Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ (ಡಿಡಿಯುಟಿಎಲ್) ಸುಮಾರು 47.10 ಕೋಟಿ ಅವ್ಯವಹಾರ ಆರೋಪ ಪ್ರಕರಣದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂತಹ ಪ್ರಕರಣದಲ್ಲಿ ಇಂದು ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಜುಲೈ.12ರಂದು ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಸಂಬಂಧ ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಆ ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ ಮಾಜಿ ಎಂಎಲ್ಸಿ ಡಿಎಸ್ ವೀರಯ್ಯ ಜೈಲುಪಾಲಾಗಿದ್ದರು. ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಪ್ರಕರಣ ಸಂಬಂದ ಡಿ.ಎಸ್ ವೀರಯ್ಯ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಅಂತಿಮವಾಗಿ ಕೋರ್ಟ್ ದೇವರಾಜ ಅರಸು ಟ್ರಕ್…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ 2ನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಕೋರ್ಟ್ ಬಿಗ್ ಶಾಕ್ ನೀಡಿದೆ. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಜೈಲೇಗತಿ ಎನ್ನುವಂತೆ ಆಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಲೈಂಗಿಕ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಅಂದಹಾಗೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದಾವೆ. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಅವರು ಇಂದು ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೇ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ತಿರಸ್ಕರಿಸಿ ಬಿಗ್ ಶಾಕ್ ನೀಡಿದೆ. https://kannadanewsnow.com/kannada/bjp-to-sit-on-dharna-in-both-houses-of-parliament-for-not-allowing-discussion-on-muda-scam/ https://kannadanewsnow.com/kannada/good-news-for-rural-people-of-the-state-property-measurement-inside-and-outside-the-grama-thana-will-be-allowed/
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ವಿರುದ್ಧ ಕೇಳಿ ಬಂದಿರುವಂತ ಮುಡಾ ಹಗರಣ ಸಂಬಂಧ ವಿಧಾನಮಂಡಲದ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ಬಿಜೆಪಿ ಕೋರಿತ್ತು. ಆದರೇ ಇದಕ್ಕೆ ಸಭಾ ನಾಯಕರು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ 2 ಸದನಗಳಲ್ಲೂ ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧರಿಸಿದೆ. ಈ ಕುರಿತಂತೆ ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮುಡಾ ಹಗರಣ ಕುರಿತಂತೆ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶವನ್ನು ಕೋರಲಾಗಿತ್ತು. ಆದರೇ ಸ್ಪೀಕರ್, ಸಭಾಪತಿಗಳು ಮುಡಾ ಹಗರಣ ಸಂಬಂಧದ ಚರ್ಚೆಗೆ ಈವರೆಗೆ ಅವಕಾಶ ನೀಡಿಲ್ಲ ಎಂದರು. ಮುಡಾ ಹಗರಣ ಸಂಬಂಧ ಉಭಯ ಸದನಗಳಲ್ಲೂ ಚರ್ಚೆಗೆ ಅವಕಾಶ ನೀಡಬೇಕು. ಅಲ್ಲಿಯವರೆಗೆ 2 ಸದನಗಳಲ್ಲೂ ವಿಪಕ್ಷಗಳ ನಾಯಕರು ಅಹೋರಾತ್ರಿ ಧರಣಿ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದರು. https://kannadanewsnow.com/kannada/vatal-nagaraj-demands-job-reservation-for-kannadigas-to-lay-siege-to-vidhana-soudha-tomorrow/ https://kannadanewsnow.com/kannada/good-news-for-rural-people-of-the-state-property-measurement-inside-and-outside-the-grama-thana-will-be-allowed/
ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಮೀಸಲಾತಿ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ವಾಟಾಳ್ ನಾಗರಾಜ್ ಸಿಡಿದೆದ್ದಿದ್ದಾರೆ. ಅಲ್ಲದೇ ಕನ್ನಡಿಗರಿಗೆ ಉದ್ದೋಯ ಮೀಸಲಾತಿಗೆ ಆಗ್ರಹಿಸಿ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಅವರು, ಕನ್ನಡಿಗರಿಗೆ ಉದ್ಯೋ ಮಸೂದೆ ಮಂಡಿಸಲೇಬೇಕೆಂದು ದಿನಾಂಕ 25-07-2024ರ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಿರೋದಾಗಿ ತಿಳಿಸಿದ್ದಾರೆ. ಕನ್ನಡಿಗರಿಗೆ ಉದ್ದೋಯ ಮೀಸಲಾತಿ ವಿಧೇಯಕವನ್ನು ಕೂಡಲೇ ವಿಧಾನಸಭೆಯಲ್ಲಿ ಮಂಡಿಸಬೇಕು. ಕನ್ನಡಿಗರ ಭವಿಷ್ಯದ ಪ್ರಶ್ನೆಯ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿ, ಮಸೂದೆಯನ್ನು ಹಿಂದಕ್ಕೆ ಪಡೆದಿರುವುದು ಸರಿಯಲ್ಲ. ಸದನ ಮುಗಿಯುವುದರೊಳಗಾಗಿ ಮಸೂದೆಯನ್ನು ಮಂಡಿಸಬೇಕು ಅಂತ ಒತ್ತಾಯಿಸಿದ್ದಾರೆ. ಕನ್ನಡ ಒಕ್ಕೂಟದ ಅಧ್ಯಕ್ಷರಾದಂತ ನನ್ನ ನೇತೃತ್ವದಲ್ಲಿ ದಿನಾಂಕ 25-07-2024ರ ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿದಂತ ಈ ಪ್ರತಿಭಟನೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದಂತ ಸಾರಾ ಗೋವಿಂದು…
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಮ್ಮ ವಕೀಲರ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ನಡೆಸಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಲೈಂಗಿಕ ದೌರ್ಜನ್ಯದಲ್ಲಿನ ಎರಡನೇ ಪ್ರಕರಣದಲ್ಲೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ಸಿಗದೇ, ಜೈಲೇ ಗತಿ ಎನ್ನುವಂತೆ ಆಗಿದೆ. https://kannadanewsnow.com/kannada/cm-siddaramaiahs-decision-is-unfair-to-state-in-union-budget-by-vijayendra/ https://kannadanewsnow.com/kannada/muda-scam-echoes-in-both-houses-of-state-slogan-enough-is-enough-loot-is-enough/
ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸದನದ ಕಲಾಪದಲ್ಲಿ ಇಂದು ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಅವರು ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು. ಅವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳಲ್ಲ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕುವ ಬದಲಾಗಿ ಸಭೆಗೆ ಹಾಜರಾಗಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು. ರಾಜ್ಯದ ಮುಖ್ಯಮಂತ್ರಿ ಅವರೆಂಬುದನ್ನು ನೆನಪು ಮಾಡಿಕೊಡಲು ಬಯಸುವುದಾಗಿ ಹೇಳಿದರು. ನೀತಿ ಆಯೋಗದ ಸಭೆ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು, ಸಭೆಯಲ್ಲಿ ಭಾಗವಹಿಸಬೇಕು ಎಂದು ಅವರು ಆಗ್ರಹಿಸಿದರು. https://kannadanewsnow.com/kannada/muda-scam-echoes-in-both-houses-of-state-slogan-enough-is-enough-loot-is-enough/ https://kannadanewsnow.com/kannada/congress-will-not-use-anyone-dk-shivakumar-on-complaint-against-ed/
ಬೆಂಗಳೂರು: ರಾಜ್ಯದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿದೆ. ಇಂದಿನ ಉಭಯ ಸದನಗಳಲ್ಲೂ ಮುಡಾ ಹಗರಣವು ಪ್ರತಿಧ್ವನಿಸಿದೆ. ಆಡಳಿತ, ವಿಪಕ್ಷಗಳ ನಡುವೆ ವಾಗ್ವಾದವೇ ನಡೆದಿದೆ. ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರನ್ನು ಕೋರಿದರೂ ಅವಕಾಶ ನೀಡಿಲ್ಲ. ಈ ಹಿನ್ನಲೆಯಲ್ಲೇ ಸಾಕು ಸಾಕು ಲೂಟಿ ಸಾಕು ಅಂತ ಸದನದಲ್ಲೇ ಸದಸ್ಯರು ಘೋಷಣೆ ಕೂಗಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಎರಡೂ ಸದನದಲ್ಲಿ ಇಂದು ಮುಡಾ ಹಗರಣ ಪ್ರತಿಧ್ವನಿಸಿದೆ. ವಿಧಾನಸಭೆ, ಪರಿಷತ್ತಿನಲ್ಲಿ ಬಿಜೆಪಿಯ ನಾಯಕರು ಮುಡಾ ಹಗರಣದ ಬಗ್ಗೆ ಚರ್ಚೆ ನಡೆಸೋದಕ್ಕೆ ಅವಕಾಶ ನೀಡುವಂತೆ ಕೋರಿದರು. ಆದರೇ ಇದಕ್ಕೆ ಅವಕಾಶವನ್ನು ನೀಡಲಾಗಿಲ್ಲ. ಇದೇ ಕಾರಣಕ್ಕೆ ಸಿಡಿದೆದ್ದಂತ ಬಿಜೆಪಿ ಸದಸ್ಯ ಸಿಟಿ ರವಿ ಅವರು, ಭ್ರಷ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ನವರು ನಿಂತಿದ್ದಾರೆ. ಭ್ರಷ್ಟಾಚಾರದ ಪಿತಾಮಹ ಸಿಎಂ ಸಿದ್ಧರಾಮಯ್ಯ ಅಂತ ಕಿಡಿಕಾರಿದರು. ಇದೇ ಸಂದರ್ಭದಲ್ಲಿ ಉಭಯ ಸದನಗಳಲ್ಲೂ ಪರಸ್ಪರ ಆಡಳಿತ, ವಿಪಕ್ಷದ ನಾಯಕರಿಂದ ಗದ್ದಲವನ್ನೇ ಏಳಿಸಲಾಯಿತು. ಬಿಜೆಪಿಯ ಸದಸ್ಯರು ಸೈಟು ಸೈಟು…
ಬೆಂಗಳೂರು: ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್ ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ “ಆತ ತಪ್ಪು ಮಾಡಿದ್ದರೆ ಒಳಗೆ ಹಾಕುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು. ನಮ್ಮದು, ನಿಮ್ಮದು, ಬೇರೆಯವರದು ಬಿಚ್ಚಿಕೊಳ್ಳಲಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಶಾಮೀಲಾಗಿ ನಮ್ಮನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಜೈಲಿನಿಂದ ಹೊರಗಡೆ ಬಂದು ಎಲ್ಲಾ ಬಿಚ್ಚಿಡುತ್ತೇನೆ ಎನ್ನುವ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರ ಹಕ್ಕನ್ನು ನಾವು ತಡೆಯಲು ಆಗುತ್ತದೆಯೇ? ನಿಮ್ಮದು, ನಮ್ಮದು, ಬೇರೆಯವರದು…
ನವದೆಹಲಿ: ಕರ್ನಾಟಕ ಸರ್ಕಾರವು ನೀಟ್ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ಈ ಬೆನ್ನಲ್ಲೇ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲೂ ನೀಟ್ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ನ್ಯಾಷನಲ್ ಟೆಸ್ಟ್ ಏಜೆನ್ಸಿ ನಡೆಸುವಂತ ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಪ್ರಶ್ನೆಪತ್ರಿಕೆ ಸೋರಿಯ ನಂತ್ರ, ಕೇಂದ್ರ ಸರ್ಕಾರದಿಂದ ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸಲಾಗಿತ್ತು. ಕೇಂದ್ರ ಸರ್ಕಾರದ ಬಹು ದೊಡ್ಡ ಪರೀಕ್ಷಾ ಹಗರಣವೆಂದೇ ಕರೆಯುತ್ತಿರುವಂತ ನೀಟ್ ಉತ್ತರ ಪತ್ರಿಕೆ ಬಹಿರಂಗ ಪ್ರಕರಣದ ಸಂಬಂಧ ರಾಜ್ಯ ಸರ್ಕಾರಗಳು ಸಿಡಿದೆದ್ದಿದ್ದವು. ಈ ಪರೀಕ್ಷೆಯನ್ನೇ ವಿರೋಧಿಸುವಂತ ನಡೆಯುನ್ನು ತೋರಿದ್ದವು. ಕರ್ನಾಟಕ ಮೊದಲ ಬಾರಿಗೆ ನೀಟ್ ವಿರುದ್ಧದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಈಗ ಪಶ್ಚಿಮ ಬಂಗಾಳದಲ್ಲೂ ವಿಧಾನಸಭೆಯಲ್ಲೇ ನೀಟ್ ವಿರುದ್ಧದ ನಿರ್ಣಯಕ್ಕೆ ಅಂಗೀಕಾರವನ್ನು ಪಡೆಯಲಾಗಿದೆ. ಒಟ್ಟಾರೆಯಾಗಿ ಕರ್ನಾಟಕದ ನಂತರ, ಪಶ್ಚಿಮ ಬಂಗಾಳ ವಿಧಾನಸಭೆಯು ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (National Eligibility-cum-Entrance Test -NEET) ಅನ್ನು ರದ್ದುಗೊಳಿಸುವ ನಿರ್ಣಯವನ್ನು ಅಂಗೀಕರಿಸಿತು. ಅದರ ಬದಲಿಗೆ ವೈದ್ಯಕೀಯ ಅಧ್ಯಯನವನ್ನು…
ಬೆಂಗಳೂರು: ನಟ ದರ್ಶನ್ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ನಟ ದರ್ಶನ್ ಪ್ರಕರಣದಲ್ಲಿ ಹಸ್ತ ಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಧ್ಯಮದವರು ಕೇಳಿದಾಗ, “ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲೆಂದರಲ್ಲಿ ಭೇಟಿ ಮಾಡಲು ಸಾಧ್ಯವಿಲ್ಲ. ಮನೆಗೆ ಬಂದು ಭೇಟಿ ಮಾಡಿ ಎಂದು ಇಂದು ಬೆಳಗ್ಗೆ ಸಮಯಾವಕಾಶ ನೀಡಿದ್ದೆ. ಅವರು ನಿನ್ನೆ ಭೇಟಿಗೆ ಯತ್ನಿಸಿದಾಗ ಬಹುಶಹ ದರ್ಶನ್ ಪ್ರಕರಣದ ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದು ಭಾವಿಸಿದ್ದೆ” ಎಂದರು. “ಮಂಗಳವಾರ ರಾತ್ರಿ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಸಮಾರಂಭದಲ್ಲಿ ನೆರೆದಿದ್ದ ಯುವಕರು ದರ್ಶನ್ ಮೇಲಿನ ಅಭಿಮಾನದಿಂದ ನ್ಯಾಯ ಕೊಡಿಸಿ ಎಂದು…