Author: kannadanewsnow09

ಶಿವಮೊಗ್ಗ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡಿನ ವಿರುದ್ಧ ಕಾಂಗ್ರೆಸ್ ಮುಖಂಡ ಸೋಮಶೇಖರ ಲಾವಿಗೆರೆ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಅಲ್ಲದೇ ಅವರ ಆರೋಪಗಳ ಬಗ್ಗೆ ತರಾಟೆಗೆ ತೆಗೆದುಕೊಂಡು ತಿರುಗೇಟು ನೀಡಿದ್ದಾರೆ. ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಹಳ ಹಾಸ್ಯಾಸ್ಪದ ಎನಿಸಿತು. ಅವರ ಹತಾಶೆ ಎದ್ದು ಕಾಣುತ್ತಿತ್ತು. ಹಾಲಪ್ಪ ಅವರಿಗೆ ಪರಜ್ಞಾನ ಇರಬೇಕಿತ್ತು. ಶಿವಮೊಗ್ಗಕ್ಕೆ ಹೋಗಿ ಪತ್ರಿಕಾಗೋಷ್ಠಿ ನಡೆಸಿದರೇ ಏನಾಗುತ್ತದೆ ಎನ್ನುವುದು ಗೊತ್ತಿರಬೇಕಿತ್ತು. ಶಿವಮೊಗ್ಗಕ್ಕೆ ಹೋಗಿ ಎಸ್ಪಿಗೆ, ಡಿಸಿಗೆ ಮನವಿ ಮಾಡಿ, ಅಲ್ಲೇ ಪತ್ರಿಕಾಗೋಷ್ಠಿ ಮಾಡಿ ಕಲ್ಲು ಕ್ವಾರೆ ಬಗ್ಗೆ ತಾರತಮ್ಯ ಮಾಡುತ್ತಾರೆ ಅಂತ ಹೇಳುತ್ತಾರೆ. ಒಂದೊಂದು ಗಾಡಿಗೆ ರೇಟ್ ಫಿಕ್ಸ್ ಮಾಡಿದ್ದಾರೆ ಅಂತ ಮಾಜಿ ಸಚಿವರು ಹೇಳಿದ್ದಾರೆ ಎಂದರು. ಯಾರಿಗೆ ಕೊಡ್ತಾ ಇದ್ದಾರೆ. ಯಾರು ಕೊಡ್ತಾ ಇದ್ದಾರೆ ಎನ್ನುವುದು ಪ್ರಶ್ನೆ. ಸಾಗರ ತಾಲ್ಲೂಕಿನಲ್ಲಿ ಕಲ್ಲು ಕ್ವಾರೆಗಳು ಯಾಕಾಗಿ ನಿಂತವು.? ಇವರ ಹೇಳಿಕೆಯಿಂದಾಗಿಯೇ ಆಗಿದೆ. ಶಾಸಕರ ಅಭಿವೃದ್ಧಿ ಕಾರ್ಯಗಳ…

Read More

ಬೆಳಗಾವಿ ಸುವರ್ಣಸೌಧ : ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ಸಂಸ್ಥೆಗಳ ನಿರ್ಬಂಧಕ್ಕೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ತಡೆಯಾಜ್ಞೆ ಇದೆ ಎಂದು ಸರ್ಕಾರ ಸುಮ್ಮನೆ ಕೂತಿಲ್ಲ. ಕಾನೂನು ಪ್ರಕಾರ ನಿರಂತರವಾಗಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಮಂಗಳವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಸ್.ಜೆ.ಸೋಮಶೇಖರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿ ಮಾತನಾಡಿದರು. ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದರೆ. ಆನ್‌ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಪ್ಟೆವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ…

Read More

ಬೆಳಗಾವಿ ಸುವರ್ಣಸೌಧ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯ ಮುಂದೆ ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಮಂಡಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ದಕ್ಷ ಆಡಳಿತ ನೀಡುವ ದೃಷ್ಠಿಯಿಂದ ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, ವಿಧೇಯಕದ 2(ಆರ್-ಎ),13,15(2),26 ಹಾಗೂ 33ರ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ. 2ನೇ ಪ್ರಕರಣದ ಆರ್-ಎ ಖಂಡದಲ್ಲಿ ರಾಜ್ಯ ಸರ್ಕಾರ ಎಂದರೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಭಾರೆಯಲ್ಲಿರುವ ಮಂತ್ರಿ ಎಂದು ತಿದ್ದುಪಡಿ ಮಾಡಲಾಗಿದೆ. 13ನೇ ಪ್ರಕರಣದಲ್ಲಿ ರಾಜ್ಯಪಾಲರು ಎಂಬ ಪದ ಬದಲಾಗಿ ಮುಖ್ಯಮಂತ್ರಿಯವರು ಎಂದು ಪ್ರತಿಯೋಜಿಸಿ, ಮುಖ್ಯಮಂತ್ರಿಗಳನ್ನು ವಿಶ್ವ ವಿದ್ಯಾಲಯದ ಕುಲಪತಿಗಳನ್ನಾಗಿಸಿದೆ. 15(2)ನೇ ಪ್ರಕರಣದಲ್ಲಿ ವೈಜ್ಞಾನಿಕ ಅವಿಷ್ಕಾರ ಹಾಗೂ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಯುಜಿಸಿ ನಿಯಾಮನುಸಾರ ಉಪಕುಲಪತಿಗಳ ನೇಮಕಕ್ಕೆ ಮಾನದಂಡಗಳನ್ನು ಅನುಸರಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಮರಕ್ಕೆ ಡಿಕ್ಕಿಯಾದ ಪರಿಣಾಮ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಬಳಿಯಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ 15 ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬಸ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/former-mla-telkur-congratulates-rbi-for-announcing-new-announcement-to-boost-agriculture-sector/ https://kannadanewsnow.com/kannada/union-minister-dharmendra-pradhan-said-that-neet-exam-will-be-conducted-online/

Read More

ಬೆಳಗಾವಿ ಸುವರ್ಣಸೌಧ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸದನದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಉತ್ತಮ ಸಂಸದೀಯ ಪಟುವಾಗಿ ಚರ್ಚೆಯ ಗುಣಮಟ್ಟ ಹೆಚ್ಚಿಸಲು ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. 7ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪನಾಯಕರಾಗಿ, ಕೃಷಿ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳು, ಪಶುಸಂಗೋಪನೆ, ಮುಜರಾಯಿ ಹಾಗೂ ಸಣ್ಣ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಅವರದ್ದಾಗಿದೆ. ಅಲ್ಲದೆ, ಈ ಮುನ್ನ ಕೂಡ ಅವರು ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿದ್ದರು. ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ರೂಪಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾ ಬಂದಿರುವ…

Read More

ಬೆಳಗಾವಿ : ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ ಅವರು, “ಕರ್ನಾಟಕ ಭೂ ಕಂದಾಯ ಕಾನೂನು ಕಂದಾಯ ಇಲಾಖೆಯ ಅಡಿಪಾಯ. ಆದರೆ, ಈ ಕಾನೂನಿನಲ್ಲಿ ಕೆಲವು ವ್ಯಾಖ್ಯಾನಗಳು ಕ್ಲಿಷ್ಟಕರವಾಗಿದೆ. ಹೀಗಾಗಿ ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಹಾಗೂ ಸಣ್ಣ ಉದ್ದಿಮೆದಾರರಿಗೆ ಸರಳ ಆಡಳಿತ ನೀಡುವ ಸಲುವಾಗಿ ಈ ಕಾನೂನಿಗೆ ಪ್ರಮುಖ ನಾಲ್ಕು ತಿದ್ದುಪಡಿಗಳನ್ನು ತರಲಾಗಿದೆ” ಎಂದು ತಿಳಿಸಿದರು. ತಿದ್ದುಪಡಿ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ಅವರು, “ಯಾವುದೇ ಜಮೀನು ಖಾಸಗಿ ವ್ಯಕ್ತಿಗೆ ಸೇರಿಲ್ಲದಿದ್ದಲ್ಲಿ ಅದು ಸರ್ಕಾರಕ್ಕೆ ಸೇರಿದೆ ಎಂಬ ಸಾರಾಂಶವನ್ನು ಕರ್ನಾಟಕ ಭೂ ಕಂದಾಯ ಕಾನೂನಿನ ಕಲಂ 67 ಹೇಳುತ್ತದೆ. ಕೆಲವರು ತಮ್ಮ…

Read More

ಬೆಳಗಾವಿ ಸುವರ್ಣಸೌಧ: ಪ್ರತಿ ವರ್ಷ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಹೇಳಿದರು. ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಆಡಿಟೋರಿಯಂನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 150 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರಾರಂಭಕ್ಕೆ ಸಚಿವರು ಆನ್ಲೈನ್ ಮೂಲಕ ಚಾಲನೆ‌ ನೀಡಿ ಮಾತನಾಡಿದರು. ಪ್ರತಿ ವರ್ಷ ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಸಲ್ಲಿಸುತ್ತಾರೆ. 2.46,000 ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಉಳಿದ‌ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳು ರೈತ,‌ ಬಡ ಹಾಗೂ ಕಾರ್ಮಿಕ ಕುಟುಂಬದಿಂದ‌ ಬಂದವರಾಗಿದ್ದು, ಹಾಸ್ಟೆಲ್ ನ ಸೌಲಭ್ಯವನ್ನು ಪಡೆದು ಉನ್ನತ ಹುದ್ದೆಗೇರಬೇಕು. ನಾವು ಓದುವ ಕಾಲಘಟ್ಟದಲ್ಲಿ ನಾಲ್ಕೈದು ಕಿ.ಮೀ ನಡೆದು ಪ್ರೌಢ ಶಾಲೆ ವ್ಯಾಸಂಗ ಮುಗಿಸಿದೆವು. ಆದರೆ ಇಂದು…

Read More

ಶಿವಮೊಗ್ಗ: ಜಿಲ್ಲೆಯ ಹೊಸನಗರದ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರ ಮೇಲೆ ಬಿಜೆಪಿ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇಂತಹ ನಾಗೋಡಿ ವಿಶ್ವನಾಥ್ ಅವರ ಮನೆಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ, ಧೈರ್ಯ ತುಂಬಿದರು. ಇಂದು ನಿಟ್ಟೂರಿಗೆ ಭೇಟಿ ನೀಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್, ಇತ್ತೀಚೆಗೆ ರಾಜಕೀಯ ದ್ವೇಷಕ್ಕೆ ಹಲ್ಲೆಗೊಳಗಾದ ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದಂತ ಅವರು, ಬಿಜೆಪಿ ಕಾರ್ಯಕರ್ತನೊಬ್ಬ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಹಲ್ಲೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಲ್ಲದೇ  ಸ್ಥಳದಲ್ಲಿದ್ದಂತ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಸೂಚಿಸಿದರು. ಇನ್ನೂ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಯಾವುದೇ…

Read More

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ ಬಿ ಐ ನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ ಬಿ ಐ ನ. ಈ ಘೊಷಣೆಗೆ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರ್ ಬಿ ಐ ಗೆ ಅಭಿನಂದನೆ ಸಲ್ಲಿಸಿದರು. ಈ ಕುರಿತು ಪಾತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಬಿ ಐ ನಹೊಸ ಗವರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಲೊತ್ರಾ ಅವರು ಮಾಡಿದ ಮೊದಲ ಘೋಷಣೆ ಇದಾಗಿದೆ. ರೈತರಿಗೆ ಸುಲಭವಾಗಿ ಹೆಚ್ಚು ಮೊತ್ತದ ಕೃಷಿ ಸಾಲ ಲಭ್ಯವಾಗುವಂತೆ ಮಾಡುವ ಮೂಲಕ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಒತ್ತು ನೀಡಲಾಗುತ್ತದೆ , ಭಾರತೀಯ ರಿಸರ್ವ್ ಬ್ಯಾಂಕ್ ಅಡವು…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More