Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಅನುಮೋದಿಸಿದ “ಶಾಲೆಗೆ ಹೋಗುವ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ” ಯನ್ನು ರೂಪಿಸುವ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಕೇಂದ್ರವು ಏಪ್ರಿಲ್ 10, 2023 ರ ಉನ್ನತ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿತು ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಹಿಳಾ ಶಾಲಾ ಮಕ್ಕಳ ಮುಟ್ಟಿನ ನೈರ್ಮಲ್ಯದ ಬಗ್ಗೆ ನೀತಿಯನ್ನು ರೂಪಿಸಿದೆ, ಇದನ್ನು ಸಂಬಂಧಪಟ್ಟ ಸಚಿವರು ನವೆಂಬರ್ 2, 2024 ರಂದು ಅನುಮೋದಿಸಿದ್ದಾರೆ ಎಂದು ಹೇಳಿದರು. 6 ರಿಂದ 12 ನೇ ತರಗತಿಯ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲು ಮತ್ತು ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ಪ್ರತ್ಯೇಕ ಮಹಿಳಾ ಶೌಚಾಲಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಈ…
ದಾವಣಗೆರೆ: ಹಿಂದೆ ಮತಾಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿದ್ದೀರಿ. ಈಗ ಮತ್ತೆ ಬೆಂಕಿ ಹಚ್ಚಲು ಸ್ವತಃ ನೀವೇ ಮುಂದಾಗಿದ್ದೀರಿ. ಓಲೈಕೆ ರಾಜಕಾರಣ ಮಾಡಲು ಇತಿಮಿತಿ ಇರಬೇಕು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಜೋಕೆ ಎಂಬುದಾಗಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಕ್ಪ್ ಬೋರ್ಡ್ ಮೂಲಕ ರಾಜ್ಯದ ಹಿಂದೂಗಳ ಆಸ್ತಿ ಕಬಳಿಸಲು ಯತ್ನಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಿವಿಲ್ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4 ರಷ್ಟು ಮೀಸಲಾತಿ ನೀಡಲು ಹೊರಟಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂಬುದಾಗಿ ಗುಡುಗಿದ್ದಾರೆ. ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು CM ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು…
ಬೆಂಗಳೂರು: ಇಂದು ರಾಜ್ಯಾಧ್ಯಂತ 8 ಭ್ರಷ್ಟ ಅಧಿಕಾರಿಗಳ ವಿರುದ್ಧ 37 ಸ್ಥಳಗಲ್ಲಿ ಕರ್ನಾಟಕ ಲೋಕಾಯುಕ್ತದಿಂದ ದಾಳಿಯನ್ನು ನಡೆಸಲಾಯಿತು. ಹಾಗಾದ್ರೇ ಈ ದಾಳಿಯ ವೇಳೆಯಲ್ಲಿ ಪತ್ತೆಯಾದಂತ ಅಸಮತೋನ ಆಸ್ತಿ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಳಗಾವಿ-2, ಹಾವೇರಿ-1, ದಾವಣಗೆರೆ-1, ಬೀದರ್-1, ಮೈಸೂರು-1, ರಾಮನಗರ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ. ಈ ದಿನ ದಿನಾಂಕ: 12.11.2024 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 37 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ. 1) ವಿಠಲ್ ಶಿವಪ್ಪ ಧವಳೇಶ್ವರ್,…
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ತಿಳಿಸಿದ್ದಾರೆ. ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು. 95-ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯ ಎಲ್ಲಾ…
ನವದೆಹಲಿ: ಭರೂಚ್ ಮತ್ತು ಅಂಕಲೇಶ್ವರ ನಡುವೆ ಚಲಿಸುತ್ತಿದ್ದ ಅವಂತಿಕಾ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಬಗ್ಗೆ ಸುದ್ದಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದರು. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ಭರೂಚ್ನ ಸಿಲ್ವರ್ ಬ್ರಿಡ್ಜ್ ಬಳಿ ಪಶ್ಚಿಮ ಎಕ್ಸ್ಪ್ರೆಸ್ ರೈಲಿನಿಂದ ಹೊಗೆ ಬರುತ್ತಿರುವುದರಿಂದ ಪ್ರಯಾಣಿಕರಲ್ಲಿ ಭೀತಿ ಉಂಟಾಗಿತ್ತು. ಎಂಜಿನ್ನಿಂದ ಎರಡನೇ ಕಂಪಾರ್ಟ್ಮೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹಠಾತ್ ಬೆಂಕಿ ಕಾಣಿಸಿಕೊಂಡ ನಂತರ ರೈಲು 45 ನಿಮಿಷಗಳ ಕಾಲ ಸ್ಥಗಿತಗೊಂಡಿತು. ಅಗ್ನಿಶಾಮಕ ದಳದ ಜೊತೆಗೆ, ಪೊಲೀಸರು ಸಹ ಸ್ಥಳದಲ್ಲಿದ್ದಾರೆ. ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಇದು ಬ್ರೇಕಿಂಗ್ ಸ್ಟೋರಿ, ಹೆಚ್ಚಿನ ವಿವರಗಳನ್ನು ಸೇರಿಸಲಾಗುವುದು.. https://kannadanewsnow.com/kannada/upsc-recruitment-2019-apply-for-pre-training/ https://kannadanewsnow.com/kannada/sandur-assembly-bypoll-to-be-held-tomorrow-all-set-for-peaceful-polling-says-dc/
ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಕೋರ್ಸ್ಗಳಾದ ಐಎಎಸ್, ಐಎಫ್ಎಸ್, ಐಪಿಎಸ್, ಐಆರ್ಎಸ್ ಸೇರಿದಂತೆ 36 ವಿವಿಧ ಸೇವೆಯ ಹುದ್ದೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯುಪಿಎಸ್ಸಿ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸ್ಥಾನ ಹಂಚಿಕೆಯಲ್ಲಿ ಅಂಗವಿಕಲ/ವಿಕಲಚೇತನ, ಹಾಸ್ಟೆಲ್ ವಿದ್ಯಾರ್ಥಿಗಳು, ವಸತಿ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ವಿದ್ಯಾರ್ಥಿಗಳು, ಸೂಕ್ಷö್ಮ/ಅತಿ ಸೂಕ್ಷö್ಮ ಸಮುದಾಯ/ಸಫಾಯಿ ಕರ್ಮಚಾರಿ ಸಮುದಾಯದ ಮಕ್ಕಳಿಗೆ ವಿಶೇಷ ಮೀಸಲಾತಿ ಇರುತ್ತದೆ. ತರಬೇತಿಗೆ ಪದವಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಅಂತಿಮ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಆಯ್ಕೆ ಪ್ರಕ್ರಿಯ ಹಂತದಲ್ಲಿ ಪದವಿ ವ್ಯಾಸಂಗ ಪೂರ್ಣ ಮುಕ್ತಾಯಗೊಳಿಸಿರುವ ಬಗ್ಗೆ ಅಧಿಕೃತ ದಾಖಲೆಗಳನ್ನು…
ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ನ.13 ರಂದು ಬೆಳಿಗ್ಗೆ 05.30 ಗಂಟೆಗೆ ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಅಣಕು ಮತದಾನ ನಡೆಯಲಿದೆ. ನಂತರ ಬೆಳಿಗ್ಗೆ 07 ಗಂಟೆಯಿAದ ಮತದಾನ ಪ್ರಕ್ರಿಯೆ ಆರಂಭಗೊAಡು ಸಂಜೆ 06 ಗಂಟೆಯವರೆಗೆ ನಡೆಯಲಿದೆ. ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದಾರೆ. 1,17,935 ಪುರುಷ ಮತದಾರರು, 1,18,438 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಗಳಿವೆ ಎಂದು ಮಾಹಿತಿ ನೀಡಿದರು. ನಗರ ವ್ಯಾಪ್ತಿಯಲ್ಲಿ…
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11ಕೆ.ವಿ ಎಮ್ಮಿಗನೂರು ಉಪ-ಕೇಂದ್ರದ ಎಫ್-3 ಎಮ್ಮಿಗನೂರು ಎನ್.ಜೆ.ವೈ ಮತ್ತು ಎಫ್-4 ಮುದ್ದಾಪುರ ಐ.ಪಿ ಕೃಷಿ ಮಾರ್ಗಗಳ ಭಾರವನ್ನು ನೂತನವಾಗಿ ನಿರ್ಮಿಸಿರುವ 110/11ಕೆ.ವಿ ಎಮ್ಮಿಗನೂರು ಉಪ-ಕೇಂದ್ರದ ಮೇಲೆ ವರ್ಗಾಯಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.14 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಗುತ್ತಿಗನೂರು ಐಪಿ ಮಾರ್ಗದ ಗುತ್ತಿಗನೂರು, ರ್ವಾಯಿ, ಎಮ್ಮಿಗನೂರು ಕೃಷಿ ಪ್ರದೇಶಗಳು. ಎಫ್-2 ಸೋಮಲಾಪುರ ಐಪಿ ಮಾರ್ಗದ ಎಮ್ಮಿಗನೂರು, ಸೋಮಲಾಪುರ, ತಿಮ್ಮನಕೆರೆ, ತಾತರಾಜ್ ಕ್ಯಾಂಪ್, ಬ್ರಹ್ಮಿಣಿ ಕ್ಯಾಂಪ್ ಕೃಷಿ ಪ್ರದೇಶಗಳು. ಎಫ್-6 ಎಮ್ಮಿಗನೂರು ನಗರ ಮಾರ್ಗದ ಎಮ್ಮಿಗನೂರು, ತಿಮ್ಮನಕೆರೆ, ರ್ವಾಯಿ, ಗುತ್ತಿಗನೂರು, ಪಟ್ಟಣಸೆರಗು, ರಾಮಚಂದ್ರಪುರ ಕ್ಯಾಂಪ್. ಎಫ್-3 ಓರ್ವಾಯಿ ಎನ್ಜೆವೈ ಮಾರ್ಗದ ರ್ವಾಯಿ, ಗುತ್ತಿಗನೂರು, ಪಟ್ಟಣ ಸೆರಗು ಗ್ರಾಮಗಳು. ಎಫ್-04 ಮುದ್ದಾಪುರ ಐಪಿ ಮಾರ್ಗದ ಬಾಳಾಪುರ ಮತ್ತು ಮುದ್ದಾಪುರ ಕೃಷಿ ಪ್ರದೇಶಗಳು.…
ನವದೆಹಲಿ: ಐಪಿಎಲ್ 2025 ರ ಋತುವಿಗೆ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹೊಸ ಬೌಲಿಂಗ್ ಕೋಚ್ ಆಗಿ ಭಾರತದ ಮಾಜಿ ವೇಗದ ಬೌಲರ್ ಮುನಾಫ್ ಪಟೇಲ್ ಅವರನ್ನು ಮಂಗಳವಾರ ನೇಮಿಸಿದೆ. ಹೊಸ ಮುಖ್ಯ ಕೋಚ್ ಹೇಮಂಗ್ ಬದಾನಿ ಅವರು 2025 ರ ಮೆಗಾ ಹರಾಜಿಗೆ ಮುಂಚಿತವಾಗಿ ಮ್ಯಾನೇಜ್ಮೆಂಟ್ ಕೂಲಂಕುಷ ಪರಿಶೀಲನೆಯ ನಂತರ ಡಿಸಿ ತಂಡವನ್ನು ನಿರ್ಮಿಸಲು ಮುನಾಫ್ ಅವರ ಅಪಾರ ಅನುಭವವನ್ನು ನೋಡುತ್ತಿದ್ದಾರೆ. https://twitter.com/DelhiCapitals/status/1856324487446245524 https://kannadanewsnow.com/kannada/modi-govt-approves-formation-of-first-all-women-cisf-battalion/ https://kannadanewsnow.com/kannada/cm-siddaramaiahs-grand-step-with-hadi-residents-heres-the-viral-video/ https://kannadanewsnow.com/kannada/big-news-140-kg-of-ganja-seized-in-1-month-64-arrested/
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕೆರೆ ಹಾಡಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಲ್ಲಿಯ ನಿವಾಸಿಗಳ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಅವರ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ದೇಶದ ಆದಿವಾಸಿ ಸಮುದಾಯಗಳ ಬದುಕು, ಕಲೆ, ಆಚರಣೆಗಳು ತಮ್ಮ ಸುತ್ತಲಿನ ಪರಿಸರದೊಂದಿಗೆ ಮಿಳಿತಗೊಂಡಿವೆ. ಸುತ್ತಲಿನ ಪ್ರಕೃತಿ, ಪರಿಸರದ ದನಿ ಎಂಬಂತೆ ಅವರ ಹಾಡುಗಳಿವೆ, ಒಮ್ಮೆ ಕೇಳಿದರೆ ಗುನುಗುನಿಸುತ್ತಲೇ ಇರಬೇಕೆನ್ನುವ ಸಹಜ ಸಂಗೀತ-ಲಾಲಿತ್ಯವಿದೆ ಎಂದಿದ್ದಾರೆ. ಇಂದು ಎಚ್ ಡಿ ಕೋಟೆಯ ಕೆರೆಹಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಾಡಿಯ ನಿವಾಸಿಗಳು ಪ್ರದರ್ಶಿಸಿದ ಅಂತಹದ್ದೇ ಒಂದು ಹಾಡಿಗೆ ತಲೆದೂಗುತ್ತಾ ಹೆಜ್ಜೆ ಹಾಕಿದೆ ಎಂದು ಹೇಳಿಕೊಂಡಿದ್ದಾರೆ. https://TWITTER.com/siddaramaiah/status/1856319331316986074 https://kannadanewsnow.com/kannada/chitradurga-javagondahalli-gram-panchayat-pdo-eshwar-suspended/ https://kannadanewsnow.com/kannada/modi-govt-approves-formation-of-first-all-women-cisf-battalion/ https://kannadanewsnow.com/kannada/big-news-140-kg-of-ganja-seized-in-1-month-64-arrested/














