

ಹಾವೇರಿ: ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಹಾಲು, ಮೊಸರು ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳು ಗಗನಕ್ಕೇರುತ್ತಿವೆ. ಇದರ ನಡುವೆ ಸಕ್ಕರೆ ದರ ಕೂಡ ಹೆಚ್ಚಳ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿತ್ತು. ಆದ್ರೇ ರಾಜ್ಯದ ಜನರಿಗೆ ನೆಮ್ಮದಿಯ ಸುದ್ದಿ ಎನ್ನುವಂತೆ ಸದ್ಯಕ್ಕೆ ಸಕ್ಕರೆ ಬೆಲೆ ಏರಿಕೆಯಿಲ್ಲ ಅಂತ ಸಚಿವ ಶಿವಾನಂದ ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು ಸದ್ಯದ ಪರಿಸ್ಥಿತಿಯಲ್ಲಿ ಸಕ್ಕರೆ ದರದಲ್ಲಿ ಏರಿಕೆ ಇಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ 55 ರೂ ಇದೆ. ಲೋಕಸಭಾ ಚುನಾವಣೆ ಕಾರಣಕ್ಕೆ ದರ 34ಕ್ಕೆ ನಿಂತಿದೆ ಎಂದರು. ಕೇಂದ್ರ ಸರ್ಕಾರ ಏಕಾಏಕಿ ಎಥೆನಾಲ್ ನೀತಿ ಜಾರಿಗೊಳಿಸಿರುವ ಪರಿಣಾಮ ಸಕ್ಕರೆ ಧಾರಣೆ ಏರುತ್ತಿಲ್ಲ ಎನ್ನುವುದೇ ದೇಶದ ದುರ್ದೈವ ಎಂಬುದಾಗಿ ವಿಷಾದಿಸಿದರು. https://kannadanewsnow.com/kannada/three-employees-of-panchayati-raj-department-suspended-for-two-bills-for-same-work/ https://kannadanewsnow.com/kannada/lok-sabha-elections-2024-former-minister-v-somanna-becomes-fully-active-after-meeting-high-command/

Read More

ರಾಯಚೂರು: ಒಂದು ಕಾಮಗಾರಿಗೆ ಒಂದೇ ಬಿಲ್ ಪಡೆಯಬೇಕು. ಆದ್ರೇ ಇದನ್ನು ಮೀರಿ ಎರಡು ಬಿಲ್ ನೀಡಿದಂತ ಮೂವರು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಆರ್ ಡಿ ಪಿ ಆರ್ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಜಲ ಜೀವನ್ ಮಿಷನ್ ಅಡಿ ಒಂದೇ ಕಾಮಗಾರಿಗೆ ಎರಡು ಬಿಲ್ ನೀಡಿದ ಆರೋಪ ಆಧರಿಸಿ, ಜಿಲ್ಲಾ ಪಂಚಾಯ್ತಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇಇ ಸೈಯದ್ ಫಜಲ್ ಮೆಹಮೂದ್, ಲೆಕ್ಕಾಧಿಕಾರಿ ಅಬ್ದುಲ್ ರಹೀಮ್ ಹಾಗೂ ಪ್ರಥಮ ದರ್ಜೆ ಸಹಾಯ ಜಾಕೀರ್ ಹುಸೇನ್ ಎಂಬುವರನ್ನು ಅಮಾನತುಗೊಳಿಸಲಾಗಿದೆ. ಗುತ್ತಿಗೆದಾರರೊಬ್ಬರಿಗೆ 19,66,285 ರೂ ಬಿಲ್ ಅನ್ನು ಎರಡು ಬಾರಿ ಪಾವತಿಸಿ, ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದ ಕೇಳಿ ಬಂದಿತ್ತು. ಈ ಬಗ್ಗೆ ತನಿಖೆಯಲ್ಲಿ ಸಾಬೀತಾದ ಹಿನ್ನಲೆಯಲ್ಲಿ ಮೂವರನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/former-bcci-president-sourav-gangulys-phone-worth-rs-1-6-lakh-stolen-police-complaint-lodged/ https://kannadanewsnow.com/kannada/breaking-son-in-law-kills-mother-in-law-who-went-to-settle-a-dispute-between-husband-and-wife-in-tumkur/

Read More

ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಠಾಕೂರ್ ಪುರ ಪೊಲೀಸ್ ಠಾಣೆಯಲ್ಲಿ ಫೋನ್ ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದಾರೆ. ಹಲವಾರು ವರದಿಗಳ ಪ್ರಕಾರ, ಗಂಗೂಲಿ ಅವರ ಫೋನ್ ಮೌಲ್ಯ 1.6 ಲಕ್ಷ ಮತ್ತು ಅದು ಕೋಲ್ಕತ್ತಾದ ಅವರ ಬೆಹಲಾ ನಿವಾಸದಿಂದ ಕಾಣೆಯಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ನ ಕ್ರಿಕೆಟ್ ನಿರ್ದೇಶಕರು ಅನುಮಾನಾಸ್ಪದ ಕಳ್ಳತನದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಅವರ ಫೋನ್ “ಬಹು ಸಂಪರ್ಕ ಸಂಖ್ಯೆಗಳು ಮತ್ತು ವೈಯಕ್ತಿಕ ಮಾಹಿತಿ ಮತ್ತು ಖಾತೆಗಳಿಗೆ ಪ್ರವೇಶವನ್ನು ಹೊಂದಿದೆ. ಕೋಲ್ಕತಾದ ರಾಜಕುಮಾರ ಪೊಲೀಸರಿಗೆ “ಸೂಕ್ತ ಕ್ರಮ” ತೆಗೆದುಕೊಳ್ಳುವಂತೆ ವಿನಂತಿಸಿದ್ದಾರೆ. ನನ್ನ ಫೋನ್ ಅನ್ನು ಮನೆಯಿಂದ ಕಳವು ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ನಾನು ಕೊನೆಯ ಬಾರಿಗೆ ಜನವರಿ 19 ರಂದು ಬೆಳಿಗ್ಗೆ 11: 30 ರ ಸುಮಾರಿಗೆ ಫೋನ್ ನೋಡಿದೆ. ನಾನು ಫೋನ್ ಹುಡುಕಲು ಪ್ರಯತ್ನಿಸಿದೆ. ಆದರೆ ಅದನ್ನು ಪತ್ತೆ ಹಚ್ಚೋದಕ್ಕೆ ಸಾಧ್ಯವಾಗಲಿಲ್ಲ. ನನ್ನ ಫೋನ್ ಕಳೆದುಹೋದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇನೆ. ಏಕೆಂದರೆ…

Read More

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿ ಯೊಳಗೆ ಪೂರ್ಣ ಗೊಳಿಸಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತಿಂಗಳ ಅಂತ್ಯದಲ್ಲಿ 36 ಸಾವಿರ ಮನೆ ಹಂಚಿಕೆ ಮಾಡುವ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ ಯವರು ಏಕ ಕಾಲದಲ್ಲಿ ರಾಜ್ಯ ದೆಲ್ಲೆಡೆ ಮನೆಗಳ ಹಂಚಿಕೆ ಗೆ ಚಾಲನೆ ನೀಡಲಿದ್ದು ಅದೇ ದಿನ ಫಲಾನುಭವಿಗಳಿಗೆ ಕೀ ನೀಡಬೇಕು. ಕುಡಿಯುವ ನೀರು, ಒಳ ಚರಂಡಿ, ವಿದ್ಯುತ್ ಸಂಪರ್ಕ ಸಹಿತ ಮೂಲ ಸೌಕರ್ಯ ಕಾಮಗಾರಿ ಫೆ.20 ರೊಳಗೆ ಮುಗಿದಿರಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿ ಯೋಜನೆಯಲ್ಲಿ ಎಷ್ಟು ಮನೆ ನೀಡಲಾಗುವುದು ಎಂಬ ಗುರಿ ನೀಡಲಾಗಿದೆಯೋ ಅಷ್ಟು ಕೊಡಲೇಬೇಕು.…

Read More

ನವದೆಹಲಿ: ಈ ಬಾರಿ ಸಂಸತ್ತಿನ ಬಜೆಟ್ ಅಧಿವೇಶನವನ್ನು 9 ದಿನಗಳ ಕಾಲ ನಿಗದಿ ಪಡಿಸಲಾಗಿತ್ತು. ಆದರೂ ಮತ್ತೊಂದು ದಿನ ವಿಸ್ತರಿಸಲಾಗಿತ್ತು. ಲೋಕಸಭೆಯಲ್ಲಿ 228, ರಾಜ್ಯಸಭೆಯಲ್ಲಿ 220 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಸಂಸತ್ತಿನ ಕೇಂದ್ರ ಮಧ್ಯಂತರ ಬಜೆಟ್ ಅಧಿವೇಶನವನ್ನು 9 ದಿನಗಳ ಕಾಲ ಮೊದಲು ನಿಗದಿ ಪಡಿಸಲಾಗಿತ್ತು. ಆ ಬಳಿಕ ಮತ್ತೊಂದು ದಿನ ಅಧಿವೇಶನ ವಿಸ್ತರಣೆ ಮಾಡಲಾಯಿತು ಎಂದರು. ಬಜೆಟ್ ಅಧಿವೇಶದನದ ವೇಳೆ 12 ಬಿಲ್ ಮಂಡಿಸಿ ಅಂಗೀಕರಿಸಲಾಗಿದೆ. ಸಂಸದೀಯ ಕಲಾಪಗಳ ಉತ್ಪದಕತೆ 148 ಪರ್ಸೆಂಟ್ ನಷ್ಟು ಇದೆ ಎಂದರು. 17ನೇ ಲೋಕಸಭಾಯಲ್ಲಿ 274 ಕಲಾಪಗಳು ನಡೆದಿವೆ. ಲೋಕಸಭೆಯಲ್ಲಿ 228 ವಿಧೇಯಕ ಮಂಡಿಸಿ ಅಂಗೀಕರಿಸಲಾಗಿದೆ. ರಾಜ್ಯಸಭೆಯಲ್ಲಿ 271 ಕಲಾಪ ನಡೆಸಲಾಗಿದೆ. ರಾಜ್ಯಸಭೆಯಲ್ಲಿ ಒಟ್ಟು 220 ವಿಧೇಯಕ ಅಂಗೀಕರಿಸಲಾಗಿದೆ ಎಂದು ತಿಳಿಸಿದರು. https://kannadanewsnow.com/kannada/non-bailable-warrant-issued-against-transport-minister-ramalinga-reddy/ https://kannadanewsnow.com/kannada/good-news-for-state-contractual-outsourced-employees-equal-work-equal-pay-to-be-implemented/

Read More

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಎಸ್ಟೇಟ್ ಗಳಿಗೆ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಗೆದಾರರಿಂದ ಬರಬೇಕಾದ ಬಾಕಿ ಮತ್ತು ಅವಧಿ ಮುಗಿದ ಅರಣ್ಯ ಭೂಮಿ ಮರುಪಡೆಯಲು ವಿಶೇಷ ತಂಡ ಮತ್ತು ಕಾನೂನು ಕೋಶವನ್ನು ರಚಿಸಲಾಗಿದೆ. ಈ ವಿಶೇಷ ತಂಡ ಗುತ್ತಿಗೆ ನೀಡಿದ ಅರಣ್ಯ ಭೂಮಿಯನ್ನು ಮರು ಪಡೆಯಲು ಕಾರ್ಯೋನ್ಮುಖವಾಗುತ್ತದೆ ಎಂದರು. ಕೆಲವು ವರ್ಷಗಳ ಹಿಂದೆ ಹಾಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಬಿ.ಪಿ. ರವಿ ಅವರು, ಚಾಮರಾಜನಗರದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದಾಗ ಕೆಲವು ಕಂಪನಿಗಳು ಗುತ್ತಿಗೆ ಹಣವನ್ನು ಅರಣ್ಯ ಇಲಾಖೆಗೆ ಪಾವತಿಸಿಲ್ಲ ಎಂದು ನೋಟಿಸ್ ನೀಡಿದ್ದರು, ಈಗ ಎಸ್ಟೇಟ್ ನವರು ನ್ಯಾಯಾಲಯಕ್ಕೆ ಹೋಗಿದ್ದಾರೆ.…

Read More

ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ ಎಂದರು. ಆದಾಗ್ಯೂ ಕೆಲವು ವಿಶೇಷ ಸಂದರ್ಭ ಅಂದರೆ ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು. ಬಂಡಿಪುರದಲ್ಲಿ ರೈಲು ಮಾರ್ಗ ಅಥವಾ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಸಮೀಕ್ಷೆ ಆಗಿಲ್ಲ ಎಂದು ತಿಳಿಸಿದರು. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅತ್ಯಗತ್ಯವಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ಹೀಗಾಗಿ ಬೆಳೆ ಹಾನಿ ಆಗದಂತೆ ಮತ್ತು ಜೀವ ಹಾನಿ ಆಗದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಮಂಗಳವಾರದಿಂದ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates -UAE) ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ( President Sheikh Mohamed bin Zayed Al Nahyan ) ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. 2015ರ ಬಳಿಕ ಯುಎಇಗೆ ಪ್ರಧಾನಿ ನೀಡುತ್ತಿರುವ ಏಳನೇ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ. ಮೋದಿ ಮತ್ತು ಅಲ್ ನಹ್ಯಾನ್ ಅವರು ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸೋದಕ್ಕೆ, ವಿಸ್ತರಿಸುವ ಮತ್ತು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಯುಎಇಯ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವ…

Read More