Author: kannadanewsnow09

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆ ಎಸ್ ಆರ್ ಟಿ ಸಿ ನಿಗಮದಿಂದ ಕರೆಯಲಾಗಿದ್ದಂತ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಆಯ್ಕೆಗೊಂಡಿದ್ದಂತವರಿಗೆ, ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಈಗ ಈ ಮೂಲದಾಖಲಾತಿಗಳ ಪರಿಶೀಲನೆಗೆ ಹಾಜರಾಗದಿದ್ದಂತ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020 ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಯ ಮೂಲ ದಾಖಲಾತಿ / ದೇಹದಾರ್ಢ್ಯತೆ ಪರಿಶೀಲನೆಯನ್ನು ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ನಡೆಸಲಾಗುತ್ತಿದೆ ಎಂದಿದೆ. ಸದರಿ ಮೂಲ ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವುದು ಸೂಕ್ತವೆಂದು ನಿರ್ಧರಿಸಿ ದಿನಾಂಕ: 02-07-2024 ರಿಂದ  ಅವಕಾಶ ನೀಡಿ ಈ ಕೆಳಗಿನಂತೆ ದಿನಾಂಕ ನಿಗಧಿಪಡಿಸಲಾಗಿದೆ ಎಂದು ತಿಳಿಸಿದೆ. ದಿನಾಂಕ ಅರ್ಜಿ ಸಂಖ್ಯೆ ರಿಂದ ವರೆಗೆ 02.07.2024 D2000009 D2004188 03.07.2024 D2004194 D2008643 04.07.2024 D2008645 D2013204 05.07.2024 D2013207 D2017706 06.07.2024 D2017708 D2021784 08.07.2024 D2021786 D2025935 09.07.2024…

Read More

ಬೆಂಗಳೂರು: ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮವನ್ನು ಅನುಸರಿಸುವ ಎಲ್ಲಾ ಖಾಸಗಿ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನೋ ಅಬ್ಜೆಕ್ಷನ್ ಸರ್ಟಿಫಿಕೇಟ್ ಮತ್ತು ಕಂಟ್ರೋಲ್) ನಿಯಮಗಳನ್ನು ಸರ್ಕಾರ ಅಧಿಸೂಚನೆ ಹೊರಡಿಸಿದ್ದರೂ ಶಾಲೆಗಳು ಇದನ್ನು ವಿರೋಧಿಸಲು ಸಜ್ಜಾಗಿವೆ. ಯಾವುದೇ ಹೊಸ ಶಾಲೆ ಅಥವಾ ಅಸ್ತಿತ್ವದಲ್ಲಿರುವ ಶಾಲೆ ಸಿಬಿಎಸ್ಇ ಅಥವಾ ಐಸಿಎಸ್ಇಗೆ ಸಂಯೋಜಿತವಾಗಲು ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಎನ್ಒಸಿ ಕಡ್ಡಾಯವಾಗಿದೆ. ಹೊಸ ನಿಯಮಗಳು ಕನ್ನಡ ಭಾಷಾ ಕಲಿಕಾ ಕಾಯ್ದೆ, 2015 ಕ್ಕೆ ಅನುಗುಣವಾಗಿವೆ, ಇದು ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸುತ್ತದೆ. 2015ರ ಕಾನೂನಿನ ಹೊರತಾಗಿಯೂ ಶಾಲಾ ಶಿಕ್ಷಣ ಇಲಾಖೆಯು ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಲು ಶಾಲೆಗಳಿಗೆ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು ನೀಡಿತು. ಹೊಸ ನಿಯಮಗಳು ಈ ‘ಅಸಂಗತತೆಯನ್ನು’ ಸರಿಪಡಿಸಿವೆ, ಆದರೆ ಹೆಚ್ಚಿನ ಶಾಲೆಗಳು ಹಿಂದಿನ ನಿಬಂಧನೆಗಳ ಅಡಿಯಲ್ಲಿ ಕನ್ನಡವನ್ನು ಮೂರನೇ ಭಾಷೆಯಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ, 1995ರ ಪರಿಚ್ಛೇದ 3(2)(ಎ) ಮತ್ತು 4(1)ರ ಅಡಿಯಲ್ಲಿ ಪುದತ್ತವಾದ ಅಧಿಕಾರದನ್ವಯ ಸರ್ಕಾರವು ಗದಿಗೆಪ್ಪ ಸಣ್ಣ ಬಸಪ್ಪ ಸಂಗ್ರೇಶಿ, ಪ್ರಸ್ತುತ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಕರ್ನಾಟಕ ಸರ್ಕಾರ, ವಸತಿ ಗೃಹ ಸಂಖ್ಯೆ:ಬಿ-4, ಜಯಮಹಲ್ ಬಡಾವಣೆ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಕಾರ್ಯಭಾರ ವಹಿಸಿಕೊಂಡ ದಿನಾಂಕದಿಂದ 03 ವರ್ಷಗಳ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಿ ಆದೇಶಿಸಿದ್ದಾರೆ. https://kannadanewsnow.com/kannada/big-shock-for-small-savings-account-holders-including-sukanya-samriddhi-interest-rates-remain-unchanged/

Read More

ನವದೆಹಲಿ: ಜುಲೈ-ಸೆಪ್ಟೆಂಬರ್ 2024 ರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಬದಲಾಯಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ನಿರ್ಧಾರವು ಪ್ರಸ್ತುತ ದರಗಳು ಈ ತ್ರೈಮಾಸಿಕದಲ್ಲಿಯೂ ಅನ್ವಯವಾಗುವುದನ್ನು ಮುಂದುವರಿಸುತ್ತವೆ. ಅಂಚೆ ಕಚೇರಿ ಉಳಿತಾಯ ಯೋಜನೆಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ (ಎಸ್ಸಿಎಸ್ಎಸ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ), ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ (ಪಿಒಟಿಡಿ), ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಮತ್ತು ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (ಪಿಒಎಂಐಎಸ್) ಸೇರಿವೆ. “ಜುಲೈ 2024 ರಿಂದ ಪ್ರಾರಂಭವಾಗಿ 2024-25 ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2024-25 ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (2024 ರ ಏಪ್ರಿಲ್ 1 ರಿಂದ 2024 ರ ಜೂನ್ 30 ರವರೆಗೆ) ಅಧಿಸೂಚಿತವಾದವುಗಳಿಂದ ಬದಲಾಗುವುದಿಲ್ಲ” ಎಂದು ಹಣಕಾಸು ಸಚಿವಾಲಯ ಜೂನ್ 2, 2024ರಂದು ಬಿಡುಗಡೆ ಮಾಡಿದ ಪತ್ರಿಕಾ…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಕರೆಯಲಾಗಿದ್ದಂತ ಕೆಎಎಸ್ ಅಧಿಕಾರಿಗಳ ಹುದ್ದೆಗಳಿಗೆ ನಿಗದಿ ಪಡಿಸಿದ್ದಂತ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ:21-06-2024ರಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡುವಂತೆ ಆದೇಶಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ದಿನಾಂಕ:21-07-2024ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ಮರುನಿಗದಿಪಡಿಸಿರುತ್ತದೆ ಅಂತ ಮಾಹಿತಿ ನೀಡಿದ್ದಾರೆ. https://kannadanewsnow.com/kannada/shimoga-dcc-bank-elections-congress-candidates-win-bjp/ https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/

Read More

ಶಿವಮೊಗ್ಗ: ಇಂದು ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರೀ ಮುಖಭಂಗ ಅನುಭವಿದೆ. 13 ಸ್ಥಾನಗಳಲ್ಲಿ ಒರ್ವ ಅಭ್ಯರ್ಥಿ ಮಾತ್ರ ಗೆದ್ರೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ಧುರೀಣ ಆರ್.ಎಂ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಂತೆ ಚುನಾವಣಾಧಿಕಾರಿ ಸತ್ಯನಾರಾಯಣ್ ಮಾಹಿತಿ ನೀಡಿದ್ದು, ಬೇಳೂರು ಗೋಪಾಲಕೃಷ್ಣ, ಸಿ.ಹನುಮಂತಪ್ಪ, ಎಸ್ ಪಿ ಚಂದ್ರಶೇಖರ್ ಗೌಡ, ಎಸ್.ಕೆ ಮರಿಯಪ್ಪ, ಜಿಎನ್ ಸುಧೀರ, ಕೆ.ಪಿ ರುದ್ರಗೌಡ, ಟಿ.ಶಿವಶಂಕರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 13 ಮಂದಿ ಗೆಲುವು ಸಾಧಿಸಿದದಾರೆ ಅಂತ ತಿಳಿಸಿದ್ದಾರೆ. ಹೀಗಿದೆ ಕ್ಷೇತ್ರವಾರು ಗೆದ್ದ ಅಭ್ಯರ್ಥಿಗಳು ಹಾಗೂ ಪಡೆದ ಮತಗಳ ವಿವರ ಕ್ಷೇತ್ರ 1, ಶಿವಮೊಗ್ಗ ತಾಲ್ಲೂಕು : ಕೆ.ಪಿ ದುಗ್ಗಪ್ಪ ಗೌಡ – 13 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಶಿವನಂಜಪ್ಪ – 12 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಭದ್ರಾವತಿ ತಾಲ್ಲೂಕು: ಸಿ.ಹನುಮಂತಪ್ಪ 9 ಮತಗಳನ್ನು ಪಡೆದು…

Read More

ವ್ಯಕ್ತಿಯ ಶರೀರದಲ್ಲಿ ಅತ್ಯಂತ ನೋವಾಗುವುದು, ಶರೀರದಲ್ಲಿ ಬಿಸಿ ಹೆಚ್ಚಾಗುವುದು, ತಲೆ ಭಾರವಾಗುವುದು, ಶೂನ್ಯದ ಕಡೆಗೆ ನೋಡುವುದು, ಕೈಕಾಲುಗಳಲ್ಲಿ ಸಿಡಿತ ಉಂಟಾಗುವುದು, ಹುಚ್ಚು ಮಾತನಾಡುವುದು, ಇನ್ನೊಬ್ಬರಿಗೆ ತೊಂದರೆ ಕೊಡುವುದು, ಯಾವುದೇ ರೀತಿಯ ಔಷಧಿ ನಾಟದಿರುವುದು, ಮಂಕಾಗಿ ಕುಳಿತಿರುವುದು, ಯದ್ವಾತದ್ವಾ ಉತ್ತರ ಕೊಡುವುದು, ಅಕಾರಣವಾಗಿ ಸಿಟ್ಟಿಗೇಳುವುದು ಮುಂತಾದ ಪರಿಣಾಮಗಳು ಉಂಟಾಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ…

Read More

ಬೆಂಗಳೂರು: ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಅದೆಲ್ಲವನ್ನು ಕಾಲವೇ ಉತ್ತರಿಸಲಿದೆ. ನಾನು ಈಗ ಪ್ರಜ್ವಲ್, ಸೂರಜ್ ಬಗ್ಗೆ ಯಾವುದೇ ಮಾತನಾಡೋದಿಲ್ಲ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜ್ವಲ್, ಸೂರಜ್ ಪ್ರಕರಣ ಕೋರ್ಟ್ ನಲ್ಲಿ ಇದೆ. ಹೀಗಾಗಿ ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ನನಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ, ಗೌರವವಿದೆ. ಯಾವುದೇ ವಿಷಯ ಇದ್ರೂ ನ್ಯಾಯಾಂಗ, ದೇವರ ಮೇಲೆ ನಂಬಿಕೆಯಿದೆ ಎಂದರು. ಪ್ರಕರಮ ಕೋರ್ಟ್ ನಲ್ಲಿ ಇರುವಾಗ ನಾನು ಏನೂ ಮಾತನಾಡುವುದಿಲ್ಲ. ಮಾಜಿ ಶಾಸಕ ಪ್ರೀತಂ ಗೌಡ ಷಡ್ಯಂತ್ರದ ಬಗ್ಗೆಯೂ ಮಾತನಾಡಲ್ಲ. ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಎಲ್ಲವನ್ನು ಕಾಲವೇ ಉತ್ತರಿಸಲಿದೆ ಅಂತ ತಿಳಿಸಿದರು. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಗೊತ್ತಿಲ್ಲ. ಅದೆಲ್ಲ ದೊಡ್ಡವರ ವಿಷಯವಾಗಿದೆ ಎಂದರು. ಚಂದ್ರಶೇಖರ ಸ್ವಾಮೀಜಿ ಯಾವ ಮಟ್ಟದಲ್ಲಿ ಇದ್ದರು. ಹೆಚ್ ಡಿಡಿ ಬಗ್ಗೆ…

Read More

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ ಹಲವು ಸಚಿವರು ದೆಹಲಿ ಭೇಟಿಗೆ ನೀಡಿ, ಕೇಂದ್ರ ಸರ್ಕಾರದ ಕೆಲ ಸಚಿವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ ಪ್ರಸ್ತಾವನೆಗಳನ್ನು ಮುಂದಿಟ್ಟಿದ್ದಾರೆ. ಹಾಗಾದ್ರೆ ಆ ಎಲ್ಲಾ ಪ್ರಸ್ತಾವನೆಗಳು ಏನು? ಆ ಬಗ್ಗೆ ಹೈಲೈಟ್ಸ್ ಮುಂದಿದೆ ಓದಿ. ಈ ಬಗ್ಗೆ ದೆಹಲಿಯ ಕರ್ನಾಟಕ‌ಭವನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿಯನ್ನು ಹಂಚಿಕೊಂಡರು. • ದಿನಾಂಕ 27-6-2024 ರಂದು ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಸಭೆ ನಡೆಸಿ ಚರ್ಚಿಸಲಾಯಿತು. • ಸಭೆಯಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಸಚಿವರುಗಳು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. •ರಾಜಕೀಯ ಉದ್ದೇಶವಿಲ್ಲದ, ಅದಕ್ಕೂ ಮೀರಿ ನಮ್ಮ ರಾಜ್ಯದ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್.30ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30 ರ ಬೆಳಗ್ಗೆ 09-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ಹೇಳಿದೆ. ಜೂ.30ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ,…

Read More