Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಕೋಲಾರ: ಕೆರೆಯಲ್ಲಿ ಈಜಲು ತೆರಳಿದ್ದಂತ ವೇಳೆಯಲ್ಲಿ ನೀರಲ್ಲಿ ಮುಳುಗಿ ತಂದೆ-ಮಗ ಹಾಗೂ ಸ್ನೇಹಿತರ ಪುತ್ರನೊಬ್ಬ ಜಲಸಮಾಧಿ ಆಗಿರುವಂತ ಧಾರುಣ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ಬೂಡದಮಿಟ್ಟೆ ಕೆರೆಗೆ ತೆರಳಿದ್ದಂತ ವಾಟರ್ ಮ್ಯಾನ್ ರಮೇಶ್(40) ಹಾಗೂ ಅವರ ಪುತ್ರ ಅಗಸ್ತ್ಯ(12) ಮತ್ತು ಸ್ನೇಹಿತ ಶರಣ್ (15) ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗುತ್ತಿದ್ದಂತ ಮಗನನ್ನು ರಕ್ಷಿಸಲು ಹೋಗಿ ತಂದೆ-ಮಗ, ಸ್ನೇಹಿತನ ಪುತ್ರ ಜಲಸಮಾಧಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋಲಾರ ಎಸ್ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬೇತಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/2nd-airport-in-bengaluru-aai-team-inspects-3-locations-finalised-locations-in-a-month/ https://kannadanewsnow.com/kannada/big-news-promotion-for-primary-school-teachers-in-the-state-important-information-from-the-education-department/

Read More

ಬೆಂಗಳೂರು: ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಏರ್ಪೋರ್ಟ್ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಇನ್ನು ಒಂದು ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ. ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರಕಾರವು ವಿಮಾನ‌ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಗುರುವಾರ ಹೇಳಿದ್ದಾರೆ. ಎಎಐ ತಂಡ ಬಂದು ಹೋಗಿರುವುದು ನಿಜ. ವಿಮಾನ‌ ನಿಲ್ದಾಣವನ್ನು ಎಲ್ಲಿ ಮಾಡಿದರೆ ಸೂಕ್ತವೆನ್ನುವುದು ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆ ಎಂದು ಅವರು ತಿಳಿಸಿದ್ದಾರೆ. ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ ಎರಡನೇ ಏರ್ಪೋರ್ಟ್ ಅಭಿವೃದ್ಧಿ…

Read More

ಬೀದರ್ : ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬೀದರ್ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇದು 2025ನೇ ಇಸವಿಯಾಗಿದ್ದು, ಈ ವರ್ಷ ಜಿಲ್ಲೆಯಲ್ಲಿ 2025 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಯವರು ನೆರವೇರಿಸುವರು. ಇದರಲ್ಲಿ ಪ್ರಜಾಸೌಧ (ಜಿಲ್ಲಾಡಳಿತ ಕಚೇರಿ), ಭಾಲ್ಕಿ ಕ್ರೀಡಾಂಗಣ, ಆಸ್ಪತ್ರೆ, ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಸೇರಿದೆ ಎಂದರು. ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಂಡ ಬಳಿಕ ಬೀದರ್ ಜಿಲ್ಲೆ ಧಾರ್ಮಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕತೆಯ ತಾಣವಾಗಿ ಪರಿವರ್ತನೆಯಾಗಲಿದೆ. ಇದಕ್ಕೆ ಹೊನ್ನಿಕೇರಿಯ ಪರಿಸರ ಪ್ರವಾಸೋದ್ಯಮವೂ ಒತ್ತು ನೀಡಲಿದ್ದು, ನಾಗರಿಕ ವಿಮಾನಯಾನ…

Read More

ಅಹಮದಾಬಾದ್: ಅಹಮದಾಬಾದ್ ನಲ್ಲಿ ನಡೆದಂತ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ (AICC) ಅಧಿವೇಶನದಲ್ಲಿ ಅಂಗೀಕರಿಸಲಾದ ನಿರ್ಣಯಗಳ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ನಿರ್ಣಯ – ಅರ್ಪಣೆ – ಹೋರಾಟ ಮಹಾತ್ಮ ಗಾಂಧೀಜಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಶತಮಾನೋತ್ಸವ ವರ್ಷದಲ್ಲಿಯೂ, ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮವಾರ್ಷಿಕ ದಿನಾಚರಣೆಯ  ಸಮಯದಲ್ಲಿಯೂ, ನಾವು ನ್ಯಾಯದ ಮಾರ್ಗ – ನ್ಯಾಯಪಥ–ದತ್ತಪದ್ಧತಿಗೆ ಬದ್ಧರಾಗಿದ್ದೇವೆ ಎಂದು ಗಂಭೀರವಾಗಿ ಘೋಷಿಸುತ್ತೇವೆ. ನ್ಯಾಯಪಥ ಏಕೆ? ಸರ್ದಾರ್ ಪಟೇಲ್ ಒಂದು ಬಾರಿ ಘೋಷಿಸಿದ್ದರು: “ಜನತೆ ಏಕತೆಯಿಂದ ನಿಂತರೆ, ಅತ್ಯಾಚಾರಿಯುಳ್ಳ ಆಡಳಿತವೂ ನಿಲ್ಲಲಾಗದು.” ಸ್ವಾತಂತ್ರ್ಯದ ಎಪ್ಪತ್ತೈದು ವರ್ಷಗಳ ನಂತರ, ಬಿಜೆಪಿಯ ಸರಕಾರವು ಜನರ ಮೇಲೆ ಭಾರೀ ಅನ್ಯಾಯವನ್ನು ಮೆಟ್ಟಿಲು ಹಾಕಿದೆ – ಹೆಚ್ಚಿದ ಬೆಲೆ ಏರಿಕೆ, ಉದ್ಯೋಗದ ಕೊರತೆ, ಭಾರೀ ಆರ್ಥಿಕ ಅಸಮಾನತೆ, ದ್ವೇಷದ ಧ್ರುವೀಕರಣ ಹಾಗೂ ರಾಜ್ಯ ಪೋಷಿತ ಕ್ರೌರ್ಯದ ಮುಖಾಂತರ. ನಮ್ಮ ಪ್ರಜಾಪ್ರಭುತ್ವದ ಆತ್ಮ – ಭಾರತ ಸಂವಿಧಾನ – ಅಧಿಕಾರದಲ್ಲಿರುವವರು ಶಕ್ತಿಯನ್ನು ಉಳಿಸಿಕೊಳ್ಳಬೇಕೆಂಬ ದುರಾಸೆಯಿಂದ ನೇರವಾಗಿ…

Read More

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಮತ್ತು ಜಾಮಾ ಮಸೀದಿಗೆ ಗುರುವಾರ ಬಾಂಬ್ ಬೆದರಿಕೆ ಕರೆ ಬಂದಿತು. ದೆಹಲಿ ಪೊಲೀಸರ ಪ್ರಕಾರ, ಪರಿಶೀಲನೆಯ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಮತ್ತು ಆ ಕರೆಯನ್ನು ಸುಳ್ಳು ಎಂದು ಘೋಷಿಸಲಾಗಿದೆ. ಕೆಂಪು ಕೋಟೆ ಮತ್ತು ಜಾಮಾ ಮಸೀದಿಯನ್ನು ಗುರಿಯಾಗಿಸಿಕೊಂಡು ಬಂದಿರುವ ಹುಸಿ ಬಾಂಬ್ ಬೆದರಿಕೆಯಿಂದಾಗಿ ಭದ್ರತಾ ಸಂಸ್ಥೆಗಳು ಗುರುವಾರ ಸ್ಥಳಗಳಿಗೆ ಧಾವಿಸಿ ಸಂಪೂರ್ಣ ಪರಿಶೀಲನೆ ನಡೆಸಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿವೆ. https://twitter.com/ANI/status/1910276350134329720 ಸ್ಮಾರಕಗಳ ಆವರಣದಲ್ಲಿ ಬಾಂಬ್ ಇರುವ ಬಗ್ಗೆ ಬೆಳಿಗ್ಗೆ 9.03 ಕ್ಕೆ ಕರೆ ಬಂದಿದ್ದು, ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾವು ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನದ ಮೂಲಕ ತೆರಳಿ ಸಂಪೂರ್ಣ ಶೋಧ ನಡೆಸಿದ್ದೇವೆ. ಆದಾಗ್ಯೂ, ಸ್ಥಳಗಳಲ್ಲಿ ಅನುಮಾನಾಸ್ಪದ ವಸ್ತು ಏನೂ ಕಂಡುಬಂದಿಲ್ಲ ಎಂದು ಅವರು ಹೇಳಿದರು. ಏತನ್ಮಧ್ಯೆ, ಕರೆ ಬಂದ ನಂತರ ಬಾಂಬ್ ನಿಷ್ಕ್ರಿಯ ತಂಡಗಳು ಮತ್ತು ಸಿಐಎಸ್ಎಫ್ ಇಡೀ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದವು.…

Read More

ಬೆಂಗಳೂರು: ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 2,000 ಬಸ್ ಗಳನ್ನು ಖರೀದಿ ಮಾಡಲಾಗುತ್ತದೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1910285021082005895 https://kannadanewsnow.com/kannada/revenue-department-is-on-the-path-of-transformation-and-is-also-adapting-to-modern-technology-minister-krishna-byre-gowda/ https://kannadanewsnow.com/kannada/rover-technology-to-be-used-for-survey-work-in-karnataka-survey-work-completed-in-just-10-minutes/

Read More

ಬೆಂಗಳೂರು : ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, “ಸರ್ವೇ ಇಲಾಖೆ ಇಡೀ ಸರ್ಕಾರಕ್ಕೆ ಮೂಲ ಇಲಾಖೆ. ಯಾವುದೇ ಭೂಮಿಗೆ ದಾಖಲೆಗಳ ಮೂಲಕ ಅಸ್ಥಿತ್ವ ಕಲ್ಪಿಸುವ ಮಹತ್ವದ ಕಾರ್ಯ ಸರ್ವೇ ಇಲಾಖೆಯದ್ದು. ಹೀಗಾಗಿ ಈ ಇಲಾಖೆಯನ್ನು ನೌಕರರ ಸಹಕಾರದಿಂದ ಹೊಸ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಳ್ಳುವಂತೆ ಮಾಡಲಾಗಿದೆ. ಆ ಮೂಲಕ ಇಲಾಖೆಯನ್ನು ಮತ್ತಷ್ಟು ಜನಪರಗೊಳಿಸುವ ಪರಿವರ್ತನೆಯ ಹಾದಿಯಲ್ಲಿ ಮುನ್ನಡೆಸಲಾಗುತ್ತಿದೆ” ಎಂದರು. ಮುಂದುವರೆದು, “ಹತ್ತಾರು ವರ್ಷಗಳಿಂದ ಬಾಕಿ ಇದ್ದ ರೈತರ ಕೆಲಸಗಳನ್ನು ಕಳೆದ ಎರಡು ವರ್ಷಗಳಲ್ಲಿ ಅಭಿಯಾನದ ಮಾದರಿಯಲ್ಲಿ ನಡೆಸಲಾಗುತ್ತಿದೆ. ಗ್ರಾಮಠಾಣಾ ಹಾಗೂ ನಗರ ಪ್ರದೇಶಗಳಲ್ಲಿ ಜನ ನೆಮ್ಮದಿಯಿಂದ ಜೀವಿಸಲು ಆಸ್ತಿಯ ನಕ್ಷೆ ಅವಶ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಭೂಮಿಯನ್ನು ಸರ್ವೆ ಮಾಡುವಂತ ಕೆಲಸಕ್ಕೆ ಮಾನವ ಶಕ್ತಿಯಲ್ಲದೇ ಇನ್ಮುಂದೆ ರೋವರ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಹೀಗಾಗಿ ಕೇವಲ 10 ನಿಮಿಷದಲ್ಲೇ ಸರ್ವೆ ಕಾರ್ಯ ಮುಕ್ತಾಯವಾಗಲಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟರು. “ಸರ್ವೇ ಕೆಲಸವನ್ನು 1802 ರಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಬಿಸಿಲಿನಲ್ಲಿ ಸರ್ವೇಯರ್ ಜೊತೆಗೆ ಇಬ್ಬರು ಸಹಾಯಕರೂ ಕೆಲಸ ಮಾಡಬೇಕಿತ್ತು. ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ…

Read More

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ 8 ದಿನಗಳಲ್ಲೇ 11ಇ ಸ್ಕೆಚ್ ಜಮೀನಿನ ಹದ್ದುಬಸ್ತು, ತಾತ್ಕಾಲ್ ಪೋಡಿಯನ್ನು ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದರು. 11 ಇ ಸ್ಕೆಚ್‌ ಜೀಮೀನಿನ ಹದ್ದುಬಸ್ತು, ತತ್ಕಾಲ್‌ ಪೋಡಿ, ಇ ಸ್ವತ್ತು, ಸ್ವಾವಲಂಭಿ, ಭೂ ಮಂಜೂರಿ ಪ್ರಕರಣಗಳ ಸರ್ವೇ, ಕೆರೆ ಬಂಡಿದಾರಿ ಸರ್ವೇ, ಭೂ ಪರಿವರ್ತನೆ ಸರ್ವೇ, ಕಂದಾಯ ಅರಣ್ಯ ಗಡಿ ನಿಗದಿಗೊಳಿಸುವ ಜಂಟಿ ಸರ್ವೇ, ಇವು ನಮ್ಮ ಇಲಾಖೆಯ ಪ್ರಮುಖ ಕೆಲಸ. ಕಳೆದ 23 ತಿಂಗಳಲ್ಲಿ ಈವರೆಗೆ 26 ಲಕ್ಷ ಸರ್ವೇ ಪ್ರಕರಣಗಳನ್ನು ಜನತೆಗೆ ಮಾಡಿಕೊಟ್ಟಿದ್ದೇವೆ. ಒಂದು ದಿನಕ್ಕೆ ಸರಾಸರಿ 5 ರಿಂದ 6 ಸಾವಿರ ಪ್ರಕರಣಗಳ್ನು ಸರ್ವೇ ಮಾಡಿಕೊಡುತ್ತಿದ್ದೇವೆ ಎಂದು ಅವರು ತಿಳಿಸಿದರು. ನಮ್ಮ ಸರ್ಕಾರ ಬರುವ ಮೊದಲು…

Read More

ತಮಿಳುನಾಡ: ಇಲ್ಲಿನ ಕೊಯಮತ್ತೂರಿನಲ್ಲಿ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಋತುಚಕ್ರದಲ್ಲಿದ್ದ ಕಾರಣ ತರಗತಿಯ ಹೊರಗೆ ವಿಜ್ಞಾನ ಪರೀಕ್ಷೆ ಬರೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ. ಸೆಂಗುಟ್ಟೈನಲ್ಲಿರುವ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಮಗುವಿನ ತಾಯಿ ಆಕೆಯ ಬಳಿಗೆ ಧಾವಿಸಿ ಏನಾಯಿತು ಎಂದು ಕೇಳುತ್ತಿದ್ದಾರೆ. ಈ ಕ್ಲಿಪ್‌ನಲ್ಲಿ, ಪ್ರಾಂಶುಪಾಲರು ತನ್ನನ್ನು ಹೊರಗೆ ಕೂರಿಸಿದ್ದಾರೆ ಎಂದು ವಿದ್ಯಾರ್ಥಿನಿ ತನ್ನ ತಾಯಿಗೆ ಹೇಳುತ್ತಾಳೆ. ಸ್ಪಷ್ಟವಾಗಿ ಅಸಮಾಧಾನಗೊಂಡ ತಾಯಿ, ವಿದ್ಯಾರ್ಥಿನಿಯನ್ನು ತನ್ನ ಋತುಚಕ್ರದ ಸಮಯದಲ್ಲಿ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ್ದೇಕೆ ಎಂದು ಪ್ರಶ್ನಿಸುತ್ತಿರುವುದು ಕೇಳಿಬರುತ್ತಿದೆ. ಈ ವರ್ಷದ ಜನವರಿಯಲ್ಲಿ, ಉತ್ತರ ಪ್ರದೇಶದಲ್ಲಿ ಬಾಲಕಿಯರ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶನಿವಾರ ಪರೀಕ್ಷೆ ಬರೆಯುವಾಗ ಸ್ಯಾನಿಟರಿ ನ್ಯಾಪ್ಕಿನ್ ಕೇಳಿದ ನಂತರ ಒಂದು ಗಂಟೆ ತರಗತಿಯಿಂದ ಹೊರಹೋಗುವಂತೆ ಕೇಳಲಾಗಿತ್ತು ಎಂದು ವರದಿಯಾಗಿದೆ. ಬಾಲಕಿಯ ತಂದೆ ದೂರು ದಾಖಲಿಸಿದ್ದು, ತನ್ನ ಮಗಳು ಪರೀಕ್ಷೆಗೆ ಶಾಲೆಗೆ ಹೋಗುತ್ತಿದ್ದಾಗ ತನ್ನ ಋತುಚಕ್ರ ಪ್ರಾರಂಭವಾಗಿದೆ ಎಂದು ಅರಿತುಕೊಂಡಿದ್ದಾಳೆ ಎಂದು…

Read More