Subscribe to Updates
Get the latest creative news from FooBar about art, design and business.
Author: ವಸಂತ್ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಡೆಯನ್ನು ಖಂಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂಬುದಾಗಿ ಗುಡುಗಿದ್ದಾರೆ. https://twitter.com/BasanagoudaBJP/status/1908065933517541854 ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ. ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ…
ಅಲಹಾಬಾದ್: 2022 ರ ಭಾರತ್ ಜೋಡೋ ಯಾತ್ರಾ ರ್ಯಾಲಿಯಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 397 (ಕೆಳ ನ್ಯಾಯಾಲಯದ ಪರಿಶೀಲನಾ ದಾಖಲೆಗಳು) ಅಡಿಯಲ್ಲಿ ಮನವಿಯೊಂದಿಗೆ ಸೆಷನ್ಸ್ ನ್ಯಾಯಾಧೀಶರನ್ನು ಸಂಪರ್ಕಿಸುವ ಆಯ್ಕೆಯನ್ನು ಗಾಂಧಿ ಹೊಂದಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಗಾಂಧಿ ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದರು. ರಾಹುಲ್ ಗಾಂಧಿ ಪರವಾಗಿ ವಕೀಲರಾದ ಪ್ರಾಂಶು ಅಗರ್ವಾಲ್, ಮೊಹಮ್ಮದ್ ಸಮರ್ ಅನ್ಸಾರಿ ಮತ್ತು ಮೊಹಮ್ಮದ್ ಯಾಸಿರ್ ಅಬ್ಬಾಸಿ ವಾದ ಮಂಡಿಸಿದರು. ಕಳೆದ ವರ್ಷ ಡಿಸೆಂಬರ್ನಲ್ಲಿ ಲಕ್ನೋ ಸೆಷನ್ಸ್ ನ್ಯಾಯಾಲಯವು ಸಮನ್ಸ್ ಆದೇಶವನ್ನು ಹೊರಡಿಸಿತ್ತು. ಆದೇಶದಲ್ಲಿ, ಸಾವರ್ಕರ್ ಪಿಂಚಣಿ ಪಡೆಯುತ್ತಿದ್ದ ಬ್ರಿಟಿಷ್ ಸೇವಕ ಎಂದು ಗಾಂಧಿ ಹೇಳಿದ್ದರು ಎಂದು ವಿಚಾರಣಾ ನ್ಯಾಯಾಲಯ ಗಮನಿಸಿದೆ. ಈ ಹೇಳಿಕೆಗಳು ಸಮಾಜದಲ್ಲಿ ದ್ವೇಷ ಮತ್ತು ಕೆಟ್ಟ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಭೂಮಿಯನ್ನು ಕಬಳಿಸಿದಂತ ಕೇಸ್ ಕೇಳಿದ್ದೀರಿ. ಆದರೇ ಇದಕ್ಕಿಂತ ಬೇರೆಯದ್ದೇ ಎನ್ನುವಂತೆ ರಾಜ್ಯಪಾಲರ ಹೆಸರಿನಲ್ಲಿದ್ದಂತ ಐದೂವರೆ ಎಕರೆಯನ್ನೇ ಭೂಗಳ್ಳರು ತಮ್ಮ ಪಾಲು ಮಾಡಿಕೊಂಡಿರುವಂತ ಬಹುದೊಡ್ಡ ಹಗರಣ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಮಲ್ಲಮ್ಮನ ಬೆಳವಡಿಯ ಸರ್ವೆ ನಂಬರ್ 221/1 ನಲ್ಲಿ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನಲ್ಲಿ 6 ಎಕರೆಯನ್ನು 2002ರಲ್ಲಿ ಖರೀದಿಸಿ, ರಾಜ್ಯಪಾಲರ ಹೆಸರಿಗೆ ನೋಂದಣಿ ಮಾಡಲಾಗಿತ್ತು. ಈ ಜಮೀನನ್ನು ಬಡವರಿಗೆ ಹಂಚುವ ಉದ್ದೇಶವನ್ನು ಹೊಂದಲಾಗಿತ್ತು. ಆದರೇ ಈ ಜಮೀನನ್ನು ಕೆಲ ವರ್ಷಗಳ ಹಿಂದೆ ಪಹಣಿ ಪತ್ರ ಸರಿಪಡಿಯೋ ನೆಪದಲ್ಲಿ ಭೂಗಳ್ಳರು ಗೋಲ್ಮಾಲ್ ನಡೆಸಿದ್ದಾರೆ. ಯಾವುದೇ ಅನುಮತಿ ಇಲ್ಲದೇ ಖಾಸಗಿ ವ್ಯಕ್ತಿಗಳ ಹೆಸರನ್ನು ರಾಜ್ಯಪಾಲರ ಹೆಸರಿನಲ್ಲಿದ್ದಂತ ಜಮೀನಿಗೆ ಸೇರ್ಪಡೆ ಮಾಡಲಾಗಿದೆ ಅಂತ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಆರೋಪಿಸಿದ್ದಾರೆ. ರಾಜ್ಯಪಾಲರ ಹೆಸರಿನಲ್ಲಿದ್ದಂತ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲಾಗಿದೆ. ಇದರಲ್ಲಿ ಈ ಹಿಂದಿನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಎಸ್ಪಿ ಪ್ರಭಾವತಿ ಶಾಮೀಲಾಗಿಯೇ…
ಬೆಂಗಳೂರು : ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯುವುದಾಗಿ ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರು ಆರೋಪದ ಕುರಿತು ಮಾಧ್ಯಮದವರಿಗೆ ಸಚಿವರು ಪ್ರತಿಕ್ರಿಯಿಸಿದರು. ಎಸ್ಪಿ ಹಾಗೂ ಐಜಿಪಿಯವರೊಂದಿಗೆ ಮಾತನಾಡುತ್ತೇನೆ. ಅಂತಹ ಘಟನೆ ಏನಾದರು ನಡೆದಿದ್ದರೆ, ಯಾಕೆ ನಡೆದಿದೆ, ಯಾವ ಕಾರಣಕ್ಕೆ ಆಗಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಂದು ವಿಚಾರಿಸಿ, ಮುಂದಿನ ಕ್ರಮ ತೆಗದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ವಕ್ಫ್ ಮಸೂದೆ ರಾಜಕೀಯ ಕಾರಣಕ್ಕಾಗಿ ಮಾಡಿಕೊಳ್ಳಲಾಗಿದೆ ವಿನಃ ಜನರ ಹಿತಾಸಕ್ತಿಗಾಗಿ ತಂದಿಲ್ಲ ಎಂದು ಪುನರುಚ್ಛಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಡಿರುವ ನಿರಾಧಾರ ಆರೋಪಕ್ಕೆ ಸದನದಲ್ಲಿ ಅವರೇ ಸೂಕ್ತ ಉತ್ತರ ನೀಡಿದ್ದಾರೆ. ಯಾವುದಾದರು ಆಸ್ತಿ ಕಬಳಿಕೆ…
ಚಾಮರಾಜನಗರ: ಕೆಲಸಕ್ಕೆ ಹೋಗಬೇಡ ಎಂಬುದಾಗಿ ಹೇಳಿದಂತ ಪತಿಯ ಮಾತಿನಿಂದ ಮನನೊಂದು ಪತ್ನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಕುಂತೂರಿನಲ್ಲಿ ನಡೆದಿದೆ. ಚಾಮರಾಜನಗರದ ಕುಂತೂರಿನಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಬೇಡ ಎಂಬುದಾಗಿ ಪತ್ನಿ ಸುಧಾಗೆ ಪತಿ ತಿಳಿಸಿದ್ದಾರೆ. ಇದೇ ವಿಚಾರವಾಗಿ ಗಂಡ ಹೆಂಡತಿ ಮಧ್ಯೆ ಜಗಳವಾಗಿದೆ. ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ಪತ್ನಿ ಸುಧಾ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/big-news-lorry-owners-protest-against-diesel-hike-strike-date-likely-to-be-announced-tomorrow/ https://kannadanewsnow.com/kannada/money-problem-solve-astrology/
ನಮಸ್ಕಾರ ಸ್ನೇಹಿತರೆ ಸಾಮುದ್ರಿಕಾಶಾಸ್ತ್ರ ಒಂದು ಯಾವ ರೀತಿಯ ವಿಜ್ಞಾನವಾಗಿದೆ ಎಂದರೆ ಇಲ್ಲಿ ಹಸ್ತ ರೇಖೆಗಳ ಮೂಲಕ ತಮ್ಮ ಭವಿಷ್ಯವನ್ನು ನೋಡಬಹುದಾಗಿದೆ ಭವಿಷ್ಯದಲ್ಲಿ ಯಾವ ಎಲ್ಲಾ ಕೆಟ್ಟ ಘಟನೆಗಳು ಮತ್ತು ಒಳ್ಳೆಯ ಘಟನೆಗಳು ನಡೆಯಲಿವೆ ಎಂದು ನಾವು ಇಲ್ಲಿ ತಿಳಿಯಬಹುದು ಇಲ್ಲಿ ಅಂಗೈನ ಆಕಾರ ಬೆರಳುಗಳ ಎತ್ತರವನ್ನು ನೋಡಿ ಮನುಷ್ಯನ ಜೀವನದ ಕೆಲವು ವಿಶೇಷವಾದ ಗುಣಗಳನ್ನು ತಿಳಿಯಬಹುದಾಗಿದೆ ಇಲ್ಲಿ ನಿಮ್ಮ ಅಂಗೈಯ ನ ಹೆಬ್ಬೆರಳು ಕೇವಲ ನಿಮ್ಮ ವ್ಯಕ್ತಿತ್ವದ ಕನ್ನಡಿ ಆಗಿರದೆ ಇದರ ಒಳಗಡೆ ನಿಮ್ಮ ಜೀವನ ಸಂಗಾತಿಯ ಹೆಸರು ಕೂಡ ಅಡಗಿರುತ್ತದೆ ಹೆಬ್ಬರಳಿನ ಯಾವ ಭಾಗದಲ್ಲಿ ನಿಮ್ಮ ಪಾರ್ಟ್ನರ್ ಹೆಸರು ಅಡಗಿರುತ್ತದೆ ಮತ್ತು ಬೆರಳಿನಲ್ಲಿರುವ ರೇಖೆಗಳ ಮೂಲಕ ಯಾವ ವಯಸ್ಸಿನಲ್ಲಿ ನಿಮ್ಮ ಮದುವೆ ಆಗುತ್ತದೆ ಎಂದು ಕೂಡ ತಿಳಿಯಬಹುದಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು…
ನವದೆಹಲಿ: ಸಣ್ಣ ಉಳಿತಾಯ ಯೋಜನೆಯ ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಖಾತೆಗಳಿಗೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಪಿಪಿಎಫ್ ಖಾತೆಗಳ ನಾಮಿನಿಯನ್ನು ನವೀಕರಿಸಲು ಅಥವಾ ಬದಲಾಯಿಸಲು ಇನ್ನು ಮುಂದೆ ಯಾವುದೇ ಶುಲ್ಕವಿರುವುದಿಲ್ಲ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಪಿಪಿಎಫ್ ಖಾತೆಗಳ ಸಂದರ್ಭದಲ್ಲಿ ನಾಮಿನಿ ವಿವರಗಳನ್ನು ಬದಲಾಯಿಸಲು ಅನೇಕ ಹಣಕಾಸು ಸಂಸ್ಥೆಗಳು ಶುಲ್ಕ ವಿಧಿಸುತ್ತಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅಂತಹ ಆರೋಪಗಳನ್ನು ತೆಗೆದುಹಾಕಲು ನಾವು ಜಿಒ ತಂದಿದ್ದೇವೆ ಎಂದಿದ್ದಾರೆ. ಇತ್ತೀಚೆಗೆ, ಸರ್ಕಾರಿ ಉಳಿತಾಯ ಉತ್ತೇಜನ ಸಾಮಾನ್ಯ ನಿಯಮಗಳು, 2018 ರಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಲಾಗಿದೆ. ಪಿಪಿಎಫ್ ಖಾತೆಗಳಿಗೆ ನಾಮಿನಿಗಳ ನವೀಕರಣದ ಮೇಲಿನ ಯಾವುದೇ ಶುಲ್ಕಗಳನ್ನು ತೆಗೆದುಹಾಕಲು ಗೆಜೆಟ್ ಅಧಿಸೂಚನೆಯ ಮೂಲಕ ಸರ್ಕಾರಿ ಉಳಿತಾಯ ಉತ್ತೇಜನ ಸಾಮಾನ್ಯ ನಿಯಮಗಳು, 2018 ರಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಲಾಗಿದೆ. ಇತ್ತೀಚೆಗೆ ಅಂಗೀಕರಿಸಲಾದ ಬ್ಯಾಂಕಿಂಗ್ ತಿದ್ದುಪಡಿ ಮಸೂದೆ, 2025 ರ ಪ್ರಕಾರ, ನಾಲ್ಕು ನಾಮನಿರ್ದೇಶಿತರನ್ನು ನೀಡಲು ಅವಕಾಶವಿದೆ ಎಂದು…
ಗದಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೊಳಿಸಲಾಗಿದೆ. ಸಾಲ ಮರು ಪಾವತಿಗಾಗಿ ಕಿರುಕುಳ ನೀಡುವವರ ವಿರುದ್ಧ ಈ ಕಾನೂನಿನಡಿ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಆದರೇ ಇಂತಹ ಮಸೂದೆ ಜಾರಿಗೆ ತಂದರೂ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಲ್ಲ. ಗದಗದಲ್ಲಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿಯ ನರಸಾಪುರದ ಆಶ್ರಯ ಕಾಲೋನಿಯ ನಿವಾಸಿ ಉಮೇಶ್ ಕಟವಾ(40) ಎಂಬುವರೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಉಮೇಶ್ ಅವರು ಬಿಎಸ್ಎಸ್ ಫೈನಾನ್ಸ್, ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಸೇರಿದಂತೆ ಇತರೆ ಫೈನಾನ್ಸ್ ಕಂಪನಿಗಳಿಂದ ಒಂದೂವರೆ ಲಕ್ಷದಷ್ಟು ಸಾಲ ಮಾಡಿದ್ದರು. ಸಾಲ ಮರುಪಾವತಿಸುವಂತೆ ನಿರಂತವಾಗಿ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿದ್ದವು. ಇಂದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಮ್ಮ ಮನೆಯಲ್ಲೇ ಉಮೇಶ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/chargesheet-framed-in-one-case-against-former-mp-prajwal-revanna/ https://kannadanewsnow.com/kannada/no-fee-for-nominee-renewal-of-ppf-accounts-finance-ministry/
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಒಂದು ಪ್ರಕರಣದಲ್ಲಿ ದೋಷಾರೋಪವನ್ನು ಕೋರ್ಟ್ ನಿಗದಿ ಪಡಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ, ಅಶ್ಲೀಲ ದೃಶ್ಯ ಸೆರೆ ಸಂಬಂಧದ ಪ್ರಕರಣದ ವಿಚಾರಣೆ ನಡೆಯಿತು. ಪ್ರಜ್ವಲ್ ರೇವಣ್ಣ ಮೇಲಿನ 8 ಆರೋಪಗಳ ಬಗ್ಗೆ ನ್ಯಾಯಾಧೀಶರು ಪ್ರಶ್ನಿಸಿದರು. ಎರಡೂ ದೋಷಾರೋಪಣೆ ಒಪ್ಪಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರಾಕರಿಸಿದರು. ಅತ್ಯಾಚಾರ, ಅಶ್ಲೀಲ ದೃಶ್ಯ ಸೆರೆಗೆ ಸಂಬಂಧಿಸಿದಂತ ದೋಷಾರೋಪಗಳು. ನಾನು ಯಾವುದೇ ತಪ್ಪಿ ಮಾಡಿಲ್ಲವೆಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಾರೋಪಗಳನ್ನು ನಿರಾಕರಿಸಿದರು. ಆದರೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ 2/2024ರ ಪ್ರಕರಣದಲ್ಲಿ ದೋಷಾರೋಪವನ್ನು ನಿಗದಿ ಪಡಿಸಿತು. ಆ ಬಳಿಕ ಏಪ್ರಿಲ್ 9ಕ್ಕೆ ಕೇಸ್ ಟ್ರಯಲ್ ಗೆ ದಿನಾಂಕ ನಿಗದಿಯನ್ನು ಕೋರ್ಟ್ ಮಾಡಿದೆ. https://kannadanewsnow.com/kannada/no-fee-for-nominee-renewal-of-ppf-accounts-finance-ministry/ https://kannadanewsnow.com/kannada/two-jdu-leaders-resign-for-supporting-waqf-bill/
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು. ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ…












