Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: “ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಪ್ರಚಾರ ಮಾಡಲು ಹಾಸನದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಜನಕಲ್ಯಾಣ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಈ ಸಮಾವೇಶ ಕೆಪಿಸಿಸಿ ನೇತೃತ್ವದಲ್ಲಿ ನಡೆಯುತ್ತಿದೆ. ಪಕ್ಷಕ್ಕೆ ಬೆಂಬಲವಾಗಿ ನಿಂತಿರುವ ಸ್ನೇಹಿತರು, ಸ್ವಾಭಿಮಾನಿಗಳ ಒಕ್ಕೂಟಗಳು ಕೂಡ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ನಿರ್ಧರಿಸಿದ್ದು, ನಮ್ಮ ಜತೆ ಕೈ ಜೋಡಿಸಿರುವ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರ ಬದುಕು ಬದಲಾವಣೆ ಹಾಗೂ ಕಲ್ಯಾಣಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ವಿರೋಧ ಪಕ್ಷಗಳ ಟೀಕೆಗಳು ಸತ್ತಿವೆ, ಜನರೇ ಉತ್ತರ ಕೊಟ್ಟಿದ್ದಾರೆ: “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಾ…
ಮಂಡ್ಯ: ಮೂರನೇ ಬಾರಿಗೆ ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕರೆಕೊಟ್ಟರು. ಡಿಸೆಂಬರ್ ೨೦,೨೧,೨೨ರಂದು ಮೂರು ದಿನಗಳ ಕಾಲ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತಂತೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸ್ವಾಗತ ಸಮಿತಿ ಸಭೆಯ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಮಂಡ್ಯ ಜಿಲ್ಲೆಯ ಆಚಾರ ವಿಚಾರ, ಇಲ್ಲಿನ ಪ್ರೇಕ್ಷಣೀಯ, ಐತಿಹಾಸಿಕ ಸ್ಥಳಗಳ ಮಹತ್ವ, ಐತಿಹ್ಯವನ್ನು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾರುವ ಅವಕಾಶ ಇದೆ. ಇದಕ್ಕಾಗಿ ಒಂದು ಕ್ರಿಯಾಯೋಜನೆ ರೂಪಿಸಿ ಮಂಡ್ಯಕ್ಕೆ ತನ್ನದೇ ಆದ ಐಡೆಂಟಿಟಿ ಸಿಗುವಂತ ಕೆಲಸವಾಗಬೇಕು ಎಂದು ಸ್ವಾಮೀಜಿಗಳು ಸಲಹೆ ನೀಡಿದರು. ಸಮ್ಮೇಳನದ ಪೂರ್ವ ಸಿದ್ಧತೆಗಳ ಮಾಹಿತಿ ಪಡೆದ ಸ್ವಾಮೀಜಿಗಳು, ಇದು ನಮ್ಮ ಹಬ್ಬ. ಮನೆಯ ಹಬ್ಬದಂತೆ ಆಚರಣೆ ಮಾಡಬೇಕು. ಜಿಲ್ಲೆಯ…
ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು…
ಮಂಡ್ಯ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಡಿಸೆಂಬರ್ 3 ರಂದು ಸಹ ನಿರಂತರ ಮಳೆ ಸುರಿಯುವುದಾಗಿ ಹಾಗೂ (yellow alert) ನ ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನಲೆಯಲ್ಲಿ “ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ)* ಜಿಲ್ಲಾಧಿಕಾರಿ ಡಾ: ಕುಮಾರ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ. ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿರುತ್ತಾರೆ. ವರದಿ: ಗಿರೀಶ್ ಗೌಡ, ಮಂಡ್ಯ https://kannadanewsnow.com/kannada/davanagere-the-election-slated-for-the-town-planning-and-reforms-standing-committee-elections-has-been-fixed/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/
ದಾವಣಗೆರೆ : ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು. ಉಮೇದುವಾರರ ಪಟ್ಟಿ ಘೋಷಣೆ. ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ. ಚುನಾವಣೆ ಅಗತ್ಯವಿದ್ದಲ್ಲಿ ಮತಪತ್ರಗಳ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಗುವುದು. ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪಲಿಕೆಯ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. https://kannadanewsnow.com/kannada/good-news-for-sugarcane-growers-in-the-state-rs-3151-per-metric-tonne-fixed/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/
ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ ವರದಿಗಳ ಪ್ರಕಾರ ಕಳೆದ ವರ್ಷ ನುರಿಸಲಾದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ ಆಧಾರದ ಮೇಲೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.3151/- ಗಳ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ. ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಚುನಾವಣೆಯ ವೇಳಾಪಟ್ಟಿ ದಾವಣಗೆರೆ ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ…
ಧಾರವಾಡ : ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಮತ್ತು ನರೇಂದ್ರ ಗ್ರಾಮಪಂಚಾಯಿತಿ ಕೇಂದ್ರ, ಅಳ್ನಾವರ ತಾಲೂಕಿನ ಅರವಟಗಿ ಗ್ರಾಮಪಂಚಾಯಿತಿ ಕೇಂದ್ರ, ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಗ್ರಾಮ ಒನ ಕೇಂದ್ರ ಸ್ಥಾಪಿಸಲು ಕನಿಷ್ಟ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್, ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆ ಇರಬೇಕು. ಇಲಾಖೆ ಕಾಲ ಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರುವವರು ಡಿಸೆಂಬರ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9019026687, 9019026697, 9019026690, 9019027696 ಗೆ ಸಂಪರ್ಕಿಸಬಹುದು ಎಂದು ಅಪರ…
ಬಳ್ಳಾರಿ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಂದ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು, 18 ರಿಂದ 45 ವರ್ಷ ವಯೋಮಾನದವರಾಗಿರಬೇಕು, ಕುಟುಂಬದ ಆದಾಯ ರೂ.2.50 ಲಕ್ಷ ಒಳಗಿರಬೇಕು, ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷö್ಮ, ಅತೀ ಸೂಕ್ಷö್ಮ ಪರಿಶಿಷ್ಟ ವರ್ಗದ ಸಮುದಾಯದ ಯುವಕ ಮತ್ತು ಯುವತಿಯರಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/applications-invited-from-eligible-candidates-to-start-akka-cafe/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಯೋಜನೆಯಡಿ ರಚಿತವಾದಂತಹ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಬಳ್ಳಾರಿ ನಗರದಲ್ಲಿ ‘ಅಕ್ಕ ಕೆಫೆ’ ಪ್ರಾರಂಭಿಸಲು ಆಸಕ್ತರಿದ್ದಲ್ಲಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು. ರಾಷ್ಟಿçÃಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡಲು ಅವಕಾಶ ಕಲ್ಪಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ‘ಅಕ್ಕ ಕೆಫೆ’ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು ಎಂದು ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ. https://kannadanewsnow.com/kannada/intel-ceo-pat-gelsinger-announces-retirement/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/
ಇಂಟೆಲ್ ಕಾರ್ಪೊರೇಷನ್ ಸಿಇಒ ಪ್ಯಾಟ್ ಗೆಲ್ಸಿಂಗರ್ ಅವರ ನಿವೃತ್ತಿಯನ್ನು ಡಿಸೆಂಬರ್ 1, 2024 ರಿಂದ ಜಾರಿಗೆ ತರುವುದಾಗಿ ಘೋಷಿಸಿದೆ. ಗೆಲ್ಸಿಂಗರ್ ಕಂಪನಿಯ ನಿರ್ದೇಶಕರ ಮಂಡಳಿಯಿಂದ ಕೆಳಗಿಳಿದಿದ್ದಾರೆ. ಗೆಲ್ಸಿಂಗರ್ ಅವರು ಮಾತನಾಡಿ ಲೀಡಿಂಗ್ ಇಂಟೆಲ್ ನನ್ನ ಜೀವಮಾನದ ಗೌರವವಾಗಿದೆ – ಈ ಜನರ ಗುಂಪು ವ್ಯವಹಾರದಲ್ಲಿ ಅತ್ಯುತ್ತಮ ಮತ್ತು ಪ್ರಕಾಶಮಾನವಾಗಿದೆ, ಮತ್ತು ಪ್ರತಿಯೊಬ್ಬರನ್ನೂ ಸಹೋದ್ಯೋಗಿ ಎಂದು ಕರೆಯಲು ನನಗೆ ಗೌರವವಿದೆ. ಇಂದು ಖಂಡಿತವಾಗಿಯೂ ಕಹಿಯಾಗಿದೆ, ಏಕೆಂದರೆ ಈ ಕಂಪನಿಯು ನನ್ನ ಕೆಲಸದ ವೃತ್ತಿಜೀವನದ ಬಹುಪಾಲು ನನ್ನ ಜೀವನವಾಗಿದೆ ಎಂದಿದ್ದಾರೆ. ನಾವು ಒಟ್ಟಿಗೆ ಸಾಧಿಸಿದ ಎಲ್ಲವನ್ನೂ ನಾನು ಹೆಮ್ಮೆಯಿಂದ ಹಿಂತಿರುಗಿ ನೋಡಬಹುದು. ಪ್ರಸ್ತುತ ಮಾರುಕಟ್ಟೆ ಡೈನಾಮಿಕ್ಸ್ಗೆ ಇಂಟೆಲ್ ಅನ್ನು ಇರಿಸಲು ನಾವು ಕಠಿಣ ಆದರೆ ಅಗತ್ಯ ನಿರ್ಧಾರಗಳನ್ನು ತೆಗೆದುಕೊಂಡಿರುವುದರಿಂದ ಇದು ನಮ್ಮೆಲ್ಲರಿಗೂ ಸವಾಲಿನ ವರ್ಷವಾಗಿದೆ. ಇಂಟೆಲ್ ಕುಟುಂಬದ ಭಾಗವಾಗಿ ನಾನು ಕೆಲಸ ಮಾಡಿದ ಪ್ರಪಂಚದಾದ್ಯಂತದ ಅನೇಕ ಸಹೋದ್ಯೋಗಿಗಳಿಗೆ ನಾನು ಎಂದೆಂದಿಗೂ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ. ಗೆಲ್ಸಿಂಗರ್ ನಿರ್ಗಮನದ ಹಿನ್ನೆಲೆಯಲ್ಲಿ, ಇಂಟೆಲ್ ಇಬ್ಬರು ಹಿರಿಯ ನಾಯಕರಾದ…













