Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ತ್ವರಿತ ಇ-ಕಾಮರ್ಸ್‌ ತಾಣವಾದ ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ತನ್ನ ಗ್ರಾಹಕರಿಗಾಗಿ “ಮ್ಯಾಕ್ಸ್‌ಸೇವರ್‌” ಎಂಬ ವಿನೂತನ ಸೇವೆ ಆರಂಭಿಸಿದ್ದು, ತಮ್ಮ ಪ್ರತಿ ಆರ್ಡರ್‌ಗಳ ಮೇಲೆ 500 ರೂ.ವರೆಗೂ ಉಳಿತಾಯ ಮಾಡಬಹುದು. ಇತ್ತೀಚೆಗೆ ರಾಷ್ಟ್ರದಾದ್ಯಂತ 100 ನಗರಗಳಿಗೆ ವಿಸ್ತರಣೆಯನ್ನು ಘೋಷಿಸಿದ್ದ ಸ್ವಿಗ್ಗಿ ಇನ್‌ಸ್ಟಾಮಾರ್ಟ್, ಈ ನಗರಗಳಲ್ಲಿನ ಬಳಕೆದಾರರಿಗೆ ಮ್ಯಾಕ್ಸ್‌ಸೇವರ್ ಅನ್ನು ಪ್ರಾರಂಭಿಸಿದೆ. ಸ್ವಿಗ್ಗಿ ಮ್ಯಾಕ್ಸ್‌ಸೇವರ್‌ ಬಳಸುವ ಗ್ರಾಹಕರು ಎಲ್ಲಾ ವಿಭಾಗದಲ್ಲೂ ಉತ್ತಮ ಡಿಸ್ಕೌಂಟ್‌ ಪಡೆಯಬಹುದು. ಅದರಲ್ಲೂಪ್ರತಿನಿತ್ಯ ಬಳಕೆಯ ದಿನಸಿಯಿಂದ ಹಿಡಿದು ಎಲೆಕ್ಟ್ರಾನಿಕ್ಸ್, ಸ್ಮಾರ್ಟ್‌ಫೋನ್‌, ಫ್ಯಾಷನ್, ಮೇಕಪ್, ಆಟಿಕೆಗಳು ಸೇರಿದಂತೆ 35,000 ಕ್ಕೂ ಹೆಚ್ಚು ಉತ್ಪನ್ನಗಳನ್ನು ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಡೆರಿವರಿ ಮಾಡುತ್ತಿದೆ. ಈ ಕುರಿತು ಮಾತನಾಡಿದ ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಸಿಇಒ ಅಮಿತೇಶ್ ಝಾ, “ಹೆಚ್ಚಿನ ಬಳಕೆದಾರರು ತ್ವರಿತವಾಗಿ ಪದಾರ್ಥಗಳನ್ನು ಪಡೆಯಲು ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನನ್ನು ಬಳಸುತ್ತಿದ್ದಾರೆ. ನಮ್ಮ ಗ್ರಾಹಕರಿಗೆ ಇನ್ನಷ್ಟು ಉತ್ತಮ ಕೊಡುಗೆ ನೀಡಲು ಇದೀಗ ಸೂಪರ್‌ ಮ್ಯಾಕ್ಸ್‌ಸೇವರ್‌ ಆರಂಭಿಸಲಾಗಿದೆ ಎಂದರು. ಸೂಪರ್‌ ಮ್ಯಾಕ್ಸ್‌ಸೇವರ್‌ ಆಪ್ಷನ್‌ ನಿಮ್ಮ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ಟಾಪ್‌ಅಪ್‌ ಆಗಿರಲಿದ್ದು, ಪ್ರತೇಕವಾಗಿ ಆಯ್ಕೆ ಮಾಡುವ…

Read More

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…

Read More

ಬೆಂಗಳೂರು: ಕರ್ನಾಟಕದಲ್ಲಿ ಕೂಡಾ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ ಎಂಬುದಾಗಿ ರಾಜ್ಯಪಾಲರ ನಡೆಗೆ ಸಿಎಂ ಸಿದ್ಧರಾಮಯ್ಯ ಬೇಸರ ವ್ಯಕ್ತ ಪಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದಿದ್ದಾರೆ. ಸುಪ್ರೀಂಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ…

Read More

ಶಿವಮೊಗ್ಗ: ನಗರದಲ್ಲಿ ಧಾರ್ಮಿಕ, ಮದುವೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮ ಮಾಡೋರಿಗೆ ಗುಡ್ ನ್ಯೂಸ್ ಎನ್ನುವಂತೆ, ಪೇಪರ್ ಕಪ್, ಪ್ಲೇಟ್ ಇತ್ಯಾದಿ ತ್ಯಾಜ್ಯ ವಸ್ತು ಬಳಸದೇ, ಪ್ಲಾಸ್ಟಿಕ್ ತಟ್ಟೆ, ಲೋಟ ಬಳಕೆ ಮಾಡೋದಕ್ಕೆ ಉಚಿತವಾಗಿ ನೀಡಲಾಗುತ್ತದೆ. ಇದೇ ಏಪ್ರಿಲ್.12ರಂದು ಮಧ್ಯಾಹ್ನ 4 ಗಂಟೆಗೆ ಅನಂತ ಪ್ಲೇಟ್ ಬ್ಯಾಂಕ್ ಉದ್ಘಾಟನೆಯಾಗಲಿದೆ. ಈ ಕುರಿತಂತೆ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಗರದ ಶೃಂಗೇರಿ ಶಂಕರಮಠದ ಅಶ್ವಿನಿ ಕುಮಾರ್ ಅವರು, 25 ವರ್ಷ ಸಾಗರದ ಶೃಂಗೇರಿ ಶಂಕರ ಮಠ ಸ್ಥಾಪನೆಯಾಗಿ ಆಗಿದೆ. ಈ ನೆನಪಿಗಾಗಿ ಸುವರ್ಣ ಭಾರತಿ, ವಜ್ರಮಹೋತ್ಸವ ಭಾರತಿಯಂತ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಾಮಾಜಿಕ ಕೆಲಸ ಮಾಡುವ ಪ್ರಯತ್ನವನ್ನು ಶೃಂಗೇರಿಯ ಶಂಕರ ಮಠ ಮಾಡುತ್ತಿದೆ ಎಂದರು. ರಾಜ್ಯದಲ್ಲಿ ಇಸ್ಕಾನ್ ಬಿಟ್ಟರೇ ಶಾಲಾ ಮಕ್ಕಳಿಗೆ ಉಚಿತವಾಗಿ ಊಟ ಸರಬರಾಜು ಮಾಡುತ್ತಿರುವುದು ಶೃಂಗೇರಿಯ ಶಂಕರ ಮಠವಾಗಿದೆ. ಈ ಮೂಲಕ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನ…

Read More

ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ದ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ…

Read More

ಲಂಡನ್: ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಗರ್ಭಕೋಶ ಕಸಿ ನಂತರ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಲಂಡನ್‌ನ ಕ್ವೀನ್ ಷಾರ್ಲೆಟ್ ಮತ್ತು ಚೆಲ್ಸಿಯಾ ಆಸ್ಪತ್ರೆ ಮಂಗಳವಾರ ದೃಢಪಡಿಸಿದೆ. ಇಂಗ್ಲೆಂಡ್‌ನ ದಕ್ಷಿಣದಲ್ಲಿ ವಾಸಿಸುವ 36 ವರ್ಷದ ಹೊಸ ತಾಯಿ ಗ್ರೇಸ್ ಡೇವಿಡ್ಸನ್ ಕಾರ್ಯನಿರ್ವಹಿಸುವ ಗರ್ಭಕೋಶವಿಲ್ಲದೆ ಜನಿಸಿದೆ. 2023 ರ ಆರಂಭದಲ್ಲಿ ಅವರ ಸಹೋದರಿ ಆಮಿ ಗರ್ಭಕೋಶ ಕಸಿ ಯುಕೆ ಜೀವಂತ ದಾನಿ ಕಾರ್ಯಕ್ರಮದ ಭಾಗವಾಗಿ ತಮ್ಮ ಸ್ವಂತ ಗರ್ಭಕೋಶವನ್ನು ದಾನ ಮಾಡಿದ ನಂತರ ಬ್ರಿಟನ್‌ನಲ್ಲಿ ಗರ್ಭಕೋಶ ಕಸಿ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದಾಗ ಇದು ಬದಲಾಯಿತು. 2023 ರಲ್ಲಿ ಇಂಟರ್ನ್ಯಾಷನಲ್ ಜರ್ನಲ್ ಆಫ್ ಅಬ್ಸ್ಟೆಟ್ರಿಕ್ಸ್ ಅಂಡ್ ಗೈನಕಾಲಜಿ BJOG ವರದಿ ಮಾಡಿದಂತೆ, ಮೂಲ ದಾನಿ ಶಸ್ತ್ರಚಿಕಿತ್ಸೆ ಮತ್ತು ನಂತರದ ಕಸಿ OUH ನ ಚರ್ಚಿಲ್ ಆಸ್ಪತ್ರೆಯ ಭಾಗವಾಗಿರುವ ಆಕ್ಸ್‌ಫರ್ಡ್ ಕಸಿ ಕೇಂದ್ರದಲ್ಲಿ ನಡೆಯಿತು. ನಂತರ ಗ್ರೇಸ್ ಲಂಡನ್‌ನಲ್ಲಿರುವ HCA UK ಯ ಲಿಸ್ಟರ್ ಫರ್ಟಿಲಿಟಿ ಕ್ಲಿನಿಕ್‌ನಲ್ಲಿ ಇನ್ ವಿಟ್ರೊ ಫರ್ಟಿಲೈಸೇಶನ್…

Read More

ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಅರ್ಹ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ದಿನಾಂಕ: 31-03-2025 ಕ್ಕೆ 17 ವರ್ಷ ತುಂಬಿದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಸ್ತುತ ಪಿಯು ಪರೀಕ್ಷೆ – 2 ಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಆಯ್ತ ಸಂಯೋಜನೆಗಳೊಂದಿಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿದ್ದು, ಅವರುಗಳು ಮಂಡಲಿಯ ನಿಯಮಾನುಸಾರ ತಾವು ಅಭ್ಯಸಿಸಿದ ಕಾಲೇಜಿನಲ್ಲಿಯೇ ನೋಂದಾಯಿಸಿಕೊಳ್ಳಲು ಉಲ್ಲೇಖಿತ ಇ-ಕಛೇರಿ ಕಡತದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಕರ್ನಾಟಕ ಶಾಲಾ…

Read More

ಮಡಿಕೇರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್‌ ಪೂಜಾರಿ, ಆರ್‌ಎಸ್‌ಎಸ್‌ ರಾಜು, ರಾಜೇಶ್‌ ಕೋಟ್ಯಾನ್‌, ಪ್ರವೀಣ್‌ ಪೂಜಾರಿ, ಚರಣ್‌ ಪೂಜಾರಿ, ವಿಶ್ವನಾಥ್‌ ಹೀಗೆ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಪಿಎಫ್‌ಐ, ಎಸ್‌ಡಿಪಿಐ ಮೊದಲಾದ ಮುಸ್ಲಿಂ ಸಂಘಟನೆಗಳಿಂದ ನಡೆದಿದೆ. ಈಗ ಕೊಡಗಿನ ವಿನಯ್‌ ಸೋಮಯ್ಯ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್‌ ಮಾಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕೊಡಗಿನಲ್ಲಿ ಈ ಹಿಂದೆ ಟಿಪ್ಪು ಜಯಂತಿ ನಡೆದಾಗ ಕುಟ್ಟಪ್ಪ ಎಂಬುವರು ಹತ್ಯೆಯಾಗಿದ್ದರು. ಕಾಂಗ್ರೆಸ್‌ ಸರ್ಕಾರ ಹಿಂದೂಗಳನ್ನು ಬೇರೆ ಮಾಡಲು ಯತ್ನಿಸುತ್ತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದರೆ ಕರ್ನಾಟಕವನ್ನು ಪಾಕಿಸ್ತಾನಕ್ಕೆ ಕೊಟ್ಟುಬಿಡುತ್ತಾರೆ ಎಂದರು. ಹಿಂದೆ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡುವುದು ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿತ್ತು.…

Read More

ಮಂಡ್ಯ : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂಬುದು ಬಿಜೆಪಿಯವರಿಗೆ ಈಗ ಅರ್ಥವಾಗಿದೆ. ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಷ್ಟ್ರದ ಗಮನ ಸೆಳೆದಿದ್ದೇವೆ. ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ತೆರಿಗೆ ಕಟ್ಟುವುದರಿಂದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ‌‌ ಎಂದರು. ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವುದಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗುತ್ತಾರೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದರು. ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದ್ದೇವೆ. ಜಾತಿ, ಧರ್ಮ, ಪಕ್ಷ ಬೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹೆಣ್ಣು ಮಕ್ಕಳು ಆರ್ಥಿಕಶಕ್ತಿ…

Read More

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆಯನ್ನು ಪ್ರಕಟಿಸಿ ಕೋರ್ಟ್ ಆದೇಶಿಸಿದೆ. ಬರೋಬ್ಬರಿ 1 ಕೋಟಿ 25 ಲಕ್ಷ ದಂಡವನ್ನು ವಿಧಿಸಿದೆ. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ನೀಡಿದೆ. ಮಾಜಿ ಸಚಿವ ಬಿ ನಾಗೇಂದ್ರಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. 1 ಕೋಟಿ 25 ಲಕ್ಷ ದಂಡ ಪಾವತಿಸಲು ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಇನ್ನೂ ದಂಡ ಪಾವತಿಸದೇ ಇದ್ದರೇ 1 ವರ್ಷ ಸೆರೆವಾಸ ಅನುಭವಿಸುವಂತೆ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಮೂರ್ತಿ ಶಿವಕುಮಾರ್ ಆದೇಶಿಸಿದ್ದಾರೆ. ಅಂದಹಾಗೇ ವಿಎಸ್ ಎಲ್ ಸ್ಟೀಲ್ ಲಿಮಿಟೆಡ್ ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಇಂದು ಕೋರ್ಟ್ ತೀರ್ಪು ನೀಡಿದೆ. https://kannadanewsnow.com/kannada/jds-launches-sakappa-saku-congress-sarkar-campaign-nikhil-kumaraswamy/ https://kannadanewsnow.com/kannada/alert-those-who-sleep-with-their-mobile-phones-near-their-heads-should-read-this/

Read More