Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಬುಧವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ. ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ…
ಬಳ್ಳಾರಿ : ಜಿಲ್ಲೆಯಲ್ಲಿ ಮಾರ್ಚ್ 14 ರಂದು ಹೋಳಿ ಹಬ್ಬ ಮತ್ತು ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ರಥೋತ್ಸವ ಹಾಗೂ ಜಾತ್ರೆ ನಿಮಿತ್ತ ಮಾ.14 ರಂದು ಬೆಳಿಗ್ಗೆ 06 ಗಂಟೆಯಿಂದ ಮಾ.15 ರಂದು ಬೆಳಿಗ್ಗೆ 06 ಗಂಟೆಯವರೆಗೆ ಬಳ್ಳಾರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಅಂಗಡಿ, ಬಾರ್, ರೆಸ್ಟೋರೆಂಟ್ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಆದೇಶ ಹೊರಡಿಸಿದ ಅವರು, ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆಎಸ್ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/shivananda-tagadur-gives-amrita-beeja-book-to-cm-siddaramaiah/ https://kannadanewsnow.com/kannada/railways-announce-1003-apprentice-vacancies-plus-two-class-10-qualified-can-apply/
ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು. ಹಿರಿಯ ಪತ್ರಕರ್ತರುಗಳ ಮನೆಗೆ ಭೇಟಿ ನೀಡಿ ಕೆಯುಡಬ್ಲೂಜೆ ಗೌರವ ನೀಡಿದ್ದಲ್ಲದೆ, ಅವರ ಅನುಭವ ಮತ್ತು ಅಭಿಪ್ರಾಯಗಳನ್ನು ದಾಖಲೀಕರಣ ಮಾಡಿರುವ ವಿಷಯವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಈ ಬಗ್ಗೆ ಪುಸ್ತಕವನ್ನು ಹೊರತಂದಿರುವುದಾಗಿ ಅವರಿಗೆ ‘ ಮಾಧ್ಯಮ ಲೋಕದ ಅಮೃತ ಬೀಜ’ ಪುಸ್ತಕದ ಪ್ರತಿಯನ್ನು ನೀಡಿದರು. ಪುಸ್ತಕದಲ್ಲಿದ್ದ ಮೊದಲ ಹೆಸರುಗಳು ಕಲ್ಲೆ ಶಿವೋತ್ತಮರಾವ್ ಮತ್ತು ಟಿಜೆಎಸ್ ಜಾರ್ಜ್ ಅವರದು. ಇದನ್ನು ನೋಡಿದ ಸಿಎಂ, ಇವರಿಗೆಲ್ಲ ತೊಂಬತ್ತು ವರ್ಷ ದಾಟಿರಬೇಕಲ್ವಾ? ಈಗ ಹೇಗಿದ್ದಾರೆ? ಎಂದು ಕುತೂಹಲದಿಂದ ಕೇಳಿ ತಿಳಿದುಕೊಂಡರು. ಆ ಕಾಲಘಟ್ಟದ ಹಿರಿಯರುಗಳ ಅನುಭವ ದೊಡ್ಡದು. ಅದನ್ನು ದಾಖಲೆ ಮಾಡಿರುವುದು ಒಳ್ಳೆಯ ಕೆಲಸ ಎಂದು ಹೇಳಿದರು. ತೊಂಬತ್ತು ವಸಂತ ದಾಟಿರುವ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ದಿಟ್ಟ ಮತ್ತು ವಿವಾದಾತ್ಮಕ ನಡೆಯಲ್ಲಿ, 22 ವರ್ಷದ ಮ್ಯಾಂಚೆಸ್ಟರ್ ವಿದ್ಯಾರ್ಥಿನಿ, ಲಾರಾ ತನ್ನ ಕನ್ಯತ್ವವನ್ನು ಆನ್ಲೈನ್ನಲ್ಲಿ ಹರಾಜಿಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾದಳು, ಅಂತಿಮವಾಗಿ ₹18 ಕೋಟಿ (£1.7 ಮಿಲಿಯನ್)ಗೆ ಹಾಲಿವುಡ್ ತಾರೆಯೊಬ್ಬರು ಬಿಡ್ ಮಾಡಿ ಗೆದ್ದಿರುವುದಾಗಿ ತಿಳಿದು ಬಂದಿದೆ. ಎಸ್ಕಾರ್ಟ್ ಏಜೆನ್ಸಿಯ ವೇದಿಕೆಯಲ್ಲಿ ಆಯೋಜಿಸಲಾದ ಈ ಹರಾಜಿನಲ್ಲಿ ರಾಜಕಾರಣಿಗಳು, ವ್ಯಾಪಾರ ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಆಸಕ್ತಿ ವಹಿಸಿದರು. ಕೊನೆಯಲ್ಲಿ ಬಿಡ್ ನಲ್ಲಿ ವಿಜೇತವಾಗಿದ್ದು ಹಾಲಿವುಡ್ ತಾರೆ. ಮಿರರ್ ಪ್ರಕಾರ, ಧಾರ್ಮಿಕ ಪಾಲನೆಯ ಹೊರತಾಗಿಯೂ, ಲಾರಾ ತನ್ನ ನಿರ್ಧಾರದ ಬಗ್ಗೆ ಯಾವುದೇ ವಿಷಾದ ವ್ಯಕ್ತಪಡಿಸಲಿಲ್ಲ. ಆರ್ಥಿಕ ಭದ್ರತೆಯ ಕಡೆಗೆ ಒಂದು ಪ್ರಾಯೋಗಿಕ ಹೆಜ್ಜೆಯಾಗಿ ಅವಳು ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಳು. ಹೆಚ್ಚಿನ ಮಹಿಳೆಯರು ಯಾವುದೇ ಸ್ಪಷ್ಟ ಪ್ರಯೋಜನಗಳಿಲ್ಲದೆ ತಮ್ಮ ಕನ್ಯತ್ವವನ್ನು ಹೇಗೆ ಕಳೆದುಕೊಳ್ಳುತ್ತಾರೆ ಎಂಬುದಕ್ಕೆ ವ್ಯತಿರಿಕ್ತವಾಗಿದೆ. “ನನಗೆ ವಿಷಾದವಿಲ್ಲ” ಎಂದು ಅವರು ಹೇಳಿದರು. “ಅನೇಕ ಹುಡುಗಿಯರು ಪ್ರತಿಯಾಗಿ ಏನನ್ನೂ ಪಡೆಯದೆ ತಮ್ಮ ಕನ್ಯತ್ವವನ್ನು ಕಳೆದುಕೊಳ್ಳುತ್ತಾರೆ. ಕನಿಷ್ಠ…
ಹಾಸನ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಮನೆಯ ಬಾಗಿಲಿನಲ್ಲೇ ಸಾಲ ಮರು ಪಾವತಿಸುವಂತೆ ಕುಳಿತಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತೆ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಹಾಸನದ ಆಲೂರಿನ ಹಳ್ಳಿಯೂರು ಗ್ರಾಮದಲ್ಲಿ ಕೆಂಚಮ್ಮ(50) ಎಂಬುವರೇ ಮನೆಯ ಬಾಗಿಲಿಗೆ ಬಂದು ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣಿಗೆ ಶರಣಾದಂತ ಕೆಂಚಮ್ಮ ಅವರು ಬಿಎಸ್ಎಸ್, ಇಐಎಫ್ ಹೆಸರಿನ ಫೈನಾನ್ಸ್ ಕಂಪನಿಯಿಂದ 2 ಲಕ್ಷ ಸಾಲ ಪಡೆದಿದ್ದರು. ಈ ಸಾಲಕ್ಕೆ ಪ್ರತಿ ತಿಂಗಳು ಸರಿಯಾಗಿ ಕಂತಿನ ಹಣವನ್ನು ಕಟ್ಟುತ್ತಿದ್ದರು. ಆದರೇ ಈ ತಿಂಗಳು ಕಟ್ಟಿಲ್ಲ ಎನ್ನುವ ಕಾರಣಕ್ಕೆ ಕೆಂಚಮ್ಮ ಅವರ ಮನೆ ಭಾಗಿಲಿಗೆ ಬಂದು ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದರು. ಈ ಹಿನ್ನಲೆಯಲ್ಲಿ ಕೆಂಚಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/sc-st-railway-employees-association-felicitates-mukul-saran-new-general-manager-of-south-western-railway/ https://kannadanewsnow.com/kannada/railways-announce-1003-apprentice-vacancies-plus-two-class-10-qualified-can-apply/
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ನೂತನ ಪ್ರಧಾನ ವ್ಯವಸ್ಥಾಪಕರಾಗಿ ಆಗಮಿಸಿದ ಮುಕುಲ್ ಸರನ್ ಮಾಥುರ್ ಅವರಿಗೆ ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೈರುತ್ಯ ರೈಲ್ವೆ ನೌಕರರ ಸಂಘವು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು. ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೈರುತ್ಯ ರೈಲ್ವೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಮೋಹನ್, ಅಧ್ಯಕ್ಷ ಕೆ.ಎಸ್.ದ್ಯಾಮಣ್ಣವರ್ ಹಾಗೂ ಹುಬ್ಬಳ್ಳಿ, ಮೈಸೂರು ವಿಭಾಗಗಳ ಮತ್ತು ಹುಬ್ಬಳ್ಳಿ ಕಾರ್ಯಾಗಾರದ ಪದಾಧಿಕಾರಿಗಳು ಮಾಥುರ್ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು. ನೂತನವಾಗಿ ಆಯ್ಕೆಯಾಗಿ ಬಂದಿದ್ದಕ್ಕೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ, ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರೈಲ್ವೆ ನೌಕರರ ಕಲ್ಯಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ, ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್, ಆತ್ಮೀಯ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿ, ಎಲ್ಲಾ ಉದ್ಯೋಗಿಗಳಿಗೆ ಸಮಾನ ಮತ್ತು ಅಂತರ್ಗತ ಕೆಲಸದ ವಾತಾವರಣವನ್ನು…
ಬೆಂಗಳೂರು: KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ನೀಡಿದ ಉತ್ತರ… KPSC ನಲ್ಲಿ ಹಲವು ಬಾರಿ ನಾನಾ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ. ಭ್ರಷ್ಟಾಚಾರ KPSC ಯಿಂದ ಹೊರಗೆ ಹೋಗಬೇಕು. ಇದರ ಬಗ್ಗೆ ಎರಡು ಮಾತಿಲ್ಲ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರದ ಇತರೆ ಹೈಲೈಟ್ಸ್ ಹೀಗಿದೆ.. 1. ದಿನಾಂಕ 4/3/2025 ರಂದು ವಿರೋಧ ಪಕ್ಷದ ಸದಸ್ಯರು ನಿಲುವಳಿ ಸೂಚನೆಯನ್ನು…
ಆಂಧ್ರಪ್ರದೇಶ: ‘ಸೂರ್ಯವಂಶಂ’ ಖ್ಯಾತಿಯ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಎರಡು ದಶಕಗಳ ನಂತರ, ಹಿರಿಯ ತೆಲುಗು ನಟ ಮೋಹನ್ ಬಾಬು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ನಟನ ಅಕಾಲಿಕ ಸಾವು ಆಕಸ್ಮಿಕವಲ್ಲ, ಆದರೆ ಮೋಹನ್ ಬಾಬುಗೆ ಸಂಬಂಧಿಸಿದ ಆಸ್ತಿ ವಿವಾದಕ್ಕೆ ಸಂಬಂಧಿಸಿದ ಕೊಲೆ ಎಂದು ಆರೋಪಿಸಿ ಆಂಧ್ರಪ್ರದೇಶದ ಖಮ್ಮಮ್ ಜಿಲ್ಲೆಯಲ್ಲಿ ಪೊಲೀಸ್ ದೂರು ದಾಖಲಿಸಲಾಗಿದೆ. ಶಂಶಾಬಾದ್ ನ ಗ್ರಾಮವೊಂದರಲ್ಲಿ ಆರು ಎಕರೆ ಭೂಮಿಯನ್ನು ಮಾರಾಟ ಮಾಡುವಂತೆ ಮೋಹನ್ ಬಾಬು ಸೌಂದರ್ಯ ಮತ್ತು ಆಕೆಯ ಸಹೋದರನ ಮೇಲೆ ಒತ್ತಡ ಹೇರಿದ್ದಾರೆ ಎಂದು ದೂರುದಾರ ಚಿಟ್ಟಿಮಲ್ಲು ಆರೋಪಿಸಿದ್ದಾರೆ. ಆದರೆ ಒಡಹುಟ್ಟಿದವರು ಒಪ್ಪಲು ನಿರಾಕರಿಸಿದ್ದರು, ಇದು ಇಬ್ಬರು ನಟರ ನಡುವೆ ದೊಡ್ಡ ಸಂಘರ್ಷಕ್ಕೆ ಕಾರಣವಾಯಿತು. ಸೌಂದರ್ಯ ಅವರ ಸಾವಿನ ನಂತರ ಮೋಹನ್ ಬಾಬು ಅವರು ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ವಿಷಯದಲ್ಲಿ ಇನ್ನೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ದೂರುದಾರರು ಇಬ್ಬರು ನಟರಿಗೆ ಸಂಬಂಧ ಹೊಂದಿದ್ದಾರೆಯೇ ಮತ್ತು ಹೇಗೆ ಎಂಬುದು ತಿಳಿದಿಲ್ಲ.…
ಬೆಂಗಳೂರು : ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ವಿಧಾನವಾದ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ. ಸದಸ್ಯ ಜವರಾಯಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಇದರಿಂದ ಗ್ರಾಮ ಲೆಕ್ಕಿಗರ ಮೇಲಿನ ಕಾರ್ಯದ ಒತ್ತಡ ಕಡಿಮೆ ಆಗಲಿದ್ದು, ಜಮಾಬಂದಿ ಪ್ರಕ್ರಿಯೆಗೆ ವೇಗ ದೊರೆಯಲಿದೆ. ಸದ್ಯಕ್ಕೆ ಇದು ಅರ್ಧ ಪೂರ್ಣಗೊಂಡಿದ್ದು, ಒಂದು ವರ್ಷದೊಳಗೆ ಸಂಪೂರ್ಣವಾಗಲಿದೆ ಎಂದು ತಿಳಿಸಿದರು. ಜಮಾಬಂದಿ ಒಂದು ಸರಕಾರಿ ಪ್ರಕ್ರಿಯೆಯಾಗಿದ್ದು, ಇದನ್ನು ಪ್ರತಿ ವರ್ಷ ಭೂಮಿಯ ದಾಖಲೆಗಳ ಪರಿಶೀಲನೆಗಾಗಿ ಹಮ್ಮಿಕೊಳ್ಳಲಾಗುತ್ತದೆ. ಇದನ್ನು ಸಾಮಾನ್ಯವಾಗಿ ತಹಶೀಲ್ದಾರ್ ಮೇಲ್ವಿಚಾರಣೆಯಡಿ ಗ್ರಾಮ ಲೆಕ್ಕಿಗರು ಮತ್ತು ಇತರ ಅಧಿಕಾರಿಗಳು ನಡೆಸುತ್ತಾರೆ. ಇದು ಜನರಿಂದ ನಡೆಯುವ ಗ್ರಾಮ ಪಂಚಾಯತಿಯ ವಾರ್ಷಿಕ ಆದಾಯ ಮತ್ತು ವೆಚ್ಚಗಳ ಭೌತಿಕ ಮತ್ತು ಆರ್ಥಿಕ ಲೆಕ್ಕ ಪರಿಶೀಲನೆಯಾಗಿದೆ. ಗ್ರಾಮ ಪಂಚಾಯತಿಯು ನಿರ್ವಹಿಸುವ ಲೆಕ್ಕಗಳು, ಲೆಕ್ಕಗಳು, ರಿಜಿಸ್ಟರ್ಗಳು,…
ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇಂತಹ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ನಡೆಸಿತು. ವಾದ, ಪ್ರತಿವಾದವನ್ನು ಆಲಿಸಿದಂತ ಕೋರ್ಟ್ ಮಾರ್ಚ್.14ಕ್ಕೆ ಜಾಮೀನು ಅರ್ಜಿಯ ಆದೇಶದ ತೀರ್ಪು ಕಾಯ್ದಿರಿಸಿದೆ. ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲಾಗಿದೆ. ಅವರಿಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಡಿ ಆರ್ ಐ ಪರ ವಕೀಲ ಮಧು ರಾವ್ ವಾದ ಮಂಡಿಸಿದರು. ಕಸ್ಟಡಿ ಅವಧಿಯಲ್ಲಿ ನಟಿ ರನ್ಯಾ ರಾವ್ ಅವರು ತನಿಖೆಗೆ ಯಾವುದೇ ರೀತಿಯಲ್ಲಿ ಸಹಕರಿಸಿಲ್ಲ. ಅಪರಾಧದ ಮನಸ್ಥಿತಿಯ ಬಗ್ಗೆ ಪರಿಶೀಲಿಸಬೇಕು. ಜಾಮೀನು ನೀಡಿದರೇ ಸಮಸ್ಯೆ ಆಗಲಿದೆ. ಮಹಿಳೆಯಾಗಿದ್ದರೂ ಕೂಡ ಬೇಲ್ ನೀಡಬಾರದು. ದೊಡ್ಡ ಮಟ್ಟದ ಸ್ಮಗ್ಲಿಂಗ್ ಆಗಿರುವುದು ಪರಿಗಣಿಸಬೇಕು ಎಂಬುದಾಗಿ ವಾದಿಸಿದರು. ವಾದ ಪ್ರತಿವಾದವನ್ನು ಆಲಿಸಿದಂತ…












