Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯಾಧ್ಯಂತ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಸ್ತಿ ನೋಂದಣಿಗೆ ಸರ್ವರ್ ಸಮಸ್ಯೆ ಉಂಟಾಗಿ ತೊಂದರೆಯಾಗಿತ್ತು. ಇದೀಗ ಸರ್ವರ್ ಸಮಸ್ಯೆ ಪರಿಹರಿಸಲಾಗಿದ್ದು, ಆಸ್ತಿ ನೋಂದಣಿಯನ್ನು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಪುನರಾರಂಭಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(B) ತಿದ್ದುಪಡಿ ವಿರೋದಿಸಿ ಉಪನೋಂದಣಾಧಿಕಾರಿಗಳು ನೋಂದಣಿ ಸ್ಥಗಿತ ಗೊಳಿಸಿರುವುದಾಗಿ ಸೋಷಿಯಲ್ ದಿನಾಂಕ: 21/10/2024 ರಂದು ಮೀಡಿಯ ಮತ್ತು ಮಾಧ್ಯಮಗಳಲ್ಲಿ ವರದಿಯಾಗಿದೆ. ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(B) ತಿದ್ದುಪಡಿ ವಿರೋಧಿಸಿ ಐದಾರು ನೋಂದಣಿಯನ್ನು ಕೆಲಕಾಲ ಉಪನೋಂದಣಾಧಿಕಾರಿಗಳು ಕಂಡುಬಂದಿರುತ್ತದೆ. ಆದರೆ ನಂತರ ಉಪನೋಂದಣಾಧಿಕಾರಿಗಳೊಂದಿಗೆ ಚರ್ಚಿಸಿ ನೋಂದಣಿ ಕಾರ್ಯ ಎಂದಿನಂತೆಯೇ ಮುಂದುವರೆಸಲು ಕ್ರಮವಹಿಸಲಾಗಿದೆ. ಪುಸ್ತುತ ಯಾವುದೇ ಸಮಸ್ಯೆ ಇರುವುದಿಲ್ಲ, ಯಾರೇ ನೋಂದಣಿ ಮಾಡಿಸಿಕೊಳ್ಳಬೇಕಾದವರು ನೋಂದಣಿ ಮಾಡಿಸಬಹುದಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/three-bangladeshi-nationals-arrested-for-illegally-staying-in-hassan/ https://kannadanewsnow.com/kannada/delhi-hyderabad-crpf-schools-receive-bomb-threats/
ಹಾಸನ: ಬೆಂಗಳೂರು, ಶಿವಮೊಗ್ಗದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮುಂದುವರೆದು ಹಾಸನದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಮೂವರು ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಗದ್ದೆಹಳ್ಳದಲ್ಲಿ ಪಶ್ಚಿಮ ಬಂಗಾಳದ ವಿಳಾಸವನ್ನು ಹೊಂದಿದ್ದಂತ ಆಧಾರ್ ಕಾರ್ಡ್ ನೋಂದಿಗೆ ಮೂವರು ಬಾಂಗ್ಲಾ ಪ್ರಜೆಗಳು ವಾಸವಾಗಿದ್ದರು. ಈ ಮಾಹಿತಿ ತಿಳಿದಂತ ಪೊಲೀಸರು ಮನೆ ನಿರ್ಮಾಣ ಕೆಲಸದಲ್ಲಿ ತೊಡಗುದ್ದಂತ ಫಾರೂಕ್ ಆಲಿ, ಅಕ್ಮಲ್ ಹೊಕ್ಕು, ಜಮಾಲ್ ಆಲಿ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತ ಬಾಗ್ಲಾ ಪ್ರಜೆಗಳು ಅಕ್ರಮವಾಗಿ ಜುಬೇರ್ ಎಂಬುವರ ಮನೆಯಲ್ಲಿ ವಾಸವಾಗಿದ್ದರು. ಅವರ ಬಳಿಯಲ್ಲಿ ಪಶ್ಚಿಮ ಬಂಗಾಳದ ವಿಳಾಸವಿರುವಂತ ಆಧಾರ್ ಕಾರ್ಡ್ ಪತ್ತೆಯಾಗಿದೆ. ಈ ಸಂಬಂಧ ಮೂವರು ಅಕ್ರಮ ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/delhi-hyderabad-crpf-schools-receive-bomb-threats/ https://kannadanewsnow.com/kannada/shocking-young-man-died-tragically-after-falling-from-the-3rd-floor-to-escape-from-the-dog-video-viral/
ನವದೆಹಲಿ: ಸಾಫ್ಟ್ ಟಿ ಐಸ್ ಕ್ರೀಮ್ ಅನ್ನು ಹಾಲಿನ ಉತ್ಪನ್ನ ಎಂದು ವರ್ಗೀಕರಿಸಲು ಜಿಎಸ್ ಟಿ ಪ್ರಾಧಿಕಾರ ನಿರಾಕರಿಸಿದೆ. ಅದರ ಮುಖ್ಯ ಘಟಕಾಂಶ ಸಕ್ಕರೆ, ಹಾಲು ಅಲ್ಲ ಎಂದು ಪ್ರಾಧಿಕಾರ ಹೇಳಿದೆ. ಜಿಎಸ್ಟಿ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ (ಎಎಆರ್) ನ ರಾಜಸ್ಥಾನ ಪೀಠವು ಮೃದುವಾದ ಐಸ್ ಕ್ರೀಮ್ ಅನ್ನು ಹಾಲಿನ ಉತ್ಪನ್ನವೆಂದು ಪರಿಗಣಿಸಲು ನಿರಾಕರಿಸಿತು ಮತ್ತು ಅದರ ಮುಖ್ಯ ಘಟಕಾಂಶ ಹಾಲು ಅಲ್ಲ, ಆದರೆ ಸಕ್ಕರೆ ಎಂದು ಹೇಳಿದೆ. ಆದ್ದರಿಂದ, ಹಾಲಿನ ಉತ್ಪನ್ನಗಳ ಮೇಲೆ ವಿಧಿಸುವ ಶೇಕಡಾ 5 ರಷ್ಟು ಜಿಎಸ್ಟಿ ವ್ಯಾಪ್ತಿಗೆ ಮೃದುತ್ವವನ್ನು ತರಲು ಸಾಧ್ಯವಿಲ್ಲ. ಆದ್ದರಿಂದ, ಅದರ ಮೇಲೆ ಶೇಕಡಾ 18 ರಷ್ಟು ಜಿಎಸ್ಟಿ ಪಾವತಿಸಬೇಕಾಗುತ್ತದೆ. ವಿಆರ್ಬಿ ಕನ್ಸ್ಯೂಮರ್ ಪ್ರಾಡಕ್ಟ್ಸ್ ಎಂಬ ಕಂಪನಿಯು ತನ್ನ ಉತ್ಪನ್ನ ವೆನಿಲ್ಲಾ ಮಿಕ್ಸ್ ಅನ್ನು ಶೇಕಡಾ 5 ರಷ್ಟು ಜಿಎಸ್ಟಿ ಹೊಂದಿರುವ ಉತ್ಪನ್ನಗಳ ವಿಭಾಗದಲ್ಲಿ ಸೇರಿಸಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಈ ಉತ್ಪನ್ನವನ್ನು ನೈಸರ್ಗಿಕ ಹಾಲಿನ ಘಟಕಗಳಿಂದ ತಯಾರಿಸಲಾಗುತ್ತದೆ ಮತ್ತು ಅದರ ಮೇಲೆ…
ತಮಿಳುನಾಡು: ಸನಾತನ ಧರ್ಮದ ನಿರ್ಮೂಲನೆಯನ್ನು ಪ್ರತಿಪಾದಿಸುವ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮೆಯಾಚಿಸುವುದಿಲ್ಲ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ, ಇದು ಸೆಪ್ಟೆಂಬರ್ 2023 ರಲ್ಲಿ ಭುಗಿಲೆದ್ದ ವಿವಾದಕ್ಕೆ ಕಾರಣವಾಯಿತು ಎಂದು ಹೇಳಿದರು. ಸೋಮವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉದಯನಿಧಿ, ದ್ರಾವಿಡ ನಾಯಕರಾದ ಪೆರಿಯಾರ್, ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರ ಅಭಿಪ್ರಾಯಗಳನ್ನು ಪ್ರತಿಧ್ವನಿಸುತ್ತೇನೆ ಎಂದು ಹೇಳಿದರು. “ಮಹಿಳೆಯರಿಗೆ ಅಧ್ಯಯನ ಮಾಡಲು ಅವಕಾಶವಿರಲಿಲ್ಲ. ಅವರು ತಮ್ಮ ಮನೆಗಳನ್ನು ಬಿಡಲು ಸಾಧ್ಯವಾಗಲಿಲ್ಲ, ಮತ್ತು ಅವರ ಗಂಡಂದಿರು ಸತ್ತರೆ, ಅವರು ಸಹ ಸಾಯಬೇಕಾಗುತ್ತದೆ. ತಂಥೈ ಪೆರಿಯಾರ್ ಈ ಎಲ್ಲದರ ವಿರುದ್ಧ ಮಾತನಾಡಿದರು. ಪೆರಿಯಾರ್, ಅಣ್ಣಾ ಮತ್ತು ಕಲೈನಾರ್ ಹೇಳಿದ್ದನ್ನು ನಾನು ಪ್ರತಿಧ್ವನಿಸಿದೆ” ಎಂದು ಉದಯನಿಧಿ ಹೇಳಿದರು. ಸೆಪ್ಟೆಂಬರ್ 2023 ರಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಅವರು ಸನಾತನ ಧರ್ಮವನ್ನು “ಡೆಂಗ್ಯೂ” ಮತ್ತು “ಮಲೇರಿಯಾ” ಗೆ ಹೋಲಿಸಿದ…
ಬೀಜಿಂಗ್: ಪೂರ್ವ ಲಡಾಖ್ನಲ್ಲಿ ಉಭಯ ಸೇನೆಗಳ ನಡುವಿನ ಬಿಕ್ಕಟ್ಟನ್ನು ಕೊನೆಗೊಳಿಸಲು ಭಾರತದೊಂದಿಗೆ ಒಪ್ಪಂದಕ್ಕೆ ಬಂದಿರುವುದಾಗಿ ಚೀನಾ ಮಂಗಳವಾರ ದೃಢಪಡಿಸಿದೆ. “ಇತ್ತೀಚಿನ ಅವಧಿಯಲ್ಲಿ, ಚೀನಾ-ಭಾರತ ಗಡಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚೀನಾ ಮತ್ತು ಭಾರತ ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ನಿಕಟ ಸಂವಹನ ನಡೆಸುತ್ತಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. “ಈಗ ಚೀನಾ ಹೆಚ್ಚು ಮಾತನಾಡುವ ಸಂಬಂಧಿತ ವಿಷಯಗಳ ಬಗ್ಗೆ ಎರಡೂ ಕಡೆಯವರು ನಿರ್ಣಯವನ್ನು ತಲುಪಿದ್ದಾರೆ” ಎಂದು ಅವರು ಹೇಳಿದರು. ಈ ನಿರ್ಣಯಗಳನ್ನು ಜಾರಿಗೆ ತರಲು ಚೀನಾ ಭಾರತದೊಂದಿಗೆ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು. ಆದಾಗ್ಯೂ, ಅವರು ವಿವರಗಳನ್ನು ನೀಡಲು ನಿರಾಕರಿಸಿದರು. ರಷ್ಯಾದ ಕಜಾನ್ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವಿನ ದ್ವಿಪಕ್ಷೀಯ ಸಭೆಯ ಬಗ್ಗೆ ಮಾತನಾಡಿದ ಅವರು, “ಏನಾದರೂ ಬಂದರೆ ನಾವು ನಿಮಗೆ ಮಾಹಿತಿ ನೀಡುತ್ತೇವೆ” ಎಂದು ಹೇಳಿದರು. ನವದೆಹಲಿ: ಪೂರ್ವ ಲಡಾಖ್ನ…
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದು ಸಿಎಂ ಹಾಗೂ ಮಾಜಿ ಸಂಸದ ಸುರೇಶ್ ಅವರು ಹೇಳಿರುವ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದರು ಎಂದರು. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ.…
ಬೆಂಗಳೂರು: “ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ. ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ನೀಡಲಿದೆ” ಎಂದು ತಿಳಿಸಿದರು. “ನಾನು ಕೂಡ ಸೋಮವಾರ ಸಂಜೆ ಮಳೆಯಲ್ಲಿ ಸಿಲುಕಿದ್ದೆ. ಚಳ್ಳಕೆರೆಯಿಂದ ಬರುವಾಗ ನೆಲಮಂಗಲದ ಬಳಿ ಸೇತುವೆ ಮೇಲೆ 2 ಅಡಿ ನೀರಿತ್ತು. ನಮ್ಮ ಅಧಿಕಾರಿಗಳು…
ನವದೆಹಲಿ: ಪೂರ್ವ ಲಡಾಖ್ನಲ್ಲಿ ಉಭಯ ಸೇನೆಗಳ ನಡುವಿನ ಬಿಕ್ಕಟ್ಟನ್ನು ಕೊನೆಗೊಳಿಸಲು ಭಾರತದೊಂದಿಗೆ ಒಪ್ಪಂದಕ್ಕೆ ಬಂದಿರುವುದಾಗಿ ಚೀನಾ ಮಂಗಳವಾರ ದೃಢಪಡಿಸಿದೆ. “ಇತ್ತೀಚಿನ ಅವಧಿಯಲ್ಲಿ, ಚೀನಾ-ಭಾರತ ಗಡಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚೀನಾ ಮತ್ತು ಭಾರತ ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ನಿಕಟ ಸಂವಹನ ನಡೆಸುತ್ತಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ಆದಾಗ್ಯೂ, ಅವರು ವಿವರಗಳನ್ನು ನೀಡಲು ನಿರಾಕರಿಸಿದರು. ರಷ್ಯಾದ ಕಜಾನ್ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವಿನ ದ್ವಿಪಕ್ಷೀಯ ಸಭೆಯ ಬಗ್ಗೆ ಮಾತನಾಡಿದ ಅವರು, “ಏನಾದರೂ ಬಂದರೆ ನಾವು ನಿಮಗೆ ಮಾಹಿತಿ ನೀಡುತ್ತೇವೆ” ಎಂದು ಹೇಳಿದರು. ನವದೆಹಲಿ: ಪೂರ್ವ ಲಡಾಖ್ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಗಸ್ತು ತಿರುಗುವ ಬಗ್ಗೆ ಚೀನಾದೊಂದಿಗೆ ಒಪ್ಪಂದಕ್ಕೆ ಬಂದಿರುವುದಾಗಿ ಭಾರತ ಸೋಮವಾರ ಘೋಷಿಸಿದೆ, ಇದು ಉಭಯ ಸೇನೆಗಳ ನಡುವಿನ ನಾಲ್ಕು ವರ್ಷಗಳ ಮಿಲಿಟರಿ ನಿಲುವನ್ನು ಕೊನೆಗೊಳಿಸುವಲ್ಲಿ ಪ್ರಮುಖ…
ಬೆಂಗಳೂರು: ಕರ್ನಾಟಕದ ತಲಾವಾರು ಜಿಎಸ್ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ 2023-24ರ ಹಣಕಾಸು ವರ್ಷದಲ್ಲಿ ನಮ್ಮ ರಾಜ್ಯದ ಆರ್ಥಿಕತೆಯು ಶೇ. 10.2 ರಷ್ಟು ಬೆಳವಣಿಗೆ ಸಾಧಿಸಿ ರಾಷ್ಟ್ರೀಯ ಸರಾಸರಿಯ ಶೇ. 8.2 ಪ್ರಮಾಣವನ್ನು ಮೀರಿಸಿದೆ ಎಂದಿದ್ದಾರೆ. ರಾಜ್ಯದ ಪ್ರಬಲ ಆರ್ಥಿಕ ಕಾರ್ಯಕ್ಷಮತೆಯ ಸೂಚ್ಯಂಕವನ್ನು ಮೊದಲಿದ್ದ ಶೇ. 4ರಿಂದ ಶೇ. 13.1ಗೆ ಪರಿಷ್ಕರಿಸಲಾಗಿದೆ. ಇದು ರಚನಾತ್ಮಕ ಆಡಳಿತ ಮತ್ತು ವೈವಿಧ್ಯಮಯ ಬೆಳವಣಿಗೆಗೆ ಮುಖ್ಯ ಕಾರಣವಾಗಿದೆ. ಕರ್ನಾಟಕವು ಜಿಎಸ್ಟಿ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ ಶೇ. 10 ಏರಿಕೆ ಕಂಡಿದೆ ಮತ್ತು ಸ್ಟಾಂಪ್ ಡ್ಯೂಟಿ ಆದಾಯದಲ್ಲಿ ಶೇ. 24ರಷ್ಟು ಹೆಚ್ಚಳ ದಾಖಲಿಸಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಅಂಕಿಅಂಶಗಳ ಅಂದಾಜು (NSE) ಪ್ರಕಾರ 2024-25 ಸಾಲಿನಲ್ಲಿ ಜಿಎಸ್ಡಿಪಿ (GSDP)ಬೆಳವಣಿಗೆ ಶೇ. 9.4 ತಲುಪುವ ನಿರೀಕ್ಷೆ ಇದೆ. ಆದರೆ ಹಣಕಾಸು ಸಚಿವಾಲಯದ…
ಬೆಂಗಳೂರು: ಪಾರದರ್ಶಕ ನೇಮಕಾತಿಯ ಮೂಲಕ ನಮ್ಮ ಸರ್ಕಾರ ಅರ್ಹ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಹಿಂದೆ ನಾನು ಹಗರಣವನ್ನು ಬಯಲಿಗೆಳೆದಾಗ ಸಿಐಡಿ ಮೂಲಕ ನೋಟಿಸ್ ನೀಡಿತ್ತು ಅಂದಿನ ಬಿಜೆಪಿ ಸರ್ಕಾರ, ನನ್ನ ಮೇಲಿನ ಬಿಜೆಪಿಯವರ ದಾಳಿಗೆ 545 ಪಿಎಸ್ಐ ಹುದ್ದೆಗಳ ನೇಮಕದ ಮೂಲಕ ಉತ್ತರ ನೀಡಿದ್ದೇವೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು ಎಂದು ಹೇಳಿದ್ದಾರೆ. ನಾವು ಈ ಹಗರಣವನ್ನು ಬಿಚ್ಚಿಟ್ಟಾಗ ಅಂದಿನ ಬಿಜೆಪಿ ಸರ್ಕಾರದ ಗೃಹಸಚಿವರಾದಿಯಾಗಿ ಬಿಜೆಪಿ ನಾಯಕರೆಲ್ಲರೂ ಸದನದಲ್ಲಿ “ಹಗರಣ ನಡೆದೇ ಇಲ್ಲ” ಎನ್ನುವ ಶತಮಾನದ ಹಸಿ ಸುಳ್ಳನ್ನು ಸತ್ಯದ ತಲೆಯ ಮೇಲೆ ಸುತ್ತಿಗೆಯಲ್ಲಿ ಹೊಡೆದಂತೆ ಹೇಳಿದ್ದರು. ಇಷ್ಟೂ ಸಾಲದೆಂಬಂತೆ, ನನ್ನ ಬಾಯಿ ಮುಚ್ಚಿಸಲು…












