Author: kannadanewsnow09

ನವದೆಹಲಿ: ಮಾರಣಾಂತಿಕ ವಿಮಾನ ಅಪಘಾತದಲ್ಲಿ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿಯನ್ನು ಕಳೆದುಕೊಂಡಿರುವುದಕ್ಕೆ ಮಲವಿ ಶೋಕ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಲಾಜರಸ್ ಚಕ್ವೆರಾ ಮಂಗಳವಾರ ದೃಢಪಡಿಸಿದ್ದಾರೆ. ಉಪರಾಷ್ಟ್ರಪತಿ ಚಿಲಿಮಾ ಅವರನ್ನು ಸಾಗಿಸುತ್ತಿದ್ದ ಮಿಲಿಟರಿ ವಿಮಾನದ ಅವಶೇಷಗಳು ದೇಶದ ಉತ್ತರ ಪ್ರದೇಶದ ಒರಟಾದ ಪರ್ವತ ಪ್ರದೇಶದಲ್ಲಿ ಒಂದು ದಿನಕ್ಕೂ ಹೆಚ್ಚು ಕಾಲ ವ್ಯಾಪಕ ಶೋಧದ ನಂತರ ಪತ್ತೆಯಾಗಿವೆ. ದುರದೃಷ್ಟವಶಾತ್, ಯಾರೂ ಬದುಕುಳಿದಿಲ್ಲ ಎಂದು ಅಧ್ಯಕ್ಷ ಚಕ್ವೆರಾ ರಾಜ್ಯ ದೂರದರ್ಶನದಲ್ಲಿ ಪ್ರಸಾರವಾದ ನೇರ ಭಾಷಣದಲ್ಲಿ ಘೋಷಿಸಿದರು. ಉಪಾಧ್ಯಕ್ಷ ಚಿಲಿಮಾ ಮತ್ತು ಮಾಜಿ ಪ್ರಥಮ ಮಹಿಳೆ ಶಾನಿಲ್ ಡಿಜಿಂಬಿರಿ ಮತ್ತು ಇತರರನ್ನು ಹೊತ್ತ ವಿಮಾನವು ರಾಜಧಾನಿ ಲಿಲೊಂಗ್ವೆಯಿಂದ ಉತ್ತರದ ಮುಜುಜುಗೆ ನಿಗದಿತ 45 ನಿಮಿಷಗಳ ಹಾರಾಟದ ಸಮಯದಲ್ಲಿ ರಾಡಾರ್ನಿಂದ ಕಣ್ಮರೆಯಾದಾಗ ಈ ದುರಂತ ಘಟನೆ ಬೆಳಕಿಗೆ ಬಂದಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಕಳಪೆ ಗೋಚರತೆಯಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲರ್ಗಳು ವಿಮಾನವನ್ನು ಮುಜುಜು ವಿಮಾನ ನಿಲ್ದಾಣದಿಂದ ದೂರಕ್ಕೆ ತಿರುಗಿಸಿದರು, ಲಿಲೊಂಗ್ವೆಗೆ ಮರಳಲು…

Read More

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂಬುದಾಗಿ ತನ್ನನ್ನು ಭೇಟಿಯಾದಂತ ವಕೀಲರ ಮುಂದೆ ನಟ ದರ್ಶನ್ ಅಳಲು ತೋಡಿಕೊಂಡಿರೋದಾಗಿ ತಿಳಿದು ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಠಾಣೆಯಲ್ಲಿ ನಟ ದರ್ಶನ್ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇಲ್ಲಿಗೆ ಅವರ ಪರ ವಕೀಲ ಅನಿಲ್ ತೆರಳಿ, ಅವರೊಂದಿಗೆ ಚರ್ಚಿಸಿದರು. ತನ್ನ ಪರ ವಕೀಲ ಅನಿಲ್ ಮುಂದೆ ನಟ ದರ್ಶನ್ ತನಗೂ ಇದ್ದಕೂ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ನನ್ನನ್ನು ಬಂಧಿಸಲಾಗಿದೆ ಎಂಬುದಾಗಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆಯಲ್ಲಿ ದರ್ಶನ್ ನೋಡಲು ಠಾಣೆಗೆ ತೆರಳಿದ್ದಂತ ಸಂಬಂಧಿ ಶುಶಾಂತ್ ಗೆ ಅವಕಾಶ ಮಾಡಿಕೊಡಲಾಗಿದೆ. ಅಲ್ಲದೇ ಅವರ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನಿಶ್ ಜೊತೆಗೆ ಮೊಬೈಲ್ ಪೋನ್ ನಲ್ಲಿ ಮಾತನಾಡೋದಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/ https://kannadanewsnow.com/kannada/mysuru-dasara-elephant-ashwathama-passes-away/

Read More

ಬೆಂಗಳೂರು: ನಟ ದರ್ಶನ್ ಅವರನ್ನು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪೊಲೀಸರು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವಿಚಾರಣೆ ನಡೆಸುತ್ತಿದ್ದರು. ಈ ವೇಳೆಯಲ್ಲೇ ಪೊಲೀಸ್ ಠಾಣೆಯ ಮುಂದೆಯೇ ಡಿ ಬಾಸ್ ಗೆ ಜೈ ಎಂಬುದಾಗಿ ಅವರ ಅಭಿಮಾನಿಗಳು ಘೋಷಣೆ ಕೂಗಿದ ಘಟನೆ ನಡೆದಿದೆ. ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದನಂತೆ. ಅಲ್ಲದೇ ನಟ ದರ್ಶನ್ ಬಗ್ಗೆಯೂ ಬಗ್ಗೆಯೂ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಕೂಡ ಹಾಕುತ್ತಿದ್ದನಂತೆ. ಇದೇ ಕಾರಣಕ್ಕೆ ಅನೇಕ ಬಾರಿ ನಟ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ರೇಣುಕಾಸ್ವಾಮಿಗೆ ಎಚ್ಚರಿಸಿದ್ದರು. ಆದ್ರೇ ರೇಣುಕಾಸ್ವಾಮಿ ಮಾತ್ರ ತನ್ನ ಚಾಳಿಯನ್ನು ಮುಂದುವರೆಸಿದ್ದನು ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಬೆಂಗಳೂರಿನ ಶೆಡ್ ಒಂದರಲ್ಲಿ ಕೂಡಿ ಹಾಕಿ. ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಡ್ ನಿಂದ ಬಲವಾಗಿ ತಲೆಗೆ…

Read More

ಬೆಂಗಳೂರು: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ.…

Read More

ಬೆಂಗಳೂರು: ನಗರದ ಜನತೆ ಬೆಳಿಗ್ಗೆ ವಾಕ್ ಮಾಡೋದಕ್ಕಾಗಿ, ಸಂಜೆ ವಾಕಿಂಗ್ ಮಾಡೋದಕ್ಕಾಗಿ ಉಪಯೋಗವಾಗೋ ನಿಟ್ಟಿನಲ್ಲಿ, ಇನ್ಮುಂದೆ ಬೆಂಗಳೂರಿನ ಪಾರ್ಕ್ ಗಳು ಬೆಳಿಗ್ಗೆ 5 ರಿಂದ ರಾತ್ರಿ 10ರವರೆಗೆ ಓಪನ್ ಮಾಡೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.  ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ಇನ್ನು ನಗರದಲ್ಲಿನ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆಯಲಾಗುತ್ತಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆಯೂ ಉದ್ಯಾನಗಳನ್ನು ತೆರೆಯ ಬೇಕು ಎಂದು ಮನವಿ ನೀಡಿದ್ದು, ಹೀಗಾಗಿ ನಗರದ ಎಲ್ಲಾ ಉದ್ಯಾನಗಳನ್ನು ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ರವರೆಗೆ ತೆರೆಯಲು ನಿರ್ಧರಿಸಲಾಗಿದೆ ಎಂದರು. ಕಬ್ಬನ್ ಪಾರ್ಕ್ ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿದ್ದು ಈ ಸಮಯ ಇಲ್ಲಿಗೆ ಅನ್ವಯವಾಗುವುದಿಲ್ಲ. ಉದ್ಯಾನವನಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪೊಲೀಸರ ಗಸ್ತು, ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು. ಇದರ ಜತೆಗೆ 22660000, 22221188 ಪಾಲಿಕೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. 9480685700 ಗೆ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು ಎಂದು ತಿಳಿಸಿದರು. ಅನಧಿಕೃತ ಫ್ಲೆಕ್ಸ್;…

Read More

ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ. ಜುಲೈ.31 ಕೊನೆಯ ದಿನವಾಗಿದೆ. ಅದರೊಳೆಗೆ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಜನರ ಸೇವೆಗೆ ಸಂಪೂರ್ಣವಾಗಿ ಸಮರ್ಪಿಸಿಕೊಂಡಿದೆ. ನಗರ ಪಾಲಿಕೆಯು ರಸ್ತೆಗಳು, ಉದ್ಯಾನವನಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತತೆಗಳ ನಿರ್ವಹಣೆ, ಆಸ್ತಿ ಮತ್ತು ಖಾತಾ ಸಂಬಂಧಿತ ಸೇವೆಗಳು, ಘನತ್ಯಾಜ್ಯ ನಿರ್ವಹಣೆ ಮುಂತಾದ ಸೇವೆಗಳ ಸಮರ್ಥ ವಿತರಣೆಯು ಬೆಂಗಳೂರಿಗರಿಗೆ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ನಿರ್ಣಾಯಕವಾಗಿದೆ ಎಂದು ಅರ್ಥಮಾಡಿ ಕೊಂಡಿದೆ ಎಂದಿದ್ದಾರೆ. ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದೆ. ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರಿಂದ ಸುಮಾರು ರೂ. 1000 ಕೋಟಿಗಳಷ್ಟು ತಮ್ಮ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಐತಿಹಾಸಿಕ ನಿರ್ಣಯದಿಂದ, ಒಂದು ಭಾರಿ…

Read More

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ. ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ, ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್ ಬೇಲಿಯಿಂದ ವಿದ್ಯುತ್ ಸ್ಪರ್ಶಿಸಿ, ವಿದ್ಯುತ್ ಆಘಾತದಲ್ಲಿ ಅಶ್ವತ್ಥಾಮ ಆನೆ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವಂತ ಅಶ್ವತ್ಥಾಮ ಆನೆಯು, ಎರಡು ಬಾರಿ ದಸರಾ ಮಹೋತ್ಸವಲ್ಲಿ ಪಾಲ್ಗೊಂಡಿದ್ದಂತ ಆನೆಯಾಗಿದೆ. ಅದಕ್ಕೆ 38…

Read More

ಬೆಂಗಳೂರು: ಮೋರಿಯಲ್ಲಿ ಸಿಕ್ಕಂತ ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ದೇಹದ 15 ಭಾಗಗಳ್ಲಲಿ ಹಲ್ಲೆ ಆಗಿರೋದಾಗಿ ತಿಳಿದು ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ನಟ ದರ್ಶನ್ ಅಂಡ್ ಟೀಂ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನ ಕಿಡ್ನ್ಯಾಪ್ ಮಾಡಿ, ಹಲ್ಲೆ ನಡೆಸಿ, ಭೀಕರವಾಗಿ ಹತ್ಯೆ ಮಾಡಿ, ಮೋರಿಗೆ ಶವವನ್ನು ಬೀಸಾಕಲಾಗಿತ್ತು. ಈಗ ಪ್ರಕರಣ ಬೆಳಕಿಗೆ ಬಂದ ನಂತ್ರ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಲಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಬೆನ್ನಲ್ಲೇ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿಯ ಬಗ್ಗೆ ವೈದ್ಯರು ಮಾಹಿತಿ ನೀಡಿರೋದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ದೇಹದ ಮೇಲೆ 15 ಕಡೆಗಳಲ್ಲಿ ಗಾಯದ ಗುರುತು ಪತ್ತೆಯಾಗಿರೋದಾಗಿ ಮರಣೋತ್ತರ ಪರೀಕ್ಷೆ ನಡೆಸಿದಂತ ವೈದ್ಯರು ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಅವರ ಮೂಗು, ಕಾಲು, ತಲೆ, ಬೆನ್ನು, ದವಡೆ ಸೇರಿದಂತೆ…

Read More

ಬೆಂಗಳೂರು : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸಿಎಂ ಸೂಚಿಸಿದರು. ಇಲಾಖೆಯಲ್ಲಿ ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ…

Read More

ನವದೆಹಲಿ: ನಿನ್ನೆ ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ, ತನ್ನ ಸಂಪುಟದ ಸಚಿವರಿಗೆ ಮೋದಿ ಖಾತೆ ಹಂಚಿಕೆ ಮಾಡಿದ್ದರು. ಕರ್ನಾಟಕದ ವಿ.ಸೋಮಣ್ಣ ಅವರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವಸ್ಥಾನ ನೀಡಲಾಗಿತ್ತು. ಇಂತಹ ಖಾತೆಯ ಅಧಿಕಾರವನ್ನು ಇಂದು ವಹಿಸಿಕೊಂಡರು. ಮೋದಿ 3.0 ಸಚಿವ ಸಂಪುಟ ಸೇರಿದಂತೆ ಕರ್ನಾಟಕದ ಐವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಹೆಚ್.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೇ, ನಿರ್ಮಲಾ ಸೀತಾರಾಮನ್ ಗೆ ಹಣಕಾಸು ಖಾತೆ, ಶೋಭಾ ಕರಂದ್ಲಾಜೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ನೀಡಲಾಗಿತ್ತು. ವಿ.ಸೋಮಣ್ಣ ಅವರಿಗೆ ಜಲಶಕ್ತಿ ರಾಜ್ಯಖಾತೆ ಹಾಗೂ ರೈಲ್ವೆ ಸಚಿವ ರಾಜ್ಯಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅವರು ನವದೆಹಲಿಯ ಕಚೇರಿಗೆ ತೆರಳಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅಧಿಕಾರ ವಹಿಸಿಕೊಂಡರು. https://kannadanewsnow.com/kannada/breaking-actor-darshan-pavithra-gowda-and-13-others-appeared-before-the-court-soon/ https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/

Read More