Author: kannadanewsnow09

ನವದೆಹಲಿ: ಕರ್ನಾಟಕದ ಮೂರು ರೈಲ್ವೆ ಮೇಲ್ಸೇತುವೆಗಳಿಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಈ ಮೂಲಕ ಜನರ ಸಮಸ್ಯೆಗೆ ಪ್ರತಿಸ್ಪಂದಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರು, ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರಾಗಿವೆ. ರೈಲ್ವೆ ಸಚಿವಾಲಯದಿಂದ ಸೇತುವೆಗಳನ್ನು ಮಂಜೂರು ಮಾಡಿರುವುದಾಗಿ ತಿಳಿಸಿದ್ದಾರೆ. ಹೊಳೆನರಸೀಪುರದ ಅಕ್ಕಿಹೆಬ್ಬಾಳು–ಮಂಡಗೆರೆ, ಮಂಡಗೆರೆ–ಹೊಳೆನರಸೀಪುರ ಮತ್ತು ಕಡೂರು ಜಂಕ್ಷನ್‌–ಬಿರೂರು ಜಂಕ್ಷನ್‌ ನಡುವೆ ಮೇಲ್ಸೇತುವೆ ನಿರ್ಮಾಣವಾಗಲಿದ್ದಾವೆ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರವು ಈ ಯೋಜನೆಗಳಿಗೆ ವಿಶೇಷ ರೈಲ್ವೆ ಯೋಜನೆಗಳು ಅಂತ ಪರಿಗಣಿಸಿ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಬಹು ದಿನಗಳ ಬೇಡಿಕೆಯನ್ನು ಈಡೇರಿಸಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/another-good-news-for-asha-workers-in-the-state/ https://kannadanewsnow.com/kannada/breaking-11-dysp-civil-transfer-orders-issued-by-state-government-dysp-transfer/

Read More

ಮಂಗಳೂರು : ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ನಕ್ಸಲರು ಮುಖ್ಯವಾಹಿನಿಗೆ ಬರಬೇಕು ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಿದ್ದು, ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರು ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ ಎಂದರು.…

Read More

ಮಂಗಳೂರು : ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ ಎಂದರು. ನಕ್ಸಲರು ಮುಖ್ಯವಾಹಿನಿಗೆ ಬರಬೇಕು ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಿದ್ದು, ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ…

Read More

ಬೆಂಗಳೂರು : “ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಕಿವಿಮಾತು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರದಂದು ಏರ್ಪಡಿಸಿದ್ದ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಾನು ಚುನಾವಣಾ ರಾಜಕೀಯಕ್ಕೆ ಬಂದು 40 ವರ್ಷಗಳು ಕಳೆದಿವೆ. ಆದರೆ ಒಂದು ದಿನವೂ ಪ್ರೆಸ್ ಕ್ಲಬ್ ಗೆ ಕಾಲಿಟ್ಟಿರಲಿಲ್ಲ. ಕಳೆದ ವರ್ಷ ನನ್ನನ್ನು ಕರೆಸಿ ವರ್ಷದ ವ್ಯಕ್ತಿ ಪ್ರಶಸ್ತಿ ಕೊಟ್ಟಿದ್ದೀರಿ” ಎಂದರು. “ನನ್ನ ರಾಜಕೀಯ ಜೀವನದ ಹಾದಿಯಲ್ಲಿ ಮಾಧ್ಯಮದವರು ನನಗೆ ಸಕಾರಾತ್ಮಕ ಪ್ರಚಾರವನ್ನು ನೀಡಿದ್ದೀರಿ, ನಕಾರಾತ್ಮಕ ಪ್ರಚಾರವನ್ನು ನೀಡಿದ್ದೀರಿ. ಈ ಹಿಂದೆ ರಾಜೀವ್ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದಾಗ ಪೆಂಗ್ಯೋಂಗ್ ನಲ್ಲಿ ನಡೆದಿದ್ದ ವಿಶ್ವ ಯುವ ಸಮ್ಮೇಳನಕ್ಕೆ ಕಳುಹಿಸಿಕೊಟ್ಟಿದ್ದರು. ಆ ಸಮಯದಲ್ಲಿ ವೆಂಕಟಸುಬ್ಬಯ್ಯ ಅವರು ರಾಜ್ಯಪಾಲರಾಗಿದ್ದರು. ಇಲ್ಲಿ ದೊಡ್ಡ ಸಮಾವೇಶ ನಡೆದ ನಂತರ ನಾನು ಕಬ್ಬನ್ ಪಾರ್ಕ್ ನಲ್ಲಿ ಬಂದು ಕೂತಿದ್ದೆ. ಪೊಲೀಸ್ ಆಯುಕ್ತರು ಒಬ್ಬರನ್ನು ಕಳುಹಿಸಿ…

Read More

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ತನ್ನ ಬಹುನಿರೀಕ್ಷಿತ ತಂಡವನ್ನು ಪ್ರಕಟಿಸಿದೆ. ನವದೆಹಲಿ: ಸ್ಟಾರ್ ಬೌಲರ್ ಮೊಹಮ್ಮದ್ ಶಮಿ 14 ತಿಂಗಳ ಅಂತರದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ್ದಾರೆ, ಇದು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಭಾರತದ ಸಿದ್ಧತೆಗಳಿಗೆ ಪ್ರಮುಖ ಉತ್ತೇಜನ ನೀಡಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್). ಭಾರತ-ಇಂಗ್ಲೆಂಡ್ ಟಿ20 ಸರಣಿ ವೇಳಾಪಟ್ಟಿ ಜನವರಿ 22: ಮೊದಲ ಟಿ20 ಪಂದ್ಯ- ಇಂಗ್ಲೆಂಡ್ (ಈಡನ್ ಗಾರ್ಡನ್ಸ್) ಜನವರಿ 25: ಎರಡನೇ ಟಿ20 ಪಂದ್ಯ: ಇಂಗ್ಲೆಂಡ್ (ಚೆನ್ನೈ) ಜನವರಿ 28: ಇಂಗ್ಲೆಂಡ್ ವಿರುದ್ಧ…

Read More

ಹಾಸನ: ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕಾಗಿ ನಾದಿನಿ ಜೊತೆಗೆ ಸೇರಿ ಅಣ್ಣನನ್ನೇ ಕೊಲೆಗೈದಿರುವಂತ ಘಟನೆ ಹಾಸನದ ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ತಮ್ಮನನ್ನೇ ಆತನ ಅಣ್ಣ ಹಾಗೂ ಪತ್ನಿ ಸೇರಿ ಕೊಲೆಗೈದಿರುವಂತ ಘಟನೆ ನಡೆದಿದೆ. ಆನಂದ್ (36) ಎಂಬಾತನನ್ನು ಅಣ್ಣ, ನಾದಿನಿ ಸೇರಿಕೊಂಡು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. 10 ವರ್ಷಗಳ ಹಿಂದೆ ಆನಂದ್ ಮದುವೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆತನ ದೊಡ್ಡಪ್ಪನ ಮಗ ಸೋಮಶೇಖರ್ ಎಂಬಾತನ ಪತ್ನಿ ಕಳೆದ ಮೂರು ವರ್ಷಗಳ ಹಿಂದೆ ಅನಾರೋಗ್ಯದ ಕಾರಣದಿಂದ ಸಾವನ್ನಪ್ಪಿದ್ದರು. ಹೀಗಾಗಿ ಆನಂದ್ ಮನೆಗೆ ಊಟ, ತಿಂಡಿಗೆ ಬರ್ತಾ ಇದ್ದನು. ಈ ಸಮಯದಲ್ಲೇ ಆನಂದ್ ತಮ್ಮನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬುದಾಗಿ ಆರೋಪಿಸಲಾಗಿದೆ. ತಮ್ಮನ ಪತ್ನಿಯೊಂದಿಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣ, ತಮ್ಮನನ್ನೇ ಅಣ್ಣ ಹಾಗೂ ನಾದಿನಿ ಸೇರಿಕೊಂಡು ಕೊಲೆಗೈದು ಆತ್ಮಹತ್ಯೆಯ ನಾಟಕವಾಡಿದ್ದಾರೆ. ಆದರೇ ಪೊಲೀಸರು…

Read More

ಬೆಂಗಳೂರು : ಸಾರಿಗೆ ಬಸ್ ದರ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಬೇರೆ. ಈ ಮಧ್ಯೆಯೂ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಸಜ್ಜಾಗಿದೆ. ಸಚಿವ ವೆಂಕಟೇಶ್ ಈ ಸುಳಿವು ನೀಡಿದ್ದಾರೆ. ಅದೇ ನಂದಿನಿ ಹಾಲಿನ ದರ ಏರಿಕೆ ಮಾಡುತ್ತಿರುವುದಾಗಿದೆ. ಹೌದು ಸರ್ಕಾರದ ಮುಂದೆ ಹಾಲಿನ ದರ ಏರಿಕೆಯ ಬಗ್ಗೆ ಪ್ರಸ್ತಾವನೆಯನ್ನು ಕೆಎಂಎಫ್ ಸಲ್ಲಿಸಿದೆ ಎಂಬುದಾಗಿ ಸಚಿವ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಕ್ಕೂಟದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಶೀಘ್ರವೇ ನಂದಿನ ಹಾಲಿನ ದರ ಏರಿಕೆಯಾಗುವ ಸುಳಿವನ್ನು ಸಚಿವ ವೆಂಕಟೇಶ್ ಅವರು ನೀಡುವ ಮೂಲಕ ಈಗ ರಾಜ್ಯದ ಜನತೆಗೆ ಶಾಕ್ ನೀಡಿದ್ದಾರೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಪ್ರಯಾಣದ ದರ ಬೆನ್ನಲ್ಲೇ ನಂದಿನಿ ಹಾಲಿನ ದರವೂ ಹೆಚ್ಚಳವಾಗಲಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/ramesh-babu-responds-to-hd-kumaraswamys-allegation-that-state-government-did-not-give-him-a-car/ https://kannadanewsnow.com/kannada/breaking-11-dysp-civil-transfer-orders-issued-by-state-government-dysp-transfer/…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಓಡಾಡಲು ಕಾರು ಕೊಟ್ಟಿಲ್ಲ ಎಂಬ ಆರೋಪಕ್ಕೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸಾಕ್ಷಿ ಸಹಿತ ಉತ್ತರಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ  ಹೆಚ್.ಡಿ.ಕುಮಾರಸ್ವಾಮಿ ರವರಿಗೆ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿರುತ್ತದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು…

Read More

ಗೃಹಶೋಭಿತ ಮಹಿಳೆಯರಿಗೆ ಕಿವಿ ಮಾತು: *ಸಂಜೆ ದೀಪ ಹೊತ್ತಿಸಿದ ಮೇಲೆ ಗೃಹದ ಕಸ ಗುಡಿಸ ಬೇಡಿ. * ರಾತ್ರಿ ಮಲಗುವ ಮುಂಚೆ ಕಸ ಗುಡಿಸಿದ್ದರೆ ಹೊರ ಹಾಕ ಬೇಡಿ. ಬೆಳಗಿನ ಜಾವ ಹೊರ ಹಾಕಿ. *ಬಾಗಿಲ ಹೊಸ್ತಿಲ ಮೇಲೆ ನಿಲ್ಲ ಬೇಡಿ ಮತ್ತು ಕುಳಿತು ಕೊಳ್ಳ ಬೇಡಿ. *ಸಂಜೆ ದೀಪವನ್ನು ಹೊತ್ತಿಸುವ ವೇಳೆ ಮುಂಬಾಗಿಲನ್ನು ತೆರೆದಿರಿಸಿ. ಹಿಂಬಾಗಿಲಿನ ಕದ ಮುಚ್ಚಿರಲಿ. *ಪೊರಕೆಯ ತುದಿ ಭಾಗವನ್ನು ಮೇಲೆ ಮಾಡಿ ನಿಲ್ಲಿಸ ಬೇಡಿ. ಮೊರ, ಪೊರಕೆಯನ್ನು ಕಾಲಿನಿಂದ ಒದೆಯ ಬೇಡಿ. *ಹೊರ ಬಾಗಿಲ ಹೊಸ್ತಿಲಲ್ಲಿಯೇ ಮತ್ತು ಅದರ ಬಳಿ ಪಾದರಕ್ಷೆಗಳನ್ನು ಬಿಡ ಬೇಡಿ. *ರಂಗೋಲಿ ಹಾಕದೆ ಬರೇ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಅಶುಭ ಸೂಚಕ. *ಗೃಹದ ಗೋಡೆ, ದೇವರ ಮನೆ ಇತ್ಯಾದಿ ಸ್ಥಳಗಳ ಮೇಲೆ ಶಾಯಿ (ಇಂಕ್) ಕರಿ ಬಣ್ಣ ಇತ್ಯಾದಿಗಳಿಂದ ವಿಕಾರ ಆಕೃತಿ ಬರೆಯ ಬೇಡಿ. *ಮಹಿಳೆಯರು ನಡೆಯುವಾಗ ಕಾಲಿನ ಶಬ್ಧ ಸಾಧ್ಯವಾದಷ್ಟು ಕಡಿಮೆಯಾಗಿರಲಿ. * ಮಂಗಳ, ಶುಕ್ರವಾರಗಳಂದು ಅವ್ಯಾಚ ಶಬ್ಧಗಳಿಂದ…

Read More

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮಾತನಾಡಿ, ವಿಜಯಪುರದಲ್ಲಿ ಕೂಡ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು, ತಮ್ಮ ಯೋಜನೆಯನ್ನು ಪ್ರಕಟಿಸಿದರು. ಶಾಸಕ ಬಸವರಾಜ ಯತ್ನಾಳ ಕೂಡ ಸಚಿವರು ಇದುವರೆಗೆ ತೆಗೆದುಕೊಂಡಿರುವ ಉಪಕ್ರಮಗಳ ಬಗ್ಗೆ ಮುಕ್ತ ಪ್ರಶಂಸೆ ವ್ಯಕ್ತಪಡಿಸಿದರು. ವಿಜಯಪುರದ ಸಾಬೂನು ಘಟಕದಿಂದ ಉತ್ತರ ಕರ್ನಾಟಕ ಕ್ಕೆ ಮಾತ್ರವಲ್ಲದೆ, ಮಹಾರಾಷ್ಟ್ರ ಕ್ಕೂ ಇಲ್ಲಿಂದಲೇ ಸರಬರಾಜು ಮಾಡುವ ಕೆಲಸ ಮಾಡಲಾಗುವುದು ಎಂದು…

Read More