Author: kannadanewsnow09

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ಒಂದೇ ಒಂದು ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆಗೈದು, ಮೋರಿಗೆ ಶವವನ್ನು ಎಸೆಯಲಾಗಿತ್ತು. ಈ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 ಮಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದರು. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಮುಂದೆ ವಿಚಾರಣೆ ವೇಳೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಅವರು ಕಣ್ಣೀರಿಟ್ಟರು. ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದನಂತೆ. ಅಲ್ಲದೇ ನಟ ದರ್ಶನ್ ಬಗ್ಗೆಯೂ ಬಗ್ಗೆಯೂ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಕೂಡ ಹಾಕುತ್ತಿದ್ದನಂತೆ. ಇದೇ ಕಾರಣಕ್ಕೆ ಅನೇಕ ಬಾರಿ ನಟ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ರೇಣುಕಾಸ್ವಾಮಿಗೆ ಎಚ್ಚರಿಸಿದ್ದರು. ಆದ್ರೇ ರೇಣುಕಾಸ್ವಾಮಿ ಮಾತ್ರ ತನ್ನ ಚಾಳಿಯನ್ನು ಮುಂದುವರೆಸಿದ್ದನು ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡು ಬಂದು,…

Read More

ಬೆಂಗಳೂರು: ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂಬುದಾಗಿ ತಿಳಿಸಿದ್ದಾರೆ. https://twitter.com/ChetanAhimsa/status/1800501378676412765 https://kannadanewsnow.com/kannada/hd-kumaraswamy-takes-charge-as-the-minister-of-steel-earlier-this-evening-he-also-took-charge-as-the-minister-of-heavy-industries/ https://kannadanewsnow.com/kannada/mohan-charan-manjhi-to-be-new-odisha-chief-minister/

Read More

ನವದೆಹಲಿ: ನಿನ್ನೆ ಮೋದಿ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಸ್ಥಾನವನ್ನು ಹೆಚ್.ಡಿ ಕುಮಾರಸ್ವಾಮಿಗೆ ನೀಡಲಾಗಿತ್ತು. ಇಂದು ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. https://twitter.com/ANI/status/1800505798977814652 ಈ ಬಳಿಕ ನವದೆಹಲಿಯ ಕಚೇರಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇಂದು ಸಂಜೆ ಅವರು ಬೃಹತ್ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡರು. https://twitter.com/ANI/status/1800511143024431513 https://kannadanewsnow.com/kannada/wont-stop-guarantee-schemes-for-any-reason-siddaramaiah-2/ https://kannadanewsnow.com/kannada/mysuru-dasara-elephant-ashwathama-passes-away/

Read More

ನವದೆಹಲಿ: ಒಡಿಶಾದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. https://twitter.com/ANI/status/1800505334546804766 ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮೋಹನ್ ಮಾಝಿ ಒಡಿಶಾದ ಮೊದಲ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಮಂತ್ರಿಯಾಗಲಿದ್ದಾರೆ. ಮೋಹನ್ ಚರಣ್ ಮಾಝಿ ಅವರು ಕಿಯೋಂಜಾರ್ ಕ್ಷೇತ್ರದಲ್ಲಿ 87,815 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ಕ್ಷೇತ್ರದಿಂದ ಬಿಜೆಡಿಯ ಮಿನಾ ಮಾಝಿ ಅವರನ್ನು ಸೋಲಿಸಿದರು. ವಿಶೇಷವೆಂದರೆ, ಬಿಜೆಪಿ 2000 ಮತ್ತು 2004 ರಲ್ಲಿ ಬಿಜೆಡಿಯ ಮೈತ್ರಿ ಪಾಲುದಾರರಾಗಿ ರಾಜ್ಯವನ್ನು ಆಳಿತ್ತು ಮತ್ತು ಒಡಿಶಾದಲ್ಲಿ ಪಕ್ಷವು ಸ್ವಂತವಾಗಿ ಸರ್ಕಾರವನ್ನು ರಚಿಸುತ್ತಿರುವುದು ಇದೇ ಮೊದಲು. ಉಪ ಮುಖ್ಯಮಂತ್ರಿಗಳು ಯಾರು? ಕನಕ್ ವರ್ಧನ್ ಸಿಂಗ್ ದೇವ್ ಮತ್ತು ಪಾರ್ವತಿ ಪರಿದಾ ಒಡಿಶಾದ ಮುಂದಿನ ಉಪಮುಖ್ಯಮಂತ್ರಿಗಳಾಗಲಿದ್ದಾರೆ. ಒಡಿಶಾದ ನಿಮಪಾರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕಿ ಪಾರ್ವತಿ ಪರಿದಾ ಅವರು…

Read More

ನವದೆಹಲಿ: ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ( Indian Bank’s Association – IBA) ಸೋಮವಾರ ಅಧಿಸೂಚನೆಯ ಪ್ರಕಾರ ಬ್ಯಾಂಕ್ ನೌಕರರ ತುಟ್ಟಿಭತ್ಯೆಯನ್ನು (Dearness allowance -DA)  ಮೇ, ಜೂನ್ ಮತ್ತು ಜುಲೈ ತಿಂಗಳಿಗೆ 15.67% ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೇ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸುವಂತೆ ಕ್ರಮವನ್ನು ಕೈಗೊಳ್ಳಲಾಗಿದೆ. “08.03.2024 ರ 12 ನೇ ದ್ವಿಪಕ್ಷೀಯ ಒಪ್ಪಂದದ ಷರತ್ತು 13 ಮತ್ತು 08.03.2024 ರ ಜಂಟಿ ಟಿಪ್ಪಣಿಯ ಷರತ್ತು 2 (ಐ) ರ ಪ್ರಕಾರ, 2024 ರ ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ ಕಾರ್ಮಿಕರು ಮತ್ತು ಅಧಿಕಾರಿ ಉದ್ಯೋಗಿಗಳಿಗೆ ಪಾವತಿಸಬೇಕಾದ ತುಟ್ಟಿಭತ್ಯೆಯ ದರವು ‘ವೇತನ’ದ 15.97% ಆಗಿರುತ್ತದೆ. ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕೈಗಾರಿಕಾ ಕಾರ್ಮಿಕರ ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕವನ್ನು ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ 100 ಅನ್ನು ಆಧರಿಸಿದ 2016 ರ ಮಾಪಕವನ್ನು ದೃಢಪಡಿಸಲಾಗಿದೆ. ಜನವರಿ 2024 ರಲ್ಲಿ, ಇದು 138.9,…

Read More

ಬೆಂಗಳೂರು: ನಾವು ರಾಜಕೀಯ ಲಾಭ ಪಡೆಯುವುದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದಿಲ್ಲ. ಅವುಗಳನ್ನು ತಂದಿರೋದು ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸೋದಕ್ಕಾಗಿ ಆಗಿದೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಅಂತ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಅಶೋಕ್…

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಇಂತಹ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣ, ಭವಾನಿ ರೇವಣ್ಣ ವಿರುದ್ಧದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆ ನಡೆಸುತ್ತಿದೆ. ಈಗಾಗಲೇ ಹಲವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದಂತ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಸಮರ್ಥವಾಗೇ ವಾದಿಸಿದ್ದರು. ಪ್ರಜ್ವಲ್, ರೇವಣ್ಣ, ಭವಾನಿ ಅವರು ಪ್ರಕರಣದಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಂತ ವೇಳೆಯಲ್ಲಿ ಎಸ್ಐಟಿ ಪರವಾಗಿ ಹೆಚ್ಚುವರಿ ಎಸ್ ಪಿಪಿಯಾಗಿ ವಾದಿಸಿದ್ದಂತ ಜಾಯ್ನಾ ಕೊಥಾರಿ ಅವರು, ಜಾಮೀನು ನೀಡದಂತೆ ನ್ಯಾಯಪೀಠಕ್ಕೆ ಮನವಿ…

Read More

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿಯ ಮೇಲೆ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದ್ದು, ಈ ಆಕಸ್ಮಿಕ ಸಾವಿನ ಬಗ್ಗೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/malawi-vice-president-9-others-killed-in-plane-crash-says-president/ https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/

Read More

ಬೆಂಗಳೂರು: ಸೋಮಣ್ಣ ಅವರು ಜಲಶಕ್ತಿ ಸಚಿವರಾಗಿರುವುದರಿಂದ ತಾರತಮ್ಯವಾಗಲಿದೆ ಎಂಬ ತಮಿಳುನಾಡು ಕಾಂಗ್ರೆಸ್ ಪ್ರಧಾನಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, “ಒಮ್ಮೆ ಸಚಿವರಾದರೆ ಅವರು, ಇಡೀ ದೇಶಕ್ಕೆ ಸಚಿವರಾಗುತ್ತಾರೆಯೇ ಹೊರತು ಅವರು ಪ್ರತಿನಿಧಿಸುವ ರಾಜ್ಯಕ್ಕೆ ಸಚಿವರಾಗುವುದಿಲ್ಲ. ಯಾವುದೇ ರಾಜಕಾರಣಿಯಾದರೂ ತಮ್ಮ ರಾಜ್ಯ ಹಾಗೂ ಊರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದು ಸಹಜ. ನಾನು ಸಚಿವನಾಗಿದ್ದಾಗ ಪೈಲೆಟ್ ಯೋಜನೆಗಳನ್ನು ನನ್ನ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಲುಬುರ್ಗಿಯಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಿಸಿದರು. ಇದು ಸಹಜ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸೋಮಣ್ಣ ಅವರು ಈಗಷ್ಟೇ ಸಚಿವರಾಗಿ ಕಣ್ಣು ಬಿಡುತ್ತಿದ್ದಾರೆ. ನಮ್ಮ ರಾಜ್ಯದಿಂದ ಮಂತ್ರಿಯಾದವರು ರಾಜ್ಯಕ್ಕೆ ಶಕ್ತಿ ತುಂಬಲಿ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಯಾವುದೇ ಕೆಲಸವಾದರೂ ಕಾನೂನು ಬದ್ಧವಾಗಿ ಅವಕಾಶ ಇದ್ದರೆ ಅದನ್ನು…

Read More

ಬೆಂಗಳೂರು: ನಮ್ಮ ನಗರವನ್ನು ಹಸಿರಾಗಿಡಲು ಬ್ಲೂ ಗ್ರೀನ್ ಊರು ಎಂಬ ಅಭಿಯಾನ ಆರಂಭಿಸಿದ್ದು, ಹೆಚ್ಚಿನ ಮರಗಳನ್ನು ನೆಡಲು ಸಿದ್ಧತೆ ಮಾಡಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇದರ ಜತೆಗೆ ಕ್ಲೈಮೆಟ್ ಆಕ್ಷನ್ ಸೆಲ್ ಕೂಡ ರಚಿಸಲಾಗಿದ್ದು, ಇದರಲ್ಲಿ ಬಿಡಬ್ಲ್ಯೂಎಸ್ಎಸ್ ಬಿ, ಬೆಸ್ಕಾಂ, ಬಿಎಂಟಿಸಿ, ಬಿಟಿಪಿ, ಬಿಎಂಆರ್ ಸಿಎಲ್, ಡೆಲ್ಟ್, ಘನತ್ಯಾಜ್ಯ ನಿರ್ವಹಣೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ, ಕೈಗಾರಿಕೆ, ಗಣಿಗಾರಿಗೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಒಳಗೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಬಿಬಿಎಂಪಿ ಜಾಲತಾಣದಲ್ಲಿ ಲಭ್ಯವಿದೆ ಎಂದರು. ಹಸಿರು ರಕ್ಷಕ ಮೂಲಕ 2 ಲಕ್ಷ ಗಿಡ ನೆಡುವ ಗುರಿ: ಇನ್ನು ಕಳೆದ ವರ್ಷ ಹಸಿರು ರಕ್ಷಕ ಕಾರ್ಯಕ್ರಮ ಅನಾವರಣ ಮಾಡಿದ್ದೆವು. ಶಾಲಾ ಮಕ್ಕಳು ತಮ್ಮ ಪ್ರದೇಶದಲ್ಲಿ ಗಿಡ ನೆಟ್ಟು ಅವುಗಳನ್ನು ಅವರೇ ಬೆಳೆಸುವ ಕಾರ್ಯಕ್ರಮ ಇದಾಗಿತ್ತು. ಈಗಾಗಲೇ 250 ಶಾಲೆಗಳ lಸಹಯೋಗದಲ್ಲಿ 52 ಸಾವಿರ ಗಿಡಗಳನ್ನು ನೆಡಲಾಗಿದೆ. ಈ ಪೈಕಿ ಶೇ. 80…

Read More