Author: kannadanewsnow09

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಬಗ್ಗೆ ಅವರು ಹೇಳಿದ್ದೇನು ಅಂತ ಮುಂದ ಓದಿ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ನಾವು ನ್ಯಾಯಾಲಯದ ಆದೇಶವನ್ನು ಪಾಲಿಸಬೇಕಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೋರ್ಟ್ ಆದೇಶ ಕೊಟ್ಟಿದೆ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದರು. ಜಾಮೀನು ರದ್ದತಿಯ ಹಿಂದೆ ಹಲವರ ಕೈವಾಡವಿದೆ. ಇದೇನು ದೊಡ್ಡ ಸಮಸ್ಯೆ ಅಲ್ಲ. ನ್ಯಾಯಾಲಯದಲ್ಲಿ ಸಾಕ್ಷಿ ಬೇಕು. ಸಾಕ್ಷ್ಯಾಧಾರಗಳ ಮೇಲೆ ಕೋರ್ಟ್ ತೀರ್ಮಾನ ಮಾಡುತ್ತದೆ ಎಂದರು. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಯಾವುದೇ ರೀತಿಯ ಕೈವಾಡವಿಲ್ಲ. ಒಂದು ಸಿಂಗಲ್ ಕಾಲ್ ಕೂಡ ನಾನು ಯಾರ ಜೊತೆಗೂ ಮಾತಾಡಿಲ್ಲ. ಇನ್ನೂ 15 ದಿನ ಇದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ನೋಡುತ್ತೇವೆ. ಅವರು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ. ನನ್ನನ್ನು ಮತ್ತೆ ಜೈಲಿಗೆ ಕಳಿಸಬೇಕು ಅಂತ ಮಾಡುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಭಾಗದ ನಾಯಕರು ಸೇರಿದಂತೆ…

Read More

ಕೈವ್ : ಉಕ್ರೇನ್‌ನ ವಾಯುಪಡೆಗಳು ಶನಿವಾರ ಬೆಳಿಗ್ಗೆ ರಷ್ಯಾದ Su-35 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ಉಕ್ರೇನಿಯನ್ ಸೇನೆ ತಿಳಿಸಿದೆ. ಇಂದು ಬೆಳಿಗ್ಗೆ, ಜೂನ್ 7, 2025 ರಂದು, ಕುರ್ಸ್ಕ್ ದಿಕ್ಕಿನಲ್ಲಿ ವಾಯುಪಡೆಯ ಯಶಸ್ವಿ ಕಾರ್ಯಾಚರಣೆಯ ಪರಿಣಾಮವಾಗಿ, ರಷ್ಯಾದ Su-35 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಯಿತು ಎಂದು ಸೇನೆಯು ಟೆಲಿಗ್ರಾಮ್ ಮೆಸೆಂಜರ್‌ನಲ್ಲಿ ತಿಳಿಸಿದೆ. ಇದು ಹೆಚ್ಚಿನ ವಿವರಗಳನ್ನು ನೀಡಿಲ್ಲ. ರಾಯಿಟರ್ಸ್ ವರದಿಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದಿದ್ದರೂ ರಷ್ಯಾದ ಪಡೆಗಳು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಕಾಮೆಂಟ್ ಮಾಡಿಲ್ಲ. https://kannadanewsnow.com/kannada/ccpa-notice-for-e-commerce-platforms-to-take-necessary-action-against-fraudulent-activities-within-3-months/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/

Read More

ನವದೆರಲಿ: ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (Central Consumer Protection Authority – CCPA) ಎಲ್ಲಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ( e-commerce platforms ) ತಮ್ಮ ಪ್ಲಾಟ್‌ಫಾರ್ಮ್‌ಗಳು ಡಾರ್ಕ್ ಪ್ಯಾಟರ್ನ್‌ಗಳ ಸ್ವರೂಪದಲ್ಲಿರುವ ಮೋಸಗೊಳಿಸುವ ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸದಲ್ಲಿ ತೊಡಗಿಕೊಳ್ಳದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. ಎಲ್ಲಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಮತ್ತು ಅವರ ಪ್ಲಾಟ್‌ಫಾರ್ಮ್‌ಗಳು ಅಂತಹ ಡಾರ್ಕ್ ಪ್ಯಾಟರ್ನ್‌ಗಳಿಂದ ಮುಕ್ತವಾಗಿವೆ ಎಂದು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಸ್ವಯಂ-ಆಡಿಟ್ ವರದಿಗಳ ಆಧಾರದ ಮೇಲೆ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ತಮ್ಮ ಪ್ಲಾಟ್‌ಫಾರ್ಮ್ ಯಾವುದೇ ಡಾರ್ಕ್ ಪ್ಯಾಟರ್ನ್‌ಗಳಲ್ಲಿ ತೊಡಗಿಕೊಳ್ಳುತ್ತಿಲ್ಲ ಎಂದು ಸ್ವಯಂ-ಘೋಷಣೆಗಳನ್ನು ನೀಡಲು ಪ್ರೋತ್ಸಾಹಿಸಿವೆ. ಪ್ಲಾಟ್‌ಫಾರ್ಮ್‌ಗಳ ಸ್ವಯಂ-ಘೋಷಣೆಗಳು ಗ್ರಾಹಕರು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ನಡುವೆ ವಿಶ್ವಾಸವನ್ನು ಬೆಳೆಸುವುದರ ಜೊತೆಗೆ ನ್ಯಾಯಯುತ ಡಿಜಿಟಲ್ ಪರಿಸರ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ. ಡಾರ್ಕ್ ಪ್ಯಾಟರ್ನ್‌ಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಕೆಲವು ಸಂದರ್ಭಗಳಲ್ಲಿ CCPA ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ…

Read More

ಉತ್ತರಾಖಂಡ್: ಇಲ್ಲಿನ ಕೇದಾರನಾಥ್ ಬಳಿಯಲ್ಲಿ ಹೆಲಿಕಾಪ್ಟರ್ ಒಂದು ಹೆದ್ದಾರಿಯ ಪಕ್ಕದಲ್ಲೇ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ. ಕೇದಾರನಾಥಕ್ಕೆ ಭಕ್ತರನ್ನು ಕೊಂಡೊಯ್ಯುತ್ತಿದ್ದಂತ ಹೆಲಿಕಾಪ್ಟರ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಹೆದ್ದಾರಿಯ ಪಕ್ಕದಲ್ಲೇ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಫೈಲೆಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ನಲ್ಲಿದ್ದಂತ ಐವರು ಸೇಫ್ ಆಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. https://twitter.com/ANI/status/1931268727946748106

Read More

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹವನ್ನು ಮುಂದಿಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ನೀವು ಯಾವುದೇ ನಿರ್ಧಾರ ಮಾಡಿದರೂ ಅದಕ್ಕೆ ನಾವು ಸಿದ್ಧ ಎಂದು ಸರಕಾರ ತಿಳಿಸಲಿ ಎಂದು ಸವಾಲೆಸೆದರು. ಬೆಂಗಳೂರು ಪೊಲೀಸ್ ಕಮೀಷನರ್ ಸರಕಾರದ ಅಂಗವೇ ಆಗಿದ್ದಾರೆ. ಸರಕಾರದ್ದೇನೂ ತಪ್ಪಿಲ್ಲವೆಂದಾದರೆ ಅವರನ್ನು ಅಮಾನತು ಮಾಡುವುದು ಸರಕಾರಕ್ಕೆ ಕಪ್ಪು ಚುಕ್ಕಿ ಎಂದು ಯಾಕೆ ಅನಿಸಿಲ್ಲ ಎಂದು ಕೇಳಿದರು. ಇವತ್ತು ಆರ್‍ಸಿಬಿಯವರು, ಮ್ಯಾನೇಜ್‍ಮೆಂಟ್ ತಂಡದವರನ್ನೂ ಬಂಧಿಸಿದ್ದಾರೆ. ಯಾಕೆ ನಿಮ್ಮನ್ನು ಬಂಧಿಸಬಾರದು? ನಟ ಅಲ್ಲು ಅರ್ಜುನ್ ಕಾರ್ಯಕ್ರಮದಲ್ಲಿ…

Read More

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು. ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ…

Read More

ಉಕ್ರೇನ್: ಉಕ್ರೇನ್‌ನಾದ್ಯಂತ ರಷ್ಯಾ ಕ್ಷಿಪಣಿಗಳು, ಡ್ರೋನ್‌ಗಳು ಮತ್ತು ಬಾಂಬ್‌ಗಳ ದಾಳಿ ನಡೆಸಿದ್ದರಿಂದ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಷ್ಯಾ ರಾತ್ರೋರಾತ್ರಿ 215 ಕ್ಷಿಪಣಿಗಳು ಮತ್ತು ಡ್ರೋನ್‌ಗಳೊಂದಿಗೆ ದಾಳಿ ನಡೆಸಿತು ಮತ್ತು ಉಕ್ರೇನಿಯನ್ ವಾಯು ರಕ್ಷಣಾ ಪಡೆಗಳು 87 ಡ್ರೋನ್‌ಗಳು ಮತ್ತು ಏಳು ಕ್ಷಿಪಣಿಗಳನ್ನು ಹೊಡೆದುರುಳಿಸಿ ತಟಸ್ಥಗೊಳಿಸಿದವು ಎಂದು ಉಕ್ರೇನಿಯನ್ ವಾಯುಪಡೆ ತಿಳಿಸಿದೆ. ಈಶಾನ್ಯ ನಗರವಾದ ಖಾರ್ಕಿವ್‌ನಲ್ಲಿ ಕನಿಷ್ಠ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 17 ಜನರು ಗಾಯಗೊಂಡಿದ್ದಾರೆ ಎಂದು ಮೇಯರ್ ಇಹೋರ್ ಟೆರೆಖೋವ್ ಹೇಳಿದ್ದಾರೆ. 2022 ರಲ್ಲಿ ರಷ್ಯಾ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ ನಂತರ ನಗರದ ಮೇಲೆ ನಡೆದ “ಅತ್ಯಂತ ಶಕ್ತಿಶಾಲಿ” ದಾಳಿ ಎಂದು ಬಣ್ಣಿಸಿದ್ದಾರೆ. ರಷ್ಯಾದ ಗಡಿಯಿಂದ ಕೇವಲ 50 ಕಿಮೀ (30 ಮೈಲುಗಳು) ದೂರದಲ್ಲಿರುವ 1.4 ಮಿಲಿಯನ್ ಜನರ ನಗರದಲ್ಲಿ ಬೆಳಗಿನ ಜಾವಕ್ಕೆ ಮುನ್ನ 48 ಇರಾನ್…

Read More

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಐಡಿ ಅಧಿಕಾರಿಗಳ ತಂಡವು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಯಿತು. ಇಂದು ಚಿನ್ನಸ್ವಾಮಿ ಕ್ರೀಡಾಂಗಣ ದುರಂತ ನಡೆದಂತ ಸ್ಥಳಕ್ಕೆ ಸಿಐಡಿ ಅಧಿಕಾರಿಗಳ ತಂಡವು ಭೇಟಿ ನೀಡಿತು. ಓರ್ವ ಇನ್ಸ್ ಪೆಕ್ಟರ್ ಹಂತದ ಅಧಿಕಾರಿ ಸೇರಿದಂತೆ ವಿವಿಧ ಸಿಬ್ಬಂದಿಗಳ ತಂಡವು ಭೇಟಿ ನೀಡಿತು. ದುರಂತ ನಡೆದಂತ ಸ್ಥಳದಲ್ಲಿ ಘಟನೆಯ ಸಂಬಂಧ ವಿವಿಧ ರೀತಿಯಲ್ಲಿ ಮಾಹಿತಿಯನ್ನು ಪರಿಶೀಲಿಸಿತು. ಇದೇ ಸಂದರ್ಭದಲ್ಲಿ ಸಿಐಡಿ ತಂಡದ ಮುಂದೆ ಕೆ ಎಸ್ ಸಿ ಎ ಅಧ್ಯಕ್ಷರು, ಸಿಬ್ಬಂದಿಗಳು ಭೇಟಿ ನೀಡಿ, ಘಟನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಅವರು ನೀಡಿದಂತ ಮಾಹಿತಿಯನ್ನು ಸಿಐಡಿ ಅಧಿಕಾರಿಗಳ ತಂಡವು ದಾಖಲಿಸಿಕೊಂಡಿದೆ. https://kannadanewsnow.com/kannada/the-chief-minister-and-deputy-chief-minister-are-not-only-responsible-for-the-calamity-but-also-the-stakeholders-crf-report-to-the-governor/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/

Read More

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ತಂಡಕ್ಕೂ ಸಂಕಷ್ಟ ತಂದೊಡ್ಡಿದೆ. 11 ಜನರ ಮರಣ ಹೋಮಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಇಲಾಖೆಗಳ ಆಕ್ಷೇಪದ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಠಕ್ಕೆ ಬಿದ್ದು RCB ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನ್ಯಾಯಾಂಗ ತನಿಖೆ ಮುಗಿಯುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಕೆಯಾಗಿದೆ. ಮಾನವ ಹಕ್ಕುಗಳ ಹೋರಾಟ ಸಂಸ್ಥೆಯಾಗಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ವತಿಯಿಂದ ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ದೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 04.06.2025ರಂದು ಸಂಭವಿಸಿರುವ ಕಾಲ್ತುಳಿತ ದುರ್ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೊಣೆಗಾಗರಷ್ಟೇ ಅಲ್ಲ, ಅವರೇ ನೇರ ಕಾರಣಕರ್ತರು ಎಂದು ಆರೋಪಿಸಲಾಗಿದೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಿದ್ದರಾಮಯ್ಯ ಅವರೇ ಸಚಿವರಾಗಿದ್ದಾರೆ,…

Read More

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು. ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ…

Read More