Author: kannadanewsnow09

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ಈ ಎಲ್ಲಕ್ಕೂ ಸರ್ಕಾರ ಉತ್ತರ ನೀಡಬೇಕು. ಮುಂದಿನ ಒಂದು ವರ್ಷ ಯಾವುದೇ ರೀತಿಯ ತೆರಿಗೆಗಳನ್ನು ಜನರ ಮೇಲೆ ಹೇರಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದು ದೂರದೃಷ್ಟಿಯ ಬಜೆಟ್‌ ಅಲ್ಲ. ಬದಲಾಗಿ ತುರ್ತಾಗಿ ರೂಪಿಸಿರುವ ಬಜೆಟ್‌. ಇದರಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಿಲ್ಲ. ಆರ್ಥಿಕಾಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಒಂದು ಗುಟುಕು ನೀರು ಕೊಡಿ ಎಂದು ಬಜೆಟ್‌ನಲ್ಲಿ ಕವನ ಉಲ್ಲೇಖಿಸಲಾಗಿದೆ. ಆದರೆ ವಿಶ್ವವಿದ್ಯಾಲಯಗಳಿಗೆ ಅನುದಾನವಿಲ್ಲದೆ ವಿದ್ಯಾರ್ಥಿಗಳು ವಿಷ ಕೊಡಿ ಎಂದು ಕೇಳುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರೇ ಅನುದಾನವಿಲ್ಲದೆ ವಿಷ ಕೊಡಿ ಎಂದು ಹೇಳುತ್ತಿದ್ದಾರೆ. ಶಾಸಕ ರಾಜು ಕಾಗೆ ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕೂಡ ಇದನ್ನೇ ಹೇಳುತ್ತಿದ್ದಾರೆ ಎಂದರು. ಬಂಡವಾಳ ವೆಚ್ಚಕ್ಕೆ…

Read More

ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಮೇಲೆ ಪೊಲೀಸರ ಹದ್ದಿನ ಕಣ್ಣು ನೆಟ್ಟಿದ್ದಾರೆ. ಈಗ ಪ್ರತಿ ಪೊಲೀಸ್ ಠಾಣೆಯಲ್ಲೂ ಮಾನಿಟರ್ ವಿಭಾಗ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿ ಸದಸ್ಯ ನವೀನ್ ಪ್ರಶ್ನಿಸಿದಂತ ಅವರು, ರಾಜ್ಯದಲ್ಲಿ ಸಾಮಾಜಿಕ ಜಾಲತಾಣ ನಿಗಾವಹಿಸಲು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ವ್ಯವಸ್ಥೆ ಮಾಡಬೇಕಾಗುತ್ತದೆ. ಪೊಲೀಸ್ ಇಲಾಖೆಗೆ ಸರ್ಕಾರ ಮತ್ತಷ್ಟು ಶಕ್ತಿ ಕೊಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿ ಹರಡಿ ಹೆಚ್ಚು ಗಲಭೆಗಳು ಆಗುತ್ತಿವೆ ಎಂದರು. ಈ ಪ್ರಶ್ನೆಗೆ ಉತ್ತರಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸೋಷಿಯಲ್ ಮೀಡಿಯಾ ಬಹಳ ಉಪಯೋಗ ಆಗುತ್ತಿದೆ. ಅದರ ಜೊತೆಗೆ ಅಷ್ಟೇ ದುರುಪಯೋಗ ಆಗುತ್ತಿದೆ. ನಾವು ಈಗ ಟೆನ್ನಾಲಜಿ ಇಲ್ಲದೇ ಬದುಕಲು ಸಾಧ್ಯವಿಲ್ಲ ಎನ್ನುವ ಸ್ಥಿತಿಗೆ ತಲುಪಿದ್ದೇವೆ. ಫೇಸ್ ಬುಕ್, ಎಕ್ಸ್, ಯೂಟ್ಯೂಬ್ ಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸೋ ಕೆಲಸ ಆಗುತ್ತಿದೆ ಎಂದರು. ದೇಶದಲ್ಲಿ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮಾನಿಟರಿಂಗ್…

Read More

ಬಲೂಚಿಸ್ತಾನಿ: ಖೈಬರ್ ಪಖ್ತುನ್ಖ್ವಾದ ದಕ್ಷಿಣ ವಜಿರಿಸ್ತಾನ್ ಜಿಲ್ಲೆಯ ಎಫ್ಸಿ ಶಿಬಿರದ ಬಳಿ ನಡೆದ ಆತ್ಮಾಹುತಿ ದಾಳಿಯ ನಂತರ ಪಾಕಿಸ್ತಾನ ಸೇನೆಯು ಗುರುವಾರ ಚೆಕ್ಪೋಸ್ಟ್ ಮೇಲೆ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ ಮತ್ತು ಎಂಟರಿಂದ ಒಂಬತ್ತು ಉಗ್ರರನ್ನು ಕೊಂದಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಜಂಡೋಲಾದಲ್ಲಿ ಭಾರಿ ಸ್ಫೋಟದ ನಂತರ ಭಾರಿ ಗುಂಡಿನ ಸದ್ದು ಕೇಳಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಭದ್ರತಾ ಮೂಲಗಳ ಪ್ರಕಾರ, ಭಯೋತ್ಪಾದಕರು ಜಂಡೋಲಾ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು. ಇದನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಎಫ್ ಸಿ ಶಿಬಿರದ ಬಳಿ ವಾಹನವೊಂದರಲ್ಲಿ ಆತ್ಮಾಹುತಿ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂದು ಅವರು ಹೇಳಿದರು. https://kannadanewsnow.com/kannada/isros-spadex-satellites-accomplish-de-docking-union-minister-jitendra-singh-congratulates-space-agency/ https://kannadanewsnow.com/kannada/scientist-on-dialysis-dies-after-fight-with-mohali-neighbour-over-parking-video-surfaces/

Read More

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಎಲ್ಲಾ ಸಾರಿಗೆ ನಿಗಮದ ನೌಕರರಿಗೂ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಕೆಎಸ್‌ಆರ್‌ಟಿಸಿ ನೌಕರರಿಗೆ ಜಾರಿಗೊಳಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಇತರೆ ಸಾರಿಗೆ ನಿಗಮಗಳ ನೌಕರರಿಗೂ ಮೂರು ತಿಂಗಳಲ್ಲಿ ವಿಸ್ತರಿಸಲಾಗುವುದು ಎಂದಿದ್ದಾರೆ. ರಾಜ್ಯದ 350 ಆಸ್ಪತ್ರೆಗಳಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1900151583817818522 https://kannadanewsnow.com/kannada/sheikh-hasina-returns-as-bangladesh-pm-awami-league-leader-thanks-india/ https://kannadanewsnow.com/kannada/pu-student-dies-in-road-accident-while-celebrating-birthday/

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿಯ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಂತ ಚಿದಾನಂದ(23) ಎಂಬ ವಿದ್ಯಾರ್ಥಿಗೆ ಇಂದು ಹುಟ್ಟಹಬ್ಬ. ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡು, ಮನೆಗೆ ಮರಳುತ್ತಿದ್ದನು. ವಿದ್ಯಾರ್ಥಿ ಚಿದಾನಂದ್ ತನ್ನ ಮಂಗುಸವಳ್ಳಿ ಊರಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಮಾರ್ಗಮಧ್ಯೆ ಪಲ್ಸರ್ ಬೈಕಿಗೆ ಹರಿಯಬ್ಬೆ ಗ್ರಾಮ ಪಂಚಾಯ್ತಿಗೆ ಸೇರಿದಂತ ಕಸದ ವಾಹನ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಂತ ಚಿದಾನಂದ್ ಗೆ ಧರ್ಮಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ ಕಾರಣ, ಆಂಬುಲೆನ್ಸ್ ಮೂಲಕ ಕರೆದೊಯ್ಯುತ್ತಿದ್ದಂತ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಮಂಗುಸವಳ್ಳಿಯಲ್ಲಿಯ ಚಿದಾನಂದ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವರದಿ: ವಸಂತ ಬಿ…

Read More

ನವದೆಹಲಿ: ಯುಎಸ್ ಅವಾಮಿ ಲೀಗ್ ಉಪಾಧ್ಯಕ್ಷ ಡಾ.ರಬ್ಬಿ ಆಲಂ ಅವರು ಶೇಖ್ ಹಸೀನಾ ಬಾಂಗ್ಲಾದೇಶದ ಪ್ರಧಾನಿಯಾಗಿ ಮರಳುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು ಮತ್ತು ಬಾಂಗ್ಲಾದೇಶದ ಸಲಹೆಗಾರ ಅವರು ಬಂದ ಸ್ಥಳದಿಂದ ಮರಳಬೇಕು ಎಂದು ಸಲಹೆ ನೀಡಿದರು. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಪ್ತರಾಗಿರುವ ಆಲಂ, ತನಗೆ ಆಶ್ರಯ ನೀಡಿದ್ದಕ್ಕಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಿದರು. “ಬಾಂಗ್ಲಾದೇಶದ ಸಲಹೆಗಾರರನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಮತ್ತು ಅವರು ಎಲ್ಲಿಂದ ಬಂದರೋ ಅಲ್ಲಿಗೆ ಹಿಂತಿರುಗುವಂತೆ ನಾವು ಕೇಳಲು ಬಯಸುತ್ತೇವೆ. ಶೇಖ್ ಹಸೀನಾ ಮತ್ತೆ ಪ್ರಧಾನಿಯಾಗಿ ಬರುತ್ತಿದ್ದಾರೆ. ಯುವ ಪೀಳಿಗೆ ತಪ್ಪು ಮಾಡಿದೆ, ಆದರೆ ಅದು ಅವರ ತಪ್ಪಲ್ಲ; ಅವುಗಳನ್ನು ತಿರುಚಲಾಗಿದೆ” ಎಂದು ಅವರು ಎಎನ್ಐಗೆ ತಿಳಿಸಿದರು. ಆಗಸ್ಟ್ 5 ರಂದು, ವಿದ್ಯಾರ್ಥಿ ನೇತೃತ್ವದ ಆಂದೋಲನವು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾರಗಳ ಪ್ರತಿಭಟನೆ ಮತ್ತು ಘರ್ಷಣೆಗಳ ನಂತರ ಪದಚ್ಯುತಗೊಳಿಸಿತು. ಘರ್ಷಣೆಯ ನಂತರ 77 ವರ್ಷದ ನಾಯಕ ಭಾರತಕ್ಕೆ ಪಲಾಯನ ಮಾಡಿದರು ಮತ್ತು ನೊಬೆಲ್ ಪ್ರಶಸ್ತಿ…

Read More

ಬೆಂಗಳೂರು: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕುಣಿಗಲ್ ಕ್ಷೇತ್ರದ ಸದಸ್ಯ ಡಾ. ಹೆಚ್.ಡಿ.ರಂಗನಾಥ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಈಗಾಗಲೇ 14-03-2024ರಂದು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕರ್ನಾಟಕ ಲೋಕ ಸೇವಾ ಆಯೋಗದಿಂದ 15-3-2024ರಂದು ಅಧಿಸೂಚನೆ ಪ್ರಕಟಿಸಲಾಗಿದೆ. ದಿನಾಂಕ: 16-11-2024 ಮತ್ತು 17-01-2025ರಂದು ಕಲ್ಯಾಣ ಕರ್ನಾಟಕ ವೃಂದದ 97 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಉಳಿಕೆ ಮೂಲ ವೃಂದದ 150 ಹುದ್ದೆಗಳಿಗೆ ದಿನಾಂಕ: 07-12-2024 ಮತ್ತು 08-12-2024ರಂದು ಪರೀಕ್ಷೆ ನಡೆಸಲಾಗಿರುತ್ತದೆ. ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಿದ್ದು ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ…

Read More

ನವದೆಹಲಿ: ಬಲೂಚಿಸ್ತಾನದಲ್ಲಿ 21 ಪ್ರಯಾಣಿಕರು ಮತ್ತು ನಾಲ್ವರು ಅರೆಸೈನಿಕ ಸೈನಿಕರನ್ನು ಬಲಿತೆಗೆದುಕೊಂಡ ಜಾಫರ್ ಎಕ್ಸ್ಪ್ರೆಸ್ ಅಪಹರಣದ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಗುರುವಾರ ಆರೋಪಿಸಿದೆ. ಹೈಜಾಕ್ ಹಿಂದೆ ಬಲೂಚ್ ಭಯೋತ್ಪಾದಕರು ಅಫ್ಘಾನಿಸ್ತಾನದಲ್ಲಿರುವ ತಮ್ಮ ಸಹಚರರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗುಪ್ತಚರ ವರದಿಗಳು ಸೂಚಿಸಿವೆ ಎಂದು ವಿದೇಶಾಂಗ ಕಚೇರಿ ವಕ್ತಾರ ಶಫ್ಕತ್ ಅಲಿ ಖಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ. ಜಾಫರ್ ಎಕ್ಸ್ ಪ್ರೆಸ್ ದಾಳಿಯ ನಂತರದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಮಾತನಾಡಿ, ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿದ್ದ ಎಲ್ಲಾ 33 ಉಗ್ರರನ್ನು ಕೊಂದಿವೆ. ಮಂಗಳವಾರ ಭಯೋತ್ಪಾದಕರು ರೈಲಿನ ಮೇಲೆ ದಾಳಿ ನಡೆಸಿದಾಗ 21 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. https://kannadanewsnow.com/kannada/tunnel-road-double-decker-buffer-road-elevated-corridor-project-for-traffic-congestion-problem-in-bengaluru-dks/ https://kannadanewsnow.com/kannada/govt-to-take-appropriate-steps-to-utilise-27-tmc-of-water-being-wasted-in-tungabhadra-dam-dks/

Read More

ಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಶಿವಕುಮಾರ್ ಅವರು, “ಬೆಂಗಳೂರಿನ ಸಮಸ್ಯೆ, ಜನಸಂಖ್ಯೆ ದಟ್ಟಣೆ ವಿಚಾರವಾಗಿ ಸದಸ್ಯರಾದ ಸುಧಾಮ್ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಾನು ಬಹಳ ಗಂಭೀರವಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಬೆಂಗಳೂರು ನವದೆಹಲಿ ರೀತಿ ಯೋಜಿತ ನಗರವಲ್ಲ. ಮಲ್ಲೇಶ್ವರ, ಜಯನಗರ, ಇಂದಿರಾನಗರದಂತಹ ಕೆಲವು ಬಡಾವಣೆಗಳು ಮಾತ್ರ ಯೋಜಿತವಾಗಿ ರೂಪುಗೊಂಡಿವೆ. ಈ ಹಿಂದೆ ಬಿಎಂಐಸಿಪಿ ರಸ್ತೆ ಆದ ಕಾರಣ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ನಿಯಂತ್ರಣವಾಗಿದೆ. ಇಲ್ಲದಿದ್ದರೆ ಪರಿಸ್ಥಿತಿ ಇನ್ನು…

Read More

ಬೆಂಗಳೂರು : “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ…

Read More