Author: kannadanewsnow09

ಹುಬ್ಬಳ್ಳಿ: ಉತ್ತರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಕೆಳಗಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಗಳನ್ನು ನೈಋತ್ಯ ರೈಲ್ವೆಯು ರದ್ದುಗೊಳಿಸಿದೆ. ರದ್ದಾದ ರೈಲುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 06529 ಎಸ್ಎಂವಿಟಿ ಬೆಂಗಳೂರು–ಗೋಮತಿ ನಗರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 25.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಆದರೆ, ಈಗ ಇದನ್ನು 11.08.2025 ರಿಂದ 25.08.2025 ರವರೆಗೆ ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 06530 ಗೋಮತಿ ನಗರ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 29.08.2025 ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಇದನ್ನು 15.08.2025 ರಿಂದ 29.08.2025 ರವರೆಗೆ ರದ್ದುಪಡಿಸಲಾಗಿದೆ. 3. ರೈಲು ಸಂಖ್ಯೆ 07327 ಬೆಳಗಾವಿ – ಮವೂ ಜಂಕ್ಷನ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 31.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಇದು ಈಗ 20.07.2025 ರಿಂದ 31.08.2025 ರವರೆಗೆ ರದ್ದುಗೊಂಡಿದೆ. 4. ರೈಲು…

Read More

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಲ್ಲಿನ ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಹೆಚ್ ಪಿ ವಿ ಲಸಿಕಾಕರಣ ನೀಡಲಾಗುವುದು ಅಂತ ಘೋಷಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯ ಮಂತ್ರಿಯವರ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-42ರಲ್ಲಿ “ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು ಪಥಮ ಹಂತದಲ್ಲಿ ಗಣಿ ಭಾದಿತ ಮತ್ತು ಕಲ್ಯಾಣ ಕರ್ನಾಟಕ ಪುದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣು ಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು” ಎಂದು ಘೋಷಿಸಲಾಗಿದೆ. ಈ ಯೋಜನೆಯು ಹೊಸಯೋಜನೆಯಾಗಿದ್ದು, ಈ ಯೋಜನೆಯನ್ನು ಕಲ್ಯಾಣ ಕರ್ನಾಟಕ ಮತ್ತು ಗಣಿಭಾದಿತ ಪುದೇಶಗಳಲ್ಲಿ KKRDB ಮತ್ತು KMERC ಅನುದಾನದಲ್ಲಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಎಂದು ತಿಳಿಸಲಾಗಿದೆ. ಮೇಲೆ ಕ್ರಮ ಸಂಖ್ಯೆ (3)ರಲ್ಲಿ ಓದಲಾದ ಕಡತ ಸಂಖ್ಯೆ: HFW/58/PRS/2025ರಲ್ಲಿ ಹೂಮನ್ ವ್ಯಾಪಿಲೋಮ ವೈರಸ್…

Read More

ನವದೆಹಲಿ: ಬಾಲಿವುಡ್ ಸೆಲೆಬ್ರಿಟಿ ದಂಪತಿಗಳಾದ ರಾಜ್‌ಕುಮಾರ್ ರಾವ್ ಮತ್ತು ಪತ್ರಲೇಖಾ ಜುಲೈ 9, 2025 ರಂದು ತಮ್ಮ ಗರ್ಭಧಾರಣೆಯನ್ನು ಘೋಷಿಸಿದಾಗ ಅವರು ತುಂಬಾ ಸಂತೋಷದ ಸುದ್ದಿಯನ್ನು ಹಂಚಿಕೊಂಡರು.  ದಂಪತಿಗಳು ಜಂಟಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಸಂತೋಷದ ಸುದ್ದಿಯನ್ನು ಹಂಚಿಕೊಂಡರು, ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಸ್ವಾಗತಿಸಲು ಸಿದ್ಧರಾಗುತ್ತಿರುವಾಗ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಅವರು ನವೆಂಬರ್ 2021 ರಲ್ಲಿ ವಿವಾಹವಾದರು. ರಾಜ್‌ಕುಮಾರ್ ರಾವ್ ಮತ್ತು ಪತ್ರಲೇಖಾ ಸಾಮಾಜಿಕ ಮಾಧ್ಯಮದಲ್ಲಿ ಸಂತೋಷದ ನವೀಕರಣವನ್ನು ಹಂಚಿಕೊಂಡರು. ಅದು “ಮಗು ಬರುತ್ತಿದೆ (sic)” ಎಂದು ಬರೆದಿದ್ದಾರೆ. ಈ ಪ್ರಕಟಣೆಯು ತ್ವರಿತವಾಗಿ ವೈರಲ್ ಆಯಿತು, ಹಲವಾರು ನಟರು, ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ಭ್ರಾತೃತ್ವದ ಸದಸ್ಯರು ಕಾಮೆಂಟ್‌ಗಳ ವಿಭಾಗದಲ್ಲಿ ಪ್ರೀತಿ ಮತ್ತು ಪೋಷಕರಿಗಾಗಿ ಅಭಿನಂದನೆಗಳೊಂದಿಗೆ ತುಂಬಿದರು. ಸೋನಾಕ್ಷಿ ಸಿನ್ಹಾ, ನುಶ್ರತ್ ಭರುಚ್ಚ, ಪುಲ್ಕಿತ್ ಸಾಮ್ರಾಟ್, ಈಶಾ ಗುಪ್ತಾ, ಭೂಮಿ ಪೆಡ್ನೇಕರ್, ಮಾನುಷಿ ಚಿಲ್ಲರ್, ಹುಮಾ ಖುರೇಷಿ ಮತ್ತು ಫರಾ ಖಾನ್ ಸೇರಿದಂತೆ ಇತರರು ಹೃದಯಸ್ಪರ್ಶಿ ಶುಭಾಶಯಗಳನ್ನು ಕಳುಹಿಸಲು ಧಾವಿಸಿದರು.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ವಿವಿಧ ವಿಚಾರಗಳ ಕುರಿತಂತೆ ಚರ್ಚಿಸಲಾಯಿತು. ಇನ್ನೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆಯೂ ಮನವಿ ಮಾಡಲಾಯಿತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/pm-kisan-samman-nidhi-scheme-farmers-must-comply-with-these-rules/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ನವದೆಹಲಿ: ಲೋಹ ಹಾಗೂ ಉಕ್ಕು ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಮರು ಬಳಕೆಯನ್ನು ಉತ್ತೇಜಿಸಿ ಗ್ರೀನ್ ಸ್ಟೀಲ್ ತಯಾರಿಕೆಗೆ ಒತ್ತು ನೀಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ನವರೋಜಿ ನಗರದಲ್ಲಿ ಬುಧವಾರ ಎಂ ಎಸ್ ಟಿಸಿ (ಮೆಟಲ್ ಸ್ಕ್ರ್ಯಾಪ್ ಟ್ರೇಡ್ ಕಾರ್ಪೋರೆಷನ್ ಲಿಮಿಟೆಡ್) ನೂತನ ಕಾರ್ಪೊರೇಟ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಹ ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದೇಶವಾಗಿದ್ದು, ಆ ನಿಟ್ಟಿನಲ್ಲಿ ನಾವು ವೇಗಗತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮೆಟಲ್ ಸ್ಕ್ರ್ಯಾಪ್ ಅನ್ನು ಪರಿಣಾಮಕಾರಿಯಾಗಿ ವಿಲೇವಾರಿ ಹಾಗೂ ಮರುಬಳಕೆ ಮಾಡುವ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು. 1964ರಲ್ಲಿ ಲೋಹ ತ್ಯಾಜ್ಯ ವ್ಯಾಪಾರ ಸಂಸ್ಥೆಯಾಗಿ ಸ್ಥಾಪನೆಯಾದ MSTC ಕೇಂದ್ರ ಸರಕಾರಿ ಸ್ವಾಮ್ಯದ ಮಿನಿರತ್ನ ಕಂಪನಿಯಾಗಿದೆ. ದೇಶದ ಅತ್ಯಂತ ವಿಶ್ವಾಸಾರ್ಹ ಡಿಜಿಟಲ್ ಹರಾಜು ವೇದಿಕೆಗಳಲ್ಲಿ ಒಂದಾಗಿದ್ದು, ISO-ಪ್ರಮಾಣೀಕೃತ…

Read More

ಬೆಂಗಳೂರು: ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಮಾಧ್ಯಮಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಬಿಜೆಪಿ ಸರ್ಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್ ಯು) 30 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಭರ್ತಿಯಾಗದೆ ಉಳಿದಿರುವುದು ದೇಶದ ಅತಿದೊಡ್ಡ ದುರಂತ. ಕೇಂದ್ರ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಮಾಡಿದ ದ್ರೋಹವು ದೇಶಾದ್ಯಂತ ಕಾರ್ಮಿಕ ದಂಗೆಯನ್ನು ಹುಟ್ಟುಹಾಕಿದೆ; ಕಾರ್ಮಿಕ ಸಂಘಗಳು ಹಲವಾರು ಆರೋಪಗಳನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿವೆ. ಸಶಸ್ತ್ರ ಪಡೆಗಳಲ್ಲಿ ಸುಮಾರು 1.55 ಲಕ್ಷ ಹುದ್ದೆಗಳಿವೆ. ರೈಲ್ವೆ ಇಲಾಖೆಯಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಐಟಿಬಿಪಿ ಸೇರಿದಂತೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) 85,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಸಾರ್ವಜನಿಕ ಸೇವಾ ಸಿಬ್ಬಂದಿಯ ತುರ್ತು ಅಗತ್ಯದ ಹೊರತಾಗಿಯೂ, ಭಾರತ…

Read More

ಗದಗ: ಜಿಲ್ಲೆಯಲ್ಲಿ ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ಪ್ರಿಯಕರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಅಪ್ರಾಪ್ತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಯುವಕ ದೇವಪ್ಪ ಆಲಿಯಾಸ್ ಮುತ್ತು ಹಾಗೂ 17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೇ ಇವರಿಬ್ಬರ ಪ್ರೀತಿಯನ್ನು ಪೋಷಕರು ಒಪ್ಪಿರಲಿಲ್ಲ. ಅವರ ಪ್ರೀತಿಯನ್ನು ನಿರಾಕರಿಸಿದ ಕಾರಣ ಮನನೊಂದು ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದಂತ ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ದೇವಪ್ಪ ಆಲಿಯಾಸ್ ಮುತ್ತು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. https://kannadanewsnow.com/kannada/increase-in-the-number-of-coaches-of-vande-bharat-express-train-between-kachiguda-and-yeshvantpur/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಹುಬ್ಬಳ್ಳಿ: ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಕ್ಷಿಣ ಮಧ್ಯ ರೈಲ್ವೆಯು ಕಾಚಿಗುಡ – ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್’ಪ್ರೆಸ್ (ಸಂಖ್ಯೆ 20703/20704) ರೈಲುಗಳಿಗೆ ಶಾಶ್ವತವಾಗಿ ಬೋಗಿಗಳನ್ನು ಹೆಚ್ಚಿಸಲು ನಿರ್ಧರಿಸಿರುವುದಾಗಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯು ತಿಳಿಸಿದೆ. ಪ್ರಸ್ತುತ, ಈ ವಂದೇ ಭಾರತ್ ರೈಲು 8 ಬೋಗಿಗಳೊಂದಿಗೆ ಸಂಚರಿಸುತ್ತಿದೆ. ಇನ್ನು ಮುಂದೆ, ಇದನ್ನು 16 ಬೋಗಿಗಳಿಗೆ ಖಾಯಂ ಆಗಿ ವಿಸ್ತರಿಸಲಾಗುವುದು. ಇದರಿಂದ ಈ ಜನಪ್ರಿಯ ರೈಲಿನ ಸಾಮರ್ಥ್ಯ ದ್ವಿಗುಣಗೊಳ್ಳಲಿದ್ದು, ಪ್ರಯಾಣಿಕರ ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ. ಈ ಹೆಚ್ಚುವರಿ ವ್ಯವಸ್ಥೆಯು ಕಾಚಿಗುಡದಿಂದ (ರೈಲು ಸಂಖ್ಯೆ 20703) ಜುಲೈ 10, 2025 ರಿಂದ ಮತ್ತು ಯಶವಂತಪುರದಿಂದ (ರೈಲು ಸಂಖ್ಯೆ 20704) ಜುಲೈ 10, 2025 ರಿಂದ ಜಾರಿಗೆ ಬರಲಿದೆ. https://kannadanewsnow.com/kannada/two-officials-who-demanded-a-5-percent-bribe-for-the-work-bill-have-been-suspended/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಕಲಬುರ್ಗಿ: ಜಿಲ್ಲೆಯಲ್ಲಿ ಕಾಮಗಾರಿಯೊಂದರ ಬಿಲ್ ಪಾಸ್ ಮಾಡೋದಕ್ಕೆ ಶೇ.5ರಷ್ಟು ಲಂಚ ನೀಡುವಂತೆ ಬಹಿರಂಗವಾಗಿಯೇ ಕೇಳಿದಂತ ಇಬ್ಬರನ್ನು ಅಮಾನತುಗೊಳಿಸಿ ಕಲಬುರ್ಗಿ ಜಿಲ್ಲಾ ಪಂಚಾಯ್ತಿ ಸಿಇಒ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ. ಈ ಸಂಬಂಧ ಕಲಬುರ್ಗಿಯ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಿಧಿಕಾರಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದು, ಕಾಮಗಾರಿಯ ಬಿಲ್ ಗೆ 5 ಪರ್ಸೆಂಟ್ ಲಂಚ ಕೇಳಿದಂತ ಆರೋಪದಡಿ ಜೆಇ ಶ್ರೀಪಾದ್ ಕುಲಕರ್ಣಿ, ಪಿಡಿಒ ಮಂಜುಶ್ರೀ ಅವರನ್ನು ಅಮಾನತುಗೊಳಿಸಿದ್ದಾರೆ. ಅಂದಹಾಗೇ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಲಂಚ ಕೇಳಿದಂತ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಸೂಚಿಸಿದ್ದರು. ಈ ಸೂಚನೆಯ ಬೆನ್ನಲ್ಲೇ ಸಿಇಒ ಅವರು ಜೆಇ ಶ್ರೀಪಾದ್ ಕುಲಕರ್ಣಿ ಹಾಗೂ ಪಿಡಿಒ ಮಂಜುಶ್ರೀ ಅವರ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇರಿಸಿ, ಸಸ್ಪೆಂಡ್ ಮಾಡಲಾಗಿದೆ. https://kannadanewsnow.com/kannada/another-moral-police-raid-in-the-state-three-accused-arrested/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿದೆ. ಸೊರಬದ ಕಾನು ಕೇರಿ ಗ್ರಾಮದ 19 ವರ್ಷದ ಯುವತಿಯೊಬ್ಬರು ಸಾಗರ ಶಾಹಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದರು. ಜುಲೈ.7ರಂದು ಹಿಂದೂ ಯುವಕನ ಬೈಕಿನಲ್ಲಿ ತೆರಳುತ್ತಿದ್ದಾಗ ಮಧ್ಯಾಹ್ನ 12 ಗಂಟೆಯ ಹಾಗೆ ಯಡವರಸೆ ರೈಲ್ವೆ ಗೇಟ್ ಬಳಿಯಲ್ಲಿ ಕಾರಿನಲ್ಲಿ ಬಂದಂತ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿ ಇದನ್ನು ಪ್ರಶ್ನಿಸಿದ್ದಾರೆ. ಹಿಂದೂ ಹುಡುಗನ ಜೊತೆಗೆ ಹೋಗುತ್ತೀಯ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಬೆರಳುಗಳನ್ನು ಹಿಡಿದು ತಿರುವಿ ಹಲ್ಲೆ ಮಾಡಿದ್ದಾರೆ. ಇದಲ್ಲದೇ ಬೈಕಿನಲ್ಲಿ ಇಬ್ಬರನ್ನೂ ಕೂರಿಸಿಕೊಂಡು ಎಲಗಡಲೆ ದರ್ಗಾಕ್ಕೆ ಕರೆದೊಯ್ದು, ಸ್ಪಂದನ ನಡೆಸಲಾಗಿದೆ. ಅಲ್ಲದೇ ಸಾಗರದ ರಾಮನಗರ ಮಸೀದಿಗೆ ಕರೆದುಕೊಂಡು ಹೋಗಿ ಇಬ್ಬರನ್ನು…

Read More