Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ ಆಂಬುಲೆನ್ಸ್ ಯಶವಂತಪುರ ಬಳಿಯಲ್ಲಿ ದಾರಿ ಮಧ್ಯೆಯೇ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಆಂಬುಲೆನ್ಸ್ ಕೆಟ್ಟು ನಿಂತ ಕಾರಣ, ಮತ್ತೊಂದು ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಗುರುಪ್ರಸಾದ್ ಪಾರ್ಥೀವ ಶರೀರವನ್ನು ಸಾಗಿಸಲಾಗಿದೆ ಎನ್ನಲಾಗುತ್ತಿದೆ. https://kannadanewsnow.com/kannada/good-news-for-passengers-special-train-services-for-chhath-puja/ https://kannadanewsnow.com/kannada/bjp-will-fight-against-land-grabbing-to-appease-muslims-r-ashoka/
ರಾಮನಗರ: ಕನ್ನಡ ಚಿತ್ರರಂಗದ ಹೆಸರಾಂತ ಗುರುಪ್ರಸಾದ್ ಅವರ ಸಾವಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. ಚುನಾವಣಾ ಪ್ರಚಾರದ ನಡುವೆ ಚನ್ನಪಟ್ಟಣದ ಚೆಕ್ಕರೆ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು; ಗುರು ಪ್ರಸಾದ್ ಒಬ್ಬ ಪ್ರತಿಭಾನ್ವಿತ ನಿರ್ದೇಶಕ. ಅವರು ಉತ್ತಮ ಚಿತ್ರಗಳನ್ನು ನೀಡಿದ ಪ್ರತಿಭಾನ್ವಿತ ನಿರ್ದೇಶಕ. ಅವರ ಸಾವಿನ ವಿಷಯ ಕೇಳಿ ಬಹಳ ನೋವಾಯಿತು. ಅವರ ಅತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸಿದರು. ಚಿತ್ರರಂಗದಲ್ಲಿ ಲಾಭ ನಷ್ಟ ಸೋಲು ಗೆಲುವು ಸಾಮಾನ್ಯ. ಚಿತ್ರರಂಗದವರು ಸಮಾಜಕ್ಕೆ ಸಂದೇಶ ಕೊಡುವವರು. ಅಂತವರು ಸೋಲಿನಿಂದ ಧೃತಿಗೆಡಬಾರದು. ಅದು ಜನರ ಆತ್ಮವಿಶ್ವಾಸ ಕಡಿಮೆ ಮಾಡುತ್ತದೆ. ಯಾವುದೇ ಸಮಸ್ಯೆ ಬಂದರೂ ಧೃತಿಗೆಡಬೇಡಿ, ಮುಂದೆ ಹೆಜ್ಜೆ ಇಡಿ. ನಾವು ನಿಮ್ಮ ಜೊತೆಗಿರುತ್ತೇವೆ. ಎಲ್ಲವನ್ನೂ ಎದುರಿಸಿ ಎಂದು ಕೇಂದ್ರ ಸಚಿವರು ಮನವಿ ಮಾಡಿದರು.
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಛತ್ ಪೂಜೆ ಹಬ್ಬದ ಸಮಯದಲ್ಲಿ ಹೆಚ್ಚುವರಿ ರಶ್ ಅನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಕೆ ಎಸ್ ಆರ್ ಬೆಂಗಳೂರು-ದಾನಾಪುರ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ. 06259/06260 ಕೆ ಎಸ್ ಆರ್ ಬೆಂಗಳೂರು-ದಾನಾಪುರ-ಎಸ್ ಎಂ ವಿ ಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್) ರೈಲು ಸಂಖ್ಯೆ 06259 ನವೆಂಬರ್ 4, 2024 ರಂದು (ಸೋಮವಾರ) 12:00 PM ಕೆ ಎಸ್ ಆರ್ ಬೆಂಗಳೂರಿನಿಂದ ಹೊರಡುತ್ತದೆ ಮತ್ತು ನವೆಂಬರ್ 6, 2024 ರಂದು 9:00 AM ಕ್ಕೆ ದಾನಪುರವನ್ನು ತಲುಪುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06260 ದಾನಪುರದಿಂದ ನವೆಂಬರ್ 8, 2024 ರಂದು ರಾತ್ರಿ 8:50 ಕ್ಕೆ ಹೊರಟು ನವೆಂಬರ್ 10, 2024 ರಂದು ಸಂಜೆ 5:40 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಕ್ಕೆ ತಲುಪುಲಿದೆ. ರೈಲು…
ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ, ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ವ್ಯಕ್ತಿ ಹೆಸರಲ್ಲಿ ಚುನಾವಣೆ ನಡೆಯುತ್ತಿಲ್ಲ. ಇದು ಎನ್ಡಿಎ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನರ ಅನುಕಂಪವಿದೆ. ಅವರು ಈ ಹಿಂದೆ ಸೋತಿದ್ದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ಜನರು ಗುರುತಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಲೂಟಿ ಮಾಡುತ್ತಲೇ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣ ಕೊಳ್ಳೆ ಹೊಡೆಯಲಾಗಿದೆ ಎಂದು ದೂರಿದರು. ಗ್ಯಾರಂಟಿಗಳಿಂದಾಗಿ ಮಣ್ಣು ಎತ್ತಿ ಹಾಕಲು ಕೂಡ ಹಣವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 16 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ವಕ್ಫ್ ಬೋರ್ಡ್ *ಮುಸ್ಲಿಮರ ಬೋರ್ಡ್* ಆಗಿ ಬದಲಾಗಿದ್ದು, ದೇವಸ್ಥಾನ, ಸ್ಮಶಾನ, ಶಾಲೆ, ರೈತರ…
ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಎರಡನೇ ಮದುವೆ ಆಗಿದ್ದಂತ ನಟ, ನಿರ್ದೇಶಕರ ಗುರುಪ್ರಸಾದ್ ಅವರು ಸಾಲ ಮಾಡಿದ್ದರು. ಸಾಲ ತೀರಿಸಲು ಆಗದೇ ತೊಳಲಾಡುತ್ತಿದ್ದರು. ಇದೇ ಕಾರಣದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಪದೇ ಪದೇ ಸಾಲಗಾರರು ಮನೆಗೆ ಬರ್ತಾರೆ ಅಂತ ಮನೆ ಕೂಡ ಮೂರು ಬಾರಿ ಬೆಂಗಳೂರಲ್ಲಿ ಬದಲಾವಣೆ ಮಾಡಿದ್ದರಂತೆ. ಜಯನಗರ, ಕನಕಪುರ, ಅಶೋಕ ನಗರದಲ್ಲಿ ಮನೆ ಮಾಡಿದ್ದರು. ಕೊನೆ ಕೊನೆಗೆ ಒಂಟಿಯಾಗಿ ಕೂಡ ವಾಸವಾಗಿದ್ದರು. ಇನ್ನೂ ಗುರುಪ್ರಸಾದ್ ಈ ಬಗ್ಗೆ ನಟ ಜಗ್ಗೇಶ್ ಅವರ ಜೊತೆಗೆ ಹಂಚಿಕೊಂಡಿದ್ದರು. ಸಮಾಧಾನಿಸಿ ಕಳುಹಿಸಿದ್ದಾಗಿ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿಯವರು ಗೋಸುಂಬೆಗಿಂತ ಹೆಚ್ಚು ವೇಗವಾಗಿ ಬಣ್ಣ ಬದಲಿಸುವವರು! ರೈತರಿಗೆ ವಕ್ಫ್ ಬೋರ್ಡ್ ಮಂಡಳಿ ನೋಟಿಸ್ ನೀಡಿದ್ದನ್ನು ರಾಜಕೀಯಕ್ಕೆ ಬಳಸುತ್ತಿರುವ ಬಿಜೆಪಿಗರು ತಮ್ಮ ಸರ್ಕಾರದ ಆಡಳಿತಾವಧಿಯಲ್ಲೂ ರೈತರಿಗೆ ನೋಟಿಸ್ ನೀಡಿದ್ದರು. ವಕ್ಫ್ಮಂಡಳಿಗೆ ಬಿಜೆಪಿ ಬೆಂಬಲವಾಗಿ ನಿಂತಿತ್ತು, ರೈತರ ಭೂಮಿ ಕಸಿಯಲು ಕುಮಕ್ಕು ನೀಡಿತ್ತು ಎನ್ನುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತುಗಳೇ ಸಾಕ್ಷಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು “ವಕ್ಫ್ ಭೂಮಿ ಅಲ್ಲಾನಿಗೆ ಸೇರಿದ್ದು, ಅದನ್ನು ಮರಳಿ ಪಡೆಯುವುದರಲ್ಲಿ ಯಾವುದೇ ರಾಜಿ ಬೇಡ, ₹2000 ಕೋಟಿ ಮೊತ್ತದ ವಕ್ಫ್ ಆಸ್ತಿ ಖಾಸಗಿಯವರ ವಶದಲ್ಲಿದೆ, ಅದನ್ನು ಮರಳಿ ಪಡೆಯುವವರೆಗೂ ನೀವು ಸುಮ್ಮನೆ ಕೂರಬಾರದು ನಾವೂ ಸುಮ್ಮನೆ ಕೂರಬಾರದು, ನಿಮ್ಮ ಜೊತೆಗೆ ನಾವಿದ್ದೇವೆ“ ಇದು ಅಂದಿನ ಸಿಎಂ ಬೊಮ್ಮಯಿಯವರ ಮಾತು ಎಂದಿದ್ದಾರೆ. ಎರಡು ನಾಲಿಗೆಯ ಬಿಜೆಪಿಯವರಿಗೆ ಒಂದಷ್ಟು ಪ್ರಶ್ನೆಗಳು… – ವಕ್ಫ್ ಮಂಡಳಿ ಇಂದು ನೋಟಿಸ್ ನೀಡುವುದಕ್ಕೆ ಹಿಂದಿನ ಸಿಎಂ ಅವರ ನಿರ್ದೇಶನ ಕಾರಣ…
ಬೆಂಗಳೂರು: ಶೀಘ್ರದಲ್ಲೇ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿದ್ದು, ವಿಜಯೇಂದ್ರ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದರು. ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!!…
ಮಂಗಳೂರು : “ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ, ಶಾಸಕ ಅಶೋಕ್ ರೈ ಅವರ ಸಾರಥ್ಯದ ರೈ ಎಸ್ಟೇಟ್ಸ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ “ಅಶೋಕ ಜನ-ಮನ” ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; “ದಕ್ಷಿಣ ಕನ್ನಡ ಜಿಲ್ಲೆ ಬರಡು ಭೂಮಿಯಂತಾಗುತ್ತಿದೆ. ಕೋಮು ಗಲಭೆ ಸೇರಿದಂತೆ ಇತರ ಸಮಸ್ಯೆಗಳಿಂದಾಗಿ ವಿದ್ಯಾಸಂಸ್ಥೆಗಳಿಗೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಬರುತ್ತಿಲ್ಲ. ಇಲ್ಲಿ ಹುಟ್ಟಿದ ಅನೇಕ ಬ್ಯಾಂಕ್ ಗಳು ಮಾಯವಾಗಿವೆ. ಇಲ್ಲಿನ ಯುವಕರು ಸೌದಿ ಅರೇಬಿಯಾ, ಮುಂಬೈ, ಬೆಂಗಳೂರಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಆದ ಕಾರಣಕ್ಕೆ ಈ ಭಾಗದ…
ಪಾಟ್ನ: ಅಪಹರಣ ಪ್ರಕರಣದಲ್ಲಿ ಬೇಕಿದ್ದಂತ ಆರೋಪಿಯನ್ನು ಬಂದಿಸಲು ಗ್ರಾಮಕ್ಕೆ ತೆರಳಿದ್ದಂತ ಪೊಲೀಸರ ಮೇಲೆ ಗ್ರಾಮಸ್ಥರು ಅಟ್ಟಾಡಿಸಿಕೊಂಡು ಬಡಿದು, ಹಲ್ಲೆ ಮಾಡಿರುವಂತ ಘಟನೆ ಬಿಹಾರದ ಪುರ್ಬಿ ಸರಿಯಾ ಪಂಚಾಯತ್ ವಾರ್ಡ್ ನಂ.3ರಲ್ಲಿ ನಡೆದಿದೆ. ಪೂರ್ವ ಚಂಪಾರಣ್ನ ಪಹಾದ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುರ್ಬಿ ಸರಿಯಾ ಪಂಚಾಯತ್ನ ವಾರ್ಡ್ ಸಂಖ್ಯೆ 3 ರಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗ್ರಾಮದ ಶಂಭು ಭಗತ್ ಅವರ ಮಗನನ್ನು ಬಂಧಿಸಲು ಪೊಲೀಸರು ಹೋಗಿದ್ದರು ಎಂದು ಹೇಳಲಾಗುತ್ತದೆ. ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಶಂಕಿತ ಮತ್ತು ಸಹಚರ ಇಬ್ಬರು ಬಾಲಕಿಯರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಯುವಕನ ಬಗ್ಗೆ ವಿಚಾರಿಸಲು ಬಂದಾಗ, ಅವನ ಕುಟುಂಬ ಮತ್ತು ನೆರೆಹೊರೆಯವರು ತಂಡವನ್ನು ರಾಡ್ ಮತ್ತು ಕೋಲುಗಳಿಂದ ಥಳಿಸಿದರು. ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸೋನು ಕುಮಾರ್ ಅವರ ತಲೆಬುರುಡೆಗೆ ಮೂಳೆ ಮುರಿತವಾಗಿದೆ ಎಂದು ವರದಿಗಳಿಂದ ತಿಳಿದು…
ನವದೆಹಲಿ: ನಿವೃತ್ತಿ ಸಮೀಪಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರು ತಮ್ಮ ಪಿಂಚಣಿ ಮತ್ತು ಗ್ರಾಚ್ಯುಟಿಗಳನ್ನು ವಿಳಂಬವಿಲ್ಲದೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯೂ) ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಕ್ಟೋಬರ್ 25, 2024 ರ ಹೊಸ ಸೂಚನೆಗಳ ಪ್ರಕಾರ, ನಿವೃತ್ತಿ ಪಟ್ಟಿಗಳನ್ನು ತಯಾರಿಸುವುದರಿಂದ ಹಿಡಿದು ಪಿಂಚಣಿ ಪಾವತಿ ಆದೇಶ (ಪಿಪಿಒ) ವಿತರಣೆಯವರೆಗೆ ಸಮಯೋಚಿತ ಪ್ರಕ್ರಿಯೆ ಅತ್ಯಗತ್ಯ. ಈ ಸಮಯರೇಖೆಗಳನ್ನು ಅನುಸರಿಸುವ ಮೂಲಕ, ನಿವೃತ್ತ ನೌಕರರು ನಿವೃತ್ತಿಗೆ ಸುಗಮ ಪರಿವರ್ತನೆಯನ್ನು ಆನಂದಿಸಲು ಇಲಾಖೆಗಳು ಸಹಾಯ ಮಾಡಬಹುದು. ಡಿಒಪಿಪಿಡಬ್ಲ್ಯೂ, ಕಚೇರಿ ಜ್ಞಾಪಕ ಪತ್ರವನ್ನು ನೀಡುವ ಮೂಲಕ, ನಿವೃತ್ತಿಯನ್ನು ಸಮೀಪಿಸುತ್ತಿರುವ ಸರ್ಕಾರಿ ನೌಕರರನ್ನು ಬೆಂಬಲಿಸಲು ಪಿಂಚಣಿ ಮತ್ತು ಗ್ರಾಚ್ಯುಟಿಗಳ ಅಧಿಕಾರಕ್ಕಾಗಿ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿದೆ. ಉದ್ಯೋಗಿಗಳು ತಮ್ಮ ಪ್ರಯೋಜನಗಳನ್ನು ತ್ವರಿತವಾಗಿ ಮತ್ತು ತೊಡಕುಗಳಿಲ್ಲದೆ ಪಡೆಯುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಈ ಕ್ರಮಗಳು ನಿರ್ಣಾಯಕವಾಗಿವೆ. ಪ್ರಮುಖ ಜವಾಬ್ದಾರಿಗಳಲ್ಲಿ ಒಂದು ವಿಭಾಗಗಳ ಮುಖ್ಯಸ್ಥರ (ಎಚ್ಒಡಿ) ಮೇಲಿದೆ, ಅವರು ಮುಂದಿನ ಹದಿನೈದು ತಿಂಗಳಲ್ಲಿ ನಿವೃತ್ತರಾಗಲಿರುವ ಎಲ್ಲಾ ಉದ್ಯೋಗಿಗಳ ಪಟ್ಟಿಯನ್ನು ಪ್ರತಿ…












