Author: kannadanewsnow09

ವಿಜಯಪುರ : ನನಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಸ್ನೇಹಿತರೇ. ನನ್ನ ಬಗ್ಗೆ ಉತ್ತಮ ಅಭಿಪ್ರಾಯ ಕೂಡ ಹೇಳಿದ್ದಾರೆ. ಸಲಹೆಯನ್ನೂ ನೀಡಿದ್ದಾರೆ. ಹಾಗಂತ ನನಗೆ ಪಕ್ಷ ಬಿಡು ಎಂದು ಹೇಳಲು ಯಾರಿಗೂ ಹಕ್ಕಿಲ್ಲ ಎಂಬುದಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ಸ್ವಪಕ್ಷೀಯ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ. ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನನಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ದೆಹಲಿಗೆ ಬರುವಂತೆ ತಿಳಿಸಿದ್ದಾರೆ. ಸದ್ಯಕ್ಕೆ ಸಂಸತ್ ಕಲಾಪ ನಡೆಯುತ್ತಿರುವುದರಿಂದ ಫೆಬ್ರವರಿ.5ರ ನಂತ್ರ ದೆಹಲಿಗೆ ತೆರಳಲಿದ್ದೇನೆ. ಅಲ್ಲಿ ರಾಷ್ಟ್ರದ ನಾಯಕರನ್ನು ಭೇಟಿಯಾಗುತ್ತೇನೆ ಎಂಬುದಾಗಿ ತಿಳಿಸಿದರು. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ. 2028ರಲ್ಲಿ ಎಲ್ಲರೂ ಒಟ್ಟಾಗಿ ಪಕ್ಷಕ್ಕಾಗಿ ದುಡಿದು ಪಕ್ಷ ಕಟ್ಟುವಂತ ಕೆಲಸ ಮಾಡಲಿದ್ದೇವೆ. ಕೆಲವೆಡೆ ಅಪಸ್ವರ ಎದ್ದಿದೆ. ಎಲ್ಲಾ ಪಕ್ಷದಲ್ಲೂ ಅಸಮಾಧಾನ ಸಾಮಾನ್ಯ. ಅದನ್ನೆಲ್ಲ ಬಿಜೆಪಿ ವರಿಷ್ಠರು ಸರಿ ಪಡಿಸಲಿದ್ದಾರೆ ಎಂಬುದಾಗಿ ಹೇಳಿದರು. https://kannadanewsnow.com/kannada/congress-mla-br-patil-resigns-as-cms-political-advisor/ https://kannadanewsnow.com/kannada/breaking-nirmala-sitharaman-announces-exemption-from-customs-duty-on-36-life-saving-drugs-including-cancer/

Read More

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಸಲಹೆಗಾರರಾಗಿ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರನ್ನು ನೇಮಿಸಲಾಗಿತ್ತು. ಈ ಹುದ್ದೆಗೆ ಇಂದು ಅವರು ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. https://kannadanewsnow.com/kannada/breaking-nirmala-sitharaman-announces-exemption-from-customs-duty-on-36-life-saving-drugs-including-cancer/ https://kannadanewsnow.com/kannada/breaking-govt-announces-special-announcement-for-automobile-sector-to-reduce-prices-of-electric-cars/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ.  ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಶಿರಾಳಕೊಪ್ಪ ರಸ್ತೆಯಲ್ಲಿ ಅಪರಿಚಿತವಾಹನವೊಂದು ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದರು. ಅಂದಹಾಗೇ ಉಳವಿ ಸಮೀಪದ ಶಿರಾಳಕೊಪ್ಪ ರಸ್ತೆಯಲ್ಲಿ ದಟ್ಟ ಕಾಡಿದೆ. ಒಂದು ಬದಿಯಿಂದ ಮತ್ತೊಂದು ಬದಿಗೆ ಜಿಂಕೆಯ ಹಿಂಡು ಇಂದು ಮುಂಜಾನೆ ಸಾಗುತ್ತಿದ್ದಂತ ವೇಳೆಯಲ್ಲಿ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಹಿಂಬದಿಯ ಕಾಲು ಮುರಿತಕ್ಕೊಳಗಾಗಿದ್ದಂತ ಜಿಂಕೆಯನ್ನು ದಾರಿ ಹೋಕರು ಸತ್ಕರಿಸಿ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಪಶುವೈದ್ಯರೊಂದಿಗೆ ಆಗಮಿಸುವ ವೇಳೆಗಾಗಲೇ ಗಂಭೀರವಾಗಿ ಗಾಯಗೊಂಡಿದ್ದಂತ ಜಿಂಕೆ ಸಾವನ್ನಪ್ಪಿತ್ತು. ಅದನ್ನು ಮರಣೋತ್ತರ ಪರೀಕ್ಷೆಗಾಗಿ ಸೊರಬಕ್ಕೆ ಕೊಂಡೊಯ್ಯಲಾಗಿದೆ ಎಂಬುದಾಗಿ ಉಳವಿಯ ಉಪ ವಲಯ ಅರಣ್ಯಾಧಿಕಾರಿ ಯೋಗೇಶ್ ಮಾಹಿತಿ ನೀಡಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/union-budget-2025-new-income-tax-slab-released-heres-all-you-need-to-know/ https://kannadanewsnow.com/kannada/breaking-nirmala-sitharaman-announces-exemption-from-customs-duty-on-36-life-saving-drugs-including-cancer/

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಐತಿಹಾಸಿಕ ಪ್ರಕಟಣೆಯಲ್ಲಿ, ಹಣಕಾಸು ಸಚಿವರು 12 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರಿಗೆ ಯಾವುದೇ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಘೋಷಿಸಿದರು. “ತೆರಿಗೆ ದರ ರಚನೆಗಳನ್ನು ಈ ಕೆಳಗಿನಂತೆ ಪರಿಷ್ಕರಿಸಲು ನಾನು ಪ್ರಸ್ತಾಪಿಸುತ್ತೇನೆ: 0 ರಿಂದ 4 ಲಕ್ಷ – ಶೂನ್ಯ, 4 ಲಕ್ಷದಿಂದ 8 ಲಕ್ಷ – 5%, 8 ಲಕ್ಷದಿಂದ 12 ಲಕ್ಷ – 10%, 12 ಲಕ್ಷದಿಂದ 16 ಲಕ್ಷ – 15%, 16 ಲಕ್ಷದಿಂದ 20 ಲಕ್ಷ – 20%, 20 ಲಕ್ಷದಿಂದ 24 ಲಕ್ಷ – 25% ಮತ್ತು 25% ಬಂಡವಾಳ ಲಾಭಗಳಂತಹ ವಿಶೇಷ ದರದ ಆದಾಯವನ್ನು ಹೊರತುಪಡಿಸಿ 12 ಲಕ್ಷ ರೂ.ವರೆಗಿನ ಸಾಮಾನ್ಯ ಆದಾಯದ ತೆರಿಗೆದಾರರಿಗೆ, ಸ್ಲ್ಯಾಬ್ ದರ ಕಡಿತದಿಂದ ಉಂಟಾಗುವ ಪ್ರಯೋಜನದ ಜೊತೆಗೆ ತೆರಿಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ತೆರಿಗೆ ಪಾವತಿದಾರರು ಎರಡು…

Read More

ಬೆಂಗಳೂರು: ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ: 3ನೇ ಡಿಸೆಂಬರ್ 1958ರಂತೆ ಸ್ಥಾಪಿತಗೊಂಡಿದ್ದು, ನಿಯಮಗಳು ಸರ್ಕಾರದ ಆದೇಶ ಸಂಖ್ಯೆ: ಎಫ್.ಡಿ. 35 ಬಿ.ಎಂ.ಎಸ್. 78 ದಿನಾಂಕ: 12ನೇ ಸೆಪ್ಟಂಬರ್ 1978 ರಂದು ರಚನೆಗೊಂಡಿರುತ್ತದೆ. ಮುಖ್ಯಮಂತ್ರಿಗಳಿಗೆ ಪ್ರದತ್ತವಾಗಿರುವ ವಿವೇಚನ ಅಧಿಕಾರದಂತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಲಾಗುತ್ತಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿಗಮ-ಮಂಡಳಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸುವ ದೇಣಿಗೆಯ ಮೊತ್ತವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಆದಾಯ ಮೂಲವಾಗಿದ್ದು, ಸರ್ಕಾರದ ವಾರ್ಷಿಕ ಆಯ-ವ್ಯಯದಲ್ಲಿ ಯಾವುದೇ ಅನುದಾನವು ನಿಗಧಿಯಾಗಿರುವುದಿಲ್ಲ…

Read More

ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವಂತ ಜನರ ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ನೀಡಲಾಗುತ್ತಿರುವಂತ ಸರ್ಕಾರದ ಹೆಲ್ತ್ ಕಾರ್ಡ್ ನಲ್ಲಿ ಆಯುಷ್ಮಾನ್ ಕಾರ್ಡ್ ಕೂಡ ಒಂದಾಗಿದೆ. ಈ ಕಾರ್ಡ್ ಪ್ರಯೋಜನವೇನು? ಯಾರು ಅರ್ಹರು? ಹೇಗೆ ಪಡೆಯೋದು ಎನ್ನುವ ಬಗ್ಗೆ ಮುಂದೆ ಓದಿ. ಭಾರತದ ಆರೋಗ್ಯ ಕ್ಷೇತ್ರವು ಚಿಕಿತ್ಸೆಗೆ ಯಾವುದೇ ಉಪಕರಣಗಳಿಲ್ಲದಿರುವಿಕೆಯಿಂದ ಹಿಡಿದು ನಮ್ಮ ಹೈಟೆಕ್ ಉಪಕರಣಗಳು ಮತ್ತು ಔಷಧಿಗಳನ್ನು ಅಭಿವೃದ್ಧಿಪಡಿಸುವವರೆಗೆ ಬಹಳ ದೂರಸಾಗಿದೆ. ಆದರೆ ಅಂತಹ ಅಭಿವೃದ್ಧಿಯೊಂದಿಗೆ, ಚಿಕಿತ್ಸಾ ವಿಧಾನಗಳ ವೆಚ್ಚವೂ ಬೆಳೆಯುತ್ತಿದೆ. ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಅಗತ್ಯವಿದ್ದಾಗ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗದಿರುವುದಕ್ಕೆ ಇದು ಒಂದು ಪ್ರಮುಖ ಕಾರಣವಾಗಿದೆ. ಅವರಿಗೆ ಅಗತ್ಯವಾದ ಚಿಕಿತ್ಸೆಯನ್ನು ಒದಗಿಸಲು ಸರ್ಕಾರಿ ಆಸ್ಪತ್ರೆಗಳು ಅಸ್ತಿತ್ವದಲ್ಲಿವೆ. ಆದರೆ ಅಸಮರ್ಪಕ ಸಿಬ್ಬಂದಿ, ಉಪಕರಣಗಳು ಮತ್ತು ಔಷಧಿಗಳಂತಹ ಕಾರ್ಯಾಚರಣೆಯ ಅಸಮರ್ಪಕ ಕಾರ್ಯಗಳು ಜನರ ಜೀವನವನ್ನು ನೇತಾಡುವಂತೆ ಮಾಡುತ್ತವೆ. ಅಂತಹ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರತಿಯೊಬ್ಬರೂ ಅಗತ್ಯವಿದ್ದಾಗ ಚಿಕಿತ್ಸೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರವು ಪ್ರಧಾನ ಮಂತ್ರಿ ಜನ ಆರೋಗ್ಯ…

Read More

ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಡಿಸೆಂಬರ್ ಅಧಿವೇಶನಕ್ಕಾಗಿ ಯುಜಿಸಿ ನೆಟ್ ಉತ್ತರ ಕೀ 2024 ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ugcnet.nta.ac.in ಅಧಿಕೃತ ವೆಬ್ಸೈಟ್ನಿಂದ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಬಹುದು. ಅಭ್ಯರ್ಥಿಗಳು ಪರಿಶೀಲಿಸಲು ರೆಕಾರ್ಡ್ ಮಾಡಿದ ಪ್ರತಿಕ್ರಿಯೆಗಳೊಂದಿಗೆ ಪ್ರಶ್ನೆ ಪತ್ರಿಕೆಯನ್ನು ಏಜೆನ್ಸಿ ಲಭ್ಯವಾಗುವಂತೆ ಮಾಡಿದೆ. ಈ ರೀತಿ ಕೀ ಉತ್ತರ ಡೌನ್ ಲೋಡ್ ಮಾಡಿಕೊಳ್ಳಿ -ಯುಜಿಸಿ ನೆಟ್ ಪರೀಕ್ಷೆ 2024 ಬರೆದಂತವರು ugcnet.nta.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. -ಈ ಮೇಲ್ಕಂಡ ವೆಬ್ ಸೈಟ್ ನಲ್ಲಿ ಯುಜಿಸಿ ನೆಟ್ ಸರಿ ಉತ್ತರ ಎನ್ನುವ ಸ್ಕ್ರೋಲ್ ಮೇಲೆ ಕ್ಲಿಕ್ ಮಾಡಿ. -ನಿಮ್ಮ ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಅನುಸಾರ ಯುಜಿಸಿ ನೆಟ್ ಪರೀಕ್ಷೆಯ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಳ್ಳಿ. https://kannadanewsnow.com/kannada/breaking-court-allows-darshan-to-stay-in-mysuru-till-feb-10/ https://kannadanewsnow.com/kannada/yellamma-devi-to-be-re-installed-at-sagar-on-feb-3-4-and-5-new-temple-to-be-inaugurated/

Read More

ಶಿವಮೊಗ್ಗ: ಸಾಗರದ ಸೊರಬ ರಸ್ತೆಯಲ್ಲಿರುವಂತ ಯಲ್ಲಮ್ಮ ದೇವಿಯ ಗುಡಿಯನ್ನು ಸುಮಾರು 2 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾಗಿದೆ. ಈ ಗುಡಿಯಲ್ಲಿ ಯಲ್ಲಮ್ಮ ದೇವಿ ಪುನರ್ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನ ಉದ್ಘಾಟನೆಯನ್ನು ಫೆಬ್ರವರಿ 3, 4 ಮತ್ತು 5ರಂದು ನಡೆಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದಂತ ಯಲ್ಲಮಮ ದೇವಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಸ್.ಬಿ ರಘುನಾಥ್ ಅವರು, ನೂರಾರು ವರ್ಷಗಳ ಹಳೆಯ ಯಲ್ಲಮ್ಮ ದೇವಿಯ ದೇವಸ್ಥಾನವನ್ನು ಪುನರ್ ನಿರ್ಮಾಣ ಕಾರ್ಯಕ್ಕೆ 2010ರ ಫೆಬ್ರವರಿಯಲ್ಲಿ ಟ್ರಸ್ಟ್ ಸ್ಥಾಪಿಸಿ ಶುರು ಮಾಡಲಾಗಿತ್ತು. ಕೋವಿಡ್ ವೇಳೆಯಲ್ಲಿ ಇದಕ್ಕೆ ಕೊಂಚ ಸಮಸ್ಯೆಯಾಗಿತ್ತು. ಆ ನಂತ್ರ ಮುಂದುವರೆಸಿ, ಈಗ ಸಂಪೂರ್ಣವಾಗಿ ಹೊಸ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದರು. ನಾವು ಆರಂಭದಲ್ಲಿ ಯಲ್ಲಮ್ಮ ದೇವಿ ದೇವಸ್ಥಾನ, ದೇವಿಯ ಪುನರ್ ಪ್ರತಿಷ್ಠಾಪನೆಗೆ 1.50 ಕೋಟಿ ಖರ್ಚು ಆಗಬಹುದು ಎಂಬ ನಿರೀಕ್ಷೆ ಮಾಡಲಾಗಿತ್ತು. ಆದರೇ ಅದು ಅಂತಿಮ ಮುಕ್ತಾಯದ ವೇಳೆಯಲ್ಲಿ 2.50 ಕೋಟಿ…

Read More

ಚಿತ್ರದುರ್ಗ: ಕಳೆದ ಡಿ.14 ರಂದು ಜರುಗಿದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 11 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು. ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟಿçಯ ಲೋಕ ಅದಾಲತ್ ಆಯೋಜನೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಇದುವರೆಗೂ ಬಾಕಿ ಇದ್ದ 98,452 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೆ ಮಾಡಲಾಗಿದೆ. ಜಿಲ್ಲೆಯಾದ್ಯಂತ 44,632 ಪ್ರಕರಣಗಳು ಬಾಕಿಯಿವೆ. ಮುಂಬರುವ ಮಾರ್ಚ್ 8 ರಂದು ರಾಷ್ಟಿçಯ ಲೋಕ ಅದಲಾತ್ ಜರುಗಲಿದ್ದು, ಈಗಾಗಲೇ 3707 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಗುರುತಿಸಲಾಗಿದೆ. 15 ಪ್ರಕರಣಗಳಲ್ಲಿ ಪಕ್ಷಗಾರರ ಮನ ಒಲಿಸಿ ರಾಜಿ ಸಂಧಾನಕ್ಕೆ ಒಪ್ಪಿಸಲಾಗಿದೆ. ಕಳೆದ ಅದಾಲತ್‌ಗಿಂತಲೂ ಹೆಚ್ಚಿನ ಪ್ರಕರಣಗಳನ್ನು ಈ…

Read More