Subscribe to Updates
Get the latest creative news from FooBar about art, design and business.
Author: kannadanewsnow09
ಬಾಗಲಕೋಟೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕಮೇಷನ್ ಆರೋಪ ಮಾಡಿದ್ದಾರೆ. ನಮ್ಮ ಮೇಲೆ ಹರಿಹಾಯ್ದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಈಗ ಕಮೀಷನ್ ಆರೋಪದ ಹಿನ್ನಲೆಯಲ್ಲಿ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾದ ಅವಧಿಯಲ್ಲೂ ಗುತ್ತಿಗೆ ಕಮೀಷನ್ ದಂಧೆ ನಡೆಯುತ್ತಿರೋದಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದಾರೆ. ಹೀಗಾಗಿ ನಮ್ಮ ವಿರುದ್ಧ ಹರಿಹಾಯ್ದ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ನಮಗೆ ಹೇಳಿದ್ರಲ್ಲ ನೀವು ಈಗ ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡಿ, ಈ ರಾಜ್ಯದ ಜನರ ಕ್ಷಮೆ ಕೇಳಬೇಕು. ನಮ್ಮ ಮೇಲೆ ಆರೋಪ ಮಾಡಿದಷ್ಟು ಆರೋಪ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/
ದಾವಣಗೆರೆ: ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದಂತ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ದೇಶದ್ರೋಹ ಮಾಡುವವರು, ದೇಶದ್ರೋಹದ ಹೇಳಿಕೆ ನೀಡೋರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ ಎಂಬುದಾಗಿ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿರುವಂತ ವಿನಯ್ ಕುಲಕರ್ಣಿ, ಡಿ.ಕೆ ಸುರೇಶ್ ಇಬ್ಬರೂ ದೇಶದ್ರೋಹಿಗಳು. ತಾಕತ್ತು ಇದ್ದರೇ ದೇಶದ್ರೋಹ ಹೇಳಿಕೆ ನೀಡಿದ ಈ ಇಬ್ಬರನ್ನು ಪಕ್ಷದಿಂದ ಹೊರಹಾಕಿ ಎಂಬುದಾಗಿ ಆಗ್ರಹಿಸಿದರು. ಇನ್ನೂ ಈ ರೀತಿ ದೇಶದ್ರೋಹದ ಹೇಳಿಕೆ ನೀಡುವ, ದೇಶ ದ್ರೋಹ ಕೆಲಸ ಮಾಡುವವರನ್ನು ಗುಂಡಿಕ್ಕಿ ಕೊಲ್ಲುವಂತ ಕಾನೂನು ದೇಶದಲ್ಲಿ ಜಾರಿಯಾಗಬೇಕು. ಈ ಮೂಲಕ ಇಂತಹ ಹೇಳಿಕೆಗಳಿಗೆ ಖಡಿವಾಣ ಬೀಳಬೇಕು ಎಂದರು. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/
ಚಿಕ್ಕಮಗಳೂರು: ಜಿಲ್ಲೆಯ ಅಲ್ದೂರು ಪಟ್ಟಣದಲ್ಲಿ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ಮುಸ್ಲೀಂ ಯುವಕನೊಬ್ಬನನ್ನು ರೂಮಿನಲ್ಲಿ ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಲ್ದೂರು ಪಟ್ಟಣದಲ್ಲಿ ಮುಸ್ಲೀಂ ಯುವಕ ಹಾಗೂ ಅನ್ಯ ಕೋಮಿನ ಯುವತಿ ರೂಮಲ್ಲಿ ಇದ್ದಂತ ವಿಷಯ ತಿಳಿದು, ವಿಹೆಚ್ ಪಿ ಮುಖಂಡರು ದಾಳಿ ನಡೆಸಿದ್ದಾರೆ. ಯುವಕನನ್ನು ರೂಮಿನಲ್ಲಿ ಕೂಡಿ ಹಾಕಿ ಥಳಿಸಿದ್ದಾರೆ. ಈ ಸಂಬಂಧ ಅನ್ಯ ಕೋಮಿನ ಯುವಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ಚಿಕ್ಕಮಗಳೂರು ವಿಹೆಚ್ ಪಿ ಜಿಲ್ಲಾ ಸಂಚಾಲಕ ಸೇರಿ ಒಟ್ಟು 6 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೇ ಅನ್ಯ ಕೋಮಿನ ಯುವಕನ ವಿರುದ್ಧ ಪೋಕ್ಸೋ ಅಡಿಯಲ್ಲಿ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/
ಬೆಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರತಾಪ್ ರೆಡ್ಡಿಯವರು, ಇಂದು ದಿಢೀರ್ ಬೆಳವಣಿಗೆಯಲ್ಲಿ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಿವೃತ್ತಿಗೆ 2 ತಿಂಗಳು ಬಾಕಿ ಇರುವಾಗಲೇ, ಹುದ್ದೆಗೆ ಗುಡ್ ಬೈ ಹೇಳಿ ಹೊರ ನಡೆದಿದ್ದಾರೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿದ್ದಂತ ಪ್ರತಾಪ್ ರೆಡ್ಡಿ ಅವರು, ವೈಯಕ್ತಿಕ ಕಾರಣ ನೀಡಿ, ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಂಬರುವಂತ ಏಪ್ರಿಲ್.30ಕ್ಕೆ ತಮ್ಮನ್ನು ಹುದ್ದೆಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಪ್ರತಾಪ್ ರೆಡ್ಡಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. 1991ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವಂತ ಅವರು, ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾಗಿದ್ದಾರೆ. https://kannadanewsnow.com/kannada/breaking-ex-pm-bharat-rathna/ https://kannadanewsnow.com/kannada/india-snapchat-server-down/
ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಶುಕ್ರವಾರ ಅಧಿಕೃತವಾಗಿ ಇಲ್ಲಿ ಒಡಂಬಡಿಕೆಗೆ ಸಹಿ ಅಂಕಿತ ಹಾಕಲಾಯಿತು. ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, `ಕೇಂದ್ರ ಸರಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್ ಡಬ್ಲ್ಯು ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್ ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲಾ ನಾಲ್ಕೂ ಕಾರಿಡಾರ್ ಗಳ…
ಮುಂಬೈ: ಮಾಜಿ ಕಾರ್ಪೊರೇಟರ್ ಮತ್ತು ಉದ್ಧವ್ ಠಾಕ್ರೆ ಬಣದ ಮಾಜಿ ಶಿವಸೇನೆ ಶಾಸಕನ ಪುತ್ರ ಅಭಿಷೇಕ್ ಘೋಸಾಲ್ಕರ್ ಅವರನ್ನು ಕುಖ್ಯಾತ ಕ್ರಿಮಿನಲ್ ಮೌರಿಸ್ ನೊರೊನ್ಹಾ ಗುರುವಾರ ಫೇಸ್ಬುಕ್ ಲೈವ್ನಲ್ಲಿ ವೈಯಕ್ತಿಕ ವಿವಾದದ ಹಿನ್ನೆಲೆಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಘೋಸಾಲ್ಕರ್ ಅವರಿಗೆ ಎರಡರಿಂದ ಮೂರು ಗುಂಡುಗಳು ತಗುಲಿವೆ ಎಂದು ವರದಿಗಳು ಸೂಚಿಸುತ್ತವೆ. ಅವರನ್ನು ದಹಿಸರ್ನ ಕರುಣಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ಈಗ ತಿಳಿದು ಬಂದಿದೆ. https://twitter.com/fpjindia/status/1755623970987217068 ಉಲ್ಹಾಸ್ನಗರದ ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕರೊಬ್ಬರು ಏಕನಾಥ್ ಶಿಂಧೆ ಬಣದ ನಾಯಕನ ಮೇಲೆ ಗುಂಡು ಹಾರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯು ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಅಭಿಷೇಕ್ ಘೋಸಾಲ್ಕರ್ ಯಾರು? ಅಭಿಷೇಕ್ ಘೋಸಾಲ್ಕರ್ ಠಾಕ್ರೆ ಗುಂಪಿನ ನಾಯಕ ಮತ್ತು ಮಾಜಿ ಶಾಸಕ ವಿನೋದ್ ಘೋಸಾಲ್ಕರ್ ಅವರ ಪುತ್ರ. ಅವರು ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ನಲ್ಲಿ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ…
ಮುಂಬೈ: ಇಲ್ಲಿನ ದಹಿಸರ್ ಪ್ರದೇಶದಲ್ಲಿ ಗುರುವಾರ ಫೇಸ್ಬುಕ್ ಲೈವ್ ಸ್ಟ್ರೀಮ್ ಮಾಡುವಾಗ ಶಿವಸೇನೆ (ಯುಬಿಟಿ) ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ನಂತರ ಅವರು ಗುಂಡೇಟಿನ ಗಾಯಗಳಿಂದ ನಿಧನರಾದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಿವಸೇನೆ (ಯುಬಿಟಿ) ಮುಖಂಡ ವಿನೋದ್ ಘೋಸಾಲ್ಕರ್ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್ ಮೌರಿಸ್ ಭಾಯ್ ಎಂದೂ ಕರೆಯಲ್ಪಡುವ ಮೌರಿಸ್ ನೊರೊನ್ಹಾ ಎಂಬಾತನೊಂದಿಗೆ ಫೇಸ್ಬುಕ್ ಲೈವ್ಸ್ಟ್ರೀಮ್ ಮಾಡುತ್ತಿದ್ದರು. ಮೌರಿಸ್ ಭಾಯ್ ನಂತರ ಲೈವ್ ಸ್ಟ್ರೀಮ್ ಅನ್ನು ಮುಕ್ತಾಯಗೊಳಿಸಿ ಇನ್ನೇನು ಹೊರಡಬೇಕು ಎನ್ನುವಾಗ ಘೋಸಾಲ್ಕರ್ ಮೇಲೆ ಮೂರು ಬಾರಿ ಗುಂಡು ಹಾರಿಸಲಾಯಿತು. ಈ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. https://twitter.com/fpjindia/status/1755623970987217068 ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಭಿಷೇಕ್ ಘೋಸಾಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ನಾಯಕ ಮಾಜಿ ಕಾರ್ಪೊರೇಟರ್ ಆಗಿದ್ದಾರೆ. ಇತ್ತೀಚೆಗೆ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರು…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಉಳವಿಯಲ್ಲಿ ನಾಳೆ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಸೊರಬ, ವಕೀಲರ ಸಂಘ ಸೊರಬ, ತಾಲೂಕು ಪಂಚಾಯ್ತಿ ಸೊರಬ, ಗ್ರಾಮ ಪಂಚಾಯ್ತಿ ಉಳವಿ ಇವರ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ ಉಳವಿಯ ಅಂಬೇಡ್ಕರ್ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಪ್ರಭಾಕರ ರಾವ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ತಾಲೂಕು ಕಾನೂನು ಸೇವಾ ಸಮಿತಿ, ಸೊರಬ ಇವರು ನೆರವೇರಿಸಲಿದ್ದಾರೆ. ಇನ್ನೂ ಮುಖ್ಯ ಅತಿಥಿಗಳಾಗಿ ರಾಘವೇಂದ್ರ ಉಪಾಧ್ಯೆ, ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ತಾಲೂಕು ಕಾನೂನು ಸೇವಾ ಸಮಿತಿ, ಸೊರಬ ಭಾಗಿಯಾಗಲಿದ್ದಾರೆ. ಅಲ್ಲದೇ ಸೊರಬ ವಕೀಲ ಸಂಘದ ಅಧ್ಯಕ್ಷರಾದಂತ ಅಶೋಕ್ ಸಿ.ವೈ, ಕಾರ್ಯದರ್ಶಿ…
ಉತ್ತರಾಖಂಡ: ಇಲ್ಲಿನ ಹಲ್ದ್ವಾನಿ ಜಿಲ್ಲೆಯ ಬನ್ಭೂಲ್ಪುರ ಪ್ರದೇಶದ ನಜೂಲ್ ಭೂಮಿಯಲ್ಲಿರುವ ಮಸೀದಿ ಮತ್ತು ಮದರಸಾವನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಜಿಲ್ಲಾಡಳಿತದಿಂದ ನಡೆಸಲಾಗುತ್ತಿತ್ತು. ಈ ವೇಳೆ ಇದನ್ನು ವಿರೋಧಿಸಿ ನಡೆದಂತ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆಸಲಾಯಿತು. ಅಲ್ಲದೇ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಮತ್ತು ಗಲಭೆಕೋರರನ್ನು ಕಂಡೇ ಗುಂಡಿಕ್ಕಿ ಕೊಲ್ಲಲು ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಮಾಹಿತಿ ಇಲಾಖೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಜಿಲ್ಲಾಡಳಿತವು ಬನ್ಭೂಲ್ಪುರ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಿದೆ. ದಿ ಇಂಡಿಯನ್ ಎಕ್ಸ್ಪ್ರೆಸ್ನೊಂದಿಗೆ ಮಾತನಾಡಿದ ನಿವಾಸಿಯೊಬ್ಬರು, ಈ ಪ್ರದೇಶವು ಅಂಚಿನಲ್ಲಿದೆ ಮತ್ತು ಅವರು “ಅಶ್ರುವಾಯು ಮತ್ತು ಗುಂಡಿನ ಶಬ್ದಗಳನ್ನು ಕೇಳಬಹುದು” ಎಂದು ಹೇಳಿದರು. https://twitter.com/ANI/status/1755607362298396740 “ಮಲಿಕ್ ಕಾ ಬಾಗೀಚಾ ಪ್ರದೇಶದ ಮರಿಯಮ್ ಮಸೀದಿ ಮತ್ತು ಮದರಸಾವನ್ನು ನಜೂಲ್ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ನಂತರ ಆಡಳಿತವು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಿದ ನಂತರ ವಿಷಯಗಳು ಉದ್ವಿಗ್ನಗೊಂಡಿತು.…
ಮಂಗಳೂರು: ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸುದ್ದಿಯಾಗೋ ಶಾಸಕ ಹರೀಶ್ ಪೂಂಜಾ ಅವರು, ಈಗ ಮತ್ತೊಂದು ವಿವಾದದಲ್ಲಿ ಸುದ್ದಿಯಾಗಿದ್ದಾರೆ. ಅದೇ ಹಿಂದೂಗಳು ಪಾವತಿಸಿದಂತ ತೆರಿಗೆಯನ್ನು ಹಿಂದೂಗಳ ಅಭಿವೃದ್ಧಿಗೆ ಖರ್ಚು ಮಾಡಬೇಕು ಎಂಬುದಾಗಿ ಹೇಳುವ ಮೂಲಕವಾಗಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ದಿಗೆ ಮಾತ್ರ ಉಪಯೋಗ ಆಗಬೇಕು ಎಂದಿದು ಆಗ್ರಹಿಸಿದ್ದಾರೆ. ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ ಎಂಬುದಾಗಿ ಹೇಳಿದ್ದಾರೆ. ಈ ಎಲ್ಲಾ ಕಾರಣದಿಂದಾಗಿ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/women-are-getting-pregnant-while-in-custody-in-this-state/ https://kannadanewsnow.com/kannada/breaking-five-indian-origin-youths-die-in-us-in-last-2-weeks-govt/