Author: kannadanewsnow09

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು.ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು. ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಧರ್ಮಪತ್ನಿ ಸುದೇಶ್ ಧನಕರ್ ಅವರೊಂದಿಗೆ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಕಂಪನಿಯ ಉನ್ನತ ಅಧಿಕಾರಿಗಳು ಉಪ ರಾಷ್ಟ್ರಪತಿಗಳ ಜತೆಯಲ್ಲಿದ್ದರು. ಕಾರ್ಖಾನೆಗೆ ಭೇಟಿ ನೀಡಿದ ಉಪ ರಾಷ್ಟ್ರಪತಿಗಳನ್ನು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಬರಮಾಡಿಕೊಂಡರು. ವಿಕಸಿತ ಭಾರತ್ ಕನಸಿಗೆ ಬಿಹೆಚ್ ಇಎಲ್ ಕೊಡುಗೆ: HDK ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ ನಡೆದಿದೆ. ವಾರದ ಹಿಂದೆ ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರು ಟಚ್ ಆಗಿದ್ದಕ್ಕೆ ಕಿರಿಕ್ ತೆಗೆದು ಕಾರಿನ ಗ್ಲಾಸನ್ನೇ ಬೈಕ್ ಸವಾರನೊಬ್ಬ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಹಲಸೂರು ಬಳಿಯಲ್ಲಿ ಕಾರು ಟಚ್ ಆಗಿದ್ದಕ್ಕೆ ರೋಡ್ ರೇಜ್ ಮಾಡಿರುವಂತ ಪ್ರಕರಣವೊಂದು ನಡೆದಿದೆ. ಕಾರು ಟಚ್ ಆಗಿದ್ದಕ್ಕೆ ಕಿರಿಕ್ ತೆಗೆದಂತ ಯುವಕನೊಬ್ಬ, ಕಾರಿನ ಗ್ಲಾಸ್ ಹೊಡೆದು ಹಲ್ಲೆ ಮಾಡಲು ಮುಂದಾಗಿರುವಂತ ಘಟನೆ ನಡೆದಿದೆ. ಕಾರು ಟಚ್ ಆಗಿದ್ದಕ್ಕೆ ಸಾರಿ, ನಮ್ಮದೇ ತಪ್ಪಿದೆ ಅಂತ 5 ಸಾವಿರ ಹಣ ಕೊಟ್ಟರು ಬಿಡದ ಯುವಕ, ಕಾರು ಟಚ್ ಮಾಡಿದ್ದಕ್ಕೆ ಕಾರಿನ ಗ್ಲಾಸನ್ನೇ ಸಂಪೂರ್ಣ ಹೊಡೆದು ಹಾಕಿ ಅಲ್ಲಿಂದ ತೆರಳಿರೋದಾಗಿ ತಿಳಿದು ಬಂದಿದೆ. ವಾರದ ಹಿಂದಿನ ಈ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರೋಡ್ ರೇಜ್ ಮಾಡಿದಾತನ ಮೇಲೆ ಕೇಸ್ ಹಾಕಿ, ಬಂಧಿಸುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. https://kannadanewsnow.com/kannada/farmer-attempts-suicide-by-consuming-poison-in-front-of-officials-who-came-to-clear-encroachments-on-government-land/ https://kannadanewsnow.com/kannada/breaking-11-dysp-civil-transfer-orders-issued-by-state-government-dysp-transfer/

Read More

ತುಮಕೂರು: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿದ್ದರೂ, ಅದು ಸರ್ಕಾರಿ ಭೂಮಿ ಒತ್ತುವರಿ ಜಾಗ ಎಂಬುದಾಗಿ ತೆರವುಗೊಳಿಸೋದಕ್ಕೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆಯಲ್ಲಿ ಅಧಿಕಾರಿಗಳ ಮುಂದೆಯೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿರಾದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕಲ್ಲಿಗೋನಹಳ್ಳಿಯ ಸರ್ವೆ ನಂ.118ನ ಜಮೀನಿನಲ್ಲಿ ರೈತ ಕಾಂತರಾಜು 60 ರಿಂದ 70 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಈ ಭೂಮಿ ಸರ್ಕಾರಿ ಸ್ವತ್ತಾಗಿದ್ದು, ತೆರವುಗೊಳಿಸೋದಕ್ಕೆ ಶಿರಾ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಪೊಲೀಸರ ಜೊತೆಗೂಡಿ ಮುಂದಾಗಿದ್ದರು. ಈ ವೇಳೆಯಲ್ಲಿ ರೈತ ಕಾಂತರಾಜು ಯಾವುದೇ ನೋಟಿಸ್ ನೀಡದೇ ತಮ್ಮ ಜಮೀನು ತೆರವುಗೊಳಿಸೋದಕ್ಕೆ ಬಂದಿದ್ದೀರಿ. ಇದು ಕಾನೂನು ಕ್ರಮದ ಸರಿಯಾದ ನಿರ್ಧಾರವಲ್ಲ. ಇದನ್ನು 60-70 ವರ್ಷಗಳಿಂದ ನಾವು ಉಳುಮೆ ಮಾಡಿಕೊಂಡು ಬಂದಿದ್ದೇವೆ. ಈ ಭೂಮಿಯಲ್ಲಿನ ಕೃಷಿಯ ಆದಾಯವನ್ನೇ ನಂಬಿಕೊಂಡು ಬದುಕುತ್ತಿರುವಂತ ಕುಟುಂಬವಾಗಿದೆ ಎಂಬುದಾಗಿ ಹೇಳಿದರೂ ಅಧಿಕಾರಿಗಳು ಕರಗಲಿಲ್ಲ. ರೈತ ಕಾಂತರಾಜು ಒತ್ತುವರಿ ಜಮೀನು ತೆರವುಗೊಳಿಸೋದಕ್ಕೆ ಮುಂದಾದ ವೇಳೆಯಲ್ಲಿ ಅವರ ಮುಂದೆಯೇ…

Read More

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ…

Read More

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. 20-25 ವರ್ಷಗಳಿಂದ ಯಾರಿಗೂ ಸಿಗದೇ ಇರುವವರು ಇವತ್ತು ನಿಮ್ಮ ಕೈಗೆ ಹೇಗೆ ಸಿಕ್ಕಿದರು? ವಿಕ್ರಂ ಗೌಡ ಸಾವಾದ ತಕ್ಷಣ ಉಳಿದವರೆಲ್ಲರಿಗೆ ಭಯ ಬಂತೇ? ಇದರ ಹಿಂದೆ ಒಂದು ಪಿತೂರಿ ಇದೆ ಎಂದು ಆರೋಪಿಸಿದರು. ನಕ್ಸಲರು ಬರಿಗೈಯಲ್ಲಿ ಬಂದಿದ್ದಾರೆ. ಶಸ್ತ್ರಾಸ್ತ್ರಗಳು ಎಲ್ಲಿ ಹೋದವು? ಇವರು ಇಷ್ಟೇನಾ? ಇನ್ನೂ ಇದ್ದಾರಾ? ಅಥವಾ ಶಸ್ತ್ರಾಸ್ತ್ರಗಳನ್ನು ಅವರಿಗೆ ಕೊಟ್ಟು ಬಂದಿದ್ದಾರಾ?- ಈ ಥರ ಎಲ್ಲ ಪ್ರಶ್ನೆಗಳಿವೆ ಎಂದು ತಿಳಿಸಿದರು. ಕೋರ್ಟ್ ಅಥವಾ ಪೊಲೀಸರ ಮುಂದೆ ಅವರನ್ನು ಶರಣಾಗಲು ಸೂಚಿಸಬೇಕಿತ್ತು. ಮುಖ್ಯಮಂತ್ರಿಗಳ ಮುಂದೆ ಶರಣಾಗತಿ ಮಾಡಲು ಅವರಿಗೂ ಇವರಿಗೂ ಸಂಬಂಧ ಇತ್ತೇ ಎಂದು ಕೇಳಿದರು. ಈ ಸರಕಾರ ಸಂಪೂರ್ಣವಾಗಿ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಭ್ರಷ್ಟಾಚಾರದಲ್ಲಿ ಇವರೂ ಇದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ;…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಕ್ರಮವಹಿಸಲಾಗುತ್ತಿದೆ. ಅದರಂತೆ, ಎಲ್ಲಾ ಪರಿಷ್ಕರಣೆ ಪ್ರಕರಣಗಳಲ್ಲಿ, ಆಸ್ತಿಗಳಿಗೆ ಬೀಗಮುದ್ರೆ, ಮುಟ್ಟುಗೋಲು ಮತ್ತು ಜಪ್ತಿ ಮಾರಾಟವನ್ನು ಬಳಸಿಕೊಂಡು ವಸೂಲಾತಿ ಮಾಡಬೇಕಿದೆ. ಈ ಸಂಬಂಧ 1ನೇ ಜನವರಿ 2025 ರಿಂದ 9ನೇ ಜನವರಿ 2025 ರವರೆಗೆ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಂತಹ 830 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ. ಕಳೆದ 24 ಗಂಟೆಗಳಲ್ಲಿ ಎಲ್ಲಾ 08 ವಲಯಗಳು ಸೇರಿದಂತೆ 182 ವಸತಿಯೇತರ ಕಟ್ಟಡಗಳಿಗೆ…

Read More

ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಮುಂಬೈ : ರಿಲಯನ್ಸ್ ಜಿಯೋ ತನ್ನ ಜಿಯೋಏರ್ ಫೈಬರ್ ಮತ್ತು ಜಿಯೋ ಫೈಬರ್ ಪೋಸ್ಟ್‌‌ಪೇಯ್ಡ್ ಬಳಕೆದಾರರಿಗೆ ಜನವರಿ 11ರಿಂದ ಅನ್ವಯಿಸುವಂತೆ ಅತ್ಯಾಕರ್ಷಕ ಹೊಸ ಯೋಜನೆಯನ್ನು ಪರಿಚಯಿಸಿದೆ. ಅರ್ಹ ಗ್ರಾಹಕರು ತಮ್ಮ ಯೋಜನೆಯ ಪ್ರಯೋಜನಗಳ ಭಾಗವಾಗಿ 24 ತಿಂಗಳವರೆಗೆ ಯೂಟ್ಯೂಬ್ ಪ್ರೀಮಿಯಂಗೆ ಕಾಂಪ್ಲಿಮೆಂಟರಿ ಚಂದಾದಾರಿಕೆಯನ್ನು ಪಡೆಯುತ್ತಾರೆ . ಇದು ಭಾರತದಾದ್ಯಂತ ಚಂದಾದಾರರಿಗೆ ಡಿಜಿಟಲ್ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಜಿಯೋ ಮತ್ತು ಯೂಟ್ಯೂಬ್ ನಡುವಿನ ಮಹತ್ವದ ಸಹಯೋಗವನ್ನು ಸೂಚಿಸುತ್ತದೆ. ಯೂಟ್ಯೂಬ್ ಪ್ರೀಮಿಯಂನಲ್ಲಿ ಏನೆಲ್ಲಾ ಸಿಗಲಿದೆ : 1. ಜಾಹೀರಾತು-ಮುಕ್ತ ವೀಕ್ಷಣೆ : ನಿಮ್ಮ ನೆಚ್ಚಿನ ವೀಡಿಯೊಗಳನ್ನು ಅಡೆತಡೆಗಳಿಲ್ಲದೆ ವೀಕ್ಷಿಸಬಹುದು. 2. ಆಫ್ಲೈನ್ ವೀಡಿಯೊಗಳು : ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಯಾವುದೇ ಸಮಯದಲ್ಲಿ ಆನಂದಿಸಲು ವಿಡಿಯೋ ಡೌನ್ಲೋಡ್ ಮಾಡಬಹುದು. 3. ಬ್ಯಾಕ್ ಗ್ರೌಂಡ್ ಪ್ಲೇ : ಇತರ ಅಪ್ಲಿಕೇಶನ್ ಗಳನ್ನು ಬಳಸುವಾಗ ಅಥವಾ ನಿಮ್ಮ ಸ್ಕ್ರೀನ್ ಆಫ್ ಮಾಡುವಾಗ ವೀಡಿಯೊಗಳನ್ನು ನೋಡುವುದನ್ನು ಅಥವಾ ಸಂಗೀತವನ್ನು ಕೇಳುವುದನ್ನು ಮುಂದುವರಿಸಿ. 4. ಯೂಟ್ಯೂಬ್ ಮ್ಯೂಸಿಕ್ ಪ್ರೀಮಿಯಂ : 100 ದಶಲಕ್ಷಕ್ಕೂ…

Read More

ಬೆಂಗಳೂರು: ಇತರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರ 25 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದಂತ ಭಾಷಣದ ಹೈಲೈಟ್ಸ್ ಈ ಕೆಳಗಿನಂತಿದೆ. 1.ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರ 25 ನೇ ರಾಷ್ಟ್ರೀಯ ಸಮ್ಮೇಳನಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಗೌರವದ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕದ ಪಾಲಿಗೂ ಇದು ಅತ್ಯಂತ ಹೆಮ್ಮೆಯ ಸಂಗತಿ. 2.ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ. 3.ಸಾರ್ವಜನಿಕ ಸೇವೆಯಲ್ಲಿ ಕರ್ನಾಟಕಕ್ಕೆ ಶ್ರೀಮಂತ ಐತಿಹ್ಯವಿದೆ. ಮೈಸೂರು ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ದಿವಾನ್ ಶ್ರೀ ಕೆ.ಶೇಷಾದ್ರಿ ಅಯ್ಯರ್ ಅವರು 1892 ರಲ್ಲಿಯೇ ಪ್ರಾರಂಭಿಸಿದರು. 4.ಈ ಪ್ರಾರಂಭಿಕ ಹೆಜ್ಜೆಯು ವಿಶಿಷ್ಟ ಆಡಳಿತಗಾರರ ಪಡೆಯನ್ನು ನೇಮಕಾತಿ ಮಾಡಿಕೊಳ್ಳಲು ಭದ್ರಬುನಾದಿಯನ್ನು ಹಾಕಿದ್ದು,…

Read More

ಶೃಂಗೇರಿ : “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು. “ನಮ್ಮ ಹಿರಿಯರು, ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ. ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ನಮ್ಮ ಮಠಗಳನ್ನು ಕಾಪಾಡಿಕೊಳ್ಳಬೇಕು. ಇದು ನಮ್ಮೆಲ್ಲರ ಕರ್ತವ್ಯ. ನೀವು ಇಲ್ಲಿಗೆ ಬಂದು ಹಾಗೇ ಹೋಗಬೇಡಿ. ನೀವು ನೂರು ರೂಪಾಯಿ ಸಂಪಾದನೆ ಮಾಡಿದರೆ, ಒಂದು ರೂಪಾಯಿಯಾದರೂ ಧರ್ಮ ಉಳಿಸುವ ಮಠಕ್ಕೆ ನೀಡಬೇಕು. ಆಗ ಮಾತ್ರ ಮಠ ಉಳಿಯಲು ಸಾಧ್ಯ” ಎಂದು ಕರೆ ನೀಡಿದರು. “ಪ್ರವಚನ ಕೇಳಿ ನೆಮ್ಮದಿ ಪಡೆಯಲು ಬಂದಿದ್ದೇನೆ” “ಇಲ್ಲಿ ಧರ್ಮ ಕಾಪಾಡುವ…

Read More